ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ

ಚನ್ನಪಟ್ಟಣ:ನಗರದ ನ್ಯಾಯಾಲಯದಲ್ಲಿರುವ ವಕೀಲರ ಸಂಘದ ಕಛೇರಿಯಲ್ಲಿ ತಾಲ್ಲೂಕು ವಕೀಲರ ಸಂಘದ ಚುನಾವಣೆಯು ಶನಿವಾರ ಜರುಗಿದ್ದು ಅತ್ಯಧಿಕ ಮತಗಳನ್ನು ಪಡೆಯುವ ಮೂಲಕ ಟಿ ವಿ ಗಿರೀಶ್ ಆಯ್ಕೆಯಾದರು. ಎರಡು ವರ್ಷಕ್ಜೊಮ್ಮೆ ನಡೆಯುವ ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷ ಗಾದಿಗೆ ನಾಲ್ಕು ಮಂದಿ, ಉಪಾಧ್ಯಕ್ಷ ಗಾದಿಗೆ ಇಬ್ಬರು, ಕಾರ್ಯದರ್ಶಿ ಗಾದಿಗೆ ಮೂವರು ಹಾಗೂ ಖಜಾಂಚಿ ಸ್ಥಾನಕ್ಕೆ ಇಬ್ಬರು ಸ್ಪರ್ಧೆ ಮಾಡಿದ್ದು ಟಿ ವಿ ಗಿರೀಶ್ ೯೨ ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟಿ ವಿ ಗಿರೀಶ್ ಮಾತನಾಡಿ ಅಧ್ಯಕ್ಷ ಗಾದಿಗೆ ಒಟ್ಟು ಮೂರು ಬಾರಿ ಸ್ಪರ್ಧೆ ಮಾಡಿದ್ದು, ಎರಡನೇ ಅವಧಿಯಲ್ಲಿ ಒಮ್ಮೆ ಕೇವಲ ಒಂದು ಮತದಿಂದ ಸೋಲನ್ನು ಅನುಭವಿಸಿದ್ದೆ, ಮೊದಲ ಮತ್ತು ಮೂರನೇ ಬಾರಿ ಜಯಭೇರಿ ಬಾರಿಸಿದ್ದು, ಬೆಂಬಲಿಸಿದ ಎಲ್ಲಾ ವಕೀಲರಿಗೂ ವಂದಿಸುತ್ತೇನೆ. ನನ್ನ ಅಧ್ಯಕ್ಷ ಅವಧಿಯಲ್ಲಿ ವಕೀಲರಿಗೆ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸುವುದು ನನ್ನ ಪ್ರಥಮ ಗುರಿಯಾಗಿದೆ. ಪದಾಧಿಕಾರಿಗಳು ಹಾಗೂ ಎಲ್ಲಾ ವಕೀಲರನ್ನು ಒಗ್ಗೂಡಿಸಿ ಗ್ರಂಥಾಲಯ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಅಭಿವೃದ್ಧಿ ಪಡಿಸಲಾಗುವುದು ಎಂದರು.
ಚನ್ನಪಟ್ಟಣ ದಲ್ಲಿ ೧೯೮೭ ರಲ್ಲಿ ನ್ಯಾಯಾಲಯ ಆರಂಭವಾಗಿದ್ದು, ಹಿರಿಯ ವಕೀಲರಾದ ಆರ್ ಟಿ ಕೃಷ್ಣ ರವರ ನೇತೃತ್ವದಲ್ಲಿ ಆರಂಭವಾದ ವಕೀಲರ ಸಂಘಕ್ಕೆ ಇಲ್ಲಿಯವರೆಗೆ ಯಾವುದೇ ಮಹಿಳಾ ವಕೀಲರು ಅಧ್ಯಕ್ಷ ಗಾದಿಗೆ ಸ್ಪರ್ಧಿಸಿರಲಿಲ್ಲ. ಇದೇ ಪ್ರಥಮ ಬಾರಿಗೆ ಕಳೆದ ಬಾರಿ ಉಪಾಧ್ಯಕ್ಷರಾಗಿದ್ದ ಅಂಬಿಕಾ ರವರು ೪೩ ಮಹಿಳಾ ವಕೀಲರ ಜೊತೆಗೆ ಎಲ್ಲಾ ವಕೀಲರ ಬೆಂಬಲ ಸಿಗಬಹುದು ಎಂಬ ಹಿನ್ನೆಲೆಯಲ್ಲಿ ಸ್ಪರ್ಧಿಸಿದ್ದು, ಕೇವಲ ೧೮ ಮತಗಳನ್ನು ಪಡೆದು ಪರಾಜಿತರಾದರು. ಉಳಿದಂತೆ ಜೆ ಟಿ ಪ್ರಕಾಶ್ ೧೧ ಹಾಗೂ ವೆಂಕಟೇಶ್ ೦೩ ಮತಗಳನ್ನು ಪಡೆದು ಪರಾಜಿತರಾದರು.
ಉಪಾಧ್ಯಕ್ಷ ಸ್ಥಾನಕ್ಕೆ ಇಬ್ಬರು ಸ್ಪರ್ಧಿಸಿದ್ದು, ಎಸ್ ಬಿ ಧನಂಜಯ ೬೪ ಮತಗಳನ್ನು ಪಡೆದು ವಿಜಯಶಾಲಿಯಾದರೆ, ರಂಗಸ್ವಾಮಿ ೫೯ ಮತಗಳನ್ನು ಪಡೆದು ಪರಾಜಿತರಾದರು.
ಕಾರ್ಯದರ್ಶಿ ಸ್ಥಾನಕ್ಕೆ ಮೂರು ಮಂದಿ ಸ್ಪರ್ಧಿಸಿದ್ದು, ದೇವರಾಜು ೬೩ ಮತಗಳನ್ನು ಪಡೆದು ಜಯಶಾಲಿಯಾದರೆ, ವಸಂತಕುಮಾರ್ ೪೦ ಮತಗಳು ಹಾಗೂ ಎಲ್ ಶಿವರಾಜು ೧೮ ಮತಗಳನ್ನು ಪಡೆದರು.
ಖಜಾಂಚಿ ಸ್ಥಾನಕ್ಕೆ ಈರ್ವರು ಸ್ಪರ್ಧೆ ಮಾಡಿದ್ದು, ಹೇಮಂತ್ ೬೭ ಮತಗಳನ್ನು ಪಡೆದು ಬೀಗಿದರೆ ಹನುಮಂತಯ್ಯ ೫೩ ಮತಗಳನ್ನು ಪಡೆದು ಸೋಲೊಪ್ಪಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಒಟ್ಟು ೧೨೮ ಮತದಾರರ ಪೈಕಿ ಮೂವರು ಗೈರಾಗಿದ್ದು, ೧೨೫ ಮಂದಿ ಮತ ಚಲಾಯಿಸಿದರು. ಚುನಾವಣಾಧಿಕಾರಿಗಳಾಗಿ ಬಿ ಶಿವರಾಜೇಗೌಡ, ಎಲ್ ಸತೀಶ್, ಎಸ್ ಗಂಗಾಧರ್ ಮತ್ತು ಸಿ ಸುಕನ್ಯಾ ಕಾರ್ಯನಿರ್ವಹಿಸಿದರು. ಗೆದ್ದ ಅಭ್ಯರ್ಥಿಗಳನ್ನು ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ಸಂಘಸಂಸ್ಥೆಗಳ ಪದಾಧಿಕಾರಿಗಳು ಅಭಿನಂದಿಸಿದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara-district »

ಕನ್ನಡದ ಕಟ್ಟಾಳು, ಸಹಕಾರಿ ಧುರೀಣ ಸಿಂ ಲಿಂ ನಾಗರಾಜು ಸ್ಮರಣ ಕಾರ್ಯಕ್ರಮ
ಚನ್ನಪಟ್ಟಣ: ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಸಿಂ.ಲಿಂ.ನಾಗರಾಜು ಅವರು ವಯಕ್ತಿಕವಾಗಿ ಹಾಗೂ
ಕೌಟುಂಬಿಕವಾಗಿ ತಮಗೆ ಏ

ಬುಧವಾರ ಕೆಆರ್ ಪೇಟೆಯಲ್ಲಿ ನಡೆಯುವ ಕಸಾಪ ದತ್ತಿ ಪ್ರಶಸ್ತಿ ಸ್ವೀಕರಿಸಲಿರುವ ಜಿಲ್ಲೆಯ ಜಾನಪದ ಕಲಾವಿದೆ ಲಕ್ಷ್ಮಿ ಶ್ರೀನಿವಾಸ
ರಾಮನಗರ/ಚನ್ನಪಟ್ಟಣ:ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ೨೦೨೦ ೨೦೨೧ ಹಾಗೂ ೨೦೨೨ ನೇ ಸಾಲಿನ "ದಿ. ಶ್ರೀಮತಿ ತಾಯಮ್ಮ ಎಸ್.ಸಿ. ಮಲ್ಲಯ್ಯ ಜಾನಪದ ದತ್ತಿ ಪ್ರಶ

ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್, ಡಿಪೋ ತಡೆಗೋಡೆಗೆ ಢಿಕ್ಕಿ
ಚನ್ನಪಟ್ಟಣ: ಇತ್ತೀಚೆಗೆ ತಾಲ್ಲೂಕಿನಾದ್ಯಂತ ಸಾರಿಗೆ ಬಸ್ಸುಗಳ ಅಪಘಾತ ಹೆಚ್ಚಾಗುತ್ತಿದ್ದು, ಅಮಾಯಕರ ಪ್ರಾಣವನ್ನು ಬಲಿ ಪಡೆಯುತ್ತಿವೆ. ರಸ್ತೆಯ ಮೇಲೆ ಸಂಚರಿ

ದೀಪಾವಳಿ ನೆಪದಲ್ಲಿ ಅನಾಥವಾದ ನೆಹರು/ಮಕ್ಕಳ ಜಯಂತಿ
ರಾಮನಗರ: ಇಂದು ನವೆಂಬರ್ ೧೪ ಮಕ್ಕಳ ದಿನಾಚರಣೆ, ಚಾಚಾಜಿ ಅಡ್ಡ ಹೆಸರಿನ ಸ್ವತಂತ್ರ ಭಾರತದ ಪ್ರಪ್ರಥಮ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ರವರ ಹೆಸರಿನಲ್ಲಿ ರ

ಸಾರಿಗೆ ಬಸ್ ಸ್ಟಿಯರಿಂಗ್ ಕಟ್, ಸ್ಕೂಟರ್ ಗೆ ಢಿಕ್ಕಿ ಇಬ್ಬರ ಸಾವು, ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರ ಪಾರು
ಚನ್ನಪಟ್ಟಣ: ನಗರಕ್ಕೆ ಹೊಂದಿಕೊಂಡಿರುವ ತಿಟ್ಟಮಾರನಹಳ್ಳಿ ಗ್ರಾಮದ ನಡುವಿನ ರಾಮಮ್ಮ ನ ಕೆರೆ ಏರಿಯ ಮೇಲೆ ಸೋಮವಾರ ಮುಂಜಾನೆ ಸಾರಿಗೆ ಬಸ್ ಮತ್ತು ಸ್ಕೂಟರ್ ನಡ

ತಾಲ್ಲೂಕು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಟಿ ವಿ ಗಿರೀಶ್ ಆಯ್ಜೆ, ಹಲವರಿಂದ ಅಭಿನಂದನೆ
ಚನ್ನಪಟ್ಟಣ:ನಗರದ ನ್ಯಾಯಾಲಯದಲ್ಲಿರುವ ವಕೀಲರ ಸಂಘದ ಕಛೇರಿಯಲ್ಲಿ ತಾಲ್ಲೂಕು ವಕೀಲರ ಸಂಘದ ಚುನಾವಣೆಯು ಶನಿವಾರ ಜರುಗಿದ್ದು ಅತ್ಯಧಿಕ ಮತಗಳನ್ನು ಪಡೆಯುವ ಮೂಲ

