ವಿಶೇಷಚೇತನರ ವಾಹನದ ಮೇಲೆ ತೆರಿಗೆ ವಿಧಿಸಿರುವುದು ಅವೈಜ್ಞಾನಿಕ : ಜೆ. ಮಂಜುನಾಥ್
ರಾಮನಗರ : ಕೇಂದ್ರ ಸರ್ಕಾರದ 2018 ಆಯ ವ್ಯಯದಲ್ಲಿ ವಿಶೇಷಚೇತನರ ವಾಹನದ ಮೇಲೆ 20% ತೆರಿಗೆ ವಿಧಿಸಿರುವುದು ಖಂಡನೀಯ ಎಂದು ಕರ್ನಾಟಕ ವಿಶೇಷ ಚೇತನರ ಹಿತರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಮಂಜುನಾಥ್ ಜೆ ತಿಳಿಸಿದರು.
ರಾಮನಗರದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಭಾಗ ದಲ್ಲಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿದ ಅವರು, ದೇಶದ ಜನಸಂಖ್ಯೆಯಲ್ಲಿ 3 ಕೋಟಿಗೂ ಹೆಚ್ಚು ವಿಶೇಷಚೇತನರಿದ್ದಾರೆ. ಅವರ ದಿನಿನಿತ್ಯದ ಬದುಕು ದೂಡುವುದು ಕಷ್ಟಸಾಧ್ಯವಾಗಿದೆ. ಅಂತಹದರಲ್ಲಿ ಅವರ ವಾಹನಗಳ ಮೇಲೆ ತೆರಿಗೆ ವಿಧಿಸಿರುವುದು ಅವೈಜ್ಞಾನಿಕವಾಗಿದೆ ಎಂದಿರುವ ಅವರು, ವಿಶೇಷಚೇತನರ ಜ್ವಲಂತ ಸಮಸ್ಯೆಗಳ ಕಡೆ ಗಮನ ನೀಡದೆ ವಿಶೇಷಚೇತನರ ವಾಹನಗಳ ಮೇಲೆ ತೆರಿಗೆ ವಿಧಿಸುವ ಮುಖಾಂತರ ಮೋದಿಯವರು ಗಧಾ ಪ್ರಹಾರವನ್ನು ಮಾಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಯ ರಾಜ್ಯಾಧ್ಯಕ್ಷ ರಮೇಶ್ ಗೌಡರವರು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಆಯ-ವ್ಯಯದಲ್ಲಿ ಪ್ರತಿ ಬಾರಿ ವಿಶೇಷಚೇತನರಿಗೆ ವಿಶೇಷ ಯೋಜನೆಗಳನ್ನು ಘೋಷಿಸದೆ ಕಡೆಗಣಿಸುತ್ತಿದ್ದು, ಅವರು ಅತಿ ಹೆಚ್ಚು ನಿರುದ್ಯೋಗದ ಸಮಸ್ಯೆಯಿಂದ ನರಳುತ್ತಿದ್ದಾರೆ. ಅವರಿಗೆ ಮಾಸಾಶನ ಏರಿಸಬೇಕು, ಕೇಂದ್ರ ಸರ್ಕಾರದ ಉದ್ಯೋಗ ಮೀಸಲಾತಿಯನ್ನು ನೀಡಬೇಕು ಹಾಗೂ ರಾಜಕೀಯ ಮೀಸಲಾತಿಯನ್ನು ನೀಡಬೇಕು ಎಂದು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕಕಜವೇ ಜಿಲ್ಲಾಧ್ಯಕ್ಷ ಬೇವೂರು ಯೋಗೀಶ್ಗೌಡ ಉಪಸ್ಥಿತರಿದ್ದರು
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು