ಆಧಾರ್ ಪಡೆದು 10 ವರ್ಷವಾಗಿದ್ದರೆ ಮಾಹಿತಿ ನವೀಕರಿಸಲು ಯುಐಡಿಎಐ ಮನವಿ:

ನವದೆಹಲಿ: 10 ವರ್ಷಗಳ ಹಿಂದೆ ಆಧಾರ್ ಪಡೆದು, ಇದುವರೆಗೆ ತಮ್ಮ ಮಾಹಿತಿಯನ್ನು ನವೀಕರಿಸದೇ ಇರುವವರು ಹೊಸದಾಗಿ ತಮ್ಮ ಗುರುತು ಮತ್ತು ಮನೆಯ ವಿಳಾಸದ ದಾಖಲಾತಿಗಳನ್ನು ಸಲ್ಲಿಸುವಂತೆ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ(ಯುಐಡಿಎಐ) ತಿಳಿಸಿದೆ.
ಆನ್ಲೈನ್ ಮತ್ತು ಆಧಾರ್ ಕೇಂದ್ರಗಳಲ್ಲಿ ಮಾಹಿತಿ ಅಪ್ಡೇಟ್ ಮಾಡಬಹುದಾಗಿದೆ ಎಂದು ಯುಐಡಿಎಐ ತಮ್ಮ ಪ್ರಕಟಣೆಯಲ್ಲಿ ತಿಳಿಸಿದೆ.
10 ವರ್ಷಗಳ ಹಿಂದೆ ವಿಶಿಷ್ಟ ಗುರುತಿನ ಸಂಖ್ಯೆ ಪಡೆದಿದ್ದವರು, ಈವರೆಗೆ ತಮ್ಮ ಮಾಹಿತಿಗಳ ಬಗ್ಗೆ ಅಪ್ಡೇಟ್ ಮಾಡದೇ ಇದ್ದರೆ, ಕೂಡಲೇ ತಮ್ಮ ದಾಖಲಾತಿಗಳನ್ನು ಅಪ್ಡೇಟ್ ಮಾಡಬೇಕೆಂದು ವಿನಂತಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆಧಾರ್ ಮಾಹಿತಿ ನವೀಕರಣ ಕಡ್ಡಾಯವೇ ಎಂಬ ಬಗ್ಗೆ ಪ್ರಾಧಿಕಾರ ಸ್ಪಷ್ಟನೆ ನೀಡಿಲ್ಲ.
ಅಗತ್ಯ ಶುಲ್ಕವನ್ನು ಪಾವತಿಸಿದ ನಂತರ ಗುರುತಿನ ದಾಖಲೆಗಳು ಮತ್ತು ಮನೆಯ ವಿಳಾಸದ ಮಾಹಿತಿ ನವೀಕರಣ ಮಾಡಬಹುದಾಗಿದೆ ಎಂದು ಅದು ಹೇಳಿದೆ.
‘My Aadhaar ಪೋರ್ಟಲ್ ಅಥವಾ ಹತ್ತಿರದ ಆಧಾರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಮಾಹಿತಿ ನವೀಕರಿಸಬಹುದು ಎಂದು ಅದು ಸೇರಿಸಿದೆ.
ಆಧಾರ್ ಕಾರ್ಡ್ನಲ್ಲಿ ಕಣ್ಣಿನ ಪಾಪೆ, ಫಿಂಗರ್ಪ್ರಿಂಟ್ ಮತ್ತು ಛಾಯಾಚಿತ್ರಗಳ ಮೂಲಕ ಗುರುತಿಸುವಿಕೆಯನ್ನು ದಾಖಲು ಮಾಡಲಾಗುತ್ತದೆ.
ಕಳೆದ 10 ವರ್ಷಗಳಿಂದ ದೇಶದಲ್ಲಿ ಆಧಾರ್ ಸಂಖ್ಯೆಯು ವ್ಯಕ್ತಿಗಳ ಪ್ರಮುಖ ಗುರುತಿನ ಮೂಲವಾಗಿ ಹೊರಹೊಮ್ಮಿದೆ ಎಂದು ಹೇಳಿಕೆ ತಿಳಿಸಿದೆ. ವಿವಿಧ ಸರ್ಕಾರಿ ಯೋಜನೆಗಳು ಮತ್ತು ಸೇವೆಗಳಲ್ಲಿ ಆಧಾರ್ ಸಂಖ್ಯೆಯನ್ನು ಬಳಸಲಾಗುತ್ತದೆ.
ಸರ್ಕಾರಿ ಪ್ರಯೋಜನಗಳನ್ನು ಪಡೆಯಲು, ಗುರುತಿಸುವಿಕೆ/ಪ್ರಮಾಣೀಕರಣದಲ್ಲಿ ಯಾವುದೇ ಅನಾನುಕೂಲತೆಯನ್ನು ತಪ್ಪಿಸಲು ಜನರು ತಮ್ಮ ಆಧಾರ್ ಡೇಟಾವನ್ನು ನವೀಕರಿಸಬೇಕು ಎಂದು ತಿಳಿಸಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »

