ಲೋಕಾಯುಕ್ತ ಸಭೆ, ಪ್ರಚಾರದ ಕೊರತೆ, ಕೇವಲ ಎಂಟು ಮಂದಿ ದೂರು
ಚನ್ನಪಟ್ಟಣ: ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಗೌತಮ್ ರವರು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಲೋಕಾಯುಕ್ತ ದೂರುಗಳ ಬಗ್ಗೆ ಸಲಹೆ ಸೂಚನೆ ನೀಡಿದರು. ಹಾಗೂ ದೂರುದಾರರ ಅರ್ಜಿ ಸ್ವೀಕಾರ ಮಾಡಿ ಸಂಬಂಧಿಸಿದ ಅಧಿಕಾರಿಗಳ ಬಳಿ ವಿವರಣೆ ಕೇಳಿ ದೂರು ದಾಖಲು ಮಾಡಿಕೊಂಡರು.
ತಾಲ್ಲೂಕು ಆಡಳಿತದಿಂದ ಪ್ರಚಾರ ಇಲ್ಲದ ಕಾರಣ ಅನೇಕ ಸಾರ್ವಜನಿಕರಿಗೆ ಲೋಕಾಯುಕ್ತ ಪೋಲಿಸರು ಬರುವ ಮಾಹಿತಿ ಇಲ್ಲದೆ ಕೇವಲ ಎಂಟು ಮಂದಿ ಮಾತ್ರ ದೂರು ದಾಖಲಿಸಿದ್ದು ಒಂದು ಸಿವಿಲ್ ಗೆ ಸಂಬಂಧಿಸಿದ ದಾವಾ ಆಗಿದ್ದರಿಂದ ಅರ್ಜಿದಾರರಿಗೆ ಸಲಹೆ ನೀಡಿ ಕಳುಹಿಸಲಾಯಿತು. ಎರಡು ಕನಕಪುರ ತಾಲೂಕಿಗೆ ಸಂಬಂಧಿಸಿದ ದೂರುಗಳಾದ್ದರಿಂದ ಅಲ್ಲಿನ ತಹಶಿಲ್ದಾರರ ಬಳಿ ಕಳುಹಿಸಿದರು. ಉಳಿದ ಐದು ದೂರುಗಳನ್ನು ಇಲ್ಲಿ ಸ್ವೀಕಾರ ಮಾಡಿ ದಾಖಲಿಸಿಕೊಳ್ಳಲಾಯಿತು.
*ಮೂರು ಎಕರೆ ಜಮೀನನ್ನು ಬೇರೆಯವರಿಗೆ ಖಾತೆ ಮಾಡಿಕೊಟ್ಟ ಅಧಿಕಾರಿಗಳ ವಿರುದ್ಧ ವೃದ್ದರೊಬ್ಬರು ದೂರು ದಾಖಲಿಸಿದರು.*
ಕಸಬಾ ಹೋಬಳಿ ಹೊನ್ನಿಗನಹಳ್ಳಿ ಸರ್ವೆ ನಂಬರ್ ೪೬ ರಲ್ಲಿ ೩ ಎಕರೆ ಜಮೀನಿನ ಬದಲಾಗಿ ಸರ್ವೇ ನಂಬರ್ ೨೧೧, ೨೧೨, ೨೧೩ ರಲ್ಲಿ ೩ ಎಕರೆ ಜಮೀನನ್ನು ಎಂ ಆರ್ ಹೆಚ್ ೧೮/೨೦೧೫/೧೬ ಮತ್ತು೨೯/೧೭/೧೮ ರಡಿ ಬೇರೊಬ್ಬರಿಗೆ ಕ್ರಯಪತ್ರ ಮಾಡಿಕೊಟ್ಟಿರುವ ಬಗ್ಗೆ ಮಂಗಳವಾರಪೇಟೆ ಯ ಕೃಷ್ಣಪ್ಪ ಎಂಬುವವರು ದೂರು ಸಲ್ಲಿಸಿದರು.
ತಾಲ್ಲೂಕಿನಾದ್ಯಂತ ಎಲ್ಲಾ ರೀತಿಯ ಕಾಮಗಾರಿಗಳು ಕುಂಠಿತವಾಗಿದ್ದು ಕಳಪೆ ಕಾಮಗಾರಿಗಳು ನಡೆಯುತ್ತಿವೆ, ಕಂದಾಯ ಇಲಾಖೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ, ಕೆರೆ ತುಂಬಿಸುವ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಹಿರಿಯ ರೈತ ಮುಖಂಡ ಸಿ ಪುಟ್ಟಸ್ವಾಮಿ ಮೌಖಿಕವಾಗಿ ದೂರು ಸಲ್ಲಿಸಿದರೆ ಮಾಹಿತಿ ಹಕ್ಕು ಕಾರ್ಯಕರ್ತ ವಿ ಜಿ ಕೃಷ್ಣೇಗೌಡ ಜಿಲ್ಲಾ ಪಂಚಾಯತಿ ಅನುದಾನ ದುರುಪಯೋಗ, ಕಳಪೆ ಕಾಮಗಾರಿ ಗಳ ಬಗ್ಗೆ ಸುಧೀರ್ಘ ಮಾಹಿತಿ ನೀಡಿ ದೂರು ಸಲ್ಲಿಸಿದರು.
ಇನ್ನುಳಿದಂತೆ ವಕೀಲ ಸುರೇಶ್ ಮತ್ತು ಗಜೇಂದ್ರ ಸಿಂಗ್ ರವರು ಶೆಟ್ಟಿಹಳ್ಳಿ ಕೆರೆ ಯ ಬಗ್ಗೆ, ಇಕ್ಬಾಲ್ ಹುಸೇನ್ ರವರು ಪ್ರಾಧಿಕಾರದ ಬಗ್ಗೆ, ಕಳ್ಳಿಹೊಸೂರಿನ ಸಂದೀಪ್ ರಸ್ತೆ ಒತ್ತುವರಿ ಮಾಡಿ ಮನೆ ನಿರ್ಮಾಣ ಮಾಡಿರುವ ಬಗ್ಗೆ ಹಾಗೂ ವೈ ಟಿ ಹಳ್ಳಿಯ ವೈ ಎಸ್ ದೇವರಾಜು ರವರು ಪಿತ್ರಾರ್ಜಿತ ಆಸ್ತಿ ಖಾತೆ ಮಾಡಿಕೊಡದ ಬಗ್ಗೆ ದೂರು ದಾಖಲಿಸಿದರು.
ನಂತರ ಮಾತನಾಡಿದ ಡಿವೈಎಸ್ಪಿ ಗೌತಮ್ ರವರು ಕಳೆದ ತಿಂಗಳು ೧೫ ಅರ್ಜಿಗಳ ಬಂದಿದ್ದು ಮೂರು ಅರ್ಜಿಗಳಿಗೆ ಹಿಂಬರಹ ನೀಡಲಾಗಿದೆ, ಎರಡು ಅರ್ಜಿದಾರರಿಗೆ ೧&೨ ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ, ಶೆಟ್ಟಿಹಳ್ಳಿ ಕೆರೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು ಶೀಘ್ರದಲ್ಲೇ ಅಧಿಕಾರಿಗಳ ತಂಡ ಬಂದು ಪರಿಶೀಲನೆ ನಡೆಸಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ತನ್ವೀರ್ ಮತ್ತು ಸಿಬ್ಬಂದಿಗಳು, ಶಿರಸ್ತೇದಾರ ಮಹದೇವಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಚನ್ನಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಸೀತಾರಾಮು, ಕೃಷಿ ಅಧಿಕಾರಿ ಅಪರ್ಣಾ, ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಕಿರಣಕುಮಾರ್, ಶಿಶು ಅಭಿವೃದ್ಧಿ ಇಲಾಖೆಯ ಕಾಂತರಾಜು, ಪಶು ಇಲಾಖೆಯ ಜಯರಾಮ್, ತೋಟಗಾರಿಕೆ ಯ ವಿವೇಕ್, ಅಬಕಾರಿ ಇಲಾಖೆಯ ರಾಜೇಂದ್ರ ಸೇರಿದಂತೆ ಅನೇ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು