ಹೈ.ಕ.ಪ್ರ.ಅ. ಮಂಡಳಿಗೆ ಕೇಂದ್ರ ಸರ್ಕಾರ ಅನುದಾನ ನೀಡಲು ಒತ್ತಾಯ
ಕಲಬುರಗಿ : ಹೈದ್ರಾಬಾದ ಕರ್ನಾಟಕ ಪ್ರದೇಶದ ಅಭಿವೃದ್ಧಿ ಮಂಡಳಿಗೆ ಹೈ.ಕ. ಭಾಗದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಶೇ. 50 ರಷ್ಟು ಅನುದಾನ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಡ ತರಲಾಗುವುದು ಎಂದು ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದರು.
ಅವರು ಮಂಗಳವಾರ ಕಲಬುರಗಿ ಹೈದ್ರಾಬಾದ ಕರ್ನಾಟಕ ಪ್ರದೇಶ ಅಭಿüವೃದ್ಧಿ ಮಂಡಳಿ ಕಚೇರಿಯಲ್ಲಿ ಮಂಡಳಿಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಪತ್ರಕರ್ತರೊಂದಿಗೆ ಮಾತನಾಡಿ, ಹೈ.ಕ. ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಅನುದಾನ ನೀಡಲು ಒತ್ತಾಯಿಸುವುದನ್ನು ಗಂಭೀರವಾಗಿ ಚಿಂತನೆ ಮಾಡಲಾಗುವುದು ಎಂದರು.
ಹೈ.ಕ. ಪ್ರದೇಶದ ಅಭಿವೃದ್ಧಿಗಾಗಿ ಈ ಹಿಂದಿನ ಕೇಂದ್ರ ಸರ್ಕಾರವು 371ನೇ ಕಲಂಗೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ಕಲ್ಪಿಸಿದೆ. 371ನೇ ಕಲಂಗೆ ತಿದ್ದುಪಡಿಯಾಗಿ 5 ವರ್ಷ ಗತಿಸಿದರೂ ಕೇಂದ್ರದಿಂದ ಅಭಿವೃದ್ಧಿಗಾಗಿ ಯಾವುದೇ ಹಣ ಮಂಡಳಿಗೆ ಬಂದಿಲ್ಲ. ರಾಜ್ಯ ಸರ್ಕಾರವು ಮಂಡಳಿಗೆ ಈವರೆಗೆ 6000 ಕೋಟಿ ರೂ.ಗಳನ್ನು ನೀಡಿದೆ. ಇದರಿಂದ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲಾಗುತ್ತಿದೆ ಎಂದರು.
ಹೈ.ಕ. ಭಾಗದ ಅಭಿವೃದ್ಧಿಗಾಗಿ 371(ಜೆ) ಕಲಂ ರೂಪಿಸಿ ಅನುಷ್ಠಾನಗೊಳಿಸಲು ಸಚಿವರಾದ ಹೆಚ್.ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮುಂದೆ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ಹಾಗೂ ಗದಗ ಜಿಲ್ಲೆಯ ರೋಣ ಮತ್ತು ಮುಂಡರಗಿ ತಾಲೂಕಿನ ಆರು ಹಳ್ಳಿಗಳನ್ನು ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ಸೇರಿಸುವ ಮನವಿಗಳಿದ್ದವು. ಈ ಸಮಿತಿಯು ಪರಿಶೀಲಿಸಿ ಹರಪನಹಳ್ಳಿಯು ಹೈ.ಕ. ಪ್ರದೇಶದ ಈಶಾನ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಕ್ಕೆ ಅನ್ವಯವಾಗುವುದರಿಂದ ಹರಪನಹಳ್ಳಿಯನ್ನು 371(ಜೆ) ಅಡಿಯಲ್ಲಿ ಸೇರ್ಪಡೆ ಮಾಡಲಾಯಿತು. ಆದರೆ ಗದಗ ಜಿಲ್ಲೆಯ ರೋಣ ಮತ್ತು ಮುಂಡರಗಿ ತಾಲೂಕಿನ ಆರು ಹಳ್ಳಿಗಳನ್ನು 371(ಜೆ) ಅಡಿಯಲ್ಲಿ ಸೇರ್ಪಡೆ ಮಾಡಲು ಅವಕಾಶಗಳು ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಚಿಂಚೋಳಿ ಶಾಸಕ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಂಸದೀಯ ಕಾರ್ಯದರ್ಶಿ ಡಾ. ಉಮೇಶ ಜಾಧವ, ಶಾಸಕ ಬಿ.ಆರ್. ಪಾಟೀಲ, ಮುಖಂಡರಾದ ಅಲ್ಲಮಪ್ರಭು ಪಾಟೀಲ, ಮಂಡಳಿ ಕಾರ್ಯದರ್ಶಿ ಹರ್ಷ ಗುಪ್ತಾ, ಉಪನಿರ್ದೇಶಕ ಬಸವರಾಜ ಉಪಸ್ಥಿತರಿದ್ದರು.
Recent news in nation »
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು