ಕಳಪೆ ಕಾಮಗಾರಿ ವಿರೋಧಿಸಿ ಲೋಕೋಪಯೋಗಿ ಇಲಾಖೆ ವಿರುದ್ಧ ರೈತಸಂಘ ಪ್ರತಿಭಟನೆ.
ತಾಲ್ಲೂಕಿನಾದ್ಯಂತ ನಡೆಯುತ್ತಿರುವ ಮತ್ತು ಇತ್ತೀಚೆಗೆ ನಡೆದಿರುವ ಶೇಕಡಾ ೯೫ ಕ್ಕೂ ಹೆಚ್ಚು ರಸ್ತೆ ಕಾಮಗಾರಿಗಳು ಕಳಪೆಯಿಂದ ಕೂಡಿದ್ದು ಕಳಪೆ ಕಾಮಗಾರಿಗಳಿಗೆ ಗುತ್ತಿಗೆದಾರರು, ಇಂಜಿನಿಯರ್ ಗಳು ಸೇರಿದಂತೆ ಹಲವಾರು ಸ್ಥಳೀಯ ರಾಜಕಾರಣಿಗಳು ಭಾಗಿಯಾಗಿ ಶ್ರೀ ಸಾಮಾನ್ಯನ ತೆರಿಗೆ ಹಣವನ್ನು ದುರುಪಯೋಗ ಪಡಿಸಿಕೊಂಡಿರುವುದಲ್ಲದೆ, ನಿರ್ಮಿಸಿರುವ ರಸ್ತೆಯಲ್ಲಿ ಓಡಾಡಲು ಸಾಧ್ಯವಾಗುತ್ತಿಲ್ಲ, ಇದರ ಹೊಣೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೇ ಹೊರಬೇಕಾಗಿದ್ದು ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಂಡು ಕಳಪೆ ಕಾಮಗಾರಿ ಮಾಡಿರುವವರಿಂದಲೇ ದುರಸ್ತಿ ಮಾಡಿಸಬೇಕೆಂದು ತಾಲ್ಲೂಕು ರೈತ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ನಗರದ ಲೋಕೋಪಯೋಗಿ ಇಲಾಖೆಯ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.
ಕಣ್ವ ಭಾಗದ ರಸ್ತೆಗಳ ಬಹುತೇಕ ಕಾಮಗಾರಿಗಳು ಈಗಾಗಲೇ ನಡೆದಿದ್ದು ಸಣ್ಣ ಕಾಲುವೆಗಳು ಇರುವ, ಮೋರಿಗಳಿರುವ ಜಾಗಗಳಲ್ಲಿ ಪೈಪುಗಳನ್ನು ಸಹ ಹಾಕದೆ ಟಾರು ಹಾಕಿದ್ದು ಮೋರಿಗಳು ಕುಸಿಯುತ್ತಿವೆ, ಎಂಬ ದೂರುಗಳಿಗೆ ಇಂಜಿನಿಯರ್ ಸಾಗರ್ ಈಗ ಮಾಡಿಸುತ್ತೇವೆ ಎಂದು ನೀಡಿದ ಉತ್ತರ ಕ್ಕೆ ಕೋಪಗೊಂಡ ಪದಾಧಿಕಾರಿಗಳು ಪ್ರತಿಭಟನೆ ನಂತರ ಮಾಡುವುದಾದರೆ ನೀವುಗಳು ಬೇಕೆ, ಎರಡೆರಡು ಬಾರಿ ಕಾಮಗಾರಿ ಮಾಡುತ್ತೀರಾ ? ಗುಣಮಟ್ಟ ಪರೀಕ್ಷಿಸುವ ಇಂಜಿನಿಯರ್ ಆಗಲಿ ಸಂಬಂಧಿಸಿದ ಇಂಜಿನಿಯರ್ ಗಳಾಗಲಿ ಸ್ಥಳದಲ್ಲಿರದೇ ಕಳಪೆ ಕಾಮಗಾರಿಗಳು ನಡೆಯಲು ಇವರೇ ಉತ್ತೇಜನ ನೀಡಿದ್ದಾರೆ ಎಂದು ದೂರಿದರು.
ಪ್ರತಿಭಟನಾಕಾರರಿಗೆ ಸಹಾಯಕ ಕಾರ್ಯಪಾಲಕ ಅಭಿಯಂತರ ಕೆ ಸಿ ಚಂದ್ರಶೇಖರ ಉತ್ತರಿಸಿ ನಮ್ಮೆಲ್ಲಾ ಅಧಿಕಾರಿಗಳ ಜೊತೆ ಸಮಾಲೋಚಿಸಿ ಶೀಘ್ರವಾಗಿ ಆಗಿರುವ ಲೋಪಗಳನ್ನು ತಿದ್ದಿಕೊಂಡು ಉತ್ತಮ ಕಾಮಗಾರಿಗಳನ್ನು ನಡೆಯುವಂತೆ ನೋಡಿಕೊಳ್ಳುತ್ತೇವೆಂದು ಭರವಸೆ ನೀಡಿದ ನಂತರ ಪ್ರತಿಭಟನೆಯನ್ನು ಹಿಂದೆಗೆದುಕೊಳ್ಳಲಾಯಿತು.
ಮುಖಂಡ ಎಂ ರಾಮು ಮಾತನಾಡಿ ಎಲ್ಲಾ ಅಧಿಕಾರಿಗಳು ರೈತರ ಮಕ್ಕಳೇ, ಅಧಿಕಾರಿಗಳು ಎನ್ನುವ ದರ್ಪ ಬೇಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಯವರು ಹೆಚ್ಚು ಅನುದಾನ ನೀಡಿದ್ದು ಅನುದಾನ ಸದ್ಬಳಕೆಯ ಬದಲು ದುರ್ಬಳಕೆ ಆಗುತ್ತಿದೆ, ಕಳಪೆ ಕಾಮಗಾರಿ ಮಾಡುವ ಮೂಲಕ ಹಣ ದುರುಪಯೋಗವಾಗುತ್ತಿದೆ, ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಲೋಕೋಪಯೋಗಿ ಇಲಾಖೆಯ ರಾಮನಗರ ಇ ಇ ಗೋಪಾಲಕೃಷ್ಣ, ಇಂಜಿನಿಯರ್ ಗಳಾದ ನಾರಾಯಣಗೌಡ, ಪ್ರಕಾಶ್, ಸಾಗರ್ ರವರು ಹಾಜರಿದ್ದು ಪ್ರತಿಭಟನಾಕಾರರಿಗೆ ಉತ್ತರಿಸಿದರು.
ಪ್ರತಿಭಟನೆಯಲ್ಲಿ ರೈತಸಂಘದ ರಾಜ್ಯ ಉಪಾಧ್ಯಕ್ಷ ಎಂ ರಾಮು, ಜಿಲ್ಲಾ ಅಧ್ಯಕ್ಷ ಕೆ ಮಲ್ಲಯ್ಯ, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ, ತಾಲ್ಲೂಕು ಗೌರವಾಧ್ಯಕ್ಷ ಕೃಷ್ಣಯ್ಯ, ಮಹಿಳಾ ಅಧ್ಯಕ್ಷೆ ಚಿಕ್ಕತಾಯಮ್ಮ, ರಾಮನಗರ ದ ಪಾರ್ಥ, ರಾಮೇಗೌಡ, ಹೆಚ್ ನಾಗೇಶ್, ಗುರುಲಿಂಗಯ್ಯ, ಮುಖಂಡರಾದ ಶಂಭೂಗೌಡ, ಸಿದ್ದರಾಜು ಸೇರಿದಂತೆ ಮಹಿಳಾ ಕಾರ್ಯಕರ್ತರು ಪಾಲ್ಗೊಂಡಿದ್ದರು.
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು