Tel: 7676775624 | Mail: info@yellowandred.in

Language: EN KAN

    Follow us :


ತಪ್ಪು ಮಾಡುವ ಮುನ್ನವೇ ಎಚ್ಚೆತ್ತುಕೊಳ್ಳಬೇಕು ನ್ಯಾಯಾಧೀಶೆ ಕಲ್ಪನಾ

Posted date: 30 Sep, 2019

Powered by:     Yellow and Red

ತಪ್ಪು ಮಾಡುವ ಮುನ್ನವೇ ಎಚ್ಚೆತ್ತುಕೊಳ್ಳಬೇಕು ನ್ಯಾಯಾಧೀಶೆ ಕಲ್ಪನಾ

ಚನ್ನಪಟ್ಟಣ: ಒಬ್ಬ ವ್ಯಕ್ತಿ ಒಂದು ವಾಹನ ಸವಾರಿ ಮಾಡಬೇಕೆಂದರೆ ಎಲ್ಲಾ ದಾಖಲೆಗಳಿರಬೇಕು, ಇಲ್ಲಾಂದ್ರೆ ಹೆಚ್ಚು ದಂಡ ಬೀಳುತ್ತೆ, ಇಬ್ಬರೂ ಸವಾರಿ ಮಾಡುವ ಬೈಕ್ ನಲ್ಲಿ ಮೂರು ಜನ ಹೋಗಿ ಹೆಚ್ಚು ಕಡಿಮೆಯಾದರೆ ಮೂರನೇ ವ್ಯಕ್ತಿಗೆ ಯಾರು ಪರಿಹಾರ ನೀಡುತ್ತಾರೆ, ಆತನ ಮುಂದಿನ ಜೀವನ ಹೇಗೆ ಎಂಬುದನ್ನು ಅರಿತುಕೊಳ್ಳಬೇಕು. ತಪ್ಪು ಮಾಡುವ ಮುನ್ನಾ ಎಚ್ಚೆತ್ತುಕೊಂಡರೆ ಮಾತ್ರ ಭವಿಷ್ಯದಲ್ಲಿ ಉತ್ತಮ ವ್ಯಕ್ತಿಯಾಗಲು ಸಾಧ್ಯ ಎಂದು ಚನ್ನಪಟ್ಟಣ ಜೆ ಎಂ ಎಫ್ ಸಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಯರ್ ಮಾಲ್ ಕಲ್ಪನಾ ರವರು ತಿಳಿಸಿದರು.

ಅವರು ನಗರದ ಮಹದೇಶ್ವರ ನಗರದಲ್ಲಿರುವ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಂಡಿದ್ದ ಕಾನೂನು ಸಾಕ್ಷರತೆಯ ರಥ ಮತ್ತು ಜನತಾ ನ್ಯಾಯಾಲಯದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಸ್ ನಟರಾಜು ರವರು ಮಾತನಾಡಿ ನಿಮಗೆ ಬೇಕಾದ ವಸ್ತುಗಳನ್ನು ನಿಮಗಿಷ್ಟವಾದ ಆಯ್ಕೆಗಳು ಇದ್ದರೆ ಮಾತ್ರ ತೆಗೆದುಕೊಳ್ಳಬೇಕು, ಮಾರುವವನ ಮತ್ತು ತಯಾರಕನ ಇಷ್ಟದ ವಸ್ತು ಕೊಳ್ಳಬೇಕಿಲ್ಲ,  ನಾವು ಏನು ಪದಾರ್ಥ ಕೊಂಡರು ಅದರಿಂದ ಏನು ಉಪಯೋಗ ಎನ್ನುವುದನ್ನು ಮನಗಾಣಬೇಕು, ಕಿರಾಣಿ ಅಂಗಡಿಯಲ್ಲಿ ಒಂದು ಪದಾರ್ಥ ಖರೀದಿಸಿದರೆ ಮಾಮೂಲಿ ಬೆಲೆ, ಪ್ರವಾಸಿ ತಾಣ ಇನ್ನಿತರೆ ತಾಣಗಳಲ್ಲಿ ಗರಿಷ್ಠ ಮಟ್ಟದ ಹಣ ವಸೂಲಿ ಮಾಡುತ್ತಾರೆ ಗ್ರಾಹಕರು ಪ್ರಶ್ನಿಸುವುದಿಲ್ಲ, ಸಣ್ಣ ಪದಾರ್ಥಗಳಿಂದ ಹಿಡಿದು ಕಾರು, ಬೈಕು, ಕ್ಲಿನಿಕ್  ಯಾವುದೇ ಪದಾರ್ಥ ಮತ್ತು ಸೇವೆ ಗಳ ಮೂಲ ಬೆಲೆಗಿಂತ ಹೆಚ್ಚು ಕೇಳಿದರೆ ನೀವು ಕೇಳಬಹುದು ಜೊತೆಗೆ ದೂರು ದಾಖಲಿಸಿ ಪರಿಹಾರ ಪಡೆದುಕೊಳ್ಳಬೇಕು ಎಂದರು. ನೀವು ಯಾವ ಸ್ಥಳದಲ್ಲಿ ವಸ್ತು ಖರೀದಿ ಮಾಡಿರುತ್ತೀರೋ ಆ‌ ನಗರದ ವ್ಯಾಪ್ತಿಯಲ್ಲಿ ಮಾತ್ರ ದೂರು ನೀಡಬೇಕು, ಕೆಲವು ವಸ್ತುಗಳಿಗೆ ಎರಡು ವರ್ಷಗಳು ಕೆಲವು ವಸ್ತುಗಳಿಗೆ ಎರಡು ವರ್ಷಗಳ ನಂತರವೂ ಗ್ರಾಹಕರ ನ್ಯಾಯಾಲಯಕ್ಕೆ ದೂರು ನೀಡಿ ವಕೀಲರಿಲ್ಲದೆಯೂ ನೀವೆ ವಾದ ಮಾಡಿ ಗೆಲ್ಲಬಹುದು, ಖರೀದಿಸುವ ಪದಾರ್ಥಗಳ ಸಂಪೂರ್ಣ ದಾಖಲೆ ಸಲ್ಲಿಸಬೇಕು ಎಂದರು.

