Tel: 7676775624 | Mail: info@yellowandred.in

Language: EN KAN

    Follow us :


ಹಿಂದುಳಿದ ವರ್ಗಗಳ ಆಶಾಕಿರಣ ಡಿ ಡಿ ಅರಸು, ಡಾ ಅಣ್ಣಯ್ಯ ತೈಲೂರು

Posted date: 20 Aug, 2019

Powered by:     Yellow and Red

ಹಿಂದುಳಿದ ವರ್ಗಗಳ ಆಶಾಕಿರಣ ಡಿ ಡಿ ಅರಸು, ಡಾ ಅಣ್ಣಯ್ಯ ತೈಲೂರು

ಚನ್ನಪಟ್ಟಣ: ಹಿಂದುಳಿದ ವರ್ಗಗಳ ಆಶಾಕಿರಣ, ಬಡವರ ಬಂಧು, ಬಡವರ ಪರವಾದ ಹಲವು ಇಲಾಖೆಗಳನ್ನು ಹುಟ್ಟು ಹಾಕಿ ಭದ್ರ ಬುನಾದಿ ಹಾಕಿದ ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿ ಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರೂ ಸಹ ದು:ಖಾಂತ್ಯದಲ್ಲಿ ಮರಣ ಹೊಂದಿದ, ಸುದೀರ್ಘ ಕಾಲ ಮುಖ್ಯಮಂತ್ರಿ ಯಾಗಿ ನ್ಯಾಯಪರ ಅಧಿಕಾರ ನಡೆಸಿದ ಬಲಿಷ್ಠ ಹಿಂದುಳಿದ ನಾಯಕ ಎಂದರೆ ಅದು ಡಿ ದೇವರಾಜ ಅರಸು ಮಾತ್ರ ಎಂದು ಉಪನ್ಯಾಸಕ ಡಾ ಅಣ್ಣಯ್ಯ ತೈಲೂರು ಬಣ್ಣಿಸಿದರು.


ಅವರು ಇಂದು ತಾಲ್ಲೂಕು ಕಛೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ತಾಲ್ಲೂಕು ಆಡಳಿತ ಮಂಡಳಿ ಹಮ್ಮಿಕೊಂಡಿದ್ದ ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ ದೇವರಾಜ ಅರಸು ಅವರ ೧೦೪ ನೇ ಜನ್ಮ ಜಯಂತಿಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.


ಹಿಂದುಳಿದ ನಾಯಕರಾಗಿ ಗುರುತಿಸಿಕೊಂಡಿದ್ದರೂ ಸಹ ಅವರೆಂದೂ ಜಾತಿ ರಾಜಕಾರಣ ಮಾಡಿದವರಲ್ಲ, ಎಲ್ಲಾ ಜಾತಿಯ ಜನರನ್ನು ಅತ್ಯಂತ ಪ್ರೀತಿಯಿಂದ ಕಂಡು, ಅವರ ಎಲ್ಲಾ ಆಗು ಹೋಗುಗಳನ್ನು ಸಮರ್ಥವಾಗಿ ನಿರ್ವಹಿಸಿದ ನಾಯಕ, ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅನೇಕ ಸವಾಲುಗಳನ್ನು ಎದುರಿಸಿ ಸುದೀರ್ಘ ಅಂದರೆ ಎಂಟು ವರ್ಷಗಳ ಕಾಲ ನಿರಂತರವಾಗಿ ಮುಖ್ಯಮಂತ್ರಿ ಆಗಿದ್ದು, ಅವರು ಮರಣ ಹೊಂದಿದಾಗಿ ಲಕ್ಷಾಂತರ ಮಂದಿ ಅಶ್ರುತರ್ಪಣ ಗೊಂಡಿದ್ದು ಅವರ ಜಾತ್ಯಾತೀತ ರಾಜಕಾರಣಕ್ಕೆ ಹಿಡಿದ ಕನ್ನಡಿ ಎಂದರು.


ಚನ್ನಪಟ್ಟಣದಲ್ಲಿ ನಡೆದ ಕಾಳಿದಾಸ ಶಾಲೆ ಉದ್ಘಾಟನಾ ಸಮಾರಂಭದಲ್ಲಿ ಅಂದಿನ ಜನತಾ ಪಕ್ಷದ ನಾಯಕ ಶಿವರಾಮಯ್ಯ ನವರು ಕಪ್ಪು ಬಾವುಟ ಪ್ರದರ್ಶಿಸಿದ ಸಂದರ್ಭದಲ್ಲಿ ನಾನು ರಾಜಕೀಯ ಮಾಡಲು ಬಂದಿಲ್ಲ ಎಂದು ಹೇಳಿ ಅವರ ಬಾಯಿ ಮುಚ್ಚಿಸಿದ್ದು, ಮದ್ದೂರಿನಲ್ಲಿ ನಡೆದ ಬೃಹತ್ ಸಭೆಯಲ್ಲಿ ಕತ್ತಿ‌ ನೀಡಿದ ಕಾರ್ಯಕರ್ತರ ಜೊತೆ ನೀವು ನೀಡಿದ ಕತ್ತಿಯಿಂದ ದ್ವೇಷ ಅಸೂಯೆ ಮತ್ತು ಬಡತನ ವನ್ನು ಕೊಚ್ಚಿ ಹಾಕುತ್ತೇನೆಂದಿದ್ದು ಅವರ ಬಡವರ ಕಾಳಜಿಯನ್ನು ತೋರಿಸುತ್ತದೆ ಎಂದರು.


ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ ಮಾತನಾಡಿ ಭೂಸುಧಾರಣಾ ಕಾಯ್ದೆ ತಂದು ಬಡವರ ಪಾಲಿಗೆ ರಕ್ಷಾ ಕವಚವಾದರು, ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ಇಂದಿರಾಗಾಂಧಿ ಯವರನ್ನು ಕರೆತಂದು ಚಿಕ್ಕಬಳ್ಳಾಪುರ ದಲ್ಲಿ ನಿಲ್ಲಿಸಿ ಗೆಲ್ಲಿಸಿ ಕಳುಹಿಸಿದ ಧೀಮಂತ ನಾಯಕ ದೇವರಾಜ ಅರಸು ರವರು, ಅವರ ರಾಜಕೀಯ ಆಪತ್ಕಾಲದಲ್ಲಿ‌ ಬಂಗಾರಪ್ಪ ಮತ್ತು ವೀರಪ್ಪ ಮೊಯ್ಲಿ ಯವರು ಬೆಂಬಲ ನೀಡಿದ್ದರಿಂದಲೇ ಇಂದಿರಾಗಾಂಧಿ ಯವರ ಕೃಪಾ ಕಟಾಕ್ಷದಿಂದ ಇವರೂ ಸಹ ಮುಖ್ಯಮಂತ್ರಿ ಗಳಾದರು ಎಂದು ಬಣ್ಣಿಸಿದರು.


ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರು ಹಾಗೂ ತಹಶಿಲ್ದಾರ್ ಸುದರ್ಶನ್ ರವರು ಮಾತನಾಡಿ ಅರಸು ರವರು ಕೇವಲ ಮಾತನಾಡಿ ಸುಮ್ಮನಾದವರಲ್ಲ, ಆಡಿದ ಪ್ರತಿ ಮಾತುಗಳನ್ನು ಕೃತಿಯ ಮೂಲಕ ಹಾಗೂ ಕಾನೂನು ಮಾಡುವ ಮೂಲಕ ಮಾಡಿ ತೋರಿಸಿದ ಧೀಮಂತ ನಾಯಕರಾಗಿದ್ದರು ಎಂದರು.


ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಣಾಧಿಕಾರಿ ಎಂ ರಾಮಕೃಷ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮು, ಹಿಂದುಳಿದ ವರ್ಗಗಳ ಇಲಾಖೆಯ ಕುಮಾರ್ ಮತ್ತು ಎನ್ ಮೋಹನ್, ರೇಷ್ಮೆ ಇಲಾಖೆಯ ಮಂಜುನಾಥ, ಸಮಾಜ ಕಲ್ಯಾಣ ಇಲಾಖೆಯ ಕಿರಣ್ ಕುಮಾರ್, ನಗರಸಭೆ ಯ ಅನೇಕ ಅಧಿಕಾರಿಗಳು, ತಾಲ್ಲೂಕು ಪಂಚಾಯತಿ ಮತ್ತು ತಾಲ್ಲೂಕು ಕಛೇರಿಯ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