ತಗಚಗೆರೆ ವಿಲೇಜ್ ಅಕೌಂಟೆಂಟ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಪ್ರಯತ್ನ. ಆಸ್ಪತ್ರೆಗೆ ದಾಖಲು

ಚನ್ನಪಟ್ಟಣ:ಸೆ/14/20/ಮಂಗಳವಾರ. ತಾಲ್ಲೂಕಿನ ತಗಚಗೆರೆ ಗ್ರಾಮ ಪಂಚಾಯತಿಯ ಲೆಕ್ಕಾಧಿಕಾರಿ ಕವಿತಾ ಎಂಬುವವರು ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಜಮೀನು ಮತ್ತು ಕೆಪಿಟಿಸಿಎಲ್ ಗೆ ಸಂಬಂಧಿಸಿದ ಭೂಮಿಯ ಸರ್ವೇ ಕಾರ್ಯ ತಾಲೂಕಿನಾದ್ಯಂತ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ತಹಶಿಲ್ದಾರ್, ರೆವಿನ್ಯೂ ಇನ್ಸ್ಪೆಕ್ಟರ್ ಹಾಗೂ ವಿಎ ಸರ್ವೇ ಕೆಲಸದ ನಿಮಿತ್ತ ಗ್ರಾಮವೊಂದಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ತಹಶಿಲ್ದಾರ್ ರವರು ಸರ್ವೇ ನಂಬರಿನ ಖಾತೆ ಗೆ ಸಂಬಂಧಿಸಿದಂತೆ ವಿಎ ರವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ತನ್ನದಲ್ಲದ ತಪ್ಪಿಗೆ ಸಾರ್ವಜನಿಕವಾಗಿ ನಿಂದಿಸಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೇಲ್ನೋಟಕ್ಕೆ ತಿಳಿದು ಬಂದಿದೆ.
ಈಕೆ ಐದು ತಿಂಗಳ ಗರ್ಭಿಣಿಯಾಗಿದ್ದು, ಹದಿನಾರು ನಿದ್ರೆ ಮಾತ್ರೆಗಳನ್ನು ನುಂಗಿದ್ದು, ಸಾವು ಬದುಕಿನ ನಡುವೆ ಸೆಣಸಾಟ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.
ವಿಷಯ ತಿಳಿದ ಉಪ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ದಾಕ್ಷಾಯಣಿ ರವರು ಆಸ್ಪತ್ರೆಗೆ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದ್ದಾರೆ.
ಇದು ತಾಲ್ಲೂಕಿನ ಆಡಳಿತಕ್ಕೆ ಸೂಕ್ಷ್ಮ ವಿಷಯವಾಗಿದ್ದು ಮುಂದಿನ ಆಗುಹೋಗುಗಳು ಯಾವರೀತಿ ತಿರುವು ಪಡೆದುಕೊಳ್ಳಲಿವೆ ಎಂಬುದನ್ನು ಕಾಯ್ದು ನೋಡಬೇಕಾಗಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ತಾಲ್ಲೂಕು ದಂಡಾಧಿಕಾರಿಯವರು ಪ್ರತಿಕ್ರಿಯಿಸಿ ನನ್ನ ಮತ್ತು ಅವರ ನಡುವೆ ಯಾವುದೇ ರೀತಿಯ ವಾಗ್ವಾದ ನಡೆದಿಲ್ಲ. ನಾನು ನಿಂದಿಸಿಯೂ ಇಲ್ಲ, ಆರ್ ಐ ಮತ್ತು ವಿಎ ಇಬ್ಬರೂ ಸಹ ನನ್ನ ಜೊತೆ ಸರ್ವೇ ವೀಕ್ಷಣೆಗೆ ಬಂದಿದ್ದರು. ಯಾಕೆ ಅವರು ಆತ್ಮಹತ್ಯೆ ಪ್ರಯತ್ನ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಪ್ರತಿಕಿಯಿಸಿದ್ದಾರೆ.
ಆಕೆ ನಿಮುಸಲೈಡ್ (nimusalaid) ಮಾತ್ರೆ ನುಂಗಿದ್ದು ಸದ್ಯ ಆಕೆಯ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಆಕೆ ಗರ್ಭಿಣಿ ಆಗಿರುವುದರಿಂದ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಲೇ ಏನೂ ಹೇಳಲಾಗುವುದಿಲ್ಲ. ಗರ್ಭಿಣಿಗೆ ಇಪ್ಪತ್ತು ವಾರಗಳ ಪರೀಕ್ಷೆಯ ನಂತರ ಹೇಳಬಹುದು ಎಂದು ಆಸ್ಪತ್ರೆಯ ಮುಖ್ಯ ವೈದ್ಯೆ ಪತ್ರಿಕೆಗೆ ತಿಳಿಸಿದರು.
ವಿಎ ಮತ್ತು ಅವರ ಸಂಬಂಧಿಕರಿಗೆ ಕರೆ ಮಾಡಲಾಗಿ ಅವರು ಸ್ವೀಕರಿಸದಿದ್ದರಿಂದ ಅವರ ಪ್ರತಿಕ್ರಿಯೆ ಲಭ್ಯವಾಗಲಿಲ್ಲ. ಈ ನಡುವೆ ತಾಲೂಕಿನ ಅನೇಕ ಗ್ರಾಮ ಲೆಕ್ಕಾಧಿಕಾರಿಗಳು ಆಸ್ಪತ್ರೆಯ ಬಳಿ ಜಮಾಯಿಸಿದ್ದು ಕಂಡುಬಂತು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »

ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥಕತೆ ಮೆರೆದ ಜೆ ಬ್ಯಾಡರಹಳ್ಳಿ ಗ್ರಾಮದ ಪ್ರಸನ್ನ.
ಚನ್ನಪಟ್ಟಣ:ಜ/13/21/ಬುಧವಾರ. ತಾಲ್ಲೂಕಿನ ಜೆ ಬ್ಯಾಡರಹಳ್ಳಿ ಗ್ರಾಮದ ಇಪ್ಪತ್ತೇಳು ವರ್ಷದ ಪ್ರಸನ್ನ ರವರು ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರ

ಎ ಆರ್ ಎಂ ರೇಷ್ಮೆ ನೂಲು ಬಿಚ್ಚಣಿಕೆ ಫಿಲೇಚರಿಯಲ್ಲಿ ಮಂಡ್ಯ ಮೂಲದ ಕಾರ್ಮಿಕ ನೇಣು ಬಿಗಿದು ಸಾವು, ದೂರು ದಾಖಲು
ಚನ್ನಪಟ್ಟಣ:ಡಿ/07/20/ಸೋಮವಾರ. ತಾಲ್ಲೂಕಿನ ಸುಣ್ಣಘಟ್ಟ ಬಳಿಯ ನೀಲಸಂದ್ರ ರಸ್ತೆಯಲ್ಲಿರುವ ಎ ಎಂ ಆರ್ ರೇಷ್ಮೆ ನೂಲು ಬಿಚ್ಚಣಿಕೆ ಕಾರ್ಖಾನೆಯಲ್ಲಿ

ಟಿವಿ9 ರಾಜು ಎಂದೇ ಹೆಸರುವಾಸಿಯಾಗಿದ್ದ ಹಲಸಿನಮರದದೊಡ್ಡಿ ರಾಜು ನಿಧನ
ಚನ್ನಪಟ್ಟಣ:ಅ/14/20/ಬುಧವಾರ. ಹಿರಿಯ ಮಾಧ್ಯಮ ವರದಿಗಾರರಾಗಿದ್ದ Tv9 ರಾಜುರವರು ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಮೃತರ ಪಾರ್ಥಿವ ಶರೀರವ

ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಅಳಿಯನನ್ನೇ ಕೊಲೆ ಮಾಡಿದ ಯುವತಿಯ ತಂದೆ*
ಮಾಗಡಿ:ಅ/08/20/ಗುರುವಾರ. ಮಾಗಡಿ ತಾಲ್ಲೂಕಿನ ಕನಕೇನಹಳ್ಳಿ ಇಸ್ಲಾಂಪುರದ ಯುವತಿ ಅಂಬ್ರೀನಾಬಾನು ಹಾಗೂ ನೆಲಮಂಗಲದ ಲಕ್ಷ್ಮೀಪತಿ ಎಂಬುವವರು ಕಳೆದ

ಕುಂತೂರುದೊಡ್ಡಿ ಬಳಿ ಮಡಿಕೇರಿ ಮೂಲದ ವ್ಯಕ್ತಿಯ ಶವ ಪತ್ತೆ*
ಚನ್ನಪಟ್ಟಣ:ಅ/08/20/ಗುರುವಾರ. ಪಾನಮತ್ತನಾದ ನಂತರ ಸಾವನ್ನಪ್ಪಿರಬಹುದು ಎಂದು ಊಹಿಸಲಾಗಿರುವ ಗಂಡಸಿನ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಗ್ರಾಮ

ನಗರಸಭೆಯ ಮಾಜಿ ಅಧ್ಯಕ್ಷೆ ಶ್ವೇತಾ ಗೋಪಾಲಕೃಷ್ಣ ನಿಧನ
ಚನ್ನಪಟ್ಟಣ:ಸೆ/29/20/ಮಂಗಳವಾರ. ನಗರಸಭೆಯ ಮಾಜಿ ಅಧ್ಯಕ್ಷೆ ಮಂಗಳವಾರಪೇಟೆ ಯ ನಿವಾಸಿ ಶ್ರೀಮತಿ ಶ್ವೇತಾ ಗೋಪಾಲಕೃಷ್ಣ (35) ಇಂದು ಸಂಜೆ ಹೃದಯಘಾತ

ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವು
ಚನ್ನಪಟ್ಟಣ:ಸೆ/22/20/ಮಂಗಳವಾರ. ವಿದ್ಯುತ್ ತಂತಿ ಎಳೆಯುವಾಗ ಆಕಸ್ಮಿಕವಾಗಿ ವಿದ್ಯುತ್ ಪ್ರಹರಿಸಿ ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ

ಸೆಷನ್ ಕೋರ್ಟ್ ನ ಸರ್ಕಾರಿ ಅಭಿಯೋಜಕ ಜಯಪ್ರಕಾಶ್ ಸಾವು
ಕನಕಪುರ:ಸೆ/17/20/ಗುರುವಾರ. ಕನಕಪುರ ದ ಸೆಷನ್ ನ್ಯಾಯಾಲಯದ ಸರ್ಕಾರಿ ಅಭಿಯೋಜಕ (ಪಬ್ಲಿಕ್ ಪ್ರಾಸಿಕ್ಯೂಟರ್) ಜಯಪ್ರಕಾಶ್ ರವರು ಇಂದು ಬೆಂಗಳೂರಿನ

ತಗಚಗೆರೆ ವಿಲೇಜ್ ಅಕೌಂಟೆಂಟ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಪ್ರಯತ್ನ. ಆಸ್ಪತ್ರೆಗೆ ದಾಖಲು
ಚನ್ನಪಟ್ಟಣ:ಸೆ/14/20/ಮಂಗಳವಾರ. ತಾಲ್ಲೂಕಿನ ತಗಚಗೆರೆ ಗ್ರಾಮ ಪಂಚಾಯತಿಯ ಲೆಕ್ಕಾಧಿಕಾರಿ ಕವಿತಾ ಎಂಬುವವರು ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆಗೆ

ಪ್ರತಿಕ್ರಿಯೆಗಳು