Tel: 7676775624 | Mail: info@yellowandred.in

Language: EN KAN

    Follow us :


ಮೇರು ವ್ಯಕ್ತಿತ್ವದ, ಜಾನಪದ ವಿದ್ವಾಂಸ ಹೊಸಹಳ್ಳಿ ಡಾ ರಾಜೇಗೌಡ ನಿಧನ

Posted date: 29 Apr, 2020

Powered by:     Yellow and Red

ಮೇರು ವ್ಯಕ್ತಿತ್ವದ, ಜಾನಪದ ವಿದ್ವಾಂಸ ಹೊಸಹಳ್ಳಿ ಡಾ ರಾಜೇಗೌಡ ನಿಧನ

ಬೆಂಗಳೂರು:ಏ/೨೯/೨೦/ಬುಧವಾರ. ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ಜಾನಪದ ಪರಿಷತ್ತಿನ ಗೌರವ ಕಾರ್ಯದರ್ಶಿ, ಹಲವಾರು ಕೃತಿಗಳ ಕತೃ, ಕಥೆಸಾಹಿತ್ಯವನ್ನು ಒರೆ ಹಚ್ಚಿ ಬರೆಯುವ ಬರಹಗಾರ, ಹೆಚ್ ಎಲ್ ನಾಗೇಗೌಡರ ಒಡನಾಡಿ ಹೊಸಹಳ್ಳಿ ಡಾ ರಾಜೇಗೌಡ ರು ಇಂದು ನಿಧನರಾಗಿದ್ದು ಜಾನಪದ ಸಂಸ್ಕ್ರತಿ ಬಡವಾಗಿದೆ.


ಹಾಸನ ಜಿಲ್ಲೆಯ ಆಲೂರು (ಖ್ಯಾತ ಕವಿ ಆಲೂರು ವೆಂಕಟರಾಯರು) ತಾಲ್ಲೂಕಿನ ಮರಸೆ ಹೊಸಹಳ್ಳಿ (ಸಣ್ಣ ಅಕ್ಕಿ ಗೆ ಬಹಳ ಹೆಸರುವಾಸಿಯಾಗಿದೆ) ಗ್ರಾಮದ ಶ್ರೀಮತಿ ರಂಗಪ್ಪ ದಂಪತಿಗಳ ಪುತ್ರರಾದ ರಾಜೇಗೌಡರು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಎಂ ಎ ಪದವಿ ಪಡೆದು, ಕರ್ನಾಟಕ ಸರ್ಕಾರದ ನೋಂದಣಿ ಕಛೇರಿ (ಸಬ್ ರಿಜಿಸ್ಟ್ರಾರ್) ಯಲ್ಲಿ ಅಧಿಕಾರಿಯಾಗಿ‌ ಕೆಲಸ ನಿರ್ವಹಿಸಿ ಸ್ವಯಂ ನಿವೃತ್ತಿ ತೆಗೆದುಕೊಂಡಿದ್ದರು.


ಹೆಚ್ ಎಲ್ ನಾಗೇಗೌಡರ ಒಡನಾಡಿಯಾಗಿದ್ದರಿಂದ ಜಾನಪದ ಲೋಕದಲ್ಲಿ ಅಹರ್ನಿಶಿ ದುಡಿದು, ಜಾನಪದ ಪರಿಷತ್ತಿನ ಗೌರವ ಕಾರ್ಯದರ್ಶಿಯಾಗಿ ಇಪ್ಪತ್ತಕ್ಕೂ ಹೆಚ್ಚು ವರ್ಷಗಳ ಕಾಲ ದುಡಿದಿದ್ದರು. ಗ್ರಾಮೀಣ ಸಂಸ್ಕೃತಿ ಮತ್ತು ಜಾನಪದ ದ ಬಗ್ಗೆ ಅತೀವ ತುಡಿತವಿದ್ದುದರಿಂದಲೇ ಅವರ ಮೂಸೆಯಿಂದ ಅನೇಕ ಕೃತಿಗಳು ಹೊರಬರಲು ಸಾಧ್ಯವಾಯಿತು.


