Tel: 7676775624 | Mail: info@yellowandred.in

Language: EN KAN

    Follow us :


ಗಬ್ಬೆದ್ದು ನಾರುತ್ತಿರುವ ನಗರ, ವಿಷದ ಕಸ ತಿಂದು ಒದ್ದಾಡಿ ಪ್ರಾಣ ಬಿಡುತ್ತಿರುವ ಪ್ರಾಣಿಪಕ್ಷಿಗಳು

Posted date: 04 Oct, 2019

Powered by:     Yellow and Red

ಗಬ್ಬೆದ್ದು ನಾರುತ್ತಿರುವ ನಗರ, ವಿಷದ ಕಸ ತಿಂದು ಒದ್ದಾಡಿ ಪ್ರಾಣ ಬಿಡುತ್ತಿರುವ ಪ್ರಾಣಿಪಕ್ಷಿಗಳು

ಚನ್ನಪಟ್ಟಣ: ನಗರಸಭೆ ಅಧಿಕಾರಿಗಳು ಮತ್ತು ಕೆಲ ದುಷ್ಕರ್ಮಿಗಳ ಬೇಜಾವಾಬ್ದಾರಿಯಿಂದ ನಗರದ ಮೂಲೆ ಮೂಲೆಯಲ್ಲಿಯೂ ರಾಶಿ ರಾಶಿ ಕಸದ ತ್ಯಾಜ್ಯ ಬಿದ್ದಿದ್ದು ಹಲವಾರು ಪ್ರಾಣಿಗಳು, ಪಕ್ಷಿಗಳು ಕೊಳೆತು ನಾರಿ ವಿಷವಾಗಿ ಪರಿವರ್ತನೆಯಾದ ತ್ಯಾಜ್ಯವನ್ನು ತಿಂದು ಜೀರ್ಣಿಸಿಕೊಳ್ಳಲಾಗದೆ ಒದ್ದಾಡಿ ಪ್ರಾಣ ಬಿಡುತ್ತಿರುವುದು ಶೋಚನೀಯವಾಗಿದೆ.


ನಗರದ ಎಂ ಜಿ ರಸ್ತೆಯ ಡೂಂ ಲೈಟ್‌ (ಐದು ದೀಪಗಳ ವೃತ್ತ) ಬಳಿಯ ಪೆಟ್ಟಾ ಶಾಲೆ ಮತ್ತು ಎಪಿಎಂಸಿ ಮಾರುಕಟ್ಟೆ ಯ ಹಿಂಭಾಗದಲ್ಲಿ ದೊಡ್ಡ ಸರ್ಕಾರಿ ಜಾಗವಿದ್ದು ಆ ಜಾಗದಲ್ಲೆ *ಕುಡಿಯುವ ನೀರಿನ ದೊಡ್ಡ ಟ್ಯಾಂಕ್, ಶುದ್ದ ಕುಡಿಯುವ ನೀರಿನ ಟ್ಯಾಂಕ್ ಹಾಗೂ ಸರ್ಕಾರಿ ಶಾಲೆ* ಇದ್ದು ಈ ಜಾಗದಲ್ಲಿ ಪ್ರತಿನಿತ್ಯ ಸ್ಥಳೀಯರು ಕಸವನ್ನು ತಂದು ಸುರಿಯುತ್ತಿದ್ದಾರೆ, ಅಲ್ಲದೆ ಅಕ್ಕಪಕ್ಕಗಳಲ್ಲಿ ಇರುವ ಕೋಳಿ ಮತ್ತು ಮಾಂಸದಂಗಡಿಗಳ ತ್ಯಾಜ್ಯವನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿ ನೇರವಾಗಿ ಸುರಿಯುವ ತ್ಯಾಜ್ಯವನ್ನು ತಿಂದ ನಾಯಿಗಳು, ಬೆಕ್ಕುಗಳು ಮತ್ತು ಕಾಗೆಗಳು ಜೀರ್ಣಿಸಿಕೊಳ್ಳಲು ಸಾಧ್ಯವಾಗದೆ ಒದ್ದಾಡಿ ಪ್ರಾಣ ಬಿಡುತ್ತಿರುವುದು ಸರ್ವೇಸಾಮಾನ್ಯವಾಗಿದೆ.