ವಕೀಲ ಹೆಚ್ ಕೃಷ್ಣೇಗೌಡರು ಮೋಟಾರು ವಾಹನ ಕಾಯ್ದೆ ಹಾಗೂ ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಕಾಂತರಾಜು ರವರು ಪೌಷ್ಟಿಕಾಂಶ ಆಹಾರದ ಬಗ್ಗೆ ಮತ್ತು ನಿಲಯ ಪಾಲಕ ಎನ್ ಮೋಹನ್ ರವರು ವಿದ್ಯಾರ್ಥಿ ಗಳ ಕಾನೂನು ತಿಳುವಳಿಕೆ ಬಗ್ಗೆ ಉಪನ್ಯಾಸ ನೀಡಿದರು.

ಕಾನೂನು ಸಾಕ್ಷರತೆಯ ರಥ ಮತ್ತು ಜನತಾ ನ್ಯಾಯಾಲಯದ ಕಾರ್ಯಕ್ರಮವನ್ನು ಚನ್ನಪಟ್ಟಣ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಶಿಶು ಅಭಿವೃದ್ಧಿ ಇಲಾಖೆ, ತಾಲ್ಲೂಕು ಆಡಳಿತ, ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೋಲಿಸ್ ಇಲಾಖೆಯ ಸಹಯೋಗದೊಂದಿಗೆ ಏರ್ಪಡಿಸಲಾಗಿತ್ತು. ಬೆಳಿಗ್ಗೆ ೯:೩೦ ರಲ್ಲಿ ನ್ಯಾಯಾಲಯದ ಆವರಣದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಂಡು ಎಲೆಕೇರಿ ಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಂತರ ಬಿಸಿಎಂ ಹಾಸ್ಟೆಲ್ ನಲ್ಲಿ ಕಾರ್ಯಕ್ರಮ ಜರುಗಿದವು.

ಕಾರ್ಯಕ್ರಮದಲ್ಲಿ ಅಪರ ಸಿವಿಲ್ ನ್ಯಾಯಾಧೀಶೆ ಕು ಬಿ ಟಿ ಅನ್ನಪೂರ್ಣೇಶ್ವರಿ, ಸಹಾಯಕ ಸರ್ಕಾರಿ ಅಭಿಯೋಜಕಿ ಎಲ್ ರೂಪ, ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಟಿ ವಿ ಗಿರೀಶ್, ಪದಾಧಿಕಾರಿಗಳಾದ ಕೆ ಆರ್ ರವಿ, ಸಿ ಎಲ್ ಶಿವರಾಜು, ಶಿಕ್ಷಣ ಇಲಾಖೆಯ ಇಸಿಓ ತಮ್ಮಣ್ಣ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಶ್ನೋತ್ತರ ದ ಮೂಲಕ ತಮ್ಮ ಕಾನೂನು ತಿಳುವಳಿಕೆ ಹೆಚ್ಚಿಸಿಕೊಂಡಿದ್ದಲ್ಲದೆ ಸಮಸ್ಯೆಗಳನ್ನು ಪರಿಹರಿಸಿಕೊಂಡರು.

ಗೋ ರಾ ಶ್ರೀನಿವಾಸ...
ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