ಪೇಸ್ ಬುಕ್ ನಲ್ಲಿ ಚುನಾವಣೆ ಪಾವಿತ್ರ್ಯತೆ ಕಾಪಾಡಿ :_ಮಾರ್ಕ್ ಝಕರ್ ಬರ್ಗ್
ವಾಷಿಂಗ್ಟನ್: ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ನಡೆಯಲಿರುವ ಚುನಾವಣೆಗಳನ್ನು ನಿಷ್ಪಕ್ಷಪಾತವಾಗಿ ನಡೆಸುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣ, ಫೇಸ್ಬುಕ್ ನಿಂದ ಯಾವುದೇ ಧಕ್ಕೆಯಾಗದಿರಲು ಕೃತಕ ಬುದ್ಧಿಮತ್ತೆ ಹಾಗು ಸಹಸ್ರಾರು ಜನರನ್ನು ಇದೇ ವಿಚಾವಾಗಿ ನೇಮಿಸಿರುವುದಾಗಿ ಫೇಸ್ಬುಕ್ ಸ್ಥಾಪಕ ಹಾಗು ಸಿಇಓ, ಮಾರ್ಕ್ ಝುಕರ್ಬರ್ಗ್ ತಿಳಿಸಿದ್ದಾರೆ.
ಸುಳ್ಳು ಸುದ್ದಿ ಹಬ್ಬಿಸುವ ಟ್ರೋಲ್ಗಳನ್ನು ನಿಯಂತ್ರಿಸಲು ಪೇಸ್ಬುಕ್ ತನ್ನ ಭದ್ರತಾ ಕ್ರಮಗಳನ್ನು ಇನ್ನಷ್ಟು ಕಠಿಣಗೊಳಿಸುತ್ತಿದೆ ಎಂದು ಹೇಳಿರುವ ಝುಕ್ರ್ಬರ್ಗ್, ಚುನಾವಣಾ ದೃಷ್ಟಿಯಿಂದ 2018 ದೊಡ್ಡ ವರ್ಷವಾಗಿದೆ ಎಂದಿದ್ದಾರೆ.
ಡೊನಾಲ್ಡ್ ಟ್ರಂಪ್ರ ಅಧ್ಯಕ್ಷೀಯ ಚುನಾವಣಾ ಪ್ರಚಾರದೊಂದಿಗೆ ನಂಟು ಹೊಂದಿರುವ ಬ್ರಿಟನ್ ಮೂಲದ, ಕೇಂಬ್ರಿಡ್ಜ್ ಅನಲಿಟಿಕಾ ಸಂಸ್ಥೆಯಿಂದ ಆದ ಭಾರೀ ಪ್ರಮಾಣದ ವೈಯಕ್ತಿಕ ಮಾಹಿತಿ ಸೊರಿಕೆ ಕುರಿತಾಗಿ, ಸಾಮಾಜಿಕ ಜಾಲತಾಣ ದೈತ್ಯನ ವಿರುದ್ಧ ಸಾಕಷ್ಟು ಟೀಕೆ ಟಿಪ್ಪಣಿಗಳು ಕೇಳಿ ಬಂದಿದ್ದವು.
“ಕಳೆದ ವರ್ಷ, ಅಮೆರಿಕದ ಅಲಬಾಮಾದಲ್ಲಿ ನಡೆದಿದ್ದ ವಿಶೇಷ ಸೆನೆಟ್ ಚುನಾವಣೆಯಲ್ಲಿ ತಪ್ಪು ಮಾಹಿತಿ ಹಬ್ಬಿಸಲು ಯತ್ನಿಸುತ್ತಿದ್ದ ಮ್ಯಾಸಿಡೋನಿಯನ್ ಮೂಲದ ಟ್ರೋಲ್ಗಳನ್ನು ಕೃತಕ ಬುದ್ಧಿಮತ್ತೆ ಬಳಸಿ ತೆಗೆದುಹಾಕಲಾಗಿತ್ತು. ಸದ್ಯ, 15,000ಕ್ಕೂ ಹೆಚ್ಚು ಮಂದಿ ಭದ್ರತೆ ಹಾಗು ವಿಷಯ ಪರಿಶೀಲನೆ ಕುರಿತಂತೆ ಕೆಲಸ ಮಾಡುತ್ತಿದ್ದಾರೆ, ವರ್ಷಾಂತ್ಯಕ್ಕೆ 20,000ಕ್ಕೂ ಹೆಚ್ಚು ಮಂದಿಯನ್ನು ಇದೇ ವಿಚಾರವಾಗಿ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು” ಎಂದು ನೆನ್ನೆ ನಡೆದ ದೂರವಾಣಿ ಸಭೆ ಉದ್ದೇಶಿಸಿ, ಝುಕರ್ಬರ್ಗ್ ತಿಳಿಸಿದ್ದಾರೆ.
ಭಾರತ, ಬ್ರೆಝಿಲ್, ಮೆಕ್ಸಿಕೋ ,ಪಾಕಿಸ್ತಾನ, ಹಂಗೇರಿ ಹಾಗು ಇನ್ನಿತರ ದೇಶಗಳಲ್ಲಿ ಈ ವರ್ಷ ಚುನಾವಣೆ ನಡೆಯಲಿದ್ದು ಬಹಳ ಮಹತ್ವ ಪಡೆದುಕೊಂಡಿದೆ.
