Tel: 7676775624 | Mail: info@yellowandred.in

Language: EN KAN

    Follow us :


ರೋಟರಿ ಕ್ಲಬ್ ವತಿಯಿಂದ ಚಾರಣ

Posted date: 25 Jul, 2023

Powered by:     Yellow and Red

ರೋಟರಿ ಕ್ಲಬ್ ವತಿಯಿಂದ ಚಾರಣ

ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆಗಿಂತಲೂ ಮಿಗಿಲೆಂದು ರೋಟರಿ ಟಾಯ್ಸ್ ಸಿಟಿಯ ನಿಕಟಪೂರ್ವ ಅಧ್ಯಕ್ಷ ಬೈ ಶ್ರೀನಿವಾಸ್ ಅಭಿಪ್ರಾಯಪಟ್ಟರು.

ರೋಟರಿ ಟಾಯ್ಸ್ ಸಿಟಿ ಕ್ಲಬ್ ವತಿಯಿಂದ ತಾಲೂಕಿನ ಇತಿಹಾಸ ಪ್ರಸಿದ್ದ ಮಾಕಳಿ ಹೊಸಹಳ್ಳಿಯ ಕೃಷ್ಣಗಿರಿ ಬೆಟ್ಟಕ್ಕೆ ಕೈಗೊಂಡಿದ್ದ ಚಾರಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಾವು ಕೋಟಿ ಕೋಟಿ ಸಂಪಾದಿಸಿದರೂ ಆರೋಗ್ಯ ಹದಗೆಟ್ಟರೇ ನಾವು ಸಂಪಾದಿಸಿರುವ ಎಲ್ಲಾ ಹಣವನ್ನು ಸುರಿದರೂ ಮತ್ತೇ ಆರೋಗ್ಯವನ್ನು ಕೊಂಡುಕೊಳ್ಳಲು ಸಾಧ್ಯವಾಗುವುದಿಲ್ಲ. ಹಾಗಾಗಿ ಕೆವಲ ಹಣ,ಹೆಸರು, ಕೀರ್ತಿ ಗಳಿಸುವುದರ ಜೊತೆಗೆ ಆರೋಗ್ಯ ಸಂಪತ್ತನ್ನು ಸಂಪಾದಿಸುವ ಕೆಲಸಕ್ಕೆ ನಾವೆಲ್ಲ ಮುಂದಾಗಬೇಕಿದೆ ಎಂದರು.


ಸಂಘ ಸಂಸ್ಥೆಗಳು ಕೇವಲ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಅವುಗಳ ಕಾರ್ಯವ್ಯಾಪ್ತಿ ಮುಗಿಯುವುದಿಲ್ಲ, ಬದಲಿಗೆ ಕುಟುಂಬ ಪರಿಕಲ್ಪನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ರೋಟರಿಯಲ್ಲಿನ ಕುಟುಂಬ ಸದಸ್ಯರುಗಳ ಆರೋಗ್ಯ ಸಹ ಬಹುಮುಖ್ಯವಾಗಿದ್ದು, ಆ ನಿಟ್ಟಿನಲ್ಲಿ ಪ್ರತಿವಾರ ಒಂದೂಂದು ಬೆಟ್ಟಗಳಿಗೆ ಚಾರಣ ಮಾಡಿಸುವ ಆ ಮೂಲಕ ನಮ್ಮ ಆರೋಗ್ಯವನ್ನು ಸಹ ಕಾಪಾಡಿಕೊಳ್ಳುವ ಕಾರ್ಯಕ್ಕೆ ಕ್ಲಬ್ ಮುಂದಾಗಿರುವುದಾಗಿ ತಿಳಿಸಿದರು.


