Tel: 7676775624 | Mail: info@yellowandred.in

Language: EN KAN

    Follow us :


ಪ್ರಧಾನ ಮಂತ್ರಿ ಅವಾಸ ಯೋಜನೆ ಅವಧಿ ವಿಸ್ತರಣೆ, ಈಗಲೇ ಅರ್ಜಿ ಸಲ್ಲಿಸಿ ಸ್ವಂತ ಮನೆ ಪಡೆಯಿರಿ

Posted date: 13 Jul, 2018

Powered by:     Yellow and Red

ಪ್ರಧಾನ ಮಂತ್ರಿ ಅವಾಸ ಯೋಜನೆ ಅವಧಿ ವಿಸ್ತರಣೆ, ಈಗಲೇ ಅರ್ಜಿ ಸಲ್ಲಿಸಿ ಸ್ವಂತ ಮನೆ ಪಡೆಯಿರಿ

ಪಿಎಂಎವೈ ಯೋಜನೆ ಮೂಲಕ ದೇಶದ ಪ್ರತಿಯೊಬ್ಬರಿಗೂ ಸೂರು ಕಲ್ಪಿಸಬೇಕು, ೨೦೨೨ರ ವೇಳೆಗೆ ಎಲ್ಲರಿಗೂ ಸ್ವಂತ ಮನೆ ಇರಬೇಕು ಎನ್ನುವುದು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಉದ್ದೇಶ. ಕೇಂದ್ರ, ರಾಜ್ಯ ಸರ್ಕಾರಗಳ ಈ ಯೋಜನೆಯಲ್ಲಿ ಬಡವರು, ಅತಿ ಕೆಳವರ್ಗದವರು, ಮಧ್ಯಮ ವರ್ಗದವರು, ಕಡಿಮೆ ಆದಾಯ ಹೊಂದಿರುವವರು, ನೌಕರರು ಹೀಗೆ ಎಲ್ಲರೂ ಒಳಗೊಂಡಿದ್ದಾರೆ. ಗ್ರಾಮೀಣ, ನಗರ, ಅರೆನಗರ ಹೀಗೆ ಎಲ್ಲಾ ಕ್ಷೇತ್ರಗಳು ಒಳಪಟ್ಟಿವೆ. ಕೊಳಗೇರಿ ವಾಸಿಗಳು, ಗ್ರಾಮೀಣ, ನಗರ, ಅರೆನಗರದ ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ವಸತಿ ಕಲ್ಪಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಪ್ರಧಾನ ಮಂತ್ರಿ ಅವಾಸ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

ಆನ್ಲೈನ್ ಮೂಲಕ ನೋಂದಣಿ ಪ್ರಧಾನ ಮಂತ್ರಿ ಅವಾಸ ಯೋಜನೆಯ ಅಧಿಕೃತ ವೆಬ್ಸೈಟ್ pmaymis.gov.in ಗೆ ಭೇಟಿ ನೀಡಿ. 'ಸಿಟಿಜನ್ ಅಸೆಸ್ಮೆಂಟ್' ಮೆನು ಮೂಲಕ ಪ್ರಧಾನಮಂತ್ರಿ ಅವಾಸ ಯೋಜನೆ ಅರ್ಜಿ ಆಪ್ಸನ್ ಆಯ್ಕೆ ಮಾಡಿ. ನಿಮಗೆ ಎರಡು ಆಯ್ಕೆಗಳನ್ನು ನೋಡಬಹುದು: 1. ಸ್ಲಂ ನಿವಾಸಿಗಳು (Slum Dwellers) 2. ಇತರ ಮೂರು ಘಟಕಗಳ ಪ್ರಯೋಜನಗಳು (rural, urban or semi-urban) 'ಸಿಟಿಜನ್ ಅಸೆಸ್ಮೆಂಟ್' ಮೆನು ಮೂಲಕ ಒಂದು ಲಿಂಕ್ ಆಯ್ಕೆ ಮಾಡಿ. ಪ್ರಸ್ತುತ ನೀವು ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿದ್ದರೆ ಸ್ಲಂ ನಿವಾಸಿಗಳು(Slum Dwellers) ಆಯ್ಕೆ ಮಾಡಿ. ಒಂದು ವೇಳೆ ನೀವು ಗ್ರಾಮೀಣ, ನಗರ, ಅರೆ ನಗರ ಪ್ರದೇಶಗಳಲ್ಲಿ ವಾಸವಾಗಿದ್ದರೆ ಇತರ ಮೂರು ಘಟಕಗಳ ಪ್ರಯೋಜನಗಳು(Benefits under other 3 Components) ಆಪ್ಷನ್ ಆಯ್ಕೆ ಮಾಡಿ.

ನೋಂದಣಿ ಶುಲ್ಕ ದಾಖಲೆಗಳನ್ನು ಮಾಡುವುದು ಒಳಗೊಂಡಂತೆ ಒಬ್ಬ ರ್ಜಿದಾರ ನೋಂದಣಿ ಪ್ರಕ್ರಿಯೆ ಮುಗಿಸಲು ರೂ. ೧೦೦ ಶುಲ್ಕವನ್ನು ನಿಗದಿ ಮಾಡಲಾಗಿದೆ.

