Tel: 7676775624 | Mail: info@yellowandred.in

Language: EN KAN

    Follow us :


ತೌಟನಹಳ್ಳಿ ಬಳಿ ಹತ್ತಾರು ಎಕರೆ ಸರ್ಕಾರಿ ಗುಡ್ಡೆ, ದಲಿತರ ಜಮೀನು ಒತ್ತುವರಿ ಮಾಡಿದ ಬಿಜೆಪಿ ಮುಖಂಡ, ಕ್ರಮಕ್ಕೆ ಆಗ್ರಹ

Posted date: 07 Nov, 2023

Powered by:     Yellow and Red

ತೌಟನಹಳ್ಳಿ ಬಳಿ ಹತ್ತಾರು ಎಕರೆ ಸರ್ಕಾರಿ ಗುಡ್ಡೆ, ದಲಿತರ ಜಮೀನು ಒತ್ತುವರಿ ಮಾಡಿದ ಬಿಜೆಪಿ ಮುಖಂಡ, ಕ್ರಮಕ್ಕೆ ಆಗ್ರಹ

ಚನ್ನಪಟ್ಟಣ: ತಾಲ್ಲೂಕಿನ ಮಳೂರು ಹೋಬಳಿ ಯ ತೌಟನಹಳ್ಳಿ ಗ್ರಾಮದ ಸರ್ವೇ ನಂಬರ್ ೭೪ ರಲ್ಲಿ ೧೭೦ ಎಕರೆ ಸರ್ಕಾರಿ ಜಮೀನು ಇದ್ದು, ಸ್ಥಳೀಯ ರೈತರ ಜಾನುವಾರುಗಳಿಗೆ ಹಾಗೂ ಕಾಡು ಪ್ರಾಣಿಗಳಿಗೆ ಆಶ್ರಯ ತಾಣವಾಗಿತ್ತು. ಜೊತೆಗೆ ಸಮೃದ್ಧವಾಗಿ ಬೆಳೆದು ನಿಂತಿದ್ದ ವಿವಿಧ ಜಾತಿಯ ಗಿಡ-ಮರಗಳಿಂದ ವಾತಾವರಣಕ್ಕೂ ಪೂರಕವಾಗಿತ್ತು. ಇಂತಹ ಸರ್ಕಾರಿ ಗುಡ್ಡೆಯನ್ನು ಹಾಗೂ ಸ್ಥಳೀಯ ದಲಿತರ ಜಮೀನುಗಳನ್ನು ತೌಟನಹಳ್ಳಿ ಗ್ರಾಮದ ಬಿಜೆಪಿ ಮುಖಂಡ ಪ್ರಶಾಂತ್ ಟಿ ಪಿ ಎಂಬ ವ್ಯಕ್ತಿ ಒತ್ತುವರಿ ಮಾಡಿಕೊಂಡಿದ್ದಾನೆ ಎಂದು ಭೂಮಿ ಕಳೆದುಕೊಂಡ ದಲಿತರು ಹಾಗೂ ಗ್ರಾಮದ ಕೆಲ ಮುಖಂಡರು ದೂರಿದ್ದಾರೆ.


ತೌಟನಹಳ್ಳಿ, ಕನ್ನಸಂದ್ರ ಗ್ರಾಮಕ್ಕೆ ಹೊಂದಿಕೊಂಡಿರುವ ಸರ್ವೇ ನಂಬರ್ ೭೪ ರಲ್ಲಿ ೧೭೦ ಎಕರೆ ಭೂಮಿ ಇದ್ದು, ೧೩೮/೧ ರಲ್ಲಿ ೨೬ ಗುಂಟೆ ೧೩೮/೨ ರಲ್ಲಿ ೨೭ ಗುಂಟೆ, ೧೩೯/೩ ರಲ್ಲಿ ೨೭ ಗುಂಟೆ ಮತ್ತು ೧೩೯ ರ ಸರ್ವೇ ನಂಬರ್ ನಲ್ಲಿ ೨ ಎಕರೆ ಜಮೀನನ್ನು ತೌಟನಹಳ್ಳಿ ಗ್ರಾಮದ ದಲಿತರಿಗೆ ೧೯೬೪ ರಲ್ಲಿ ಮಂಜೂರಾಗಿದೆ. ಅದೇ ಭೂಮಿಯಲ್ಲಿ ಸಯ್ಯದ್ ಅಬಾಜ್ ಎಂಬುವವರಿಗೆ ಸೇರಿದ ಸರ್ವೇ ನಂಬರ್ ೧೩೯ ರಲ್ಲಿ ೩೦ ಗುಂಟೆ ಜಮೀನು ಇದ್ದು ಆ ಜಮೀನನ್ನು ಪ್ರಶಾಂತ್ ಟಿ ಪಿ ರವರು ಈ ವರ್ಷದ ಆರಂಭದಲ್ಲಿ ಖರೀದಿಸಿದ್ದು, ಈ ಮೇಲಿನ ದಲಿತರ ಜಮೀನುಗಳನ್ನು ಒತ್ತುವರಿ ಮಾಡಿಕೊಂಡು, ೭೪ ರ ಸರ್ವೇ ನಂಬರಿನಲ್ಲಿರುವ ಸರ್ಕಾರಿ ಗುಡ್ಡೆಯಲ್ಲಿ ಹತ್ತಕ್ಕೂ ಹೆಚ್ಚು ಎಕರೆ ಜಮೀನನ್ನು ಜೆಸಿಬಿ ಮೂಲಕ ಗಿಡಮರಗಳನ್ನು ಉರುಳಿಸಿ, ಮಟ್ಟ ಮಾಡಿಕೊಂಡಿದ್ದಾರೆ.


ದಲಿತರಾದ ಕುನ್ನಯ್ಯ, ವೆಂಕಟಯ್ಯ ಮತ್ತು ಮರಿದಾಸಯ್ಯ ಎಂಬುವವರ ತಂದೆಯವರಾದ ಕರಿಯಯ್ಯ ರವರಿಗೆ ಹಾಗೂ ತಿಮ್ಮಯ್ಯ ರವರಿಗೆ ಸರ್ಕಾರದಿಂದ ಮಂಜೂರಾದ ಭೂಮಿಯಾಗಿದ್ದು, ವ್ಯವಸಾಯ ಮಾಡಿಕೊಂಡಿದ್ದರು. ಮಾವಿನ ಮರಗಳು ಸೇರಿದಂತೆ ವಿವಿಧ ಜಾತಿಯ ಮರಗಳನ್ನು ಬೆಳೆಸಲಾಗಿತ್ತು. ಕೇವಲ ೩೦ ಗುಂಟೆ ಜಮೀನನ್ನು ವರ್ಷದ ಆರಂಭದಲ್ಲಿ ಖರೀದಿ ಮಾಡಿದ್ದು, ದಲಿತರ ಜಮೀನು ಒತ್ತುವರಿ ಜೊತೆಗೆ ಸರ್ಕಾರಿ ಗುಡ್ಡೆಯ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾನೆ. ವಿಚಿತ್ರವೆಂದರೆ ಮೂಲತಃ ಸರ್ವೇ ನಂಬರ್ ೭೪ ರಿಂದ ೧೩೮ ಮತ್ತು ೧೩೯ ಆಗಿದ್ದು, ಪ್ರಶಾಂತ್ ಟಿ ಪಿ ಖರೀದಿಸಿರುವ ೩೦ ಗುಂಟೆ ಜಮೀನಿಗೆ ೧೫೮ ಆಗಿರುವುದು ಸಖೇದಾಶ್ಚರ್ಯವಾಗಿದೆ. ಕಾರಣ ೧೫೮ ರ ಸರ್ವೇ ನಂಬರ್ ಹೊನ್ನನಾಯಕನಹಳ್ಳಿ ಗ್ರಾಮದ ಸರ್ವೇ ನಂಬರ್ ಆಗಿದೆ. ಅಲ್ಲಿಯ ಸರ್ವೇ ನಂಬರ್ ಭೂಮಿಯನ್ನು ಇಲ್ಲಿ ಎಂದು ತೋರಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆಶ್ಚರ್ಯ ವ್ಯಕ್ತಪಡಿಸುತ್ತಾರೆ.


