Tel: 7676775624 | Mail: info@yellowandred.in

Language: EN KAN

    Follow us :


ಅಜಾತಶತ್ರು ಒಂದು ಮೆಲುಕು

Posted date: 17 Aug, 2018

Powered by:     Yellow and Red

ಅಜಾತಶತ್ರು ಒಂದು ಮೆಲುಕು

ಅಜಾತಶತ್ರು ವ್ಹಾವ್ ಎಂತ ಅತ್ಯದ್ಭುತ ಪದ.
ಈ ಬಿರುದಾಂಕಿತ ಅಟಲ್ ಬಿಹಾರಿ ವಾಜಪೇಯಿ ಯವರ ಬಗ್ಗೆ ಬರೆಯುವಂತ ವಿದ್ವಾಂಸನೂ ಅಲ್ಲಾ, ಹಿರಿಯ ಮುಖಂಡ, ಒಡನಾಡಿ, ಸಂಬಂದಿಯೂ ಅಲ್ಲಾ ಬಹಳ ಮುಖ್ಯವಾಗಿ ಆ ಯೋಗ್ಯತೆಯೂ ನನಗಿಲ್ಲ ಎಂದು ನನಗೆ ಗೊತ್ತಿದೆ. ಆದಾಗ್ಯೂ ಅದೆಕೋ ಒಂದೆರಡು ಸಾಲು ಬರೆಯಬೇಕೆನ್ನಿಸಿತು ಅದಕ್ಕಾಗಿ ಬರೆಯುತ್ತಿದ್ದೇನೆ.


ಭಾರತದ ಅತಿ ದೊಡ್ಡ ಶತೃ ಎಂದರೆ ಅದು ಪಾಕಿಸ್ತಾನ ಅಂದಿಗೂ ಇಂದಿಗೂ ಇದು ಸಾರ್ವತ್ರಿಕ ಸತ್ಯ ಇಂತಹ ದೇಶದ ಜೊತೆಗೂ ರಾಜತಾಂತ್ರಿಕ ಸಂಬಂಧವನ್ನು ಬೆಸೆದ ಏಕೈಕ ಭಾರತದ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ. ಬಹುಶಃ "ಅಜಾತಶತ್ರು" ಎಂಬ ಬಿರುದು ಅಂದೇ ಬಂದಿದೆ.


ಇದೇ ಪಾಕಿಸ್ತಾನದಲ್ಲಿ ನವಾಜ್ ಷರೀಫ್ ಪ್ರಧಾನಮಂತ್ರಿಯಾಗಿದ್ದ ಸಂದರ್ಭ ಸೇನೆಯ ಮುಖಸ್ಥರಾಗಿದ್ದ ಪರ್ವೇಜ್ ಮುಷರಫ್ ನವಾಜ್ ಷರೀಫ್ ರನ್ನು ಬಂಧಿಸಿ ಪ್ರಧಾನ ಮಂತ್ರಿಯಾದ ನಂತರ ನವಾಜ್ ಷರೀಫ್ ರ ಪುತ್ರ ನಮ್ಮ ತಂದೆಯನ್ನು ಉಳಿಸಿಕೊಡಿ ಎಂದು ಅಂದಿನ ಪ್ರಧಾನಮಂತ್ರಿ ವಾಜಪೇಯಿ ಯವರನ್ನು ಅಂಗಲಾಚಿದ ಸಂದರ್ಭದಲ್ಲಿ ನೆರವಿಗೆ ಧಾವಿಸಿದ ಜಗತ್ತಿನ ಏಕೈಕ ನಾಯಕ ನಮ್ಮ ಈ ಅಜಾತಶತ್ರು.


ಭಾರತದ ರಾಜಧಾನಿ ದೆಹಲಿಯಿಂದ ಪಾಕಿಸ್ತಾನದ ರಾಜಧಾನಿ ಲಾಹೋರ್ ಗೆ ರಾಜತಾಂತ್ರಿಕ ಸಂಬಂಧಕ್ಕಾಗಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ್ದಲ್ಲದೇ ಪ್ರಥಮ ಬಾರಿಗೆ ಅವರೇ ಅದೇ ಬಸ್ ನಲ್ಲಿ ಪ್ರಯಾಣಿಸಿದ್ದು ಚಾರಿತ್ರಿಕ ದಾಖಲೆಯಾಗಿ ಉಳಿದಿದೆ.


ಕೇವಲ ಇಪ್ಪತ್ತೇಳನೇ ವಯಸ್ಸಿಗೆ ಸಕ್ರಿಯ ರಾಜಕಾರಣಕ್ಕೆ ಬಂದು ಸೊನ್ನೆ ಯಿಂದ ದಶಕೋಟಿ ಜನಗಳವರೆಗೆ ಬಿಜೆಪಿ ಪಕ್ಷವನ್ನು ಕಟ್ಟಿದ ವಾಜಪೇಯಿಯವರು ಸಂಸದರಾಗಿ, ವಿದೇಶಾಂಗ ಸಚಿವರಾಗಿ ಪ್ರಧಾನಮಂತ್ರಿ ಯಾಗಿ ಅತ್ಯುತ್ತಮ ಆಡಳಿತವನ್ನು ಈ ದೇಶಕ್ಕೆ ಕೊಟ್ಟ ಏಕೈಕ ಪ್ರಧಾನಿ ಈ ನಮ್ಮ ವಾಜಪೇಯಿ ಯವರು.