ಮಾಹಿತಿ ನೀಡದ ಅಧಿಕಾರಿಗಳಿಗೆ ಒಂದು ಕೋಟಿ ದಂಡ
ಸರಿಯಾದ ಸಮಯಕ್ಕೆ ಮಾಹಿತಿ ಕಾರ್ಯಕರ್ತರಿಗೆ ಮಾಹಿತಿ ಒದಗಿಸದ ಕಾರಣ ಒಂದು ಕೋಟಿಗೂ ಹೆಚ್ಚು ಹಣವನ್ನು ದಂಡ ವಿಧಿಸಿದ ರಾಜ್ಯ ಮಾಹಿತಿ ಆಯೋಗ. ನಿಜಕ್ಕೂ ಮಾಹಿತಿ ಹಕ್ಕಿನ ಕಾಯ್ದೆ(RTI) ತನ್ನ ಪವರ್ ನ್ನು ತೋ

ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಾಕ್ ಬ್ರಿಟನ್ ನಲ್ಲಿ ಅತ್ಯಂತ ಶ್ರೀಮಂತ
ಲಂಡನ್, ಅ.24: ಬ್ರಿಟನ್ ಪ್ರಧಾನಿ ಹುದ್ದೆಯ ರೇಸ್ ನಿಂದ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್(Boris Johnson) ಹಿಂದೆ ಸರಿದ ಬಳಿಕ ನೂತನ ಪ್ರಧಾನಿಯ

ಆಧಾರ್ ಪಡೆದು 10 ವರ್ಷವಾಗಿದ್ದರೆ ಮಾಹಿತಿ ನವೀಕರಿಸಲು ಯುಐಡಿಎಐ ಮನವಿ:
ನವದೆಹಲಿ: 10 ವರ್ಷಗಳ ಹಿಂದೆ ಆಧಾರ್ ಪಡೆದು, ಇದುವರೆಗೆ ತಮ್ಮ ಮಾಹಿತಿಯನ್ನು ನವೀಕರಿಸದೇ ಇರುವವರು ಹೊಸದಾಗಿ ತಮ್ಮ ಗುರುತು ಮತ್ತು ಮನೆಯ ವಿಳಾಸದ

ಪಿಎಫ್ಐ ಸಂಃಟನೆ ನಿಷೇಧ ಸ್ವಾಗತಾರ್ಹ: ಅಶ್ವತ್ಥನಾರಾಯಣ
ರಾಮನಗರ: ಸಮಾಜ ಮತ್ತು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಪಿಎಫ್ಐ ಮತ್ತು ಅದರ 8 ಅಂಗಸಂಸ್ಥೆಗಳನ್ನು 5 ವರ್ಷಗಳ ಮಟ್ಟಿಗೆ ನಿಷೇಧಿಸಿ

ಐದು ವರ್ಷ ಪಿಎಫ್ಐ ಸಂಘಟನೆ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ
ನವದೆಹಲಿ: ತಕ್ಷಣದಿಂದಲೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರವು PFI (ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ) ಮತ್ತು ಅದರ ಸಹವರ್ತಿಗಳು ಅಥವಾ ಅಂಗಸಂಸ್

ಮಧ್ಯಪ್ರದೇಶದಲ್ಲಿ ಏಳು ರೈತರ ಗುಂಪೊಂದು ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ ಉತ್ಖನನ ನಡೆಸಿ 3.21 ಕ್ಯಾರೆಟ್ ವಜ್ರ ಪತ್ತೆ ಹಚ್ಚಿದ್ದಾರೆ.
ಪನ್ನಾ: ಮಧ್ಯಪ್ರದೇಶದ ಪನ್ನಾ ಜಿಲ್ಲೆಯ ಬ್ರಿಜ್ಪುರ ಮೂಲದ ರೈತರಿಗೆ ಅದೃಷ್ಟ ಖುಲಾಯಿಸಿದೆ. ಸರ್ಕಾರದಿಂದ ಬಾಡಿಗೆ ಮೇಲೆ ಪಡೆದ ಲಾಲ್ಕಿಧೇರಿ ಪ್ರದೇಶದ ವಜ್ರದ ಗಣಿಯಲ್ಲಿ 3.21 ಕ್ಯಾರೆಟ್ ವಜ್ರ ದೊರೆತಿದ

