ತಾಲ್ಲೂಕಿನೆಲ್ಲೆಡೆ ವಿಜೃಂಭಣೆಯ ಗೌರಿ ಗಣೇಶ ಹಬ್ಬ
ಚನ್ನಪಟ್ಟಣ: ನಗರವೂ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳ ಬೀದಿ ಬೀದಿಯಲ್ಲೂ ಗೌರಿ ಗಣೇಶ ಮೂರ್ತಿಗಳನ್ನು ಕೂರಿಸಿ ಪೂಜಿಸುವ ಮೂಲಕ ಗೌರಿ ಗಣೇಶ ಹಬ್ಬವನ್ನು ಅತಿ ವಿಜೃಂಭಣೆಯಿಂದ ಆಚರಿಸಿದರು.
ತಾಲ್ಲೂಕಿನ ಪ್ರತಿ ಹಳ್ಳಿಗೂ ಅಗತ್ಯತೆಯ ಮೇರೆಗೆ ತಾಲ್ಲೂಕಿನ ಮುಖಂಡರೊಬ್ಬರು ಗೌರಿ ಗಣೇಶ ಮೂರ್ತಿಗಳನ್ನು ಉಚಿತವಾಗಿ ನೀಡಿದ್ದರಿಂದ ಬಹುತೇಕ ಎಲ್ಲಾ ಕಡೆಯೂ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದರು, ಪೂಜೆಗೆ ಬೇಕಾದ ಪೂಜಾ ಸಾಮಾಗ್ರಿಗಳಾದ ಹೂ, ಹಣ್ಣು ಮತ್ತಿತರ ವಸ್ತುಗಳು ದುಬಾರಿಯಾಗಿದ್ದರೂ ಉತ್ಸಾಹಿ ಯುವಕರು ಮತ್ತು ಗೃಹಿಣಿಯರು ಖರೀದಿಸಿದ್ದು ಅವರ ಭಕ್ತಿಭಾವವನ್ನು ತೋರುತ್ತಿತ್ತು.
ಬಾಲಗಂಗಾಧರ ತಿಲಕರು ಸ್ವಾತಂತ್ರ್ಯ ಪೂರ್ವದಲ್ಲಿ ಎಲ್ಲಾ ಸ್ವಾತಂತ್ರ್ಯ ಹೋರಾಟಗಾರರನ್ನು ಒಗ್ಗೂಡಿಸಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹಚ್ಚಲು ಬಳಸಿದ ಗೌರಿ ಗಣೇಶ ಹಬ್ಬವನ್ನು ಇಂದು ಕೆಲವರು ತಮ್ಮ ಪ್ರತಿಷ್ಠೆಗೋಷ್ಕರ ಮಾಡುತ್ತಿರುವುದು ದುರದೃಷ್ಟಕರ, ಕೆಲವರು ಇದನ್ನು ತಮ್ಮ ಭಕ್ತಿ ಭಾವ ತೋರಿಸಿ ಕೊಳ್ಳಲು ಆಚರಿಸುತ್ತಿರುವುದು ಸಮಾಧಾನದ ಸಂಗತಿ.
ತಮ್ಮ ಕೆಲಸದ ಒತ್ತಡದ ಮೇರೆಗೆ ಕೆಲವರು ಬೆಳಿಗ್ಗೆ ಕೂರಿಸಿ ಸಂಜೆಯ ವೇಳೆಗೆ ವಿಸರ್ಜಿಸಿದರೆ ಕೆಲವರು ಇಪ್ಪತ್ತೊಂದು ದಿನಗಳ ವರೆಗೂ ಪೂಜಿಸಿ ವಿಸರ್ಜಿಸುತ್ತಾರೆ, ವಿಸರ್ಜನೆಯ ವೇಳೆ ತರಹೇವಾರಿ ಕಮಾನುಗಳಲ್ಲಿ ಗಣೇಶನನ್ನು ಕೂರಿಸಿ ಭಾಜಭಜಂತ್ರಿ ಹಾಗೂ ಗಟ್ಟಿ ಹಿಮ್ಮೇಳದೊಂದಿಗೆ ಪಲ್ಲಕ್ಕಿಯಲ್ಲಿ ಮೆರವಣಿಗೆ ಮಾಡುವುದು ಇಂದಿನ ಯುವಕರ ಟ್ರೆಂಡ್ ಆಗುತ್ತಿದೆ.
ತಾಲ್ಲೂಕಿನಾದ್ಯಂತ ಗಣೇಶ ಚತುರ್ಥಿ ದಿನದಂದು ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಪರಿಪಾಠವನ್ನು ಸ್ವಾತಂತ್ರ್ಯ ಪೂರ್ವದಿಂದಲೂ ಆಚರಿಸಿಕೊಂಡು ಬಂದಿದ್ದು ನಗರದ ಕೆಲವು ಬಡಾಣೆಗಳಲ್ಲಿ ಅರ್ಧ ಶತಕ ವರ್ಷಗಳನ್ನೂ ಪೂರೈಸಿವೆ.
ನಗರದ ಕೋಟೆ ಪ್ರದೇಶ, ಮಂಗಳವಾರಪೇಟೆ ಹಾಗೂ ಕೆಲವು ದೇವಾಲಯಗಳು ಈ ಸಾಲಿನಲ್ಲಿ ಗುರುತಿಸಿಕೊಂಡಿವೆ.
ತಾಲ್ಲೂಕಿನ ಹೆಚ್ ಮೊಗೇನಹಳ್ಳಿಯ ಜೈ ಕರ್ನಾಟಕ ಯುವಕರ ಸಂಘವು ಕಳೆದ ನಲವತ್ತಾರು ವರ್ಷಗಳಿಂದ ಗಣೇಶೋತ್ಸವ ವನ್ನು ಅಚರಿಸಿಕೊಂಡು ಬಂದಿರುವುದು ಸಹ ಗ್ರಾಮೀಣ ಭಾಗದ ವಿಶೇಷ.
ಅತಿಯಾದ ಶಬ್ದ, ರಸ್ತೆ ತಡೆ ಮಾಡಿ ಗಣೇಶ ಕೂರಿಸುವುದು, ಮೆರವಣಿಗೆ ಯ ಸಮಯದಲ್ಲಿ ಹೆಚ್ಚು ಶಬ್ದವನ್ನುಂಟು ಮಾಡುವ ಸೌಂಡ್ ಸಿಸ್ಟಮ್ (ಡಿಜೆ) ಬಳಸುವುದು ಸೇರಿದಂತೆ ಅನೇಕ ರೀತಿಯ ಷರತ್ತುಗಳನ್ನು ಪೋಲೀಸರು ವಿಧಿಸಿರುವುದರಿಂದ ಯುವ ಉತ್ಸಾಹಿಗಳು ನಿರಾಸೆಗೊಂಡಿದ್ದಾರೆ.
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು