ಗೌಡಗೆರೆ ಚಾಮುಂಡೇಶ್ವರಿ ಮತ್ತು ಬಸವಪ್ಪನ ಪುಣ್ಯಕ್ಷೇತ್ರದಲ್ಲಿ ಅದ್ದೂರಿಯಾಗಿ ಜರುಗಿದ ಭೀಮನ ಅಮಾವಾಸ್ಯೆ
ಚನ್ನಪಟ್ಟಣ: ನಾಡದೇವತೆ ಮೈಸೂರು ಮಹರಾಜರ ಅಧಿದೇವತೆ ಬೆಟ್ಟದ ತಾಯಿ ಚಾಮುಂಡಿಯನ್ನೇ ಹೆಚ್ಚಾಗಿ ಆರಾಧಿಸುವ ದಿನಗಳ ಮಧ್ಯೆ ಭಕ್ತರ ದಂಡು ಬೊಂಬೆನಾಡು ಎಂದೇ ಸುಪ್ರಸಿದ್ಧವಾದ ಚನ್ನಪಟ್ಟಣ ದ ಗೌಡಗೆರೆ ಗ್ರಾಮದಲ್ಲಿ ನೆಲೆಸಿರುವ ತಾಯಿ ಚಾಮುಂಡಿ ಸನ್ನಿಧಿಗೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೈವದ ರೂಪದಲ್ಲಿ ಇರುವ ಬಸವಣ್ಣನಿಗೆ ಹಾಲಿನ ಅಭಿಷೇಕ ಮಾಡಿ ಪುನೀತರಾದರು.
ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಇತಿಹಾಸ ಪ್ರಸಿದ್ದ ಗೌಡಗೆರೆ ಗ್ರಾಮದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಭೀಮನ ಅಮಾವ್ಯಾಸೆಯ ಪ್ರಯುಕ್ತ ವಿಶೇಷವಾಗಿ ಪೂಜೆಸಲ್ಲಿಸಲಾಯಿತು. ಬೆಳಗ್ಗೆಯಿಂದಲೂ ತಾಯಿ ದುರ್ಗೆಗೆ ವಿವಿಧ ರೀತಿಯ ಅಲಂಕಾರ, ಅಭಿಷೇಕದ ಜೊತೆಗೆ ಹೋಮಹವನಗಳನ್ನ ನೆರವೇರಿಸುವ ಮೂಲಕ ಸಕಲರಿಗೂ ಶುಭವಾಗಲೆಂದು ಪ್ರಾರ್ಥನೆ ಸಲ್ಲಿಸಲಾಯಿತು.
ಮೊದಲಿಗೆ ದೇವರ ಬಸಪ್ಪನನ್ನ ತಾಯಿಯ ಗರ್ಭಗುಡಿಗೆ ಕರೆತಂದು ತಾಯಿಗೆ ಪೂಜೆನಡೆಸಲಾಗುತ್ತೆ, ನಂತರ ಬಂದ ಭಕ್ತಾಧಿಗಳಿಗೆ ತಾಯಿಯ ದರ್ಶನ ಮಾಡಿ ಪ್ರಾರ್ಥಿಸಲು ಅನುವು ಮಾಡಿಕೊಡುತ್ತದೆ.
ಇನ್ನು ಈ ಕ್ಷೇತ್ರದಲ್ಲಿ ಗ್ರಾಮಸ್ಥರೊಂದಿಗೆ ಬೇರೆಕಡೆಗಳಿಂದ ಬಂದಿರುವ ಮಹಿಳಾ ಭಕ್ತರು ಮಡಿಕೆಯಲ್ಲಿ ಹಾಲನ್ನು ತಂದು ತಾಯಿಗೆ ಪೂಜೆಸಲ್ಲಿಸಿದ ನಂತರ ದೇವರ ಬಸಪ್ಪನಿಗೆ ಅದೇ ಹಾಲಿನಲ್ಲಿ ಅಭಿಷೇಕ ಮಾಡುವುದು ವಿಶೇಷವಾದ ಆಚರಣೆ ಎನ್ನುತ್ತಾರೆ ದೇವಾಲಯದ ಧರ್ಮದರ್ಶಿ ಮಲ್ಲೇಶ್ ರವರು.
ಅಂದಹಾಗೇ ಭೀಮನ ಅಮಾವ್ಯಾಸೆಯ ದಿನವಾದ ಇಂದು ತಾಯಿಯ ಉತ್ಸವ ಮೂರ್ತಿಯನ್ನ ರಥದಲ್ಲಿಟ್ಟು ದೇವಸ್ಥಾನದ ಸುತ್ತ ಮೆರವಣಿಗೆ ಮಾಡಲಾಗುತ್ತದೆ. ರಥದಲ್ಲಿ ಸಾಗುವ ತಾಯಿ ಚೌಡೇಶ್ವರಿ ಅಮ್ಮನವರಿಗೆ ಹಣ್ಣು, ಹೂವನ್ನ ಅರ್ಪಿಸುವ ಮೂಲಕ ಬಂದ ಭಕ್ತರು ತಮ್ಮ ಪ್ರಾರ್ಥನೆಯನ್ನ ಸಲ್ಲಿಸುತ್ತಾರೆ.
ಇನ್ನು ಪ್ರತಿವರ್ಷಕ್ಕೊಮ್ಮೆ ನಡೆಯುವ ಈ ಉತ್ಸವಕ್ಕೆ ಬೆಂಗಳೂರು, ರಾಮನಗರ, ಮಂಡ್ಯ ಮತ್ತು ಮೈಸೂರು ಸೇರಿದಂತೆ ಹಲವು ಭಾಗಗಳಿಂದ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಇನ್ನು ತಾಯಿಯ ದರ್ಶನ ಪಡೆದ ದಿನದಿಂದ ನಮಗೆಲ್ಲಾ ಒಳಿತಾಗಿದೆ ಎನ್ನುತ್ತಾರೆ ಒಳಿತುಕಂಡ ಭಕ್ತರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು