Tel: 7676775624 | Mail: info@yellowandred.in

Language: EN KAN

    Follow us :


ವಿಜೃಂಭಣೆಯಿಂದ ಜರುಗಿದ ಕೆಂಗಲ್ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ

Posted date: 19 Jan, 2024

Powered by:     Yellow and Red

ವಿಜೃಂಭಣೆಯಿಂದ ಜರುಗಿದ ಕೆಂಗಲ್ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ

ಚನ್ನಪಟ್ಟಣ: ತಾಲ್ಲೂಕಿನ ಐತಿಹಾಸಿಕ, ಪುರಾಣ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ  ಶುಕ್ರವಾರ ಆಯೋಜಿಸಿದ್ದ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ಬ್ರಹ್ಮ ರಥೋತ್ಸವವು ಧಾರ್ಮಿಕ ವಿಧಾನಗಳು, ಶ್ರದ್ಧಾ ಭಕ್ತಿಯೊಂದಿಗೆ, ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.


ಶುಕ್ರವಾರ ಬೆಳಿಗ್ಗೆ ೧೧.೫೫ ರಿಂದ ೧೨.೫೫ ಗಂಟೆಯೊಳಗೆ ಸಲ್ಲುವ ಶುಭ ಅಭಿಜನ್ ಲಗ್ನದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರಸ್ವಾಮಿಯವರ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಹೂವಿನ ಪಲ್ಲಕ್ಕಿ ಉತ್ಸವ ಯಶಸ್ವಿಯಾಗಿ ನಡೆಯಿತು. ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ವಿ.ಬಿ.ಚಂದ್ರು ಆಡಳಿತ ಮಂಡಳಿ ಸದಸ್ಯರು ಹಾಗೂ ಅರ್ಚಕರು  ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು. ಅಪಾರ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತಾಧಿಗಳು, ಬ್ರಹ್ಮ ರಥೋತ್ಸವಕ್ಕೆ ಬಾಳೆ ಹಣ್ಣು, ಹೂವು, ಜವನ ಎಸೆದು ಭಕ್ತಿಪೂರ್ವಕವಾಗಿ ಸಂಭ್ರಮಿಸಿದರು.


ಬ್ರಹ್ಮ ರಥೋತ್ಸವದ ಪ್ರಯುಕ್ತ ಆಯೋಜಿಸಿದ್ದ ವೀರಗಾಸೆ ಕುಣಿತ, ತಮಟೆ ಸೇವೆ, ಡೊಳ್ಳುಕುಣಿತ, ಪೂಜಾ ಕುಣಿತ, ಚಿಲಿಪಿಲಿ ಗೊಂಬೆಗಳ ಕುಣಿತ ಮುಂತಾದ ಜನಪದ ಕಲಾತಂಡಗಳ ಪ್ರದರ್ಶನ ಭಕ್ತಾಧಿಗಳನ್ನು ಆಕರ್ಷಿಸಿತು. ದೇವಸ್ಥಾನದಲ್ಲಿನ ಶ್ರೀ ಆಂಜನೇಯಸ್ವಾಮಿ ಮತ್ತು ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ದೇವರ ಮೂರ್ತಿಗೆ ಹೂವಿನಿಂದ ವಿಶೇಷ ಅಲಂಕಾರ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಒಳ ಆವರಣದ ಕಂಬ ಮತ್ತು ಮೇಲ್ಭಾಗವನ್ನು ಹೂವು, ವಿವಿಧ ಹಣ್ಣು ಹಾಗೂ ತರಕಾರಿಗಳಿಂದ ಅಲಂಕಾರ ಮಾಡಲಾಗಿತ್ತು. ಹೊರಭಾಗದಲ್ಲೂ ವಿಶೇಷವಾಗಿ ವಿದ್ಯುತ್ ಅಲಂಕಾರ ಮಾಡಲಾಗಿತ್ತು.


ಬ್ರಹ್ಮ ರಥೋತ್ಸವದಲ್ಲಿ ದೇವಸ್ಥಾನ ಪ್ರಧಾನ ಅರ್ಚಕರಾದ ರವೀಂದ್ರ, ಶರತ್ ಹಾಗೂ ಮತ್ತಿತರ ಅರ್ಚಕರು, ದೇವಸ್ಥಾನದ ಮೇಲುಸ್ತುವಾರಿ ಸಮಿತಿ ಸದಸ್ಯರು  ಭಾಗವಹಿಸಿ ರಥೋತ್ಸವದ ಯಶಸ್ಸಿಗೆ ಕೈಜೋಡಿಸಿ ಸಹಕರಿಸಿದರು.  


ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತಾಧಿಗಳು ಆಗಮಿಸಿದ ಭಕ್ತಾಧಿಗಳಿಗೆ ಪ್ರಸಾದ, ನೀರು ಮಜ್ಜಿಗೆ, ಪಾನಕ ವಿತರಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಬಂದೋ ಬಸ್ತ್ ವ್ಯವಸ್ಥೆ ಮಾಡಿದ್ದರು.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara-district »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.
ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರ

ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ
ಫೆ. 11 ರಂದು ಎಲೇಕೇರಿ ಶ್ರಿ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವ

ರಾಮನಗರ:ಚನ್ನಪಟ್ಟಣ; ಚನ್ನಪಟ್ಟಣ ನಗರದ ಎಲೇಕೇರಿ (ಗೆಂಡೆಮಡು)ಯಲ್ಲಿನ  ಶ್ರೀ ಚೌಡೇಶ್ವರಿ ಅಮ್ಮನವರ ಸ್ಥಿರ ಬಿಂಬ ಪ್ರತಿಷ್ಠಾಪನಾ ಮಹೋತ್ಸವವು ಫೆ.10 ಮತ್ತು

ಯುರೋ ಕಿಡ್ಸ್, ಪ್ರೀ ಸ್ಕೂಲ್ ವತಿಯಿಂದ ಮೆಗಾ ವಾಕಥಾನ್

 ಚನ್ನಪಟ್ಟಣ: ಪಟ್ಟಣದ ಕುವೆಂಪು ನಗರದ ಏಳನೇ ಕ್ರಾಸ್‍ನಲ್ಲಿರುವ ಯೂರೋ ಕಿಡ್ಸ್, ಪ್ರೀ ಸ್ಕ

Top Stories »  


Top ↑