ಪ್ರೀತಿಸಿ ಓಡಿ ಹೋದ ಮಗಳು. ಮನನೊಂದು ಆತ್ಮಹತ್ಯೆ ಮಾಡಿಕೊಂಡ ಮರ್ಯಾದಸ್ತ ತಂದೆತಾಯಿ
ಆತ ತೆಂಕನಹಳ್ಳಿ ಗ್ರಾಮದ ಮುಖ್ಯಸ್ಥ, ಹೆಚ್ ಬ್ಯಾಡರಹಳ್ಳಿ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ. ಗ್ರಾಮದಲ್ಲಿ ಒಳ್ಳೆಯ ಹೆಸರು ಮಾಡಿಕೊಂಡಿದ್ದ. ರಾಜಕಾರಣಿಯಾಗಿಯೂ ಗುರುತಿಸಿಕೊಂಡಿದ್ದ ಆ ವ್ಯಕ್ತಿಗ್ರಾಮದಲ್ಲಿ ನಡೆಯುತ್ತಿದ್ದ ಎಲ್ಲಾ ಸಣ್ಣಪುಟ್ಟ ವಿಚಾರಗಳಿಗೂ ಮುನ್ನುಗ್ಗಿ ನ್ಯಾಯ ಒದಗಿಸಿಕೊಡುತ್ತಿದ್ದ. ಆದರೆ, ನ್ಯಾಯ ಕೊಡಿಸುವ ವ್ಯಕ್ತಿಯ ಮಗಳೇ ತಪ್ಪು ಮಾಡಿದ ಮೇಲೆ ಯಾರಿಗೆ ನ್ಯಾಯ ಹೇಳಬೇಕು ಎಂದು ಮನನೊಂದ ಆತ ತನ್ನ ಪತ್ನಿಯೊಂದಿಗೆ ಆತನೂ ತಮ್ಮ ತೋಟದಲ್ಲಿದ್ದ ಮಾವಿನ ಮರಕ್ಕೆ ನೇಣು ಬಿಗಿದು ಪ್ರಾಣ ಬಿಟ್ಟಿದ್ದಾನೆ.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೆಂಕನಹಳ್ಳಿ ಗ್ರಾಮದಲ್ಲಿ ಮಗಳು ತನ್ನ ಪ್ರಿಯಕರನ ಜತೆ ನಿನ್ನೆ ಓಡಿ ಹೋಗಿ ಮದುವೆಯಾಗಿದ್ದಳು. ಇದನ್ನು ಸಹಿಸಲಾಗದ ಪೋಷಕರು ಇವತ್ತು ಬೆಳ್ಳಂಬೆಳಿಗ್ಗೆ ತೋಟಕ್ಕೆ ಹೋಗಿ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ ರಮೇಶ್ ಹಾಗೂ 42 ವರ್ಷದ ಶೈಲಜಾ ಆತ್ಮಹತ್ಯೆಗೆ ಶರಣಾದ ದಂಪತಿ. ನಿನ್ನೆ ದಂಪತಿಯ ಮಗಳು ಶಿಲ್ಪಾ ಎಂಬುವವಳು ಪುನೀತ್ ಎಂಬ ಯುವಕರ ಜತೆ ಓಡಿ ಹೋಗಿ ಮದುವೆಯಾಗಿದ್ದಳು. ಹಲವು ಭಾರಿ ಇದೇ ವಿಚಾರಕ್ಕೆ ಮನೆಯಲ್ಲಿ ಸಣ್ಣ ಪುಟ್ಟ ಗಲಾಟೆಯೂ ನಡೆದಿತ್ತು. ಮನಸು ಬದಲಿಸಿಕೊಂಡಿದ್ದೇನೆ ಎಂದು ಹೇಳಿದ್ದ ಮಗಳು ಏಕಾಏಕಿ ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣಕ್ಕೆ ಮನನೊಂದ ದಂಪತಿಗಳು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
*ಎಸ್.ಗಿರೀಶ್, ರಾಮನಗರ ಎಸ್ಪಿ*
ಅಂದಹಾಗೆ, ಗ್ರಾಮದಲ್ಲಿ ಒಳ್ಳೆಯ ಹೆಸರು ಗಳಿಸಿದ್ದ ರಮೇಶ್ ರಾಜಕೀಯದಲ್ಲೂ ಗುರುತಿಸಿಕೊಂಡಿದ್ದರು. ಹಲವು ಭಾರಿ ಗ್ರಾಮ ಪಂಚಾಯ್ತಿಯ ಸದಸ್ಯನಾಗಿಯೂ ಆಯ್ಕೆ ಯಾಗಿದ್ದರು. ಈ ಕಾರಣಕ್ಕಾಗಿ ಗ್ರಾಮದಲ್ಲಿ ಸಣ್ಣ ಪುಟ್ಟ ಗಲಾಟೆ ನಡೆದ ಸಂದರ್ಭದಲ್ಲಿ ರಮೇಶ್ ನ್ಯಾಯ ಪಂಚಾಯ್ತಿ ಮಾಡಿ ನ್ಯಾಯ ಒದಗಿಸಿಕೊಡುತ್ತಿದ್ದರು. ಮಗಳು ತಪ್ಪುಮಾಡಿದ್ದಾಳೆ ಇನ್ನು ಮುಂದೆ ಯಾರಿಗೆ ನ್ಯಾಯ ಹೇಳಲಿ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಗ್ರಾಮದಲ್ಲಿ ಬಲವಾಗಿ ಕೇಳಿ ಬರುತ್ತಿದೆ. ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಗ್ರಾಮಸ್ಥರು ಯಾರಿಗೂ ಹೇಳದೇ ಅಂತ್ಯಕ್ರಿಯೆ ಮುಗಿಸುವ ಪ್ಲಾನ್ ಮಾಡಿದ್ದರು. ಆದರೆ, ವಿಚಾರ ತಿಳಿಯುತ್ತಿದ್ದಂತೆ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೃತದೇಹವನ್ನ ಶವ ಪರೀಕ್ಷೆಗೆ ಮಾಡಿಸಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಎಸ್ಪಿ ಗಿರೀಶ್ ರವರು ಪತ್ರಕರ್ತರಿಗೆ ಮಾಹಿತಿ ನೀಡಿದರು.
ಒಟ್ಟಾರೆಯಾಗಿ, ವಿರೋಧದ ನಡುವೆಯೂ ಮಗಳು ತನ್ನಿಷ್ಟದಂತೆ ಯುವಕನ ಜತೆ ಮದುವೆಯಾಗಿರುವ ವಿಚಾರಕ್ಕೆ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದು ನಿಜಕ್ಕೂ ವಿಪರ್ಯಾಸ. ಪ್ರಕರಣ ದಾಖಲಿಸಿಕೊಂಡಿರುವ ಎಂ.ಕೆ ದೊಡ್ಡಿ ಠಾಣಾ ಪೊಲೀಸರು ಪ್ರಕರಣ ಸಂಬಂಧ ತನಿಖೆ ಮುಂದುವರೆಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »
ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು
ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ
ಡಾ ರಾಜಕುಮಾರ್ ಗೆ ಪಿತೃವಿಯೋಗ
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ
ಹಾವು ಕಚ್ಚಿ ಅರ್ಚಕಿ ಸಾವು
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.
ಬ
ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ
ಪ್ರತಿಕ್ರಿಯೆಗಳು