Tel: 7676775624 | Mail: info@yellowandred.in

Language: EN KAN

    Follow us :


ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಅಳಿಯನನ್ನೇ ಕೊಲೆ ಮಾಡಿದ ಯುವತಿಯ ತಂದೆ*

Posted date: 08 Oct, 2020

Powered by:     Yellow and Red

ಮುಸ್ಲಿಂ ಯುವತಿ ಪ್ರೀತಿಸಿದ್ದಕ್ಕೆ ಅಳಿಯನನ್ನೇ ಕೊಲೆ ಮಾಡಿದ ಯುವತಿಯ ತಂದೆ*

ಮಾಗಡಿ:ಅ/08/20/ಗುರುವಾರ. ಮಾಗಡಿ ತಾಲ್ಲೂಕಿನ ಕನಕೇನಹಳ್ಳಿ ಇಸ್ಲಾಂಪುರದ ಯುವತಿ ಅಂಬ್ರೀನಾಬಾನು ಹಾಗೂ ನೆಲಮಂಗಲದ ಲಕ್ಷ್ಮೀಪತಿ ಎಂಬುವವರು ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮದುವೆಗೆ ಎರಡೂ ಕುಟುಂಬದವರು ಒಪ್ಪದ ಕಾರಣ ಕಳೆದ ವರ್ಷ ಮನೆಬಿಟ್ಟು ಹೋಗಿದ್ದರು. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ರಾಜಿ ಸಂಧಾನದ ಮೂಲಕ ಎರಡೂ ಕುಟುಂಬಗಳು ಓಡಿ ಹೋಗಿದ್ದ ಜೋಡಿಯನ್ನು ವಾಪಸ್ ಕರೆದು ತಂದು ರಾಜೀಸಂದಾನ ಮಾಡಿ ಸೇರಿಸಿದ್ದರು. ಆದರೆ ಕೆಲವು ಸಮಸ್ಯೆಯಿಂದ ಈ ಜೋಡಿ ಮತ್ತೆ ಮನೆಬಿಟ್ಟು ಓಡಿ ಹೋಗಿದ್ದರು. ಈ ವಿಷಯಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆಯುತ್ತಿದ್ದವು.


ಈ ಪ್ರಕರಣದ ಸಂಬಂಧ ಯುವತಿಯ ತಂದೆ, ನಿಜಾಮುದ್ದೀನ್ ಮಾತನಾಡಿ, ಕನಕೇನಹಳ್ಳಿಯಲ್ಲಿ ನಮ್ಮ ಸಂಬಂಧಿ ಗಳಿದ್ದು, ಅಲ್ಲೇ ನನ್ನ ಮಗಳ ಮದುವೆ ಮಾಡಿಕೊಡುವುದಾಗಿ ಹುಡುಗ ಹಾಗೂ ಆತನ ಅಣ್ಣ ನಟರಾಜ್ ಬಳಿ ಮಾತನಾಡಿದ್ದ ಎನ್ನಲಾಗಿದೆ. ಅಲ್ಲದೆ ನಂಬಿಸಿ ಹುಡುಗ ಹಾಗೂ ಅವನ ಅಣ್ಣ ಇಬ್ಬರನ್ನೂ ಕರೆದು ತಂದಿದ್ದ.


ದಾರಿಮಧ್ಯೆ ನಿಜಾಮುದ್ದೀನ್ ತನ್ನ ಸಹೋದರರಾದ ಸಿಕಂದರ್, ಇಬ್ರತ್ ಹಾಗು ಆಟೋ ಮಹಮದ್ ಎಂಬುವವರಿಗೆ ಕುಡಿಸಿ, ಲಕ್ಷ್ಮೀಪತಿ (25) ಎಂಬ ಯುವಕನನ್ನು ಕೊಲೆ ಮಾಡಲಾಗಿದೆ.


ಈ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಮತ್ತಿಬ್ಬರು ಪರಾರಿಯಾಗಿದ್ದಾರೆ.

ಮೊದಲೇ ಲೆಕ್ಕ ಹಾಕಿದ್ದಂತೆ ಆರೋಪಿತರು ನಿರ್ಜನ ಪ್ರದೇಶಕ್ಕೆ ಕರೆದು ಕೊಂಡು ಹೋಗಿ ಲಕ್ಷ್ಮಿಪತಿಯ ಬೆಲ್ಟ್ ನಿಂದಲೇ ಕತ್ತಿಗೆ ಬೀರಿ ಕೊಲೆ ಮಾಡಿದ್ದಾರೆ. ಆಗ ಜೊತೆಯಲ್ಲಿದ್ದ ನಟರಾಜ್ ಹೇಗೋ ತಪ್ಪಿಸಿಕೊಂಡಿದ್ದಾನೆ.


ಲಕ್ಷ್ಮಿಪತಿ ಕೊಲೆಯಾದ ನಂತರ ಅಣ್ಣ ನಟರಾಜ್ ಗಾಗಿ ಆರೋಪಿತರು ಹುಡುಕಾಡಿದ್ದಾರೆ. ಆದರೆ ಆತ ಅಷ್ಟರಲ್ಲಿ ಹೊಲದೊಳಗೆ ಅಡಗಿಕೊಂಡಿದ್ದಾನೆ. ಹುಡುಕಾಡುವಷ್ಟರಲ್ಲಿ ಕತ್ತಲೆಯಾದುದರಿಂದ ಪರಾರಿಯಾಗಿದ್ದಾರೆ.


ತಕ್ಷಣವೇ ಮನೆಗೆ ಬಂದ ನಟರಾಜ್ ಸಂಬಂಧಿಕರಿಗೆ ವಿಷಯ ತಿಳಿಸಿ, ಅವರೊಂದಿಗೆ ಘಟನೆ ನಡೆದ ಸ್ಥಳಕ್ಕೆ ಆಗಮಿಸಿ, ಲಕ್ಷ್ಮಿಪತಿಯ ಶವಕ್ಕಾಗಿ ಹುಡುಕಾಡಿದ್ದಾರೆ. ಶವ ಸಿಗದ ಕಾರಣ ನೆಲಮಂಗಲ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.


ಸ್ಥಳಕ್ಕೆ ಬಂದ ಪೊಲೀಸರು ಲಕ್ಷ್ಮಿಪತಿ ಶವವನ್ನು ಪತ್ತೆ ಹಚ್ಚಿದ್ದಾರೆ, ತದನಂತರ ಆರೋಪಿತರಾದ ನಿಜಾಮುದ್ದೀನ್ ಹಾಗೂ ಸಿಕಂದರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇಬ್ರತ್ ಹಾಗೂ ಆಟೋ ಮಹಮದ್ ತಲೆ ಮರೆಸಿಕೊಂಡಿದ್ದಾರೆ. ಅವರಿ ಗಾಗಿ ಹುಡುಕಾಟ ನಡೆದಿದೆ.

ಕುದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃತ್ತ ನಿರೀಕ್ಷಕ ಮಂಜುನಾಥ್ ನೇತೃತ್ವದಲ್ಲಿ ತನಿಖೆ ನಡೆ ಯುತ್ತಿದೆ.


*ಕೊಲೆ ಮಾಡಿದ್ದಾಗಿ ಹುಡುಗಿ ತಂದೆ ಒಪ್ಪಿಗೆ;*

ಇಲ್ಲಿನ ಎಸ್‌ಪಿಯರಾದ ಎಸ್.ಗಿರೀಶ್, ಅನ್ಯ ಧರ್ಮದ ಯುವಕ ತನ್ನ ಮಗಳನ್ನು ಪ್ರೀತಿಸಿದ್ದು, ಅವರಿಗೆ ಮದುವೆ ಮಾಡಿದರೆ ಮರ್ಯಾದೆ ಹೋಗುತ್ತದೆ, ಅದನ್ನು ಸಹಿಸಲಾಗದೆ ನಾನೇ ಕೊಂದೆ ಎಂದು ಯುವತಿಯ ತಂದೆ ನಿಜಾಮುದ್ದೀನ್ ಒಪ್ಪಿಕೊಂಡಿದ್ದಾನೆ ಎಂದು ಹೇಳಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