ಬಯಲುಸೀಮೆ ಸಂಜೆ ದಿನಪತ್ರಿಕೆಯ ಕನಕಪುರ ವರದಿಗಾರ ಶಿವಲಿಂಗಯ್ಯ ನಿಧನ. ಸಂಪಾದಕ ಸು ತ ರಾ ತೀವ್ರ ಸಂತಾಪ
ಕನಕಪುರ:ಮೇ.19. ಬಯಲುಸೀಮೆ ಸಂಜೆ ದಿನಪತ್ರಿಕೆಯ ಕನಕಪುರ ವರದಿಗಾರ ಎಲ್ ಶಿವಲಿಂಗಯ್ಯ(62) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪತ್ರಿಕೋದ್ಯಮಕ್ಕೆ ಪ್ರವೇಶ ಮಾಡಿ ಸರಿ ಸುಮಾರು ೨೮ ವರ್ಷಗಳು ಸಂದಿವೆ.
ಈ ಅವಧಿಯಲ್ಲಿ ಅವರು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡುತ್ತಾ, ಪ್ರಾಮಾಣಿಕತೆ ಮತ್ತು ಶಿಸ್ತಿನಿಂದ ಬದುಕು ಸಾಗಿಸಿಕೊಂಡು ಅತಿಯಾದ ಆಸೆಗೆ ಒಳಗಾಗದೆ ಬದುಕಿದವರು.
ಇವರು ಮೂಲತಃ ಚನ್ನಪಟ್ಟಣ ತಾಲ್ಲೂಕು ಸುಳ್ಳೇರಿ ಗ್ರಾಮದವರು ಅಂದರೆ ಬಯಲುಸೀಮೆ ಸಂಜೆ ದಿನಪತ್ರಿಕೆ ಸಂಪಾದಕರಾದ ಸು ತ ರಾಮೇಗೌಡ ರ ಊರಿನವರು, ಇವರ ತಂದೆ ತೋಟಗಾರಿಕೆ ಇಲಾಖೆಯಲ್ಲಿ ಕೆಲಸದಲ್ಲಿದ್ದರು. ಆಗ ಅವರು ಲಾಲ್ಬಾಗ್ನಲ್ಲಿ ಕೆಲಸ ಮಾಡಿ, ನಿವೃತ್ತಿ ನಂತರ ಸಾವಿಗೆ ಒಳಗಾದರು.
ಆಮೇಲೆ ಅವರು ಬೆಂಗಳೂರಿನಲ್ಲಿ ಬದುಕು ಸಾಗಿಸಲು ಸಾಧ್ಯವಾಗದೆ ಊರಿನ ಕಡೆಗೆ ಬಂದರು. ಆಗ ಶಿವಲಿಂಗಯ್ಯ ನನ್ನ ಕಡೆಗೆ ಬಂದು ನನಗೆ ಏನಾದರು ಕೆಲಸ ಕೊಡಿ ಮಾಡುತ್ತೇನೆ ಎಂದ.
ಆತ ಎಸ್ಎಸ್ಎಲ್ಸಿ ಓದಿದ್ದರಿಂದ ಆತನಿಗೆ ಪತ್ರಿಕೆಯ ವರದಿಗಾರಿಕೆಯ ಸಂಬಂಧ ತರಬೇತಿ ನೀಡಿ ಅವನನ್ನು ಕನಕಪುರಕ್ಕೆ ಕಳುಹಿಸಿಕೊಡಲಾಯಿತು.
ಆತ ಅಲ್ಲಿ ಜನಸಂಪರ್ಕ ಹೊಂದಿ, ಎಲ್ಲರೊಳಗೆ ಒಂದಾಗಿ ಹಲವು ಸಾರಿ ಬಹಳಷ್ಟು ಹಿರಿಯರು, ಪತ್ರಕರ್ತರ ಸಮಸ್ಯೆ ಇದ್ದರೆ ಶಿವಲಿಂಗಯ್ಯ ಅವರನ್ನು ಕರೆದು ತನ್ನಿ ಎಂದು ಹೇಳುವಷ್ಟರ ಮಟ್ಟಿಗೆ ಅಲ್ಲಿ ಹಾಸು ಹೊಕ್ಕಾಗಿದ್ದರು.
ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಪತ್ರಕರ್ತರ ಹಿತಕ್ಕಾಗಿ ದುಡಿದಿದ್ದರ ಬಗ್ಗೆ ಈಗಲೂ ಸಹ ಹಲವರು ಸ್ಮರಿಸಿಕೊಳ್ಳುತ್ತಾರೆ.
ನೆನ್ನೆ ರಾತ್ರಿ ಇದ್ದಕ್ಕಿದ್ದಂತೆ ಹೃದಯಘಾತವಾಗಿದೆ, ತಕ್ಷಣ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಸಾಗಿಸಲಾಗಿದೆ, ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ.
ಇಂದು ಮಧ್ಯಾಹ್ನ ಅವರ ಹುಟ್ಟೂರಾದ ಸುಳ್ಳೇರಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಿತು.
ಇವರು ಮಗ, ಮಗಳು ಹಾಗೂ ಬಂಧುಗಳನ್ನು ಅಗಲಿ ಹೋಗಿದ್ದಾರೆ. ಶ್ರೀಯುತರ ಪತ್ರಿಕಾ ಸೇವೆ ಸ್ಮರಣಾರ್ಹವಾದುದು. ಪತ್ರಿಕೆಯ ವರದಿಗಾರರಾಗಿ ಪತ್ರಿಕೆಗೂ ಗೌರವ ತಂದು ಕೊಟ್ಟಿದ್ದಾರೆ. ಇವರ ಸಾವಿನಿಂದ ಪತ್ರಿಕಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ‘ಬಯಲುಸೀಮೆ’ ಪತ್ರಿಕಾ ಬಳಗವು ಅವರ ಆತ್ಮಕ್ಕೆ ಶಾಂತಿ ಬಯಸಿ, ಅವರ ಕುಟುಂಬಕ್ಕೆ ಅವರ ಸಾವಿನ ದುಃಖ ಭರಿಸುವ ಶಕ್ತಿ ಬರಲಿ ಎಂದು ಕೋರಿದೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »
ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು
ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ
ಡಾ ರಾಜಕುಮಾರ್ ಗೆ ಪಿತೃವಿಯೋಗ
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ
ಹಾವು ಕಚ್ಚಿ ಅರ್ಚಕಿ ಸಾವು
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.
ಬ
ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ
ಪ್ರತಿಕ್ರಿಯೆಗಳು