15 ಲಕ್ಷ ನಿವೇಶನ ವಸತಿ ಯೋಜನೆ ಅವಧಿ ವಿಸ್ತರಣೆ ಮಾಹಿತಿ ನೀಡಿರುವ ವಸತಿ ಸಚಿವ ಯು.ಟಿ.ಖಾದರ್, ಪ್ರಧಾನಮಂತ್ರಿ ಅವಾಸ ಯೋಜನೆಯಡಿ ಇದುವರೆಗೆ ೧೫ ಲಕ್ಷ ನಿವೇಶನ ಹಾಗು ವಸತಿ ರಹಿತರನ್ನು ಗುರುತಿಸಲಾಗಿದೆ ಎಂದು ಹೇಳಿದ್ದಾರೆ

ರಾಜ್ಯ, ಕೇಂದ್ರದಿಂದ ನೆರವು ಪ್ರಧಾನಮಂತ್ರಿಅವಾಸ ಯೋಜನೆಯಡಿ ಮನೆ ಕಟ್ಟಿಸಿಕೊಳ್ಳಲು ಪ್ರತಿಯೊಬ್ಬ ಫಲಾನುಭವಿಗೆ ಕೇಂದ್ರದಿಂದ ರೂ. ೧.೨೦ ಲಕ್ಷ ನೆರವು ಹಾಗು ರಾಜ್ಯದಿಂದ ರೂ. ೪೮ ಸಾವಿರ ನೆರವು ಸಿಗಲಿದೆ.

ಅರ್ಹರನ್ನು ಕೈಬಿಟ್ಟರೆ ಕಾನೂನು ಕ್ರಮ ವಸತಿ ಯೋಜನೆಯಿಂದ ಯಾರು ಕೂಡ ತಪ್ಪಬಾರದು ಎಂಬ ಕಾರಣಕ್ಕಾಗಿ ಅರ್ಹ ಫಲಾನುಭವಿಗಳನ್ನು ಕೈ ಬಿಡದಂತೆ ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ಒಂದು ವೇಳೆ ಅರ್ಹರನ್ನು ಕೈಬಿಟ್ಟರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಯೋಜನೆಯ ಉಸ್ತುವಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಮೀಕ್ಷೆಯ ಮೇಲುಸ್ತುವಾರಿ ತೆಗೆದುಕೊಳ್ಳಲಿದ್ದಾರೆ.

ಸರ್ಕಾರದ ಬದ್ದತೆ ವಸತಿ ಯೋಜನೆಯನ್ನು ಇಡೀ ರಾಜ್ಯಕ್ಕೆ ವಿಸ್ತರಣೆ ಮಾಡಿದರೆ ವಸತಿ ಸಮಸ್ಯೆ ಎದುರಾಗುವುದಿಲ್ಲ. ಮತ ನೀಡಿದವರು ಅಥವಾ ಮತ ನೀಡದೆ ಇದ್ದವರು ಎಂದು ವಿಭಜನೆ ಮಾಡದೆ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರ ಯೋಜನೆ ತುಪಿಸುವಂತಾಗಬೇಕು.

ಬೇಕಾಗುವ ದಾಖಲಾತಿಗಳು 1. ಆಧಾರ್ ಕಾರ್ಡ್ ಪ್ರತಿ 2. ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ 3. ಪಡಿತರ ಚೀಟಿ (ರೇಷನ್ ಕಾರ್ಡ್ ಜೆರಾಕ್ಸ್) 4. ಚುನಾವಣಾ ಚೀಟಿ 5. ಪಾಸ್ ಪೋರ್ಟ್ ಸೈಜ್ ಪೋಟೊ

ಸ್ಟೇಟಸ್ ಪರಿಶೀಲನೆ ಪಿಎಂಎವೈ ಅರ್ಜಿಯ ಪ್ರಸ್ತುತ ಸ್ಟೇಟಸ್ ನ್ನು pmaymis.gov.in ವೆಬ್ಸೈಟ್ ಮೂಲಕ ತಿಳಿದುಕೊಳ್ಳಬಹುದು. ನಿಮ್ಮಿಂದ ತುಂಬಲ್ಪಟ್ಟಿರುವ ನಿಮ್ಮ ಬಗೆಗಿನ ಸಂಪೂರ್ಣ ಮಾಹಿತಿ ಒಳಗೊಂಡಿರುವ ಆನ್ಲೈನ್ ಅರ್ಜಿಯ ಒಂದು ಪ್ರತಿಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ. ನಿಮ್ಮ ಅರ್ಜಿಯ ಸ್ಟೇಟಸ್ ತಿಳಿದುಕೊಳ್ಳಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ. (http://pmaymis.gov.in/Track_Application_Status.aspx)

ಅವಧಿ ವಿಸ್ತಾರ ಪ್ರಧಾನಮಂತ್ರಿ ಅವಾಸ ಯೋಜನೆಗೆ ಹೆಸರು ನೋಂದಾಯಿಸಿಕೊಳ್ಳುವವರಿಗೆ ಸಂತಸದ ಸುದ್ದಿ ಇದ್ದು, ನೋಂದಣಿ ಅವಧಿಯನ್ನು ಈ ತಿಂಗಳ 30 ರವರೆಗೆ ವಿಸ್ತರಿಸಲಾಗಿದೆ.

 

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್

ರಾಮನಗರ, ಜೂ. 03:   ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ  ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ

ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ

ಡಿಸೆಂಬರ್‌ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ

ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ


ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು

ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.‌ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ  ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ

ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್  ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಬೆಂಗಳೂರು:ಜ/06/21ಬುಧವಾರ. ಹೊಸ ಫಾರ್ಚೂನರ್ ತಂಡವು ಈಗ ಹೆಚ್ಚು ಶಕ್ತಿಶಾಲಿ ಡೀಸೆಲ್ ಸ್ವಯಂಚಾಲಿತ ಪ್ರಸರಣ ರೂಪಾಂತರಗಳನ್ನು ಮತ್ತು ವಿಶೇಷ ,

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ

ಚನ್ನಪಟ್ಟಣ:ಅ/05/20/ಸೋಮವಾರ.


ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ

ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ

Top Stories »  


Top ↑