Tel: 7676775624 | Mail: info@yellowandred.in

Language: EN KAN

    Follow us :


ನೀಲಕಂಠನಹಳ್ಳಿ ಕೂಡ್ಲೂರು ರಸ್ತೆಯ ನಾಲ್ಕು ಲಕ್ಷ ನುಂಗಿದ ಶಂಕರ್ & ಟೀಂ!

Posted date: 15 Sep, 2019

Powered by:     Yellow and Red

ನೀಲಕಂಠನಹಳ್ಳಿ ಕೂಡ್ಲೂರು ರಸ್ತೆಯ ನಾಲ್ಕು ಲಕ್ಷ ನುಂಗಿದ ಶಂಕರ್ & ಟೀಂ!

ಚನ್ನಪಟ್ಟಣ: ಜಿಲ್ಲಾ ಪಂಚಾಯತಿಯ ಪ್ರೊಬೆಷನರಿ ಕಿರಿಯ ಇಂಜಿನಿಯರ್ ಆಗಿದ್ದ *ಶಂಕರ್* ಜಿಲ್ಲಾ ಪಂಚಾಯತಿ ಅನುದಾನದ ಬಳಕೆಯ ಹಣವನ್ನು ತಾಲ್ಲೂಕಿನ ತುಂಡು ಗುತ್ತಿಗೆ ಕಾಮಗಾರಿಗಳ ಹೆಸರಿನಲ್ಲಿ ಲೂಟಿ ಹೊಡೆದಿರುವುದು ಒಂದೊಂದಾಗಿ ಬೆಳಕಿಗೆ ಬರುತ್ತಿವೆ, ಅಂದಿನ ಗ್ರಾಮೀಣ ಕುಡಿಯುವ ನೀರು ಉಪ ವಿಭಾಗದ ಕಿರಿಯ ಇಂಜಿನಿಯರ್ *ಚಿಕ್ಕ ವೆಂಕಟೇಶ್, ಅಭಿಯಂತರ ಕುಮಾರಸ್ವಾಮಿ* ಈರ್ವರನ್ನೂ ಮೀರಿಸಿ ಲೂಟಿ ಹೊಡೆಯುವುದನ್ನೇ ಕಾಯಕ ಮಾಡಿಕೊಂಡಿದ್ದಾನೆ.* *ಮಹಾನ್ ಇಂಜಿನಿಯರ್ ವಿಶ್ವ ವಿಖ್ಯಾತ, ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಹೆಸರಿನಲ್ಲಿ ಇಂಜಿನಿಯರ್ ದಿನ ಆಚರಿಸುವ ಸುಸಂದರ್ಭದಲ್ಲಿ ಇಂತಹ ಇಂಜಿನಿಯರ್ ಗಳನ್ನು ನೆನೆಸಿಕೊಳ್ಳುವುದೇ ಪಾಪದ ಕೆಲಸ ಎಂದೆನಿಸುತ್ತದೆ.* ತಾಲ್ಲೂಕಿನ ಹೊಂಗನೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ನೀಲಸಂದ್ರ ಗ್ರಾಮ ಪಂಚಾಯತಿ ಯ ನೀಲಕಂಠನಹಳ್ಳಿ ಗ್ರಾಮದಿಂದ ಕೂಡ್ಲೂರು ರಸ್ತೆಗೆ ಸಂಪರ್ಕಿಸುವ ರಸ್ತೆಯ ಅಭಿವೃದ್ಧಿ ಕಾಮಗಾರಿಯ ಹೆಸರಿನಲ್ಲಿ *ಗುತ್ತಿಗೆದಾರ ಶ್ರೀನಿವಾಸ* ನ ಬ್ಯಾಂಕ್ ಖಾತೆಗೆ ಕೆಲಸವನ್ನು ಮಾಡದೇ *೩,೯೯,೯೩೪ ರೂಪಾಯಿಗಳನ್ನು* ಅಕ್ರಮವಾಗಿ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ವಿ ಜಿ‌ ಕೃಷ್ಣೇಗೌಡ ದೂರಿದ್ದಾರೆ. ೨೦೧೬/೧೭ ರ ಸಾಲಿನ ಕಾವೇರಿ ನೀರಾವರಿ ನಿಗಮದ ಅನುದಾನದಲ್ಲಿ‌ ಇಡೀ ನೀಲಕಂಠನಹಳ್ಳಿ ಗ್ರಾಮದ ರಸ್ತೆ ಅಭಿವೃದ್ಧಿ ಮಾಡಿದ್ದು ಅದರ ಒಂದು ಭಾಗವಾದ ನೀಲಕಂಠನಹಳ್ಳಿ ರಸ್ತೆಯಿಂದ ಕೂಡ್ಲೂರು ರಸ್ತೆ ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸಿರುವುದಾಗಿ ಸುಳ್ಳು ದಾಖಲೆ ಸೃಷ್ಟಿಸಿ ಬಿಲ್ ಪಡೆದುಕೊಂಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ನೀಡಿರುವುದಾಗಿ ತಿಳಿಸಿದರು. *ಸುಳ್ಳು ದಾಖಲೆ ಸೃಷ್ಟಿ;* ಕ್ರಮಸಂಖ್ಯೆ ೧ ರಿಂದ ೫ ರವರೆಗೆ ಇರುವ ಕಾಮಗಾರಿಯಲ್ಲಿ ೪೫೦ ಮೀಟರ್ ಉದ್ದದ ರಸ್ತೆ ಅಭಿವೃದ್ಧಿ ಮೆಟ್ಲಿಂಗ್ ಕಾಮಗಾರಿ ನಡೆದಿರುವ ಬಗ್ಗೆ ಯಾವುದೇ ಸಣ್ಣ ಕುರುಹುಗಳು ಕಂಡುಬಂದಿರುವುದಿಲ್ಲ. ಕ್ರಮಸಂಖ್ಯೆ ೨ ರಲ್ಲಿ ತೋರಿಸಿರುವ ಪೋಟೋ ನಂಬರ್ ೧ ರ ಪೋಟೋ ಮಲ್ಲುಂಗೆರೆ ಗ್ರಾಮದಿಂದ ಲಕ್ಕೋಜನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ ಯ ಪೋಟೋಗಳನ್ನು ಕ್ರಮಸಂಖ್ಯೆ ೩ ರಲ್ಲಿ ತೋರಿಸಲಾಗಿದೆ. ಹಾಗೂ ಕ್ರಮಸಂಖ್ಯೆ ೪ ರಲ್ಲಿ ತೋರಿಸಿರುವ ಪೋಟೋ ಕುಂತೂರುದೊಡ್ಡಿ ಗ್ರಾಮದ ಎಸ್ ಸಿ ಕಾಲೋನಿಯಿಂದ ರಾಂಪುರಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಪೋಟೋಗಳನ್ನು ಕ್ರಮಸಂಖ್ಯೆ ೨ ರಲ್ಲಿ ತೋರಿಸಿ ಬಿಲ್ ಮಾಡಿಕೊಂಡಿರುವುದು ಸಾಬೀತಾಗಿದ್ದು, *ಅಭಿಯಂತರ ಕುಮಾರಸ್ವಾಮಿ, ಕಿರಿಯ ಇಂಜಿನಿಯರ್ ಶಂಕರ್, ಗುತ್ತಿಗೆದಾರ ಶ್ರೀನಿವಾಸ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳ ಮೇಲೆ* ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ಅವರು ಒತ್ತಾಯಿಸಿದ್ದಾರೆ. *ಈ ಬಗ್ಗೆ ಹೊಂಗನೂರು ಜಿಲ್ಲಾ ಪಂಚಾಯತಿ ಸದಸ್ಯೆ ಜಿ ಡಿ ವೀಣಾಕುಮಾರಿ ಯವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ನಾನು ಅಧಿಕಾರಿಗಳ ಬಳಿ ಮಾಹಿತಿ ಮತ್ತು ಸಲಹೆ ಪಡೆದು ನಂತರ ಪ್ರತಿಕ್ರಿಯಿಸುವುದಾಗಿ ತಿಳಿಸಿದರು!* ಗೋ ರಾ ಶ್ರೀನಿವಾಸ... ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