ಹೆಸರಿಗೆ ತಕ್ಕಂತೆ ಕಥೆ ಇದೆ, ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಮಲ್ಲೇಶ್

ಕಥೆಯ ಹೆಸರಿನಂತೆಯೇ ಪಾತ್ರಗಳಿದ್ದು, ಇಂದಿನ ಪೀಳಿಗೆಗೆ ಅತ್ಯಗತ್ಯವಾಗಿ ಬೇಕಾದ ಕಥೆ ಇದಾಗಿದ್ದು, ಯುವ ಪೀಳಿಗೆ ನೋಡಲೇಬೇಕಾದ ಕಿರು ಚಿತ್ರವಾಗಿದೆ. ಸಂಗ್ರಾಮ ವಾಹಿನಿ ಅಡಿಯಲ್ಲಿ ಹಲವಾರು ಸಂದೇಶಗಳನ್ನೊತ್ತ ಕಿರು ಚಿತ್ರಗಳು ಬರಲೆಂದು ತಾಯಿ ಚಾಮುಂಡೇಶ್ವರಿ ದೇವಿಯಲ್ಲಿ ಬೇಡಿಕೊಳ್ಳುತ್ತೇನೆ ಎಂದು ಗೌಡಗೆರೆ ಗ್ರಾಮದ ಶ್ರೀ ಬಸವಪ್ಪ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಡಾ ಮಲ್ಲೇಶ್ ತಿಳಿಸಿದರು.
ಅವರು ಭಾನುವಾರ ಕ್ಷೇತ್ರದಲ್ಲಿ ತಾನೊಂದು ಬಗೆದರೆ ದೈವವೊಂದು ಬಗೆಯಿತು ಎಂಬ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಮನಗರ ಜಿಲ್ಲೆಯಲ್ಲಿ ಇತಿಹಾಸ, ಪುರಾಣ ಪ್ರಸಿದ್ಧ ಅನೇಕ ಸ್ಥಳಗಳು ಹಾಗೂ ಪ್ರಸಿದ್ಧ ವ್ಯಕ್ತಿಗಳು ಇದ್ದು ಅವುಗಳನ್ನೆಲ್ಲಾ ಇಂದಿನ ಮತ್ತು ಮುಂದಿನ ಪೀಳಿಗೆಗೆ ತೋರಿಸಲು ಜಿಲ್ಲೆಗೆ ಒಂದು ವೇದಿಕೆ ಬೇಕಿತ್ತು. ಅದನ್ನು ತೋರಿಸಲು 'ಸಂಗ್ರಾಮ ಟಿವಿ' ಎಂಬ ವೇದಿಕೆಯನ್ನು ಹುಟ್ಟು ಹಾಕಿರುವ ಮಾಲೀಕರು ಮತ್ತು ಸಹೋದ್ಯೋಗಿಗಳಿಗೆ ನಾನು ಅಭಿನಂದಿಸುತ್ತೇನೆ. ಇಂತಹ ಹಲವಾರು ಕಿರುಚಿತ್ರಗಳ ಜೊತೆಗೆ ಜಿಲ್ಲೆಯ ಕೀರ್ತಿಕಳಸಗಳನ್ನು ತೋರಿಸುವಂತಹ ಕೆಲಸ ಮಾಡಲಿ ಎಂದು ಆಶೀರ್ವದಿಸಿದರು.
ಕಿರುಚಿತ್ರ ಬಿಡುಗಡೆ ಮಾಡಿ ಮಾತನಾಡಿದ ಸಂಗ್ರಾಮ ಟಿವಿ ಪ್ರಧಾನ ಸಂಪಾದಕರಾದ ಗೋ ರಾ ಶ್ರೀನಿವಾಸ, ತಾನೊಂದು ಬಗೆದರೆ, ದೈವವೊಂದು ಬಗೆಯಿತು ಎಂಬ ಶೀರ್ಷಿಕೆಯೇ ಬಹಳ ಅದ್ಭುತವಾಗಿದೆ. ಇದು ಪ್ರತಿಯೊಬ್ಬರ ಜೀವನದಲ್ಲೂ ಒಂದಲ್ಲಾ ಒಂದು ರೀತಿಯಲ್ಲಿ ನಡೆದೇ ಇರುತ್ತದೆ. ಅದರ ಒಂದು ಎಳೆಯನ್ನೇ ಹಿಡಿದುಕೊಂಡು ಹರೀಶ್ ಮತ್ತು ಸ್ನೇಹಿತರು ಒಗ್ಗೂಡಿ ವಿಶೇಷವಾಗಿ ಕಿರುಚಿತ್ರ ನಿರ್ಮಿಸಿದ್ದಾರೆ. ಎಲ್ಲಾ ಸ್ನೇಹಿತರು ಒಗ್ಗೂಡಿ ಮತ್ತಷ್ಟು ಕಿರುಚಿತ್ರಗಳನ್ನು ನಿರ್ಮಿಸುವ ಮೂಲಕ ಇಂದಿನ ಮತ್ತು ಮುಂದಿನ ಪೀಳಿಗೆಗೆ ಮಾದರಿಯಾಗಲಿ ಎಂದು ಆಶಿಸಿದರು.
ಸಂಗ್ರಾಮ ಟಿವಿ ಯ ವ್ಯವಸ್ಥಾಪಕ ನಿರ್ದೇಶಕ ಮಧುಸೂದನ್ ಮಾತನಾಡಿ ಉತ್ತಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿರುವ, ವಿಶೇಷವಾಗಿ ಯುವಕ-ಯುವತಿಯರಿಗೆ ನಮ್ಮ ವಾಹಿನಿ ಬೆಂಬಲವಾಗಿ ನಿಲ್ಲುತ್ತದೆ, ಪ್ರತಿಭೆಗಳನ್ನು ಪ್ರೋತ್ಸಾಹಿಸಲೆಂದೇ ವಾಹಿನಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಯುವ ಪ್ರತಿಭೆಗಳು ಸದುಪಯೋಗ ಪಡಿಸಿಕೊಂಡು ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಿರುಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಸ್ಥರಾದ ಹರೀಶ್, ಧೂಮ್ ಎಗೈನ್ ಚಿತ್ರದ ನಾಯಕ ವಾಸು, ನಿರ್ದೇಶಕ ಅನುಶ್ ಆದಿತ್ಯ, ನಿರ್ಮಾಪಕ ಸಂತೋಷ್ ರೆಡ್ಡಿ, ಕಿರುಚಿತ್ರ ದ ಪಾತ್ರಧಾರಿಗಳು ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara-district »

ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.
<

ರೋಟರಿ ಕ್ಲಬ್ ವತಿಯಿಂದ ಚಾರಣ
ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ
ಪ್ರತಿಕ್ರಿಯೆಗಳು