Tel: 7676775624 | Mail: info@yellowandred.in

Language: EN KAN

    Follow us :


ಬಿಜಿಎಸ್ ವಲ್ಡ್೯ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ

Posted date: 14 Nov, 2018

Powered by:     Yellow and Red

ಬಿಜಿಎಸ್ ವಲ್ಡ್೯ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆ

ಕನ್ನಡ ಭಾಷೆ ನಮ್ಮ ದೈನಂದಿನ ಭಾಷೆಯಾಗಬೇಕು, ನಾವು ಇಂಗ್ಲಿಷ್ ಅಥವಾ ಮತ್ತೆ ಬೇರೆ ಭಾಷೆಗಳನ್ನು ಕೇವಲ ವ್ಯವಹಾರಿಕ ಭಾಷೆಯನ್ನಾಗಿ ಬಳಸಬೇಕೇ ವಿನಹ ಅದನ್ನೇ ದೈನಂದಿನ ಭಾಷೆಯಾಗಿ ಬೆಳೆಸಿಕೊಳ್ಳಬಾರದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಸವಿತಾ ರವರು ಮಕ್ಕಳಿಗೆ ಉಪದೇಶಿಸಿದರು.

 

ಇಂಗ್ಲಿಷ್ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ತಕ್ಷಣವೇ ನಾವು ಇಂಗ್ಲಿಷ್ ಭಾಷೆಯನ್ನು ಮೈಗೂಡಿಸಿಕೊಳ್ಳಬಾರದು, ಅದನ್ನು ವ್ಯವಹಾರದ ಭಾಗವನ್ನಾಗಿ ಆಯ್ಕೆ ಮಾಡಿಕೊಂಡು ನಮ್ಮ ಮಾತೃಭಾಷೆಯನ್ನು ಉಳಿಸಿ ಬೆಳೆಸಿ ಪ್ರೋತ್ಸಾಹಿಸುವುದರ ಜೊತೆಗೆ ಪರಭಾಷಿಗರಿಗೆ ಕಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.

ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಎಂ ರಾಜು ರವರು ಮಾತನಾಡಿ ನಾವು ನಮ್ಮ ಹೆಮ್ಮೆಯ ಭಾರತದಲ್ಲಿ ಹೆಣ್ಣಿಗೆ ಬಹಳ ಮಹತ್ವವನ್ನು ನೀಡಿದ್ದೇವೆ, ಅದೇ ರೀತಿ ಮಕ್ಕಳಿಗೆ ದೈವ ಸ್ವರೂಪವನ್ನು ಕೊಟ್ಟಿದ್ದೇವೆ, ನಮ್ಮ ದೇಶ ಭಾರತ, ನಮ್ಮ ರಾಜ್ಯ ಕರ್ನಾಟಕ, ಭೂಮಿ, ನೀರು ಹೀಗೆ ಎಲ್ಲಾ ರೀತಿಯಲ್ಲಿ ಹೆಣ್ಣಿಗೆ ಮಾನ್ಯತೆ ನೀಡಿದ್ದೇವೆ, ಹಾಗಾಗಿ ಇಂದಿನ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ ಅರ್ಥಪೂರ್ಣ ಕಾರ್ಯಕ್ರಮವಾಗಿದೆ ಎಂದು ಶ್ಲಾಘಿಸಿದರು.

 

ಕನ್ನಡ ರಾಜ್ಯೋತ್ಸವ ಹಿನ್ನೆಲೆಯ ಬಗ್ಗೆ ಮಕ್ಕಳಿಗೆ ಉಪನ್ಯಾಸ ನೀಡಿದ ಭೌತ ಶಾಸ್ತ್ರ ಉಪನ್ಯಾಸಕ ಶ್ರೀಕಾಂತ್ ರವರು ನಮ್ಮ ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ, ಮೂವತ್ತು ಸಾವಿರಕ್ಕೂ ಹೆಚ್ಚು ಭಾಷೆಯಿರುವ ಪ್ರಪಂಚದಲ್ಲಿ ಹತ್ತೊಂಭತ್ತು ಸಾವಿರ ಭಾಷೆಗಳು ನಮ್ಮ ದೇಶದಲ್ಲಿವೆ, ಅದರಲ್ಲಿ ನೂರಾ ಇಪ್ಪತ್ತೊಂದು ಭಾಷೆಗಳು ಚಾಲ್ತಿಯಲ್ಲಿದ್ದು ಅದರಲ್ಲಿ ಕನ್ನಡವೂ ಒಂದು.

 

ಬೇರೆ ಭಾಷೆಯಲ್ಲಿ ಎಲ್ಲವೂ ಸರಿಯಿದೆ, ನಮ್ಮ ಭಾಷೆಯಲ್ಲಿ ಅದಿಲ್ಲಾ ಇದಿಲ್ಲಾ ಎನ್ನುವ ಬದಲು ಇರುವುದನ್ನೇ ಬಳಸಿಕೊಂಡು ಇನ್ನೂ ಮೇಲ್ಮಟ್ಟಕ್ಕೆ ಕರೆದೊಯ್ಯಬೇಕು, ಹಾಗೆ ಮಕ್ಕಳಿಗೂ ಸಹ ಸಣ್ಣ ವಯಸ್ಸಿನಲ್ಲಿಯೇ ತಪ್ಪು ಸರಿಗಳನ್ನೂ ತಿದ್ದಿ ಹೇಳಬೇಕು, ದೊಡ್ಡವರಾದ ಮೇಲೆ ಅವರನ್ನು ತಿದ್ದುವುದು ಕಷ್ಟ, ನಮ್ಮ ಮಾತೃಭಾಷೆ ಯನ್ನೇ ಬಳಸಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

 

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹಲವು ವಿದ್ಯಾರ್ಥಿ ವಿದ್ಯಾರ್ಥಿನಿಯರು ಕನ್ನಡದ ಗೀತೆಗಳನ್ನು ಹಾಡಿ ರಂಜಿಸಿದರು, ಪೂಜ್ಯ ಅನ್ನದಾನೇಶ್ವರನಾಥ ಸ್ವಾಮೀಜಿಗಳು ಆಶೀರ್ವಚನ ನೀಡಿದರು.

ಡಿ ತೇಜಶ್ರೀ ಮತ್ತು ಎಂ ಪ್ರಕೃತಿ ಕಾರ್ಯಕ್ರಮ ನಿರೂಪಿಸುವ ಮೂಲಕ ಗಮನ ಸೆಳೆದರು.

ಕಾಲೇಜಿನ ಪ್ರಾಂಶುಪಾಲ ಎಂ ಸಿ ಸುರೇಶ್, ಶಾಲಾ ಪ್ರಾಂಶುಪಾಲೆ ಸತ್ಯಲಕ್ಷ್ಮಿ ರವರು ಉಪಸ್ಥಿತರಿದ್ದರು.

 

ಗೋ ರಾ ಶ್ರೀನಿವಾಸ...

ಮೊ:9845856139.



 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