ಹೆದ್ದಾರಿಯಲ್ಲಿ ಬೀದಿನಾಯಿ ಮತ್ತು ಸಾಕು ಪ್ರಾಣಿಗಳ ಮಾರಣಹೋಮ ! ಕ್ರಮಕೈಗೊಳ್ಳಲು ಸಾಧ್ಯವಿಲ್ಲವೇ ?
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಪ್ರತಿನಿತ್ಯವೂ ಅನೇಕ ಬೀದಿ ನಾಯಿಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುತ್ತಿವೆ, ಒಂದು ಸಣ್ಣ ಪೆಟ್ಟಾದ ನಾಯಿ ರಸ್ತೆಯಲ್ಲಿ ಬಿದ್ದರಷ್ಟೇ ಸಾಕು ಅದು ಎದ್ದು ಸಾವರಿಸಿ ಮುಂದೋಗುವ ಮುಂಚೆಯೇ ಒಂದರ ಹಿಂದೊಂದು ವಾಹನ ಎಡೆಬಿಡದೆ ಬಂದು ಆ ನಾಯಿಯನ್ನು ಛಿದ್ರ ಛಿದ್ರವಾಗಿಸಿಕೊಂಡು ಹೋಗಿಬಿಡುತ್ತವೆ. ಕೇವಲ ಎರಡ್ಮೂರು ಗಂಟೆಗಳಲ್ಲಿ ಇಲ್ಲೊಂದು ನಾಯಿ ಅಪಘಾತಕ್ಕೀಡಾಗಿತ್ತು ಅನ್ನೋದೆ ಗೊತ್ತಾಗದಷ್ಟು ರಸ್ತೆ ಶುಚಿಯಾಗಿಬಿಟ್ಟಿರುತ್ತೇ ! ಆ ನಾಯಿ ರಸ್ತೆಯ ನಡುವೆ ಹೊರತುಪಡಿಸಿ ರಸ್ತೆಯ ಮಗ್ಗುಲಲ್ಲಿ ಹೋಗಿ ಸತ್ತರೆ ಅನೇಕ ದಿನಗಳವರೆಗೆ ಪ್ರಯಾಣಿಕರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ಎದುರಾಗುತ್ತದೆ.
ಇತ್ತೀಚೆಗಂತೂ ಬೀದಿನಾಯಿಗಳ ಜೊತೆಗೆ ಸಾಕು ಪ್ರಾಣಿಗಳು ಸಹ ಅಪಘಾತಕ್ಕೀಡಾಗುತ್ತಿರುವುದು ಆಘಾತಕ್ಕೀಡುಮಾಡಿದೆ.
ನಗರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಜೊತೆಗೆ ಬೀಡಾಡಿ ಹಸುಗಳು, ಮೇಕೆಗಳು, ಬೆಕ್ಕುಗಳು ಮತ್ತು ಹಂದಿಗಳು ಯಥೆಚ್ಚವಾಗಿ ಓಡಾಡುತ್ತಿರುತ್ತವೆ, ನಗರಸಭೆಯ ಅಧಿಕಾರಿಗಳಾಗಲಿ, ನಗರಸಭೆಯ ಸದಸ್ಯರಾಗಲಿ ಕಿಂಚಿತ್ತೂ ಇದರ ಕಡೆ ಗಮನಕೊಡದಿರುವುದು ನಾಚಿಕೆಗೇಡಿನ ಸಂಗತಿ.
ಸಂಬಂಧಿಸಿದ ಮಾಲೀಕರಿಗೆ ಎಚ್ಚರಿಕೆಯ ನೋಟಿಸ್ ನೀಡಿ ತದ ನಂತರ ಸೂಕ್ತ ಕಾನೂನು ಕ್ರಮ ಜರುಗಿಸಿದರೆ ಎಲ್ಲೆಂದರಲ್ಲಿ ಸಾಕು ಪ್ರಾಣಿಗಳನ್ನು ಅಟ್ಟುವುದು ತಪ್ಪುತ್ತದೆ.