ಈ ಸಂಬಂಧ ತಮ್ಮ ಜಮೀನಿನಲ್ಲೇ ಹೇಳಿಕೆ ನೀಡಿದ ದಲಿತರು, ಐದಾರು ದಶಕಗಳಿಂದ ನಮ್ಮ ಪೂರ್ವಜರು, ನಾವುಗಳು ವ್ಯವಸಾಯ ಮಾಡಿಕೊಂಡು ಬರುತ್ತಿದ್ದೇವೆ. ಸರ್ಕಾರಕ್ಕೂ ಅರ್ಜಿ ನೀಡಿದ್ದೇವೆ. ಪ್ರಶಾಂತ್ ಟಿ ಪಿ ರವರು ದರ್ಪದಿಂದ ನಮ್ಮೆಲ್ಲರಿಗೂ ಬೆದರಿಕೆ ಹಾಕಿ, ನಮ್ಮ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಜೊತೆಗೆ ಹತ್ತು ಎಕರೆಗೂ ಹೆಚ್ಚು ಸರ್ಕಾರಿ ಗುಡ್ಡೆಯಲ್ಲಿದ್ದ ಗಿಡ-ಮರಗಳನ್ನು ಮಾರಣಹೋಮ ಮಾಡಿ, ಜಮೀನು ಕಬಳಿಸಿದ್ದಾರೆ. ಕೇಳಿದರೆ ಕೊಟ್ಟಷ್ಟು ತೆಗೆದುಕೊಂಡು ಸಹಿ ಮಾಡಿ, ಇಲ್ಲದಿದ್ದರೆ ಯಾವುದೋ ಪ್ರಾಣಿ ತಿಂದು ಹಾಕಿದೆ ಎನ್ನುವಂತೆ ಮಾಡಿಬಿಡುತ್ತೇನೆ ಎಂದು ಧಮಕಿ ಹಾಕುತ್ತಾರೆ. ಗುಡ್ಡೆ ಒತ್ತುವರಿ ಮಾಡಿರುವುದರಿಂದ ಚಿರತೆಗಳು ಗ್ರಾಮದೊಳಗೆ ಬರುತ್ತಿವೆ. ಜೀವಜಲ, ಪ್ರಾಣಿ, ಪಕ್ಷಿ ಸಂಕುಲಗಳಿಗೆ ತೊಂದರೆಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವಾಗಿ ಪರಿಶೀಲನೆ ನಡೆಸಿ, ನಮ್ಮ ಜಮೀನನ್ನು ನಮಗೆ ಕೊಡಿಸಬೇಕು. ಸರ್ಕಾರಿ ಗುಡ್ಡೆ ಒತ್ತುವರಿ ಮಾಡಿರುವ ಪ್ರಶಾಂತ್ ಟಿ ಪಿ ರವರಿಗೆ ಕಾನೂನು ಕ್ರಮ ಕೈಗೊಂಡು ದಂಡ ವಿಧಿಸಬೇಕು, ಪಹಣಿ ಜಮೀನಿನಲ್ಲಿ, ಅವನಿಗೆ ಅನುಕೂಲವಾಗುವಂತೆ ನರೇಗಾ ಕಾಮಗಾರಿಯಲ್ಲಿ ರಸ್ತೆ ನಿರ್ಮಿಸಿಕೊಂಡಿದ್ದಾರೆ. ಇದರ ಬಗ್ಗೆಯೂ ಸಂಬಂಧಿಸಿದ ಅಧಿಕಾರಿಗಳ ವಿಚಾರಣೆ ನಡೆಸಬೇಕು. ಈಗಾಗಲೇ ಜನತಾ ದರ್ಶನ ದಲ್ಲಿ ಜಿಲ್ಲಾಧಿಕಾರಿಗಳಿಗೆ ಹಾಗೂ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ ಯವರಿಗೆ ಲಿಖಿತವಾಗಿ ಮನವಿ ಸಲ್ಲಿಸಿದ್ದು ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.


*ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇನೆ, ತಹಶಿಲ್ದಾರ್*

ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಶಾಸಕರು ಈಗಾಗಲೇ ಸೂಚನೆ ನೀಡಿದ್ದಾರೆ. ದಾಖಲೆಗಳನ್ನು ಪರಿಶೀಲನೆ ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಶೀಘ್ರವಾಗಿ ನಾನೇ ತೆರಳಿ, ಪರಿಶೀಲನೆ ನಡೆಸಿ, ತಪ್ಪಿತಸ್ಥರೆಂದು ಕಂಡುಬಂದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕಾನೂನು ಕ್ರಮ ಜರುಗಿಸುತ್ತೇನೆ.

