Tel: 7676775624 | Mail: info@yellowandred.in

Language: EN KAN

    Follow us :


ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ

Posted date: 24 Jul, 2023

Powered by:     Yellow and Red

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ  ಪ್ರೊ. ಜಯಪ್ರಕಾಶ್ ಗೌಡ ಅಭಿಮತ

ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು   ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ ಗೌಡ ತಿಳಿಸಿದರು. ಅವರು ಪಟ್ಟಣದ ಶತಮಾನೋತ್ಸವ ಭವನದಲ್ಲಿ ಭಾನುವಾರ ಬೊಂಬೆ ನಗರಿಯ ವಿಶ್ರಾಂತ ಅಧ್ಯಾಪಕ ಸಂಘ ಸಂಸ್ಥೆಗಳ ಸೇವಾಕರ್ತ ವಸಂತ್ ಕುಮಾರ್ 60 ರ ಅಭಿನಂದನೆ ಮತ್ತು ಗ್ರಂಥ ಲೋಕಾರ್ಪಣೆ ಸಮಾರಂಭವನ್ನು ಉದ್ಘಾಟಿಸಿ  ಹಣತೆ ಎಂಬ ಅಭಿನಂದನಾ ಗ್ರಂಥವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.


ಮನುಷ್ಯ ಹುಟ್ಟು, ಸಾವಿನ ನಡುವೆ ಸನ್ಮಾರ್ಗದಲ್ಲಿ ನಡೆದು, ಸಾಮಾಜಿಕ ಚಿಂತನೆಗಳಿಗೆ  ಬದುಕನ್ನು ಮೀಸಲಿಡುವ ಮೂಲಕ ಸಾರ್ಥಕತೆ ಕಾಣಬೇಕು ,ಅಂತೆಯೇ 

ವಸಂತ್ ಕುಮಾರ್ ರವರು  ಶಿಕ್ಷಕ ವೃತ್ತಿಯನ್ನು ಹಾಗೂ ಸಾಮಾಜಿಕ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸುವ ಮೂಲಕ 60 ವಸಂತಗಳನ್ನು ಪೂರೈಸಿದ್ದಾರೆ , ಕಳೆದ ಮೂರು ದಶಕಗಳಿಂದ ಸಾಹಿತ್ಯಕ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ, ಶಿಕ್ಷಕರಾಗಿ  ತಮ್ಮ ವೃತ್ತಿ ಜೀವನದಲ್ಲಿ ಉತ್ತಮ ಸೇವೆ ಸಲ್ಲಿಸಿ ಸಹಸ್ರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದಾರೆ. ಇಂತಹ ಸಮಾಜಮುಖಿ ವ್ಯಕ್ತಿಗೆ ಅಭಿನಂದಿಸಿ, ಗ್ರಂಥ ಹೊರ ತರುತ್ತಿರುವುದು ನಿಜಕ್ಕೂ ಶ್ಲಾಘನೀಯ  ವಿಚಾರವಾಗಿದೆ ಎಂದರು.


 ವಸಂತ್ ಕುಮಾರ್ ರವರನ್ನು ಅಭಿನಂದಿಸಿ ಮಾತನಾಡಿದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ಪ್ರತಿಯೊಬ್ಬ ವ್ಯಕ್ತಿಯು ಈ ಭೂಮಿ ಮೇಲೆ ಯಾವುದಾದರೂ ಮಹತ್ವಕಾಂಕ್ಷೆಯನ್ನು ಈಡೇರಿಸುವ ಸಲುವಾಗಿ  ಸಕಾರಣದಿಂದ ಜನಿಸಿರುತ್ತಾನೆ, ಹುಟ್ಟಿದ ಮೇಲೆ ನಾಲ್ಕಾರು ಜನರಿಗೆ ಒಳ್ಳೆಯ ಕೆಲಸ ಮಾಡುವ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ಸಮಾಜ ಹಾಗೂ  ದೇಶದ ಬಗ್ಗೆ ನಿಷ್ಠೆ ಮತ್ತು  ಗೌರವ ಹೊಂದಿರಬೇಕು. ವಸಂತ್ ಕುಮಾರ್ ರವರು ಜೀವನದ ಸಾರವನ್ನು ಅರ್ಥೈಸಿಕೊಂಡು ವೃತ್ತಿಯ ಜೊತೆ ಜೊತೆಗೆ ಸಾಮಾಜಿಕ ಸೇವಾ ಕಾರ್ಯ ಚಟುವಟಿಕೆಗಳನ್ನು ಮಾಡುವ ಮೂಲಕ  ಜನ್ಮ ಭೂಮಿಯ ಋಣವನ್ನು ತೀರಿಸುವ ಕೆಲಸ ಮಾಡಿದ್ದಾರೆ. ನಿವೃತ್ತಿ ನಂತರದ ಮುಂದಿನ ದಿನಗಳಲ್ಲಿಯೂ ಅವರ ಸಮಾಜ ಸೇವೆ ಹೀಗೆ ಮುಂದುವರೆಯಲಿ ಎಂದು ಶುಭ ಹಾರೈಸಿದರು.


ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ  ಪ್ರತಿಯೊಬ್ಬ ವ್ಯಕ್ತಿಗೂ ಸಾಮಾಜಿಕ ತುಡಿತ ಇರುವುದು ಅಗತ್ಯ, ನನಗಾಗಿ ಬದುಕುವುದಕ್ಕಿಂತ ನಮಗಾಗಿ ಬದುಕಿದಾಗ ಮಾತ್ರ ಸಮಾಜ ನಮ್ಮನ್ನು ಸದಾ ನೆನೆಯುತ್ತದೆ.   ಸಮಾಜದ ಮೇಲಿನ ಕಾಳಜಿ ಮತ್ತು ಸೇವಾ ಮನೋಭಾವನೆಯನ್ನು ರೂಡಿಸಿಕೊಂಡು 60 ವಸಂತಗಳನ್ನು ಪೂರೈಸಿರುವ ವಸಂತ್ ಕುಮಾರ್ ರವರು ಸಮಾಜ ನೆನಪಿಸಿಕೊಳ್ಳುವ  ರೀತಿಯಲ್ಲಿ ಬದುಕಿದ್ದಾರೆ ಎಂದರು .


ಅಧ್ಯಕ್ಷತೆ ವಹಿಸಿದ್ದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ತೌಟನಹಳ್ಳಿ ಪುಟ್ಟಸ್ವಾಮಿ ಮಾತನಾಡಿ ಭೂಮಿಯ ಮೇಲಿನ ಸಂತರು ಮನುಷ್ಯನನ್ನು ಮೊದಲು  ಮನುಷ್ಯನಾಗಿ ಬದುಕು ಎಂದು ಹೇಳಿದ್ದಾರೆ. ಆದರೆ ಈಗ ಉತ್ತಮ ಮನುಷ್ಯನಾಗಿ ಬದುಕುವುದೇ ಕಷ್ಟವಾಗಿದೆ. ಮನುಷ್ಯನಾಗಿ ಬದುಕುವುದೇ ಅತ್ಯಂತ ಮುಖ್ಯವಾದುದು. ಏನಾದರೂ ಆಗು ಮೊದಲು ಮಾನವನಾಗು ಎಂಬ ಕವಿವಾಣಿಯಂತೆ ಆಚರಣೆಯಲ್ಲಿ ಮಾನವನಾಗಲು ಪ್ರಯತ್ನಿಸಬೇಕು, ವಸಂತ್ ಕುಮಾರ್ ರವರು ಒಬ್ಬ ಮನುಷ್ಯನಾಗಿ ಬದುಕಿ ಜೀವನದ ಸಾರ್ಥಕತೆ ಕಂಡಿದ್ದಾರೆ ಎಂದರು.


ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ನ ಅಧ್ಯಕ್ಷ ರಾಮಲಿಂಗೇಶ್ವರ (ಸಿಸಿರಾ) ಪ್ರಸ್ತಾವಿಕವಾಗಿ ಮಾತನಾಡಿದರು. ಅಭಿನಂದನಾ ಸಮಿತಿ ವತಿಯಿಂದ ವಸಂತ್ ಕುಮಾರ್ ರವರಿಗೆ ಹೃತ್ಪೂರ್ವಕವಾಗಿ ಅಭಿನಂದಿಸಲಾಯಿತು. ಸಮಗ್ರ  ಶಿಕ್ಷಣ ಕರ್ನಾಟಕದ ನಿರ್ದೇಶಕ ಎಂ. ಪಿ. ಮಾದೇಗೌಡ  ಸು.ತ. ರಾಮೇಗೌಡ ಶಿಕ್ಷಣಾಧಿಕಾರಿ ಶಿವಪ್ಪ ,ಡಿ ಪುಟ್ಟಸ್ವಾಮಿ (ಡಿಪಿಎಸ್ ), ಪ್ರಾಂಶುಪಾಲ ಡಾ.ವೆಂಕಟೇಶ್ , ಭಾ.ವಿ.ಪ. ಅಧ್ಯಕ್ಷ  ಗುರುಮಾದಯ್ಯ, ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ, ಬೆಸ್ಕಾಂ ಶಿವಲಿಂಗಯ್ಯ ವಿ. ಟಿ. ರಮೇಶ್, ರವಿಕುಮಾರ್ ಗೌಡ, ಆರ್. ಶೇಖರ್, ಡಾ. ಎಚ್ .ಕೃಷ್ಣೇಗೌಡ, ವಕೀಲರ ಸಂಘದ ಮಾಜಿ ಅಧ್ಯಕ್ಷ ಟಿ.ವಿ. ಗಿರೀಶ್ ,ಬಿ.ಎನ್. ಕಾಡಯ್ಯ, ತಿಪ್ರೇಗೌಡ, ಯೋಗಾನಂದ, ಚಕ್ಕೆರೆ ವಿಜೇಂದ್ರ, ಗೋವಿಂದಯ್ಯ, ಜಿ.ಕೆ. ರಂಗನಾಥ್, ಸತ್ಯನಾರಾಯಣ, ಬಿ.ವಿ. ಜಯರಾಮೇಗೌಡ ,ವಿ.ಸಿ. ಚಂದ್ರೇಗೌಡ ,ಬೈ.ಪು. ಪ್ರಭುಸ್ವಾಮಿ, ಟಿ. ಚನ್ನಪ್ಪ , ಶಿವರಾಮ ಭಂಡಾರಿ , ಯು.ಸಿ.ಪ್ರವೀಣ್ ಕುಮಾರ್ ,ಡಾ. ಪವನ್ ಕುಮಾರ್, ಕೃಷ್ಣಮ್ಮ  ಸೋಮರಾಜು, ಡಾ. ರಾಜಶ್ರೀ .ಮಮತಾ ಲಕ್ಷ್ಮಣ್ ಗೌಡ , ಎಸ್ .ಪೂರ್ಣಿಮಾ, ಕುಸುಮಲತಾ ,ಪಾರ್ವತಮ್ಮ ಶಿವಪ್ಪ, ರೇಷ್ಮಾ, ರಾಧಿಕಾ ರವಿಕುಮಾರ್ ಗೌಡ   , ಶೈಲಜಾಶಿವಾನಂದ, ಪದ್ಮಾವತಿ ಮುತ್ತುರಾಜು , ,ಡಾ. ಸ್ಪೂರ್ತಿ , ಆಶಾಲತಾ ,ಚಂದ್ರಿಕಾ, ಪ್ರಮೀಳಾ ನಾಗರಾಜು, ಮೊದಲಾದವರು ಉಪಸ್ಥಿತರಿದ್ದರು .ಭಾರತ ವಿಕಾಸ್ ಪರಿಷತ್ ಕಣ್ವ ಶಾಖೆ ಮಹಿಳಾ ತಂಡದಿಂದ ಗೀತಕಾಯನ ಕಾರ್ಯಕ್ರಮ ನಡೆಯಿತು, ರಂಗಭೂಮಿ ಕಲಾವಿದರಿಂದ ರಂಗಗೀತೆ ಕಾರ್ಯಕ್ರಮ ನಡೆಯಿತು . ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ವಸಂತ್ ಕುುಮಾರ್ ರವರನ್ನು   ಸನ್ಮಾನಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ

ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ

ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ

ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:

ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ

 ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.

<

ರೋಟರಿ ಕ್ಲಬ್ ವತಿಯಿಂದ ಚಾರಣ
ರೋಟರಿ ಕ್ಲಬ್ ವತಿಯಿಂದ ಚಾರಣ

ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ  ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ

ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು   ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ

Top Stories »  


Top ↑