ಬೀದಿನಾಯಿಗಳು ಮತ್ತು ರಸ್ತೆಯಲ್ಲಿ ಎಲ್ಲೆಂದರಲ್ಲಿ ಹೇಗೆಂದರಲ್ಲಿ ಅಡ್ಡ ಬರುವ ಪ್ರಾಣಿಗಳಿಂದ ಅದೆಷ್ಟೋ ದ್ವಿಚಕ್ರ ವಾಹನಗಳ ಸವಾರರು ಕೈಕಾಲು ಮುರಿದುಕೊಂಡಿದ್ದಾರೆ, ತದನಂತರ ಪ್ರಾಣ ಕಳೆದುಕೊಂಡಿರುವ ಉದಾಹರಣೆಯೂ ಇದೆ.
ನಿನ್ನೆ ದಿನ ಹೆದ್ದಾರಿಯ ಬಳಿ ನಡೆದ ಒಂದು ಹೃದಯ ವಿದ್ರಾವಕ ಘಟನೆ ಎಂತಹವರ ಮನವನ್ನು ಕರಗಿಸುವಂತಿತ್ತು, ಒಂದು ಕುದುರೆಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಕುದುರೆಯ ಒಂದು ಕಾಲು ಸಂಪೂರ್ಣವಾಗಿ ಜಜ್ಜಿಹೋಗಿತ್ತು, ಮಾಲೀಕರಾಗಲಿ, ಪ್ರಾಣಿದಯಾಸಂಘದವರಾಗಲಿ, ಇನ್ನಿತರ ಇಲಾಖಾಧಿಕಾರಿಗಳಾಗಲಿ ಕಣ್ಣೆತ್ತಿಯೂ ನೋಡಿಲ್ಲ, ಪಶು ಆರೋಗ್ಯಾಧಿಕಾರಿಗಳಾದ ಡಾ ಜಯರಾಮು ರವರಿಗೆ ವಿಷಯ ಮುಟ್ಟಿಸಲಾಗಿ ಸಿಬ್ಬಂದಿ ಕಳುಹಿಸಿ ನೋವು ನಿವಾರಕ ಕೊಡಿಸಿದರು, ನಗರಸಭೆಯ ಆರೋಗ್ಯಾಧಿಕಾರಿ ವರಲಕ್ಷ್ಮಿ ಯವರು ಸಹ ಒಬ್ಬ ಸಿಬ್ಬಂದಿ ಕಳುಹಿಸಿ ಮಾನವೀಯತೆ ಮೆರೆದರು, ಅದನ್ನು ಬೆಂಗಳೂರಿನ ಒಂದು ಪ್ರಾಣಿ ಸಂಘಕ್ಕೆ ತೆಗೆದುಕೊಂಡು ಹೋಗಲು ಡಾ ಜಯರಾಮು ರವರು ಪ್ರಯತ್ತಿಸಿದರಾದರೂ ಸಹ ಸೂಕ್ತ ಸಮಯಕ್ಕೆ ವಾಹನ ಸಿಗದಿರುವುದು ಮತ್ತು ಅತಿಯಾದ ರಕ್ತ ಸ್ರಾವವಾಗಿದ್ದರಿಂದ ಕುದರೆಯು ಅಸುನೀಗಿತು, ತಮ್ಮ ಸ್ವಂತ ಖರ್ಚಿನಲ್ಲಿ ವಾಹನ ವ್ಯವಸ್ಥೆ ಮಾಡಲು ಮುಂದಾದ ದಂಡಾಧಿಕಾರಿ ಯೋಗಾನಂದ ರವರು, ವ್ಯಾಪ್ತಿ, ಇಲಾಖೆ ಎಂದು ಸಬೂಬು ಹೇಳದೆ ಮಾನವೀಯತೆಯಿಂದ ಸ್ಪಂದಿಸಿದ ಮೇಲಿನ ಅಧಿಕಾರಿಗಳೆಲ್ಲರೂ ಸ್ಮರಣೀಯರು.
ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಬೀದಿನಾಯಿಗಳಿಗೆ ಕಡಿವಾಣ ಮತ್ತು ಸಾಕು ಪ್ರಾಣಿಗಳ ಮಾಲೀಕರಿಗೆ ಎಚ್ಚರಿಕೆ ಕೊಡಲಿಲ್ಲವೆಂದರೆ ಮುಂದಾಗುವ ಅನೇಕ ಅನಾಹುತಗಳಿಗೆ ದಂಡ ತೆರಬೇಕಾಗುತ್ತದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in nation »
ಜುಲೈ 8ರಂದು ರಾಷ್ಟೀಯ ಲೋಕ ಅದಾಲತ್
ರಾಮನಗರ, ಜೂ. 03: ನ್ಯಾಯಾಲಯದಲ್ಲಿ ಬಾಕಿ ಇರುವ ಹಾಗೂ ರಾಜಿ ಆಗಬಹುದಾದ ಪ್ರಕರಣಗಳನ್ನು 2023ರ ಜುಲೈ 8ರಂದು ನಡೆಯಲಿರುವ ರಾಷ್ಟ್ರೀಯ ಲೋಕ
ಕೆಂಪೇಗೌಡರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ: ಸಿಎಂ
ರಾಮನಗರ, ಜನವರಿ 03: ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಯನ್ನು ಪ್ರೇಕ್ಷಣೀಯ ಹಾಗೂ ಪ್ರೇರಣಾ ಸ್ಥಳವನ್ನಾಗಿ ಅಭಿವೃದ್ಧಿ ಮಾಡುವುದು ಸರ್ಕಾರದ ಉದ್ದೇಶ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳ
ನಾಳೆ ಸಂಭವಿಸಲಿದೆ ಈ ವರ್ಷದ ಕೊನೆಯ ಸೂರ್ಯಗ್ರಹಣ
ಡಿಸೆಂಬರ್ 4ರ ಶನಿವಾರ ಸೂರ್ಯ ಗ್ರಹಣ ಸಂಭವಿಸಲಿದ್ದು ಇದು ಈ ವರ್ಷದ ಕೊನೆಯ ಗ್ರಹಣವಾಗಿರಲಿದೆ. ಪೂರ್ಣ ಸೂರ್ಯ ಗ್ರಹಣದ ವಿದ್ಯಮಾನ ವಿಶೇಷವಾಗಿದ್ದು ಆ ಸಂದರ್ಭದಲ್ಲಿನ ಪ್ರಕೃತಿಯ ವೈಚಿತ್ರ್ಯಗಳನ್ನು ನೋಡ
ಆಗ್ನೇಯ ಭಾಗದಿಂದ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆ
ನವದೆಹಲಿ: ಆಗ್ನೇಯ ದಿಕ್ಕಿನಿಂದ ಆಂಧ್ರಪ್ರದೇಶ ಹಾಗೂ ಒಡಿಶಾ ಕರಾವಳಿ ಪ್ರದೇಶಗಳಿಗೆ ಡಿ.4ರಂದು ಬೆಳಗ್ಗೆ ಚಂಡಾಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ
ಬೆಂಗಳೂರು.ಅ.29/21: ದೊಡ್ಮನೆ ಹುಡುಗ ಎಂದೇ ಖ್ಯಾತರಾದ, ಮೇರುನಟ ಡಾ ರಾಜಕುಮಾರ್ ರವರ ಕೊನೆಯ ಪುತ್ರ ಕನ್ನಡದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರು ಇಂದು ಬೆಳಿಗ್ಗೆ ಅಸುನೀಗಿದ್ದಾರೆ. ಅವರು ಮುಂಜಾನೆ ಜಿಮ್ ನಲ್ಲಿ ಕಸರತ್ತು ನಡ
