ಮಹಿಳಾ ರೈತ ಹೋರಾಟಗಾರ್ತಿ ಗುರುಲಿಂಗಮ್ಮ ನಿಧನ
ಚನ್ನಪಟ್ಟಣ:ಆ/20/20/ಗುರುವಾರ. ತಾಲ್ಲೂಕಿನ ವಿಠಲೇನಹಳ್ಳಿ ಗ್ರಾಮದ ಹಿರಿಯ ಮಹಿಳಾ ರೈತ ಹೋರಾಟಗಾರ್ತಿ ಗುರುಲಿಂಗಮ್ಮ (92) ರವರು ಇಂದು ವಯೋಸಹಜ ಖಾಯಿಲೆಯಿಂದ ಮೃತರಾದರು.
ಶ್ರೀಯುತ ಗುರುಲಿಂಗಮ್ಮರವರು ಎಂಭತ್ತರ ದಶಕದಿಂದಲೂ ಹಿತ್ತಲಮನೆ, ಗ್ರಾನೈಟ್ ಹಾಗೂ ಮಹಿಳೆಯರ ಹಕ್ಕಿಗಾಗಿ ಹೋರಾಟಗಳಲ್ಲಿ ಭಾಗವಹಿಸುವ ಮೂಲಕ ಅಂದಿನ ಧೀಮಂತ ರೈತ ನಾಯಕ ಪ್ರೊ ನಂಜುಂಡಸ್ವಾಮಿ ಹಾಗೂ ಸೋಮಲಿಂಗಯ್ಯ ರವರಿಗೆ ಆಪ್ತರಾಗಿದ್ದರು. ಆ ಭಾಗದ ಬಹುತೇಕ ಎಲ್ಲಾ ರೈತ ಹೋರಾಟಗಳಲ್ಲಿ ಭಾಗಿಯಾಗುವ ಮೂಲಕ ರೈತ ಸಂಘಟನೆಗೆ ಬಲ ನೀಡಿದ್ದರು.
ಬಹಳ ಮುಖ್ಯವಾಗಿ ರೈತರು ಮಾಡಿದ ಕೃಷಿ ಸಾಲಕ್ಕಾಗಿ ಬ್ಯಾಂಕ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಪೋಲಿಸರೊಟ್ಟಿಗೆ ರೈತರ ಮನೆಗಳನ್ನು ಜಫ್ತಿ ಮಾಡಲು ಬಂದಾಗ ಗುರುಲಿಂಗಮ್ಮನವರು ಮಹಿಳಾ ಧ್ವನಿಯಾಗಿ ಇತರರಿಗೆ ಮಾದರಿಯಾಗಿದ್ದರು. ಎಂಭತ್ತರ ದಶಕದಲ್ಲೇ ಮಹಿಳಾ ಹೋರಾಟಗಾರ್ತಿಯಾಗಿ ರೂಪುಗೊಂಡ ಗುರುಲಿಂಗಮ್ಮ ನವರು ರಾಜ್ಯದಾದ್ಯಂತ ನಡೆದ ಹೋರಾಟಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು.
ಗ್ರಾಮಸ್ಥರ ಅಪ್ಪಣೆಯಿಲ್ಲದೆ ಅಧಿಕಾರಿಗಳಿಗೆ ಪ್ರವೇಶವಿಲ್ಲಾ ಎಂಬ ಅಂದಿನ ಹೋರಾಟಗಳಲ್ಲಿ, ಜಫ್ತಿಗೆ ಬಂದ ಅಧಿಕಾರಿಗಳಿಗೆ ದಿಗ್ಭಂಧನ ಹಾಕಿ ಜಫ್ತಿ ಮಾಡಿದ್ದ ಎಲ್ಲಾ ವಸ್ತುಗಳನ್ನು ರೈತರಿಗೆ ಹಿಂದುರುಗಿ ಕೊಡಿಸಿ, ರೈತರ ಕ್ಷಮೆ ಕೇಳುವಂತೆ ಮಾಡಿದ ದಿಟ್ಟ ಹೋರಾಟಗಾರ್ತಿ ಎಂದು ರೈತ ಮುಖಂಡ ರಾಮಕೃಷ್ಣ ನೆನಪಿಸಿಕೊಂಡರು.ಇಂತಹ ದಿಟ್ಟ ಹೋರಾಟಗಾರ್ತಿ ಗೆ ತಾಲ್ಲೂಕು ಆಡಳಿತವಾಗಲಿ, ಜಿಲ್ಲಾಡಳಿತವಾಗಲಿ ಅಥವಾ ಸಂಘಸಂಸ್ಥೆಗಳಾಗಲಿ ಗುರುತಿಸದಿರುವುದು ಆಡಳಿತ ಹಾಗೂ ಸಂಘಸಂಸ್ಥೆಗಳೇ ದೋಖಾ ಮಾಡಿಕೊಂಡಂತಾಗಿವೆ ಎಂದು ಸಿ ಪುಟ್ಟಸ್ವಾಮಿ ತಿಳಿಸಿದರು.
ಮೃತರ ಒಬ್ಬ ಪುತ್ರ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇನೋರ್ವ ಪುತ್ರ ರಾಜ್ಯ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅನೇಕ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ಇಂದು ಮಧ್ಯಾಹ್ನ ಸ್ವಗ್ರಾಮ ವಿಠಲೇನಹಳ್ಳಿ ಯಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಮರಣಕ್ಕೆ ಹಿರಿಯ ರೈತ ಹೋರಾಟಗಾರರಾದ ಸಿ ಪುಟ್ಟಸ್ವಾಮಿ, ಅನುಸೂಯಮ್ಮ, ಸು ತ ರಾಮೇಗೌಡ, ಹೊಂಬಾಳೇಗೌಡ, ಎಂ ರಾಮು, ಎಂ ಮಲ್ಲಯ್ಯ, ರಾಮಕೃಷ್ಣ ಸೇರಿದಂತೆ ಅನೇಕ ರೈತ ಹೋರಾಟಗಾರರು ಸಂತಾಪ ಸೂಚಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »
ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು
ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ
ಡಾ ರಾಜಕುಮಾರ್ ಗೆ ಪಿತೃವಿಯೋಗ
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ
ಹಾವು ಕಚ್ಚಿ ಅರ್ಚಕಿ ಸಾವು
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.
ಬ
ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ
ಪ್ರತಿಕ್ರಿಯೆಗಳು