ತೌಟನಹಳ್ಳಿ ಬಳಿ ಹತ್ತಾರು ಎಕರೆ ಸರ್ಕಾರಿ ಗುಡ್ಡೆ, ದಲಿತರ ಜಮೀನು ಒತ್ತುವರಿ ಮಾಡಿದ ಬಿಜೆಪಿ ಮುಖಂಡ, ಕ್ರಮಕ್ಕೆ ಆಗ್ರಹ
ಚನ್ನಪಟ್ಟಣ: ತಾಲ್ಲೂಕಿನ ಮಳೂರು ಹೋಬಳಿ ಯ ತೌಟನಹಳ್ಳಿ ಗ್ರಾಮದ ಸರ್ವೇ ನಂಬರ್ ೭೪ ರಲ್ಲಿ ೧೭೦ ಎಕರೆ ಸರ್ಕಾರಿ ಜಮೀನು ಇದ್ದು, ಸ್ಥಳೀಯ ರೈತರ ಜಾನುವಾರುಗಳಿಗೆ

ಹಲವು ಎಡವಟ್ಟುಗಳೊಂದಿಗೆ ರಾಜ್ಯೋತ್ಸವ ಆಚರಿಸಿದ ತಾಲ್ಲೂಕು ಆಡಳಿತ
ಚನ್ನಪಟ್ಟಣ: ಚನ್ನಪಟ್ಟಣ ನಗರ ಮತ್ತು ತಾಲ್ಲೂಕು ಕೇಂದ್ರವೂ ಪುರಾಣ, ಇತಿಹಾಸ, ಚಳವಳಿ ಸೇರಿದಂತೆ ಅನೇಕ ವಿಚಾರಗಳಲ್ಲಿ ಸ್ವಾತಂತ್ರ್ಯ ಪೂರ್ವ ಹಾಗೂ

ಕಾಡಂಕನಹಳ್ಳಿ ಗ್ರಾಮದಲ್ಲಿ ವೃದ್ದನಿಗೆ ಢಿಕ್ಕಿ ಹೊಡೆದ ಬೈಕ್, ಪಾದಚಾರಿ ಸಾವು
ಚನ್ನಪಟ್ಟಣ: ತಾಲ್ಲೂಕಿನ ಕಾಡಂಕನಹಳ್ಳಿ ಗ್ರಾಮದ ೬೫ ವರ್ಷದ ಶಿವಮಾದೇಗೌಡ ಎಂಬ ವ್ಯಕ್ತಿಯು ವ್ಯವಸಾಯಗಾರನಾಗಿದ್ದು, ಹೈನುಗಾರಿಕೆ ಮಾಡಿಕೊಂಡಿದ್ದರು. ಪ್ರತಿದಿ

ಪೋಲಿಸರು ಕೆಲಸದ ಒತ್ತಡದ ನಡುವೆ ಆರೋಗ್ಯ ಮತ್ತು ಕುಟುಂಬಕ್ಕೂ ಒತ್ತು ನೀಡಿ, ಜಿಲ್ಲಾಧಿಕಾರಿ
ಚನ್ನಪಟ್ಟಣ: ಪೋಲಿಸರು ಜನರ ರಕ್ಷಣೆಗಾಗಿ ಸದಾ ಒತ್ತಡದ ಮಧ್ಯೆ ಕರ್ತವ್ಯ ನಿರ್ವಹಿಸುತ್ತಾರೆ. ಇದರ ನಡುವೆಯೂ ಪೊಲೀಸರು ತಮ್ಮ ಆರೋಗ್ಯ ಹಾಗೂ ಕುಟುಂಬದ ಕು
ಪ್ರತಿಕ್ರಿಯೆಗಳು