*ಮಹೇಂದ್ರ, ತಹಶಿಲ್ದಾರ್ ಚನ್ನಪಟ್ಟಣ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಕನ್ನಡದ ಕಟ್ಟಾಳು, ಸಹಕಾರಿ ಧುರೀಣ ಸಿಂ ಲಿಂ ನಾಗರಾಜು ಸ್ಮರಣ ಕಾರ್ಯಕ್ರಮ
ಕನ್ನಡದ ಕಟ್ಟಾಳು, ಸಹಕಾರಿ ಧುರೀಣ ಸಿಂ ಲಿಂ ನಾಗರಾಜು ಸ್ಮರಣ ಕಾರ್ಯಕ್ರಮ

ಚನ್ನಪಟ್ಟಣ:  ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸಿಂ.ಲಿಂ.ನಾಗರಾಜು ಅವರು ವಯಕ್ತಿಕವಾಗಿ ಹಾಗೂ

ಕೌಟುಂಬಿಕವಾಗಿ ತಮಗೆ ಏ

ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ
ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ

ರಾಮನಗರ/ಚನ್ನಪಟ್ಟಣ:ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ೨೦೨೦ ೨೦೨೧ ಹಾಗೂ ೨೦೨೨ ನೇ ಸಾಲಿನ "ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ ಪ್ರಶ

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್, ಡಿಪೋ ತಡೆಗೋಡೆಗೆ ಢಿಕ್ಕಿ
ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್, ಡಿಪೋ ತಡೆಗೋಡೆಗೆ ಢಿಕ್ಕಿ

ಚನ್ನಪಟ್ಟಣ: ಇತ್ತೀಚೆಗೆ ತಾಲ್ಲೂಕಿನಾದ್ಯಂತ ಸಾರಿಗೆ ಬಸ್ಸುಗಳ ಅಪಘಾತ ಹೆಚ್ಚಾಗುತ್ತಿದ್ದು, ಅಮಾಯಕರ ಪ್ರಾಣವನ್ನು ಬಲಿ ಪಡೆಯುತ್ತಿವೆ. ರಸ್ತೆಯ ಮೇಲೆ ಸಂಚರಿ

ದೀಪಾವಳಿ ನೆಪದಲ್ಲಿ ಅನಾಥವಾದ ನೆಹರು/ಮಕ್ಕಳ ಜಯಂತಿ
ದೀಪಾವಳಿ ನೆಪದಲ್ಲಿ ಅನಾಥವಾದ ನೆಹರು/ಮಕ್ಕಳ ಜಯಂತಿ

ರಾಮನಗರ: ಇಂದು ನವೆಂಬರ್ ೧೪ ಮಕ್ಕಳ ದಿನಾಚರಣೆ, ಚಾಚಾಜಿ ಅಡ್ಡ ಹೆಸರಿನ ಸ್ವತಂತ್ರ ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ರವರ ಹೆಸರಿನಲ್ಲಿ ರ

ಸಾರಿಗೆ ಬಸ್ ಸ್ಟಿಯರಿಂಗ್ ಕಟ್, ಸ್ಕೂಟರ್ ಗೆ ಢಿಕ್ಕಿ ಇಬ್ಬರ ಸಾವು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಪಾರು
ಸಾರಿಗೆ ಬಸ್ ಸ್ಟಿಯರಿಂಗ್ ಕಟ್, ಸ್ಕೂಟರ್ ಗೆ ಢಿಕ್ಕಿ ಇಬ್ಬರ ಸಾವು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಪಾರು

ಚನ್ನಪಟ್ಟಣ: ನಗರಕ್ಕೆ ಹೊಂದಿಕೊಂಡಿರುವ ತಿಟ್ಟಮಾರನಹಳ್ಳಿ ಗ್ರಾಮದ ನಡುವಿನ ರಾಮಮ್ಮ ನ ಕೆರೆ ಏರಿಯ ಮೇಲೆ ಸೋಮವಾರ ಮುಂಜಾನೆ ಸಾರಿಗೆ ಬಸ್ ಮತ್ತು ಸ್ಕೂಟರ್ ನಡ

ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ
ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ

ಚನ್ನಪಟ್ಟಣ:ನಗರದ ನ್ಯಾಯಾಲಯದಲ್ಲಿರುವ ವಕೀಲರ ಸಂಘದ ಕಛೇರಿಯಲ್ಲಿ ತಾಲ್ಲೂಕು ವಕೀಲರ ಸಂಘದ ಚುನಾವಣೆಯು ಶನಿವಾರ ಜರುಗಿದ್ದು ಅತ್ಯಧಿಕ ಮತಗಳನ್ನು ಪಡೆಯುವ ಮೂಲ

ತೌಟನಹಳ್ಳಿ ಬಳಿ ಹತ್ತಾರು ಎಕರೆ ಸರ್ಕಾರಿ ಗುಡ್ಡೆ, ದಲಿತರ ಜಮೀನು ಒತ್ತುವರಿ ಮಾಡಿದ ಬಿಜೆಪಿ ಮುಖಂಡ, ಕ್ರಮಕ್ಕೆ ಆಗ್ರಹ
ತೌಟನಹಳ್ಳಿ ಬಳಿ ಹತ್ತಾರು ಎಕರೆ ಸರ್ಕಾರಿ ಗುಡ್ಡೆ, ದಲಿತರ ಜಮೀನು ಒತ್ತುವರಿ ಮಾಡಿದ ಬಿಜೆಪಿ ಮುಖಂಡ, ಕ್ರಮಕ್ಕೆ ಆಗ್ರಹ