ವಿರೋಧ ಪಕ್ಷಗಳಿಂದಲೂ ಅತಿ ಹೆಚ್ಚು ಹೊಗಳಿಸಿಕೊಂಡ, ಗಾಂಭೀರ್ಯ, ಹಾಸ್ಯ ಧಾಟಿಯ ತಮ್ಮ ಕವನಗಳ ಮೂಲಕ ರಾಜಕೀಯ ವಿರೋಧಿ ನಾಯಕರನ್ನು ಸೂಕ್ಷ್ಮವಾಗಿ ತಿವಿದೆಬ್ಬರಿಸುತ್ತಾ  ಉತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡ ಭಾರತರತ್ನ ಬಿರುದಾಂಕಿತ ಈ ನಮ್ಮ ಅಜಾತಶತ್ರು ವಾಜಪೇಯಿಯವರು.


ಬಹುಶಃ ಭಾರತದ ರಾಜಕಾರಣಿಗಳಲ್ಲಿ ಶತೃಗಳೇ ಇಲ್ಲದ, ಉತ್ತಮ ಆಡಳಿತ ಕೊಟ್ಟ, (ಲಾಲ್ ಬಹದ್ದೂರ್ ಶಾಸ್ತ್ರಿ ಹೊರತಾಗಿ) ಒಬ್ಬ ಮಹತ್ತರವಾದ ನಾಯಕನಿದ್ದ ಎಂದರೆ ಅದು ವಾಜಪೇಯಿ ಯೊಬ್ಬರೇ, 


ಕಾಂಗ್ರೆಸ್ ನ ವ್ಯಕ್ತಿಗತ ಹೆಸರಿನ ಯೋಜನೆಗಳಿಗೆ ಸಡ್ಡುಹೊಡೆದು ಹುದ್ದೆಯ ಹೆಸರನ್ನು ಬಳಸಿ (ಪ್ರಧಾನಮಂತ್ರಿ ಆವಾಸ ಯೋಜನೆ, ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಇನ್ನೂ ಮುಂತಾದವು) ಯೋಜನೆಗಳನ್ನು ರೂಪಿಸಿದ ಮಹಾನ್ ಮಾನವತಾವಾದಿ ಅಜನ್ಮ ಬ್ರಹ್ಮಚಾರಿ ಅಟಲ್ ಬಿಹಾರಿ ವಾಜಪೇಯಿಯವರು.


ಇಂದು ಅವರು ನಮ್ಮ ಭಾರತ ಅಷ್ಟೇ ಅಲ್ಲ ಇಡೀ ವಿಶ್ವವನ್ನೇ ಅಗಲಿದ್ದಾರೆ, ಅವರು ನಮ್ಮನ್ನು ಬಿಟ್ಟು ಹೋಗಿಲ್ಲಾ, ನಾವುಗಳು ಅವರನ್ನು ಕಳೆದುಕೊಂಡಿದ್ದೇವೆ, ಸರ್ ಜೀ ಮತ್ತೊಂದು ಬಾರಿ ಮಾನವ ಜನ್ಮ ಎಂಬುದೊಂದಿದ್ದರೇ ಮತ್ತೇ ನಮ್ಮ ದೇಶದಲ್ಲೇ ಜನ್ಮ ತಳೆದು ಬರಲೆಂದು ಪ್ರಾರ್ಥಿಸೋಣ ಬನ್ನಿರಿ.

 

ಗೋ ರಾ ಶ್ರೀನಿವಾಸ...

 ಮೊ; 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in nation »

ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್

ರಾಮನಗರ, ಜೂ. 03:   ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ

ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ  ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ

ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ

ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ

ಡಿಸೆಂಬರ್‌ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ

ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ

ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ಮರಣ


ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ

ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು

ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.‌ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ

ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ  ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ

ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ

ಟೊಯೋಟಾ ಕಿರ್ಲೋಸ್ಕರ್  ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ

ಬೆಂಗಳೂರು:ಜ/06/21ಬುಧವಾರ. ಹೊಸ ಫಾರ್ಚೂನರ್ ತಂಡವು ಈಗ ಹೆಚ್ಚು ಶಕ್ತಿಶಾಲಿ ಡೀಸೆಲ್ ಸ್ವಯಂಚಾಲಿತ ಪ್ರಸರಣ ರೂಪಾಂತರಗಳನ್ನು ಮತ್ತು ವಿಶೇಷ ,

ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ

ಚನ್ನಪಟ್ಟಣ:ಅ/05/20/ಸೋಮವಾರ.


ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ

ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ

ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ

Top Stories »  


Top ↑