ಕೆಂಪೇಗೌಡರು ಒಬ್ಬ ವ್ಯಕ್ತಿಗೆ ಸೀಮಿತವಲ್ಲ. ಅವರು ರಾಷ್ಟ್ರದ ನಾಯಕರು. ಎಲ್ಐಸಿ ನಾಗರಾಜು
ಕೆಂಪೇಗೌಡರು ಒಕ್ಕಲಿಗರಿಗಾಗಲಿ, ಬೆಂಗಳೂರು ನಿರ್ಮಾತೃರಾಗಿ ಸೀಮಿತವಾಗಿರಲಿಲ್ಲ. ಕರ್ನಾಟಕದ ಭಾಗವಾಗಿದ್ದ ವಿಜಯನಗರದ ಸಾಮ್ರಾಜ್ಯಕಷ್ಟೇ ಸೀಮೀತವಾಗಿರಲಿಲ್ಲ.ಅವರ ಕನಸು ಬಹಳ ವಿಸ್ತಾರವಾಗಿತ್ತು. ಇಡೀ ಭಾರ
ಪಶ್ಚಿಮಬಂಗಾಳದಲ್ಲಿ ಪರಿಶಿಷ್ಟರಿಗೆ ಅವಮಾನ ಮಾಡಿದ ತೃಣಮೂಲ ಕಾಂಗ್ರೆಸ್. ತಹಶಿಲ್ದಾರ್ ಮುಖೇನ ರಾಷ್ಟ್ರಪತಿಗೆ ದೂರು ಸಲ್ಲಿಸಿದ ಬಿಜೆಪಿ ಎಸ್ಸಿ ಮೋರ್ಚಾ
ನಾವು ಹಿಂದುಳಿದವರ ಪರ, ಅಲ್ಪಸಂಖ್ಯಾತರ ಪರ ಎಂದು ಬೊಬ್ಬಿರಿಯುವ ಪಶ್ಚಿಮ ಬಂಗಾಳದ ನಾಯಕಿ ಮಮತಾ ಬ್ಯಾನರ್ಜಿಯವರು, ಅವರ ತೃಣಮೂಲ ಕಾಂಗ್ರೆಸ್ ಪಕ್ಷದ ಮತ್ತೋರ್ವ ನಾಯಕಿ ಸುಜಾತ ಮೊಂಡಲ್ ಖಾನ್ ರವರ ಬಾಯಲ್ಲಿ
ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಹೊಸ ಫಾರ್ಚೂನರ್ ಮತ್ತು ಲೆಜೆಂಡರ್ ನೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸುತ್ತಿದೆ
ಅತ್ಯಾಚಾರ ಎಸಗಿ ಕೊಲೆಗೈದ ಪಾಪಿಗಳಿಗೆ ಗಲ್ಲು ಶಿಕ್ಷೆ ನೀಡಿ, ದಲಿತ ಸಂಘಟನೆಗಳ ಆಕ್ರೋಶ
ಚನ್ನಪಟ್ಟಣ:ಅ/05/20/ಸೋಮವಾರ.
ಉತ್ತರ ಪ್ರದೇಶದ ಹಥ್ರಾಸ್ ಜಿಲ್ಲೆಯಲ್ಲಿ ಯುವತಿ ಮೇಲೆ ಪೈಶಾಚಿಕವಾಗಿ ಅತ್ಯಾಚಾರ ನಡೆಸಿ, ಅಮಾನುಷವಾಗಿ ಹತ್ಯೆಗೈದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕು. ಕುಟುಂಬದವರಿಗೂ ಮುಖ ತೋರಿಸದೆ ರಾ
ಇನ್ನು ಮುಂದೆ ಪ್ಯಾರಾಮಿಲ್ಟ್ರಿ ಕ್ಯಾಂಟೀನ್ ಗಳಲ್ಲಿ ಸ್ವದೇಶಿ ವಸ್ತುಗಳಷ್ಟೇ ಮಾರಾಟ ಅಮಿತ್ ಷಾ
ದೆಹಲಿ:ಮೇ/೧೩/೨೦/ಬುಧವಾರ. ದೇಶ ಕಾಯುತ್ತಿರುವ ಅರೆಸೈನಿಕ ಪಡೆಯ ದೇಶದ ನಾನಾ ಭಾಗದ ಎಲ್ಲಾ ಕ್ಯಾಂಟೀನ್ ಗಳಲ್ಲೂ ಜೂನ್ ಒಂದನೇ ತಾರೀಖಿನಿಂದ ಸ್ವದೇಶ
ಪ್ರತಿಕ್ರಿಯೆಗಳು