Tel: 7676775624 | Mail: info@yellowandred.in

Language: EN KAN

    Follow us :


ವರ್ಗಾವಣೆಗೊಂಡು ತಿಂಗಳಾದರೂ ಜಾಗ ಬಿಡದ ವಿರುಪಾಕ್ಷಿಪುರ ಹೋಬಳಿ ರಾಜಸ್ವ ನಿರೀಕ್ಷಕ?

Posted date: 14 Aug, 2019

Powered by:     Yellow and Red

ವರ್ಗಾವಣೆಗೊಂಡು ತಿಂಗಳಾದರೂ ಜಾಗ ಬಿಡದ ವಿರುಪಾಕ್ಷಿಪುರ ಹೋಬಳಿ ರಾಜಸ್ವ ನಿರೀಕ್ಷಕ?

ಚನ್ನಪಟ್ಟಣ: ತಾಲ್ಲೂಕಿನ ಸಂಪದ್ಭರಿತ ಮರಳು ಲೂಟಿ ಕೇಂದ್ರ ಎನಿಸಿಕೊಂಡಿರುವ ವಿರುಪಾಕ್ಷಿಪುರ ಹೋಬಳಿಯ ನಾಡ ಕಛೇರಿಯಲ್ಲಿ ಸಮಯಕ್ಕೆ ಸರಿಯಾಗಿ ಬಾರದೆ ಎರಡು ಹುದ್ದೆಗಳನ್ನು ನಿಭಾಯಿಸಿತ್ತಿರುವ ವರ್ಗಾವಣೆಗೊಂಡು ತಿಂಗಳಾದರೂ ಕುರ್ಚಿಗೆ ಅಂಟಿಕೊಂಡಿರುವ ರಾಜಸ್ವ ನಿರೀಕ್ಷಕ ಕಂ ಉಪ ತಹಶಿಲ್ದಾರ *ಕೆ ಓ ನಟರಾಜು (ಮಧು) ಎಂಬುವವರ ಮೇಲೆ ಹೋಬಳಿಯ ನೂರಾರು ಸಾರ್ವಜನಿಕರು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ ರಾಜೇಂದ್ರ ರವರಿಗೆ ೧೩/೦೮/೧೯ ರಂದು ಲಿಖಿತ ದೂರು ಸಲ್ಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಮನವಿ ಸಲ್ಲಿಸಿರುವುದು ಬೆಳಕಿಗೆ ಬಂದಿದೆ.


ಕಳೆದ ಹತ್ತು ವರ್ಷಗಳಿಂದ ಚನ್ನಪಟ್ಟಣದಲ್ಲೇ ಠಿಕಾಣಿ ಹೂಡಿರುವ ನಟರಾಜು ವಿರುಪಾಕ್ಷಿಪುರ ಹೋಬಳಿಯ ಹೆಸರಿನಲ್ಲಿ ನಾಮಕವಾಸ್ಥೆಗಷ್ಟೇ ಕೆಲಸ ನಿರ್ವಹಿಸುತ್ತಿದ್ದು ಅವರ ಕೆಲಸದ ಅಡ್ಢೆ ಸಂಪೂರ್ಣ ನಗರದ ಖಾಸಗಿ ಹೋಟೆಲ್‌ಗಳಲ್ಲಿ ಮಧ್ಯವರ್ತಿಗಳ ಮೂಲಕ ನಡೆಯುತ್ತಿದೆ, ಹಾಗೂ ಇಂತಿಂತಹ ಕೆಲಸಕ್ಕೆ ಇಷ್ಟು ದುಡ್ಡು ಎಂದು ನಿಗದಿ ಮಾಡಿ ಮಧ್ಯವರ್ತಿಗಳ ಮೂಲಕ ಪಡೆದುಕೊಳ್ಳುತ್ತಿದ್ದಾರೆ, ರೈತರು ಯಾವ ಕೆಲಸಕ್ಕೆ ಕರೆ ಮಾಡಿದರೂ ಚನ್ನಪಟ್ಟಣಕ್ಕೆ ಬರಲು ಹೇಳುತ್ತಾರೆಂದು ದೂರಿದ್ದಾರೆ.


ವಿರುಪಾಕ್ಷಿಪುರ ಹೋಬಳಿಯು ಎರಡು ಜಿಲ್ಲಾ ಪಂಚಾಯತಿ ಕೇಂದ್ರಗಳನ್ನು ಹೊಂದಿದ್ದು ವಿದ್ಯಾರ್ಥಿಗಳು, ರೈತರು, ವೃದ್ದರು, ವಿಕಲಚೇತನರು ಮತ್ತು ಇನ್ನಿತರ ವರ್ಗದ ಸಾರ್ವಜನಿಕರು ನಾಡಕಛೇರಿಗೆ ಅಲೆದು ಸಾಕಾಗಿ ನಂತರ ಅವರಿರುವ ಸ್ಥಳಕ್ಕೆ ಹೋಗಿ ಲಂಚ ನೀಡಿ ಸಂಬಂಧಿಸಿದ ದಾಖಲೆಗಳಿಗೆ ಸಹಿ ಹಾಕಿಸಿಕೊಳ್ಳಬೇಕಾಗಿದೆ.


೨೦೧೮ ರಲ್ಲಿ ಲೋಕಸಭಾ ಸದಸ್ಯ ಡಿ ಕೆ ಸುರೇಶ್ ರವರು ಕೋಡಂಬಳ್ಳಿಯಲ್ಲಿ ಏರ್ಪಡಿಸಿದ್ದ ಜನಸಂಪರ್ಕ ಸಭೆ ಮತ್ತು ಚನ್ನಪಟ್ಟಣದ ಶಾಸಕ ಹಾಗೂ ಅಂದಿನ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರು ಇದೇ ಕೋಡಂಬಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಜನಾತ ದರ್ಶನದಲ್ಲಿ ಲಿಖಿತ ದೂರು ನೀಡಲಾಗಿದ್ದು ಗಮನಿಸಿದ ಅವರು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು ಸಹ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವುದು ಅನುಮಾನಕ್ಕೆಡೆ ಮಾಡಿದೆ ಎಂದು ದೂರು ನೀಡಿದ್ದಾರೆ.


ಈ ದೂರಿನ ಬಗ್ಗೆ ನೂತನ ದಂಡಾಧಿಕಾರಿ ಸುದರ್ಶನ್ ರವರನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿದಾಗ ಇದು ಜಿಲ್ಲಾಧಿಕಾರಿಗಳ ಸುಪರ್ದಿಗೆ ಬರುತ್ತದೆ, ಅವರಿಗೆ ಇದರ ಮಾಹಿತಿಯೂ ಇದೆ, ಇಲ್ಲಿ ಸಿಬ್ಬಂದಿ ಕೊರತೆ ಇರುವುದರಿಂದ ಎರಡು ಹುದ್ದೆಗಳನ್ನು ನಿಭಾಯಿಸುತ್ತಿದ್ದಾರೆ ಹಾಗೂ ಆ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆ ಆಗುವವರೆಗೂ ಅವರು ಇಲ್ಲಿಯೇ ಕಾರ್ಯ ನಿರ್ವಹಿಸುತ್ತಾರೆ ಎಂದು ತಿಳಿಸಿದರು.


ಇದರ ಬಗ್ಗೆ ಮಾಹಿತಿ ಕೇಳಲು ಅಧಿಕಾರಿ ನಟರಾಜ್ ಮಧು ರವರ ಮೊಬೈಲ್ ಗೆ ಎರಡುಮೂರು ಬಾರಿ ಕರೆ ಮಾಡಿದರೂ ಸಹ ಕರೆ ಸ್ವೀಕರಿಸಲಿಲ್ಲ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