Tel: 7676775624 | Mail: info@yellowandred.in

Language: EN KAN

    Follow us :


ಮೆಹಂದಿನಗರ ದಿಂದ ಲಾಳಾಘಟ್ಟ ರಸ್ತೆಯ ಐದು‌ ಲಕ್ಷ ಹಣ ನುಂಗಿದ ಶಂಕರ್ ಅಂಡ್ ಟೀಂ !

Posted date: 05 Sep, 2019

Powered by:     Yellow and Red

ಮೆಹಂದಿನಗರ ದಿಂದ ಲಾಳಾಘಟ್ಟ ರಸ್ತೆಯ ಐದು‌ ಲಕ್ಷ ಹಣ ನುಂಗಿದ ಶಂಕರ್ ಅಂಡ್ ಟೀಂ !

ಚನ್ನಪಟ್ಟಣ: ಈಗಾಗಲೇ ರಾಮನಗರ ಜಿಲ್ಲಾ ಪಂಚಾಯತಿ ಅನುದಾನದ ಹಲವಾರು ಕಾಮಗಾರಿಗಳನ್ನು ಮಾಡದೇ ಹಾಗೂ ಕೆಲವು ಕಳಪೆ ಕಾಮಗಾರಿ ಮಾಡಿ *ಇಪ್ಪತ್ತು ಲಕ್ಷ ರೂಪಾಯಿಗಳಿಗೂ* ಹೆಚ್ಚು ಮೌಲ್ಯದ ಹಣವನ್ನು ದುರುಪಯೋಗ ಪಡಿಸಿಕೊಂಡು *ತನಿಖೆ ಎದುರಿಸಿ ಅಮಾನತುಗೊಂಡು* ಇತ್ತೀಚೆಗೆ ಚನ್ನಪಟ್ಟಣ ಲೋಕೋಪಯೋಗಿ ಇಲಾಖೆಗೆ ಮರು ಸೇರ್ಪಡೆಯಾಗಿರುವ *ಪರೀಕ್ಷಾರ್ಥ ಇಂಜಿನಿಯರ್ ಜಿ ಎಸ್ ಶಂಕರ್* ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೆಹದಿ ನಗರದಿಂದ ಲಾಳಾಘಟ್ಟ ರಸ್ತೆ ದುರಸ್ತಿ ಹೆಸರಿನಲ್ಲಿ *೫,೦೦,೦೦೦* ರೂಪಾಯಿಗಳನ್ನು ಜೇಬಿಗೆ ಇಳಿಸಿಕೊಂಡಿದ್ದು ಇವರ ವಿರುದ್ಧ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರು ನೀಡಿರುವುದಾಗಿ ಮಾಹಿತಿ ಹಕ್ಕು ಕಾರ್ಯಕರ್ತ ವಿ ಜಿ ಕೃಷ್ಣೇಗೌಡ ತಿಳಿಸಿದ್ದಾರೆ.


೨೦೧೭/೧೮ ಸಾಲಿನ ಜಿಲ್ಲಾ ಪಂಚಾಯತಿ ಅನುದಾನವನ್ನು ನಗರದ ಮೆಹದಿ ನಗರದಿಂದ (ಸಾಮಾಜಿಕ ಅರಣ್ಯ ಇಲಾಖೆಯ ಮುಂಭಾಗ) ಲಾಳಾಘಟ್ಟ ಗ್ರಾಮದ (ಅರಳೀಮರ) ತನಕ ೫,೦೦,೦೦೦* ರೂಪಾಯಿಗಳ ಎಸ್ಟಿಮೇಟ್ ತಯಾರಿಸಿ *ಗುತ್ತಿಗೆದಾರ ಎಂ ಎಸ್ ಕಿರಣಕುಮಾರ* ಎಂಬುವವರ ಹೆಸರಿನಲ್ಲಿ *೪,೯೯,೮೧೭* ರೂಪಾಯಿಗಳನ್ನು ಕಾಮಗಾರಿ ಮಾಡದೇ ಪಡೆದುಕೊಂಡಿದ್ದಾರೆ ಎಂದು ಸಂಪೂರ್ಣ ದಾಖಲೆಗಳ ಸಮೇತ ದೂರು ನೀಡಿರುವುದಾಗಿ ತಿಳಿಸಿದರು.


*ಈ ರಸ್ತೆಯು ಪ್ರಸ್ತುತ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜಿ ಡಿ ವೀಣಾಕುಮಾರಿ ಯವರ ಕುಟುಂಬ ಒಡೆತನದ ವಿಜಯ ಚಾಕಿ ಸಾಕಾಣಿಕಾ ಕೇಂದ್ರ ಇರುವ ರಸ್ತೆ ಎಂಬುದು ದುರದೃಷ್ಟಕರ* *ಇದೇ ರಸ್ತೆಗೆ ೨೦೧೬ ನೇ ಸಾಲಿನಲ್ಲಿ ಇಂಜಿನಿಯರ್ ಚಿಕ್ಕ ವೆಂಕಟೇಶ್ ರವರು ೪,೫೦,೦೦೦ ರೂಪಾಯಿಗಳ ಬಿಲ್ ಮಾಡಿದ್ದು ಅಂದೂ ಸಹ ಕಾಮಗಾರಿ ನಡೆದಿರುವುದಿಲ್ಲ ಎಂದು ತಿಳಿಸಿದರು.*


ಕ್ರಮಸಂಖ್ಯೆ ಒಂದರಿಂದ ಒಂಭತ್ತರವರೆಗೆ ಇರುವ ಕಾಮಗಾರಿಯಲ್ಲಿ *೨೨೦ ಮೀಟರ್ ಉದ್ದದ ಮತ್ತು ೦೩.೦೫ ಮೀಟರ್ ಅಗಲ ಕಾಮಗಾರಿ* ಎಂದು ಅಳತೆ ಬಿಲ್ಲಿನಲ್ಲಿ ನಮೂದಿಸಿದ್ದು, ಕಾಮಗಾರಿಯ *ಪೋಟೋಗಳಲ್ಲಿ ಪ್ಯಾಚ್ ವರ್ಕ್" ತೋರಿಸಿದ್ದಾರೆ, ಈ ಪೋಟೋಗಳು ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ್ದಲ್ಲ, ಹಾಗಾಗಿ *ಗುತ್ತಿಗೆದಾರ ಎಂ ಎಸ್ ಕಿರಣಕುಮಾರ್, ಪ್ರೊಬೇಷನರಿ ಕಿರಿಯ ಇಂಜಿನಿಯರ್ ಜಿ ಎಸ್ ಶಂಕರ್ ಹಾಗೂ ಅಂದಿನ ಪ್ರಭಾರ ಸಹಾಯಕ ಕಾರ್ಯಪಾಲಕ ಅಭಿಯಂತರ ಕುಮಾರಸ್ವಾಮಿ* ವಿರುದ್ಧ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕರ ತೆರಿಗೆ ಹಣವನ್ನು ವಸೂಲಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