Tel: 7676775624 | Mail: info@yellowandred.in

Language: EN KAN

    Follow us :


ಪತ್ನಿಯನ್ನು ಕೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪತಿ

Posted date: 17 Oct, 2021

Powered by:     Yellow and Red

ಪತ್ನಿಯನ್ನು ಕೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪತಿ

ರಾಮನಗರ:ಕನಕಪುರ; ಅ/16/21. ಅಂಗಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ವ್ಯಾಪಾರಿಯೊಬ್ಬ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿ ತಾನೂ ಊರ ಹೊರಗಿನ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನಕಪುರ ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ, ಗುಡ್ಡೆ ವೀರನ ಹೊಸಹಳ್ಳಿಯಲ್ಲಿ ನಡೆದಿದೆ. 


ಪತಿಯಿಂದ ಹತ್ಯೆಯಾದ ಇಂದಿರಮ್ಮ (31), ದೇಸೀಗೌಡ (38) ಎಂಬಾತ ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಕಳೆದ 18 ವರ್ಷಗಳ ಹಿಂದೆ ವಿವಾಹವಾಗಿದ್ದ ದೇಸಿಗೌಡ ಮತ್ತು ಇಂದಿರಮ್ಮ ತಮ್ಮ 16 ವರ್ಷದ ಮಗನೊಂದಿಗೆ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ 2 ವರ್ಷಗಳ ಹಿಂದೆ ಕೊರೋನದಿಂದ ದಂಪತಿಗಳಿಬ್ಬರು ಬೆಂಗಳೂರಿನಿಂದ ಸ್ವಗ್ರಾಮ ಗುಡ್ಡೆವೀರನಹೊಸಹಳ್ಳಿ ಗ್ರಾಮಕ್ಕೆ ವಾಪಸ್ಸು ಬಂದಿದ್ದರು.


ಇತ್ತೀಚೆಗೆ ಕೊರೋನ ಮುಗಿದ ಮೇಲೆ ನಗರ ವಾಸಕ್ಕೆ ಗೀಳು ಬಿದಿದ್ದ ಪತ್ನಿ ಇಂದಿರಾ ಪದೇ ಪದೇ ಗಂಡನನ್ನು ಮತ್ತೆ ಬೆಂಗಳೂರಿಗೆ ವಾಪಸ್ಸು ಹೋಗುವಂತೆ ಪೀಡಿಸುತ್ತಿದ್ದಳು. ಗ್ರಾಮದಲ್ಲಿ ಚಿಲ್ಲರೆ ಹಾಗೂ ಕೋಳಿ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ದಂಪತಿಗಳು ಇತ್ತೀಚೆಗೆ ಗಂಡನನ್ನು ಮೂಲೆಗುಂಪು ಮಾಡಿ ತಾನೇ ಸ್ವತಃ ಅಂಗಡಿಯ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದಳು. 


ಕಳೆದ 3-4 ದಿನಗಳ ಹಿಂದೆ ಮತ್ತೆ ಬೆಂಗಳೂರಿನ ಕ್ಯಾತೆ ತೆಗೆದಿದ್ದ ಪತ್ನಿಯೊಂದಿಗೆ ಜಗಳ ಮಾಡಿಕೊಂಡು ಗ್ರಾಮದ ಹಿರಿಯರು ರಾಜಿ ಪಂಚಾಯಿತಿ ಮಾಡಿದ್ದರು. ಇದರ ಮಧ್ಯೆ ಹೆಂಡತಿಯ ಉಪಟಳದಿಂದ ಬೇಸತ್ತಿದ್ದ ದೇಸೀಗೌಡ ಇಬ್ಬರು ಜೀವಂತವಾಗಿರಬಾರದು ಎಂಬ ನಿಧಾರಕ್ಕೆ ಬಂದು ತನ್ನ ಪತ್ನಿಯನ್ನು ಚೂರಿಯಿಂದ ಕತ್ತು ಕುಯ್ದು ಕೊಲೆ ಮಾಡಿ, ತಾನು ಊರ ಹೊರಗಿನ ಮರವೊಂದಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ವಿಷಯ ತಿಳಿದ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಟಿ.ಕೃಷ್ಣ, ಸಬ್ ಇನ್ಸ್‌ಪೆಕ್ಟರ್ ಅನಂತರಾಮು ಹಾಗೂ ಕೋಡಿಹಳ್ಳಿ ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಶವಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ನೀಡಿದ್ದಾರೆ. 