ಶಾಲೆಯ ಮಕ್ಕಳು ಮತ್ತು ಸಾರ್ವಜನಿಕರು ಪ್ರತಿನಿತ್ಯ ವೂ ವಾಸನೆ ಸಹಿಸಲಾಗದೆ ನಗರಸಭೆ ಅಧಿಕಾರಿಗಳು ಮತ್ತು ಕಸ ಸುರಿಯುವವರಿಗೆ ಶಾಪ ಹಾಕಲಿಕ್ಕಷ್ಟೇ ಸೀಮಿತವಾಗಿರುವುದು ದುರದೃಷ್ಟಕರ.

*ಪ್ರತಿನಿತ್ಯ ಕಸ ಸುರಿಯುವುದರ ಜೊತೆಗೆ ಮಾಂಸದ ತ್ಯಾಜ್ಯವನ್ನು ಸುರಿಯುತ್ತಿದ್ದಾರೆ, ಮಾಂಸದ ತ್ಯಾಜ್ಯದ ಜೊತೆಗೆ ವಿಷ ಬೆರೆಸಿ ಪ್ರಾಣಿ ಪಕ್ಷಿಗಳನ್ನು ಕೊಲ್ಲುತ್ತಿರಬಹುದು ಎಂಬ ಗುಮಾನಿ ಇದ್ದು ಸತ್ತು ಬಿದ್ದಿರುವ ಪ್ರಾಣಿ ಪಕ್ಷಿಗಳನ್ನು ಪರೀಕ್ಷಿಸಿ ಸಂಬಂಧಿಸಿದ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ಪ್ರಾಣಿ ದಯಾಸಂಘದವರು ಇತ್ತ ಗಮನಹರಿಸಲಿ*
*ನವೀನಕುಮಾರ್, ಸ್ಥಳೀಯ ನಿವಾಸಿ.*

ಶಾಲೆಯ ಅಕ್ಕಪಕ್ಕಗಳಲ್ಲಿ ಮತ್ತು ಹಿಂಭಾಗ ಕಸದ ರಾಶಿ ಹಾಕಿದ್ದು ಪ್ರಾಣಿ ಪಕ್ಷಿಗಳು ತಿಂದ ನಂತರ ಶಾಲೆಯ ಮುಂಭಾಗವೇ ಸತ್ತುಬೀಳುತ್ತಿವೆ. ಇದರಿಂದ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗುವ ಸಂಭವ ಹೆಚ್ಚಿದ್ದು ಅಧಿಕಾರಿಗಳು ಗಮನಹರಿಸಬೇಕಾಗಿದೆ.*
*ಲಕ್ಷ್ಮಮ್ಮ ಮುಖ್ಯೋಪಾಧ್ಯಾಯಿನಿ ಪೆಟ್ಟಾ ಶಾಲೆ.*

*ಕೋಳಿ ಅಂಗಡಿ ಮಾಲೀಕರಿಗೇ ಈಗಾಗಲೇ ನೋಟೀಸ್ ನೀಡಿದ್ದೇವೆ, ಶೀಘ್ರವಾಗಿ ಅವರೆಲ್ಲರನ್ನೂ ಕರೆದು ಸಭೆ ನಡೆಸಿ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡದೇ ವೈಜ್ಞಾನಿಕವಾಗಿ ಒಂದೆಡೆ ಸುರಿಯಲು ಕ್ರಮ ಕೈಗೊಳ್ಳುವಂತೆ ತಿಳುವಳಿಕೆ ನೀಡುತ್ತೇವೆ. ಇನ್ನಿತರ ಮಾಂಸದಂಗಡಿಗಳಿಗೆ ನಗರಸಭೆಯ ಅಧಿಕಾರಿಗಳ ಬಳಿ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ.*
*ಮಾಯಣ್ಣಗೌಡ ಪ್ರಭಾರ ಆಯುಕ್ತ ನಗರಸಭೆ.*

ಗೋ ರಾ ಶ್ರೀನಿವಾಸ...
ಮೊ:9845856139.


ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