Tel: 7676775624 | Mail: info@yellowandred.in

Language: EN KAN

    Follow us :


ರಸ್ತೆ ಅಪಘಾತದಲ್ಲಿ ಮಧುಸೂದನಚಾರ್ಯಜೋಷಿ ದಂಪತಿಗಳು ನಿಧನ

Posted date: 13 Sep, 2020

Powered by:     Yellow and Red

ರಸ್ತೆ ಅಪಘಾತದಲ್ಲಿ ಮಧುಸೂದನಚಾರ್ಯಜೋಷಿ ದಂಪತಿಗಳು ನಿಧನ

ಚನ್ನಪಟ್ಟಣ/ಮಳವಳ್ಳಿ:ಸೆ/13/20/ಭಾನುವಾರ. ಇಂದು ಮುಂಜಾನೆ ಮಳವಳ್ಳಿ ತಾಲ್ಲೂಕಿನ ದಾಸೇಗೌಡನದೊಡ್ಡಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಚನ್ನಪಟ್ಟಣ ನಗರದ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ ಮಧುಸೂದನಚಾರ್ಯಜೋಷಿ ಮತ್ತು ಅವರ ಪತ್ನಿ ಗಂಗಾಂಬಿಕೆ ಮೃತಪಟ್ಟಿದ್ದು, ಅವರ ಏಕೈಕ ಪುತ್ರಿ ಅನುಷಾ ರವರು ಬೆಂಗಳೂರಿನ ಸಂಜಯಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಮುಂಜಾನೆ ಕುಟುಂಬದ ಸಮೇತ ಗಗನಚುಕ್ಕಿ ಮತ್ತು ಭರಚುಕ್ಕಿ ಗೆ ಪ್ರವಾಸ ಹೊರಟಿದ್ದು, ಬೈಕ್ ಸವಾರೋನೋರ್ವ ಅಡ್ಡ ಬಂದಿದ್ದರಿಂದ ಅವನನ್ನು ಪಾರು ಮಾಡುವ ವೇಳೆ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಾ ಮಧುಸೂದನಚಾರ್ಯಜೋಷಿ ರವರು ಸಹಸ್ರಾರು ವಿದ್ಯಾರ್ಥಿಗಳಿಗೆ ಆಶಾಕಿರಣವಾಗಿದ್ದರು. ಚನ್ನಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಪ್ರಾಧ್ಯಾಪಕರಾಗಿ ಎರಡು ದಶಕಗಳ ಕಾಲ ಸೇವೆ ಸಲ್ಲಿಸಿದ್ದರು. ಲೇಖಕರಾಗಿ ಹಲವು ಕೃತಿಗಳನ್ನು ರಚಿಸಿ ಅಕ್ಷರ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು. ಚಿಂತಕರು, ವಿಮರ್ಶಕರು ಆಗಿದ್ದು ರಾಮನಗರ ಜಿಲ್ಲಾದ್ಯಂತ ಅನೇಕ ಶಿಷ್ಯ ವೃಂದವನ್ನು ಹೊಂದಿದ್ದರು.

ನಗರ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು, ಚನ್ನಪಟ್ಟಣದ ಸಾಂಸ್ಕೃತಿಕ ರಾಯಭಾರಿಗಳು ಆಗಿದ್ದ ಜೋಷಿ ರವರು ಚನ್ನಪಟ್ಟಣ ದ ಇತಿಹಾಸ ಕುರಿತು ಪುಸ್ತಕ ಬರೆದು ಪ್ರಕಟಿಸಿದ್ದರು. ಹಲವಾರು ಕವಿಗೋಷ್ಠಿ, ಚರ್ಚಾ ಸ್ಪರ್ಧೆ, ಸಂಘ ಸಂಸ್ಥೆಗಳ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮದೇ ಛಾಪು ಮೂಡಿಸಿದ್ದರು. ಆಚಾರದ ವಿಷಯಗಳಲ್ಲಿ ವೈಜ್ಞಾನಿಕತೆಯನ್ನು ತಂದು ಆಚಾರಗಳನ್ನು ಸಮರ್ಥಿಸುವ ಜೊತೆಗೆ ಸ್ಪಷ್ಟೀಕರಣ ನೀಡುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿದ್ದರು.

ಇವರ ಅಗಲಿಕೆ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಲೋಕಕ್ಕೆ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ. ಅಪಾರ ಶಿಷ್ಯವೃಂದವನ್ನು ಅಗಲಿದ್ದಾರೆ. ಶ್ರೀಯುತರಿಗೆ ಸ್ವರ್ಗ ಪ್ರಾಪ್ತಿಯಾಗಲೆಂದು ಶಿಷ್ಯವೃಂದ, ಸಹೋದ್ಯೋಗಿಗಳು, ಕನ್ನಡ ಸಾರಸ್ವತ ಲೋಕದವರೆಲ್ಲರೂ ತಮಗೆ ಹೃದಯಸ್ಪರ್ಶಿ ವಿದಾಯವನ್ನು ಹೇಳಿರುವುದು ಅವರ ದಯಾಮಯಿ ಮಾತೃ ಹೃದಯದ ಬಡಿತವನ್ನು ತೋರಿಸುತ್ತದೆ.

ಮೃತರ ಸ್ವಂತ ಊರು ರಾಯಚೂರು ಜಿಲ್ಲೆಯ ಲಿಂಗಸೂಗೂರು ಆದರೂ ಕಳೆದ ಎರಡು ದಶಕಗಳಿಂದಲೂ ಚನ್ನಪಟ್ಟಣದಲ್ಲಿ ವಾಸವಿದ್ದುದರಿಂದ ಅವರ ಸಂಬಂಧಿಗಳು ಹಾಗೂ ಸ್ನೇಹಿತ ವರ್ಗದವರೂ ಮೃತರ ಅಂತ್ಯಕ್ರಿಯೆಯನ್ನು ನಾಳೆ ಬೆಳಿಗ್ಗೆ 14/09/20/ ರ ಸೋಮವಾರ ಚನ್ನಪಟ್ಟಣ ದಲ್ಲಿಯೇ ನೆರವೇರಿಸಲು ತೀರ್ಮಾನಿಸಿರುವುದಾಗಿ ಬಲ್ಲ ಮೂಲಗಳು ತಿಳಿಸಿವೆ.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