Tel: 7676775624 | Mail: info@yellowandred.in

Language: EN KAN

    Follow us :


ನಲವತ್ತೈದು ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಹುರುಳಿಲ್ಲದ ದೂರು ಆರೋಪ

Posted date: 12 Sep, 2019

Powered by:     Yellow and Red

ನಲವತ್ತೈದು ವರ್ಷದ ಹಿಂದೆ ಖರೀದಿ ಮಾಡಿದ ಜಮೀನಿಗೆ ಹುರುಳಿಲ್ಲದ ದೂರು ಆರೋಪ

ಚನ್ನಪಟ್ಟಣ: ನಲವತ್ತೈದು ವರ್ಷಗಳ ಹಿಂದೆ ಸಮುದಾಯದ ಮುಖಂಡರೊಬ್ಬರು ಮೂರು ಎಕರೆ ಜಮೀನು ಖರೀದಿ ಮಾಡಿದ್ದು ಅವರಿಂದ ಬೀಡಿ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಬಡ ಕಾರ್ಮಿಕರಿಗೆ ಮನೆ‌ ನಿರ್ಮಿಸುವ ಸಲುವಾಗಿ ಅಂದಿನ ಶಾಸಕರಾಗಿದ್ದ ಸಿ ಪಿ ಯೋಗೇಶ್ವರ್ ರವರ ಅಧ್ಯಕ್ಷತೆಯಲ್ಲಿ ಎರಡೂವರೆ ಎಕರೆ ಜಮೀನು ಖರೀದಿಸಿದ್ದು ಮೂಲ ಜಮೀನುದಾರರ ಕುಟುಂಬದವರೆಂದು ಹೇಳಿಕೊಂಡ ಚಿಕ್ಕಣ್ಣ ಎಂಬುವವರು ಪದೇ ಪದೇ ದೂರು ದಾಖಲಿಸುವ ಮೂಲಕ ಬಡ ಕಾರ್ಮಿಕರಿಗೆ ಮನೆ ನಿರ್ಮಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿ ಮತ್ತೊಮ್ಮೆ ಸುಳ್ಳು ದಾವೆ ಹೂಡದಂತೆ ಎಚ್ಚರಿಕೆ ನೀಡಬೇಕೆಂದು ಚನ್ನಪಟ್ಟಣ ಟೌನ್ ಬೀಡಿ ಕಾರ್ಮಿಕರ ವಿವಿದ್ದೋದ್ದೇಶ ಸಹಕಾರ ಸಂಘ ನಿಯಮಿತ ದ ಉಪಾಧ್ಯಕ್ಷ ಮಹಮ್ಮದ್ ಅಲಿ ಮತ್ತು ನಿರ್ದೇಶಕ ಅಸ್ಮತ್ ಪಾಷ ರವರು ಸುದ್ದಿ ಗೋಷ್ಠಿ ಯಲ್ಲಿ ತಿಳಿಸಿದರು.


ನಗರದ ಹೊನಗನಹಳ್ಳಿ ಗ್ರಾಮದ ಸರ್ವೇ ನಂಬರ್ ೪೬ ರ ಮೂರು ಎಕರೆ ಜಮೀನನ್ನು ನಲವತ್ತೈದು ವರ್ಷಗಳ ಹಿಂದೆ ಐಯ್ಯಣ್ಣ ಬಿನ್ ಚಿಕ್ಕಚನ್ನಯ್ಯ ಎಂಬುವವರಿಂದ ನಸೀರ್ ಪಾಷಾ ರವರು ಖರೀದಿಸಿದ್ದು ಅವರ ಮರಣಾನಂತರ ಪತ್ನಿ ಫರೀದಾ ಅವರಿಗೆ ಪೌತಿ ಖಾತೆಯಾದ ನಂತರ ಮೇಲಿನ ಸಂಘದ ವತಿಯಿಂದ ಸರ್ವೇ ನಂಬರ್ ೨೧೧, ೨೧೨ ಮತ್ತು ೨೧೩ ರ ಎರಡೂವರೆ ಎಕರೆ ಜಮೀನನ್ನು ಬೀಡಿ ಕಾರ್ಮಿಕರಿಗೆ ಮನೆ ನಿರ್ಮಿಸಲು ಖರಿದೀಸಿದ್ದು ಐಯ್ಯಣ್ಣ ರವರ ವಂಶಸ್ಥರೆಂದು ಹೇಳಿಕೊಂಡ ಚಿಕ್ಕಣ್ಣ ಎಂಬುವವರು ಸುಳ್ಳು ದೂರು ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ.


ಮೊದಲು ತಹಶಿಲ್ದಾರರ ನ್ಯಾಯಾಲಯ ನಂತರ ಉಪವಿಭಾಗಾಧಿಕಾರಿ ಆನಂತರ ಜಿಲ್ಲಾಧಿಕಾರಿ ಗಳ ನ್ಯಾಯಾಲಯಕ್ಕೆ ದಾವೆ ಹೂಡಿದ್ದು ಎಲ್ಲಾ ಕಡೆಯೂ ನಮ್ಮ ಪರವಾಗಿ ನ್ಯಾಯ ದೊರಕಿದೆ, ಆದರೂ‌ ಅವರು ಅಧಿಕಾರಿಗಳು ಲಂಚ ಪಡೆದು ಖಾತೆ ಮಾಡಿದ್ದಾರೆಂದು ಆರೋಪಿಸಿ ಲೋಕಾಯುಕ್ತ ಕಛೇರಿಗೆ ದೂರು ನೀಡಿರುವುದಾಗಿ ತಿಳಿದುಬಂದಿದ್ದು‌ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಅಧಿಕಾರಿಗಳು ಖಾತೆ ಮಾಡಿ ಕೊಟ್ಟಿದ್ದಾರೆ. ಇಲ್ಲಿ ಯಾರೂ ಸಹ ಅವರಿಗೆ ಅನ್ಯಾಯ ಎಸಗಿಲ್ಲ ಎಂಬುದಾಗಿ ದಾಖಲೆಗಳ‌ ಸಮೇತ ಪ್ರತಿಪಾದಿಸಿದ ಅವರು ಇನ್ನೂ ಮುಂದೆಯೂ‌ ಹೀಗೆ ಸುಳ್ಳು ದಾಖಲೆ ನೀಡಿ ಪದೇ ಪದೇ‌ ದೂರು ಸಲ್ಲಿಸದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಕೈಗೊಂಡು ಬಡ ಕಾರ್ಮಿಕರ ಕಲ್ಯಾಣಕ್ಕೆ ಸ್ಪಂದಿಸಬೇಕೆಂದು ಮನವಿ ಮಾಡಿದರು.


ಪತ್ರಿಕಾ ಗೋಷ್ಠಿಯಲ್ಲಿ ಸೈಯ್ಯದ್ ರೆಹಮಾನ್, ಬದ್ರುನ್ನೀಷಾ, ಶಬೀರ್ ಮತ್ತು ಅಜೀಜ್ ಉಲ್ಲಾ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