ವಕೀಲರ (ರಕ್ಷಣಾ) ಮಸೂದೆ 2021: ನ್ಯಾಯಾಧೀಶರ ಪೂರ್ವಾನುಮತಿ ಇಲ್ಲದೆ ವಕೀಲರ ಬಂಧನ ಕಾನೂನುಬಾಹಿರ!
ವಕೀಲರ ರಕ್ಷಣೆ ಮತ್ತು ವೃತ್ತಿ ನಿರ್ವಹಣೆಗೆ ಅನುಕೂಲವಾಗುವಂತೆ ಮಾಡಲು ದೇಶದಲ್ಲಿ ಪ್ರಬಲ ಕಾನೂನು ರೂಪಿಸುವ ಕಾರ್ಯ ನಡೆದಿದ್ದು, ವಕೀಲರ ರಕ್ಷಣೆ ಮಸೂದೆ 2021 ಬಿಡುಗಡೆಗೊಳಿಸಲಾಗಿದೆ.

ದೇಶಾದ್ಯಂತ ಮಧ್ಯರಾತ್ರಿಯಿಂದಲೇ ಪಿಎಫ್ಐ ಕಚೇರಿಗಳ ಮೇಲೆ ಎನ್ಐಎ, ಇಡಿ ದಿಢೀರ್ ದಾಳಿ
ಹೈದರಾಬಾದ್: ಕಳೆದ ಮಧ್ಯರಾತ್ರಿಯಿಂದ ದಿಢೀರ್ ಕಾರ್ಯಾಚರಣೆ ಕೈಗೊಂಡಿರುವ 200ಕ್ಕೂ ಹೆಚ್ಚು ರಾಷ್ಟ್ರೀಯ ತನಿಖಾ ದಳ (ಎನ್ಐಎ)ದ ಅಧಿಕಾರಿಗಳು ದೇ

ಅಣ್ಣ ಬ್ಲಡ್ ಕ್ಯಾನ್ಸರ್ಗೆ ಬಲಿ, ಅಮ್ಮನಿಗೆ ಬ್ರೆಸ್ಟ್ ಕ್ಯಾನ್ಸರ್: ಪವರ್ಲಿಫ್ಟಿಂಗ್ನಲ್ಲಿ ಬೆಳ್ಳಿ ಗೆದ್ದು ಬೂಸ್ಟರ್ ಡೋಸ್ ಕೊಟ್ಟ ಮಗಳು!
ಹೈದರಾಬಾದ್: ಬದುಕು ಒಡ್ಡಿದ ಹತ್ತು ಹಲವು ಸಮಸ್ಯೆಗಳನ್ನು ಧೈರ್ಯದಿಂದ ಮೆಟ್ಟಿ ನಿಂತ ಇಲ್ಲೊಬ್ಬ ಹೈದರಾಬಾದ್ನ 22 ವರ್ಷದ ಯುವತಿ ಯುವ ಜನತೆಗೆ ಸ್ಫೂರ್ತಿಯ ಸ

ಅಬ್ಬಾ…!,ಎಂಬತ್ತೇಳರ ವೃದ್ದೆಗೆ ಎಂಭತ್ತೊಬ್ಬರ ಗಂಡನಿಂದ ಸೆಕ್ಸ್ ಗೆ ಒತ್ತಾಯ ದೂರು!
ವಡೋದರಾದ 87 ವರ್ಷದ ವೃದ್ಧೆ ಮಹಿಳಾ ಸಹಾಯವಾಣಿಗೆ ಕರೆ ಮಾಡಿ ತನ್ನ ಪತಿಯ ವಿರುದ್ಧ ದೂರು ನೀಡಿದ್ದು, ಕರೆಯನ್ನು ಸ್ವೀಕರಿಸಿದ ಅಭಯಂ ತಂಡ ನಿಜಕ್ಕೂ ದಿಗ್ಭ್ರಮೆಗೊಂಡಿದೆ.
ಹೌದು… ಗುಜರಾತ್
ಪ್ರತಿಕ್ರಿಯೆಗಳು