ಹಾಸನ ಜಿಲ್ಲೆಯಲ್ಲಿ ವಿಶೇಷವಾಗಿ ಕಂಡುಬರುವ ತಂಬೂರಿ ಹಾಡುಗಾರರನ್ನು ಕುರಿತು, ವಿಶೇಷ ಅಧ್ಯಯನ ಮಾಡಿ, *ತಾಳ ಬಂದೋ, ತಂಬೂರಿ ಬಂದೋ* ಎಂಬ ಕೃತಿಗೆ ಡಾಕ್ಟರೇಟ್ ಪದವಿ ಸಂದಿದೆ. ಇದಲ್ಲದೆ *ಮಗನ ತಿಂದ ಮಾರಾಯನ ದುರ್ಗ* ಎಂಬ ಜಾನಪದ ಕುರಿತ ಕೃತಿ, *ಅಕ್ಕಯ್ಯಮ್ಮನ ಸಂಸಾರ ಮತ್ತು ಸತ್ಯಭೋಜರಾಜ* ಎಂಬ ಎರಡು ಕೃತಿಗಳ ಸಂಗ್ರಹ, *ಕೋಳಿ ಮತ್ತು ತುಳಸೀ ಕಟ್ಟೆ* ಎಂಬ ಕವನ ಸಂಕಲನ ಸೇರಿದಂತೆ ಅನೇಕ ಕಥೆ ಕಾವ್ಯಗಳನ್ನು ಬರೆದು ಸಾಹಿತ್ಯದಲ್ಲಿ ಮೇರು ಕೃತಿಗಾರರಾಗಿ ಹೊರಹೊಮ್ಮಿದ್ದರು.


ಮೃತರ ಆತ್ಮಕ್ಕೆ ಜಾನಪದ ತಜ್ಞ ವನಂ ಶಿವರಾಮು, ಜಾನಪದ ಪರಿಷತ್ತಿನ ಅಧ್ಯಕ್ಷರಾದ ತಿಮ್ಮೇಗೌಡ, ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್, ಮುಖ್ಯ ಆಡಳಿತಾಧಿಕಾರಿ ರುದ್ರಪ್ಪ, ಕುರುವ ಬಸವರಾಜು, ಜಿಲ್ಲಾಧ್ಯಕ್ಷರಾದ ಸು ತ ರಾಮೇಗೌಡ ತಾಲ್ಲೂಕು ಅಧ್ಯಕ್ಷ ಗೋ ರಾ ಶ್ರೀನಿವಾಸ. ಜಾನಪದ ಲೋಕದ ಆಡಳಿತ ಮಂಡಳಿ, ಸಿಬ್ಬಂದಿಗಳು ಸೇರಿದಂತೆ ಅನೇಕ ಕಲಾವಿದರು ಕಂಬನಿ ಮಿಡಿದಿದ್ದಾರೆ.


ರಾಮಾಯಣ ದರ್ಶನಂ ಮತ್ತು ಕುವೆಂಪು ರವರನ್ನು ಕುರಿತು ಪುಸ್ತಕವನ್ನು ಬರೆದಿದ್ದು, ಅಚ್ಚಿಗೆ ಹೋಗಿದೆ. ಇನ್ನೇನು ಹೊರಬರಬೇಕಿತ್ತು, ಜಾನಪದ ಮತ್ತು ಗ್ರಾಮೀಣ ಸಂಸ್ಕೃತಿಯ ಬಗ್ಗೆ ಬಹಳ ಒಲವಿದ್ದುದರಿಂದ ನಾಡಿಗೆ ಅವರ ಕೊಡುಗೆ ಅನನ್ಯವಾದುದು. ಗಾಂಧೀಜಿ, ಅಂಬೇಡ್ಕರ್, ವಿವೇಕಾನಂದ, ಲೋಹಿಯಾ ಮತ್ತು ಕುವೆಂಪುರವರನ್ನು ಚನ್ನಾಗಿ ಓದಿಕೊಂಡಿದ್ದರು. ಅವರ ಸಾವು ಜಾನಪದ ಸಂಸ್ಕೃತಿಗೆ ತುಂಬಲಾರದ ನಷ್ಟವಾಗಿದೆ.

*ಹಿ ಶಿ ರಾಮಚಂದ್ರೇಗೌ. ಹಿರಿಯ ಜಾನಪದ ವಿದ್ವಾಂಸರು.*


ಅವರೊಬ್ಬ ಅಪರೂಪದ ಹೃದಯವಂತ ಕೃತಿಗಾರ, ಪ್ರಜಾವಾಣಿ ಪತ್ರಿಕೆಯ ಸಂಗತ ಕಾಲಂನಲ್ಲಿ, ಉತ್ತಮ ಲೇಖನಗಳನ್ನು ಬರೆಯುತ್ತಿದ್ದರು. ಸಾವಯವ ಕೃಷಿಯ ಬಗ್ಗೆ ಆಳವಾದ ಜ್ಞಾನ ಹೊಂದಿದವರು. ಇಂತಹವರ ಮಾರ್ಗದರ್ಶನ ಇಂದಿನ ಪೀಳಿಗೆಗೆ ಅತ್ಯವಶ್ಯಕವಾಗಿತ್ತು. ಅವರ ಸಾವು ಅತೀವ ದು:ಖ ತಂದಿದೆ.

*ಚಕ್ಕೆರೆ ಶಿವಶಂಕರ್. ಜಾನಪದ ವಿದ್ವಾಂಸರು.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