ಕರ್ನಾಟಕ, ರಾಜಸ್ಥಾನ, ಛತ್ತೀಸ್ಗಡ, ಮಧ್ಯ ಪ್ರದೇಶಗಳಲ್ಲಿ ಈ ವರ್ಷ ವಿಧಾನ ಸಭಾ ಚುನಾವಣೆಗಳು ಜರುಗಲಿದ್ದು ಇನ್ನೊಂದು ವರ್ಷದಲ್ಲಿ ಲೋಕಸಭಾ ಚುನಾವಣೆಯೂ ಆಯೋಜನೆಯಾಗಲಿದೆ.
ಇದಕ್ಕೂ ಮುನ್ನ, ಅಮೆರಿಕವನ್ನು ಗುರಿಯಾಗಿಸಿದ್ದ ರಷ್ಯಾದ ಅಂತರ್ಜಾಲ ಸಂಶೋಧನಾ ಏಜೆನ್ಸಿಯ ಪತ್ರಗಳನ್ನು ಫೇಸ್ಬುಕ್ ಪಡೆದುಕೊಂಡಿದ್ದು, ಈ ನಿಟ್ಟಿನಲ್ಲಿ ದೊಡ್ಡ ಹೆಜ್ಜೆ ಇಟ್ಟಿದೆ ಎಂದು ಝುಕರ್ಬರ್ಗ್ ತಿಳಿಸಿದ್ದಾರೆ.
“2016ರ ಚುನಾವಣೆ ಬಳಿಕ ಅವರ ಚಟುವಟಿಕೆಗಳ ಕುರಿತು ಜಾಗೃತರಾದ ನಾವು ಜಗತ್ತಿನಾದ್ಯಂದ ಚುನಾವಣೆಗಳ ಪಾವಿತ್ರ್ಯತೆ ಕಾಪಾಡಲು ಕೆಲಸ ಮಾಡುತ್ತಿದ್ದೇವೆ” ಎಂದು ಝುಕರ್ಬರ್ಗ್ ತಿಳಿಸಿದ್ದಾರೆ.
ಫ್ರಾನ್ಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಈ ಕುರಿತಂತೆ ಕಣ್ಗವಾಲಿಟ್ಟ ಕಾರಣ, ಸುಮಾರು 30,000 ನಕಲಿ ಖಾತೆಗಳನ್ನು ಕೃತಕ ಬುದ್ಧಿಮತ್ತೆ ಮೂಲಕ ಪತ್ತೆ ಮಾಡಲಾಗಿತ್ತು ಎಂದು ಝುಕರ್ಬರ್ಗ್ ತಿಳಿಸಿದ್ದಾರೆ.
ಕೆಲವೊಮ್ಮೆ ಸ್ಪಾಮ್ಗಳನ್ನು ಹಬ್ಬಿಸುವವರಿಂದ, ಚುನಾವಣೆಗಳಲ್ಲಿ ಮಧ್ಯ ಪ್ರವೇಶಿದಲು ಸರಕಾರ ಯತ್ನಿಸುವ ಕಾರಣ ಹಾಗು ಮಾಧ್ಯಮಗಳು ಬಿತ್ತರಿಸುವ ಸುದ್ದಿಗಳಲ್ಲಿ ಸತ್ಯಾಂಶದ ಕೊರತೆ ಕೂಡಾ ಕಾರಣವಾಗಲಿದೆ ಎಂದು ಝುಕರ್ಬರ್ಗ್ ತಿಳಿಸಿದ್ದಾರೆ.
ಅಮೆರಿಕ ಚುನಾವಣೆಯಲ್ಲಿ ರಷ್ಯಾ ಭಾಗಿಯಾದಂಥ ವಿಚಾರಗಳು ರಾಷ್ಟ್ರೀಯ ಭದ್ರತೆ ಕುರಿತಂತೆ ಪ್ರಭಾವ ಬೀರಲಿವೆ ಎಂದು ಝುಕರ್ಬರ್ಗ್ ತಿಳಿಸಿದ್ದಾರೆ.
“ಈ ವಿಚಾರವಾಗಿ ಪರಿಹಾರ ಕಂಡುಕೊಳ್ಳಲು ನಾವು ಮೊದಲು ದುಷ್ಟ ಶಕ್ತಿಗಳನ್ನು ಪತ್ತೆ ಮಾಡಬೇಕಿದೆ. ಇಮಥ ಶಕ್ತಿಗಳನ್ನು ಫೇಸ್ಬುಕ್ನಿಂದ ಸಂಪೂರ್ಣ ಕಿತ್ತೊಗೆಯಲು ಯತ್ನಿಸಲಿದ್ದೇವೆ” ಎಂದು ಝುಕರ್ಬರ್ಗ್ ತಿಳಿಸಿದ್ದಾರೆ.
(ಸಂಗ್ರಹಿಸಿದ ವರದಿ)
Recent news in nation »
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು