ನಗರದ ಉದ್ಯಮಿ ಮೆಡಿಕಲ್ ಕಿರಣ ಆತ್ಮಹತ್ಯೆ. ಪತ್ನಿ ಆತ್ಮಹತ್ಯೆ ಮಾಡಿಕೊಂಡ 105 ದಿನಕ್ಕೆ ಪತಿಯೂ ಆತ್ಮಹತ್ಯೆ. ಅನಾಥವಾದ ಮಗು. ಕಾರಣವೇನು ?
ಮೆಡಿಕಲ್ ಕಿರಣ ಎಂದೇ ಪ್ರಸಿದ್ಧಿಯಾದ ಗುತ್ತಿಗೆದಾರ, ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಬಿಎಂ ರಸ್ತೆಯಲ್ಲಿನ ಮೆಡಿಕಲ್ ಸ್ಟೋರ್ ನ ಮಾಲೀಕ ತಾಲ್ಲೂಕಿನ ಮೆಣಸಿಗನಹಳ್ಖಿ ಗ್ರಾಮದ ಕಿರಣ್ ಬುಧವಾರ ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಪತ್ನಿ ಆತ್ಮಹತ್ಯೆ ಮಾಡಿಕೊಂಡ 100 ದಿನಗಳ ಅಂತರದಲ್ಲಿ ಬೆಳ್ಳಂಬೆಳಿಗ್ಗೆ ತನ್ನ ಮೆಡಿಕಲ್ ಸ್ಟೋರ್ ಗೆ ತೆರಳಿ, ತನ್ನ ಮುಷ್ಠಿ ಹಿಡಿಯುವಷ್ಟು ಯಾವುದೋ ಮಾತ್ರೆಗಳನ್ನು ತಂದು, ನುಂಗಿದ್ದು, ನುಂಗಿದ ತಕ್ಷಣ ಮನೆಯ ಹಿಂದಿನ ಕಿಟಕಿಯ ಸರಳಿಗೆ ನೇಣು ಬಿಗಿದುಕೊಂಡಿದ್ದಾರೆ. ಆಗ ತಾನೆ ವಾಕಿಂಗ್ ಮುಗಿಸಿ ಬಂದ ಅವರ ದೊಡ್ಡಪ್ಪ, ತಕ್ಷಣ ಎಚ್ಚೆತ್ತುಕೊಂಡು, ಉರುಳಿನಿಂದ ಬಿಡಿಸಿ, ಮಾಜಿ ಜಿಲ್ಲಾ ಪಂಚಾಯತಿ ಉಪಾಧ್ಯಕ್ಷೆ ವೀಣಾ ಕುಮಾರಿ ಮತ್ತು ಅವರ ಪತಿ ರೇಷ್ಮೆ ಉದ್ಯಮಿ ಚಂದ್ರು ರವರ ಸಹಾಯದೊಂದಿಗೆ, ಬೆಂಗಳೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಜೀವನ್ಮರಣದ ಹೋರಾಟದಲ್ಲಿ ಗೆದ್ದ ಕಿರಣ್ ನನ್ನು ಶನಿವಾರ ಸಂಜೆ ಮನೆಗೆ ಕರೆತಂದಿದ್ದರು.
ಲವಲವಿಕೆಯಿಂದ ಇದ್ದ ಕಿರಣ್ ಬುಧವಾರ ರಾತ್ರಿ ಮತ್ತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು, ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಕಿರಣ್ ರವರ ಸಹೋದರ ಅರುಣ್ ನಗರ ಠಾಣೆಗೆ ದೂರು ದಾಖಲಿಸಿದ್ದಾರೆ. ಕಿರಣ್ ರವರ ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪರೀಕ್ಷಿಸಿ ವಾರಸುದಾರರಿಗೆ ಒಪ್ಪಿಸಿದ್ದು, ಅವರ ಸ್ವಗ್ರಾಮ ಮೆಣಸಿಗನಹಳ್ಳಿ ಗ್ರಾಮದಲ್ಲಿ ಅಂತ್ಯಸಂಸ್ಕಾರ ನಡೆಯಿತು.
ಆದರೆ ಇದ್ದೊಬ್ಬ ಮೂರೂವರೆ ವರ್ಷದ ಪುಟ್ಟ ಬಾಲಕಿ, ಅನಾಥೆಯಾಗಿದ್ದು, ಅರಿಯದ ಪಾಪು ಏನು ಪಾಪ ಮಾಡಿತ್ತು ಎಂದು ಸಾರ್ವಜನಿಕರ ಅಳಲಾಗಿದೆ. ಪತ್ನಿ ಸಾಯಲು ಏನು ಕಾರಣ ? ಪತ್ನಿಯ ಸಾವಿನಿಂದ ಪತಿ ಖಿನ್ನತೆಗೊಳಗಾಗಿದ್ದರಾ ? ಆಗಿದ್ದರೆ ನೂರು ದಿನಗಳ ನಂತರ ಆತ್ಮಹತ್ಯೆಗೆ ಶರಣಾಗಿದ್ದೇಕೆ ? ಕಿರಣ್ ರವರ ಕುಟುಂಬದವರು ಕಿರಣ್ ರವರ ಪುತ್ರಿಯನ್ನು ದ್ವೇಷಿಸುತ್ತಿರುವುದೇಕೆ (ಊಹಾಪೋಹ) ? ಈ ಎರಡು ಆತ್ಮಹತ್ಯೆಯ ಹಿಂದಿನ ರಹಸ್ಯವನ್ನು ಪೋಲೀಸರು ಬಿಚ್ಚಿಡಬೇಕಾಗಿದೆ. ಆಗಲೇ ಆತ್ಮಗಳಿಗೆ ತೃಪ್ತಿ ದೊರೆಯುವ ಜೊತೆಗೆ ಆ ಪುಟ್ಟ ಬಾಲಕಿಗೆ ನ್ಯಾಯ ಸಿಗಬಹುದು. ಇಲ್ಲವಾದರೆ ಆ ಬಾಲೆಯ ಬದುಕು ನರಕ ಸದೃಶವಾಗುವುದರಲ್ಲಿ ಆಶ್ಚರ್ಯ ಅನುಮಾನವೇನಿಲ್ಲ.
ಗೋ ರಾ ಶ್ರೀನಿವಾಸ...
ಮೊ:9845856139.
Recent news in obituary »
ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು
ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ
ಡಾ ರಾಜಕುಮಾರ್ ಗೆ ಪಿತೃವಿಯೋಗ
ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ
ಹಾವು ಕಚ್ಚಿ ಅರ್ಚಕಿ ಸಾವು
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ ನಿಧನರಾದರು.
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.
ಬ
ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ
ಪ್ರತಿಕ್ರಿಯೆಗಳು