ಚನ್ನಪಟ್ಟಣ: ತಾಲ್ಲೂಕಿನ ಮಳೂರು ಹೋಬಳಿ ಯ ತೌಟನಹಳ್ಳಿ ಗ್ರಾಮದ ಸರ್ವೇ ನಂಬರ್ ೭೪ ರಲ್ಲಿ ೧೭೦ ಎಕರೆ ಸರ್ಕಾರಿ ಜಮೀನು ಇದ್ದು, ಸ್ಥಳೀಯ ರೈತರ ಜಾನುವಾರುಗಳಿಗೆ

ಹಲವು ಎಡವಟ್ಟುಗಳೊಂದಿಗೆ ರಾಜ್ಯೋತ್ಸವ ಆಚರಿಸಿದ ತಾಲ್ಲೂಕು ಆಡಳಿತ
ಹಲವು ಎಡವಟ್ಟುಗಳೊಂದಿಗೆ ರಾಜ್ಯೋತ್ಸವ ಆಚರಿಸಿದ ತಾಲ್ಲೂಕು ಆಡಳಿತ

ಚನ್ನಪಟ್ಟಣ: ಚನ್ನಪಟ್ಟಣ ನಗರ ಮತ್ತು ತಾಲ್ಲೂಕು ಕೇಂದ್ರವೂ ಪುರಾಣ, ಇತಿಹಾಸ, ಚಳವಳಿ ಸೇರಿದಂತೆ ಅನೇಕ ವಿಚಾರಗಳಲ್ಲಿ ಸ್ವಾತಂತ್ರ್ಯ ಪೂರ್ವ ಹಾಗೂ

ಕಾಡಂಕನಹಳ್ಳಿ ಗ್ರಾಮದಲ್ಲಿ ವೃದ್ದನಿಗೆ ಢಿಕ್ಕಿ ಹೊಡೆದ ಬೈಕ್, ಪಾದಚಾರಿ ಸಾವು
ಕಾಡಂಕನಹಳ್ಳಿ ಗ್ರಾಮದಲ್ಲಿ ವೃದ್ದನಿಗೆ ಢಿಕ್ಕಿ ಹೊಡೆದ ಬೈಕ್, ಪಾದಚಾರಿ ಸಾವು

ಚನ್ನಪಟ್ಟಣ: ತಾಲ್ಲೂಕಿನ ಕಾಡಂಕನಹಳ್ಳಿ ಗ್ರಾಮದ ೬೫ ವರ್ಷದ ಶಿವಮಾದೇಗೌಡ ಎಂಬ ವ್ಯಕ್ತಿಯು ವ್ಯವಸಾಯಗಾರನಾಗಿದ್ದು, ಹೈನುಗಾರಿಕೆ ಮಾಡಿಕೊಂಡಿದ್ದರು. ಪ್ರತಿದಿ

ಪೋಲಿಸರು ಕೆಲಸದ ಒತ್ತಡದ ನಡುವೆ ಆರೋಗ್ಯ ಮತ್ತು ಕುಟುಂಬಕ್ಕೂ ಒತ್ತು ನೀಡಿ, ಜಿಲ್ಲಾಧಿಕಾರಿ
ಪೋಲಿಸರು ಕೆಲಸದ ಒತ್ತಡದ ನಡುವೆ ಆರೋಗ್ಯ ಮತ್ತು ಕುಟುಂಬಕ್ಕೂ ಒತ್ತು ನೀಡಿ, ಜಿಲ್ಲಾಧಿಕಾರಿ

ಚನ್ನಪಟ್ಟಣ: ಪೋಲಿಸರು ಜನರ ರಕ್ಷಣೆಗಾಗಿ ಸದಾ ಒತ್ತಡದ ಮಧ್ಯೆ ಕರ್ತವ್ಯ ನಿರ್ವಹಿಸುತ್ತಾರೆ. ಇದರ ನಡುವೆಯೂ ಪೊಲೀಸರು ತಮ್ಮ ಆರೋಗ್ಯ ಹಾಗೂ ಕುಟುಂಬದ ಕು

Top Stories »  


Top ↑