ರೋಟರಿ ಕ್ಲಬ್ ಅಧ್ಯಕ್ಷ ಶೇಖರ್ ಲಾಡ್ ಮಾತನಾಡಿ ನಮ್ಮಲ್ಲಿ ಇದೊಂದು ಹೊಸ ರೀತಿಯ ಕಲ್ಪನೆಯಾಗಿದ್ದು, ಇಲ್ಲಿಯ ವರೆಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಮಾತ್ರ ಭಾಗಿಯಾಗುತ್ತಿದ್ದ ನಾವುಗಳು ಇದೀಗ ಕುಟುಂಬ ಸಮೇತ ಟ್ರಕ್ಕಿಂಗ್ ನಲ್ಲೂ ಭಾಗವಹಿಸುತ್ತಿರುವುದು ಹೊಸ ರೀತಿಯ ಖುಷಿಗೆ ಕಾರಣವಾಗಿದೆ ಎಂದರು.


ಚಾರಣದಲ್ಲಿ ಕಾರ್ಯದರ್ಶಿ ಚಕ್ಕೆರೆ ಯೋಗೇಶ್, ಕ್ಲಬ್ ಆಡ್ವೈಸರ್ ನಾಗೇಶ್, ನಿತಿನ್, ರಾಜೇಶ್, ಅಪ್ಪಾಜಿಗೌಡ, ಚಂದನ್, ಅರ್ಜುನ್, ತೇಜಶ್, ಮೋಹನ್, ಜಯರಾಮ್ ಸೇರಿದಂತೆ ಅನೇಕರು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ
ಸಂಸ್ಕೃತಿ ಎನ್ನುವುದೇ ನಡವಳಿಕೆ ಡಾ ಬಿ ಟಿ ನೇತ್ರಾವತಿಗೌಡ

ಚನ್ನಪಟ್ಟಣ: ಸಂಸ್ಕೃತಿ ಎಂಬುದೇ ನಡವಳಿಕೆ, ಆ ನಡವಳಿಕೆ ಎಂಬುದು ನಮ್ಮ ಮನೆಯಲ್ಲೇ ಆರಂಭವಾಗಬೇಕು, ನಾವು ನಮ್ಮ ಮಕ್ಕಳಿಗೆ ಬಾಲ್ಯದಲ್ಲಿ ಹೇಗೆ ವರ್ತಿಸಬೇಕು, ಯ

೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ
೨೯ರಂದು ಕರ್ನಾಟಕ ಬಂದ್, ಪಕ್ಷಾತೀತ, ಜಾತ್ಯಾತೀತ, ಧರ್ಮಾತೀತವಾಗಿ ಒಗ್ಗೂಡಿ ಚನ್ನಪಟ್ಟಣ ಬಂದ್ ಗೆ ಕರೆ

ಚನ್ನಪಟ್ಟಣ: ಮಂಗಳವಾರ ಅಥವಾ ಗುರುವಾರದಂದು ಚನ್ನಪಟ್ಟಣ ಬಂದ್ ಗೆ ಕರೆ ನೀಡಲು ಉದ್ದೇಶಿಸಲಾಗಿದ್ದು, ೨೯ನೇ ತಾರೀಖಿನ ಶುಕ್ರವಾರ ಕರ್ನಾಟಕ ಬಂದ್ ಆಚ

ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ
ಸೆ.30 ರವರೆಗೆ ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಉಪನೋಂದಣಾಧಿಕಾರಿಗಳ ಕಚೇರಿ ಕಾರ್ಯನಿರ್ವಹಣೆ

ಬೆಂಗಳೂರು:ಸೆ.22: ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾ

ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ
ಅಮೇರಿಕಾದ ಖ್ಯಾತ ವೈದ್ಯ ಡಾ ಹೆಚ್ ಕೆ ಮರಿಯಪ್ಪ ರವರಿಗೆ ಗುರುವಾರ ಅಭಿನಂದನೆ

ಚನ್ನಪಟ್ಟಣ: ತಾಲ್ಲೂಕಿನ ಅವ್ವೇರಹಳ್ಳಿ ಗ್ರಾಮದ ಸ್ವಾತಂತ್ರ್ಯ ಹೋರಾಟಗಾರ ಹೆಚ್ ಕೆ ವೀರಣ್ಣಗೌಡ ರ ಸಹೋದರ ಡಾ.ಎಚ್.ಕೆ. ಮರಿಯಪ್ಪ ಅಭಿನಂದನಾ ಸಮಿತ

ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:
ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿ:

ರಾಮನಗರ; ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಗೆ ಸಂಬಂಧಪಟ್ಟ ಉಪ ನೋಂದಣಿ ಕಚೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು

ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ
ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆ ಶವವಾಗಿ ಪತ್ತೆ

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಬೆಳೆದಿದ್ದ ಬೆಳೆಗೆ ನೀರು ಹಾಯಿಸಲು ಹೋಗಿದ್ದ ಮಹಿಳೆಯೊಬ್ಬರು ಅವರದೇ ಹೊಲದ ಪೈಪು ಹೂಳಲು ತೆಗೆದಿದ್ದ ಕಾಲುವೆಯಲ್ಲಿ ಶವವಾಗಿ

ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ
ಆಹಾರ ಇಲ್ಲದೆ ಎರಡು ದಿನ ಬದುಕಬಹುದು, ನೀರಿಲ್ಲದೆ ಬದುಕುವುದು ಕಷ್ಟ, ತಾಪಂ ಇಓ

 ಚನ್ನಪಟ್ಟಣ: ಒಂದೆರಡು ದಿನ ಆಹಾರವಿಲ್ಲದಿದ್ದರೂ ಮನುಷ್ಯ ಬದುಕುತ್ತಾನೆ ಆದರೆ, ನೀರಿಲ್ಲದೇ ಬದುಕಲಾರ. ಆದ್ದರಿಂದ ಜನರಿಗೆ ಶುದ್ಧನೀರು ಪೂರೈಕೆ ಮಾಡುವುದು ನ

ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ
ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಮಾರಮ್ಮನ ಹಬ್ಬ

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮದಲ್ಲಿ ಮಂಗಳವಾರ ಮಾರಮ್ಮನ ಹಬ್ಬ ಭಕ್ತಿಭಾವದಿಂದ ನೆರವೇರಿತು.

<

ರೋಟರಿ ಕ್ಲಬ್ ವತಿಯಿಂದ ಚಾರಣ
ರೋಟರಿ ಕ್ಲಬ್ ವತಿಯಿಂದ ಚಾರಣ

ಚನ್ನಪಟ್ಟಣ : ಜಂಜಾಟದ ಬದುಕಿನಲ್ಲಿ ಮನಷ್ಯರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಎರಡು ಬಹು ಪ್ರಮುಖವಾಗಿದ್ದು ಇವುಗಳನ್ನು ಕಾಪಾಡಿಕೊಳ್ಳುವುದು ಕೋಟಿ ಸಂಪಾದನೆ

ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ  ಪ್ರೊ. ಜಯಪ್ರಕಾಶ್ ಗೌಡ ಅಭಿಮತ
ಸೇವೆಯ ಮೂಲಕ ಜೀವನ ಸಾರ್ಥಕ ಪಡಿಸಿಕೊಳ್ಳಿ ನಿವೃತ್ತ ಶಿಕ್ಷಕ ವಸಂತ್ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಪ್ರೊ. ಜಯಪ್ರಕಾಶ್ ಗೌಡ ಅಭಿಮತ

ಚನ್ನಪಟ್ಟಣ: ಜನ ಮೆಚ್ಚುವಂತಹ ಹಾಗೂ ಶಾಶ್ವತವಾಗಿ ಉಳಿಯುವಂತಹ ಒಳ್ಳೆಯ ಸೇವಾ ಕೆಲಸಗಳನ್ನು ಮಾಡಿ ನಮ್ಮ ಜೀವನವನ್ನು   ಸಾರ್ಥಕ ಪಡಿಸಿಕೊಳ್ಳಬೇಕು ಎಂದು ಮಂಡ್ಯ

Top Stories »  


Top ↑