ಈ ದೃಶ್ಯ ಸುತ್ತಮುತ್ತಲಿನ ಗ್ರಾಮಸ್ಥರ ಮನಕಲಕುವಂತಿತ್ತು. ಕೋಡಿಹಳ್ಳಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in obituary »

ಹಸು ಮೈ ತೊಳೆಯಲು ಹೋಗಿ ವ್ಯಕ್ತಿ ಸಾವು

ಚನ್ನಪಟ್ಟಣ: ಸುಗ್ಗಿ ಹಬ್ಬಕ್ಕೆ ಹಸು ಮೈ ತೊಳೆಯಲು ಹೋಗಿ ಕಾಲುಜಾರಿ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಕೋಮನಹಳ್ಳಿ

ಡಾ ರಾಜಕುಮಾರ್ ಗೆ ಪಿತೃವಿಯೋಗ
ಡಾ ರಾಜಕುಮಾರ್ ಗೆ ಪಿತೃವಿಯೋಗ

ಚನ್ನಪಟ್ಟಣ: ನಗರದ ಸಾರ್ವಜನಿಕ ಆಸ್ಪತ್ರೆಯ ಹಿರಿಯ ಹಾಗೂ ಮೂಳೆ ತಜ್ಞರಾದ ಡಾ ರಾಜಕುಮಾರ್ ರವರ ತಂದೆ ರೇಣುಕಪ್ಪ (೭೨) ನಿಧನರಾಗಿದ್ದು, ಸಾರ್ವಜನಿಕ ಆಸ್ಪತ್ರೆ

ಹಾವು ಕಚ್ಚಿ ಅರ್ಚಕಿ ಸಾವು
ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.

ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು
ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ

ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ
ಶಿಕ್ಷಣ ಸಹಾಯಕ ಎಲಿಯೂರು ಎಸ್ ಈರಯ್ಯ ನಿಧನ

ಚನ್ನಪಟ್ಟಣ: ಎಸ್ ಈರಯ್ಯ ಎಲಿಯೂರು (83) ಮೈಸೂರಿನಲ್ಲಿ ನಿನ್ನೆ ರಾತ್ರಿ‌ ನಿಧನರಾದರು.

ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ
ಮೃತ ರಾಮಚಂದ್ರ ರವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ

ಚನ್ನಪಟ್ಟಣ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಕೆ. ರಾಮಚಂದ್ರ ರವರು ವಯೋಸಹಜ ಖಾಯಿಲೆಯಿಂದ ಮಂಗಳವಾರ ರಾತ್ರಿ ಚನ್ನಪಟ್ಟಣದ ಸ್ವಗೃಹ

ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:
ಮಾಜಿ ಶಾಸಕ ಚೌಡಯ್ಯ ಅವರ ನಿಧನಕ್ಕೆ ಡಿ.ಕೆ. ಶಿವಕುಮಾರ್ ಅವರ ಸಂತಾಪ:

ಬೆಂಗಳೂರು: ಮಂಡ್ಯದ ಮಾಜಿ ಶಾಸಕರು, ಹಿರಿಯ ಮುಖಂಡರಾದ ಚೌಡಯ್ಯ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದ

ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ
ಮಚ್ಚಿನ ವಿಚಾರದಲ್ಲಿ ಜಗಳ.ಕೊಲೆಯಲ್ಲಿ ಅಂತ್ಯ

ಹಲಗೂರು: ಸೌದೆ ಕತ್ತರಿಸಲು ತೆಗೆದುಕೊಂಡಿದ್ದ‌ ಮಚ್ಚನ್ನು ವಾಪಸ್ ಕೊಡದ ಕಾರಣ ಇಬ್ಬರ ನಡುವೆ ಜಗಳ ನಡೆದು ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ

ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ
ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ಮಹಿಳೆ ಕೊಲೆ: 3 ತಾಸಿನಲ್ಲೇ ಸಿಕ್ಕಿಬಿದ್ದ ಹಿಂಬದಿ ಮನೆಯ ಆಗಂತುಕ

ಚನ್ನಪಟ್ಟಣ: ಶುಕ್ರವಾರ ಬೆಳ್ಳಂಬೆಳಗ್ಗೆ ಕೊಲೆಯ ವಿಷಯ ತಿಳಿದು ಇಡೀ ಗ್ರಾಮವೇ ಬೆಚ್ಚಿಬಿದ್ದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ತೂಬಿನಕೆರೆಯಲ್ಲಿ ಸಂಭವಿಸಿದೆ.


ಪುನೀತ್ ಅಭಿಮಾನಿ ನೇಣುಬಿಗಿದು ಸಾವು
ಪುನೀತ್ ಅಭಿಮಾನಿ ನೇಣುಬಿಗಿದು ಸಾವು

ಚನ್ನಪಟ್ಟಣ ನಗರದ ಎಲೇಕೇರಿ ಬಡಾವಣೆಯ ದಿವಂಗತ ಕೃಷ್ಣಪ್ಪ ಎಂಬುವವರ ಪುತ್ರ ವೆಂಕಟೇಶ್ ಎಂಬಾತ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಅಪ್ಪಟ ಅಭಿಮಾನಿಯಾಗಿದ್ದು ಅವರ ಸಾವಿನಿಂದ ನೊಂದು ಆತ್ಮಹತ್ಯೆ ಮಾಡಿ

Top Stories »  


Top ↑