ಮಾಕಳಿ ಸೆಕ್ರೆಟರಿಗೆ ಕಿರುಕುಳ; ಪೋಲೀಸರ ಹೆಸರಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ
ತಾಲ್ಲೂಕಿನ ಮಾಕಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ರಮೇಶ್ ರವರು ಎಂ ಕೆ ದೊಡ್ಡಿ ಪೋಲಿಸ್ ಠಾಣೆಗಳು ಸಬ್ ಇನ್ಸಪೆಕ್ಟರ್ ಸದಾನಂದ ರವರ ಹೆಸರಿಗೆ ಡೆತ್ ನೋಟ್ ಬರೆದಿಟ್ಟು, ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಇಂದು ಮುಂಜಾನೆ ನಡೆದಿದೆ.
ರಮೇಶ್ ಬಿನ್ ಲೇಟ್ ರಾಮೇಗೌಡ ಎಂಬ ಮಾಕಳಿ ಗ್ರಾಮದ ವ್ಯಕ್ತಿಯೋರ್ವರು ಕಳೆದ15 ವರ್ಷಗಳಿಂದ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಅಧ್ಯಕ್ಷ ಉಮೇಶ್ ಲೇಟ್ ಜವರೇಗೌಡ, ಸದಸ್ಯರಾದ ಪ್ರೇಮಾ ಸಿದ್ದರಾಜು ಮತ್ತು ರಾಜೇಗೌಡ ಬಿನ್ ಅರೆ ತಿಮ್ಮೇಗೌಡ ಎಂಬ ಈ ಮೂರು ಜನರು ನನ್ನನ್ನು ವೈಯುಕ್ತಿಕವಾಗಿ ದ್ವೇಷಿಸುತ್ತಿದ್ದರು. ಇದನ್ನೇ ಮುಂದುವರೆಸಿದ ಅವರು ಸಂಘದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಗ್ರಾಮದಲ್ಲಿ ಹೇಳಿಕೊಂಡು ತಿರುಗುತ್ತಿದ್ದರು.
ನನಗೆ ಇದು ಇರುಸುಮುರುಸು ಉಂಟು ಮಾಡಿದ್ದಲ್ಲದೆ, ಗ್ರಾಮದಲ್ಲಿ ತಲೆ ಎತ್ತಲಾಗದ ಸ್ಥಿತಿಯನ್ನು ತಂದಿಟ್ಟಿದ್ದು, ಈ ಮೂರು ಮಂದಿಯನ್ನು ಪಿಎಸ್ಐ ಸದಾನಂದ ರವರು ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕೇಂದು ಅವರು ಮರಣ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಎಂ ಕೆ ದೊಡ್ಡಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು, ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ವಾರಸುದಾರರಿಗೆ ಒಪ್ಪಿಸಲಾಯಿತು.
ಆಸ್ಪತ್ರೆಯ ಆವರಣದಲ್ಲಿ ತಾಲ್ಲೂಕು ಎಂಪಿಸಿಎಸ್ ನ ತಾಲ್ಲೂಕು ಅಧ್ಯಕ್ಷ ಪುಟ್ಟೇಗೌಡ, ಮಾಜಿ ಅಧ್ಯಕ್ಷ ದೇವರಾಜು, ಸೆಕ್ರೆಟರಿಗಳಾದ ಪುಟ್ಟರಾಜು ಮತ್ತು ಶೇಖರ್ ರವರು ಮಾತನಾಡಿ, ಕೆಲ ಗ್ರಾಮಗಳಲ್ಲಿ ಸಣ್ಣ ರಾಜಕೀಯ ಮಾಡುವ ಕೆಲ ಮಂದಿಯಿಂದ ಸೆಕ್ರೆಟರಿಗಳು ಪ್ರಾಣ ಕಳೆದುಕೊಳ್ಳುವಂತಹ ಸ್ಥಿತಿ ಬಂದೊದಗಿದೆ. ರಮೇಶ್ ರವರ ಸಾವಿಗೆ ಕಾರಣರಾದವರಿಂದ ಕನಿಷ್ಠ 50 ಲಕ್ಷ ಪರಿಹಾರ ಕೊಡಿಸಬೇಕು. ಸಂಘ ಮತ್ತು ಬಮೂಲ್ ನಿಂದಲೂ ಅವರಿಗೆ ಪರಿಹಾರ ನೀಡಲು ಮನವಿ ಮಾಡುತ್ತೇವೆ. ಇದರ ಜೊತೆಗೆ ಶವಸಂಸ್ಕಾರ ಮಾಡುವ ಮುನ್ನವೇ, ಬಮೂಲ್ ನಿರ್ದೇಶಕರು, ಆಡಳಿತ ಮಂಡಳಿ ಮತ್ತು ತಾಲ್ಲೂಕು ಆಡಳಿತ ಒಗ್ಗೂಡಿ ರಮೇಶ್ ರವರ ಪತ್ನಿಗೆ ಸೆಕ್ರೆಟರಿ ಹುದ್ದೆ ನೀಡಬೇಕು ಎಂದು ಆಗ್ರಹಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »
ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು
ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ
ಡಾ ರಾಜಕುಮಾರ್ ಗೆ ಪಿತೃವಿಯೋಗ
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ
ಹಾವು ಕಚ್ಚಿ ಅರ್ಚಕಿ ಸಾವು
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.
ಬ
ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ
ಪ್ರತಿಕ್ರಿಯೆಗಳು