Tel: 7676775624 | Mail: info@yellowandred.in

Language: EN KAN

    Follow us :


ಕುಸಿಯುತ್ತಿರುವ ಸೇತುವೆ ಜೀವ ಕೈಲಿಡಿದು ಓಡಾಡುತ್ತೊರುವ ಪ್ರಯಾಣಿಕರು

Posted date: 23 Oct, 2019

Powered by:     Yellow and Red

ಕುಸಿಯುತ್ತಿರುವ ಸೇತುವೆ ಜೀವ ಕೈಲಿಡಿದು ಓಡಾಡುತ್ತೊರುವ ಪ್ರಯಾಣಿಕರು

ಚನ್ನಪಟ್ಟಣ: ತಾಲ್ಲೂಕಿನ ಹೆಚ್ಚು ಭಾರ ಉಳ್ಳ (ನಗರದಿಂದ ಕವಲೊಡೆದು ಹೆಚ್ಚು ವಾಹನಗಳು ಓಡಾಡುವ) ರಾಜ್ಯ ಹೆದ್ದಾರಿಯಾದ ಸಾತನೂರು ರಸ್ತೆಯ ಭೈರಶೆಟ್ಟಿಹಳ್ಳಿ ಬಸ್ ನಿಲ್ದಾಣ ಮತ್ತು ಸಿಂಗರಾಜಪುರ ಗ್ರಾಮದ ನಡುವೆ ಇರುವ ಸೇತುವೆಯ ಒಂದು ಭಾಗ ಕುಸಿದಿದ್ದು ವಾಹನಗಳ ಸವಾರರು ಜೀವ ಕೈಲಿಡಿದು ಸೇತುವೆ ದಾಟಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.


ಭೈರಶೆಟ್ಟಿಹಳ್ಳಿ ಬಸ್ ನಿಲ್ದಾಣದ ಕೂಗಳತೆ ದೂರದಲ್ಲಿರುವ ಶನಿದೇವರ ದೇವಾಲಯದ ಬಳಿ ಇರುವ ಕಿರು ಸೇತುವೆಯು ನಿನ್ನೆ ಸಂಜೆ ಕುಸಿದಿದ್ದು ಚನ್ನಪಟ್ಟಣದಿಂದ ಕಬ್ಬಾಳು ಮಾರ್ಗವಾಗಿ ತೆರಳುವ ಏಕೈಕ ಹೆದ್ದಾರಿಯಾಗಿರುವುದರಿಂದ ಹಾಗೂ ಪ್ರತಿ ನಿಮಿಷಕ್ಕೊಂದರಂತೆ ವಾಹನಗಳು ಓಡಾಡುವುದರಿಂದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಈ ಮಾರ್ಗವನ್ನು ಬದಲಿಸಿ ಹೋಗುವ ದಾರಿಗಳಿದ್ದರೂ ಅವು ಕಿರಿದಾಗಿರುವ ಜೊತೆಗೆ ಸುತ್ತು ಮಾರ್ಗಗಳಾಗಿರುವುದರಿಂದ ಹೊಸದಾಗಿ ಬರುವ ವಾಹನಗಳ ಸವಾರರಿಗೆ ಕಿರಿಕಿರಿಯಾಗಿದ್ದು ಪರದಾಡುತ್ತಿದ್ದಾರೆ ಎಂದು ಸ್ಥಳೀಯ ಗ್ರಾಮಸ್ಥರು ದೂರಿದ್ದಾರೆ.


*ಇದು ರಾಜ್ಯ ಹೆದ್ದಾರಿಯಾಗಿದ್ದು ಪ್ರತಿಷ್ಠಿತ ಕಬ್ಬಾಳಮ್ಮನ ದೇವಸ್ಥಾನವೂ ಇರುವುದರಿಂದ ಸಹಸ್ರಾರು ಸಂಖ್ಯೆಯಲ್ಲಿ ವಾಹನಗಳು ಪ್ರತಿನಿತ್ಯ ಓಡಾಡುತ್ತವೆ. ಸಂಬಂಧಿಸಿದ ಅಧಿಕಾರಿಗಳು ಶೀಘ್ರವಾಗಿ ದುರಸ್ತಿ ಮಾಡಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಿ.*

*ಬಾಲಕೃಷ್ಣ ಉ ಮಹದೇವು ಕೋಡಿಹೊಸಹಳ್ಳಿ*


*ಚನ್ನಪಟ್ಟಣದಿಂದ ಸಾತನೂರು ಮಾರ್ಗವಾಗಿ ಆರು ಕಿರು ಸೇತುವೆಗಳಿದ್ದು ಅವುಗಳು ಪುರಾತನವಾಗಿ ಹಾಗೂ ತುಂಬಾ ಚಿಕ್ಕ ಸೇತುವೆಗಳಾಗಿವೆ, ಒಂದು ಸೇತುವೆ ಮಾತ್ರ ನಿರ್ಮಾಣವಾಗಿದ್ದು ಉಳಿದ ಸೇತುವೆಗಳು ಹಾಗೆಯೇ ಇವೆ. ಅವುಗಳನ್ನು ಕೆಡವಿ ಹೊಸದಾಗಿ ದೊಡ್ಡ ಸೇತುವೆಗಳನ್ನು ನಿರ್ಮಿಸಿ ಪ್ರಯಾಣಿಕರಿಗೆ ಸುಗಮ ಮಾರ್ಗ ಕಲ್ಪಿಸಲಿ.*

*ಸುರೇಶ್ ಭೂಹಳ್ಳಿ*


*ಸಂಜೆ ಸೇತುವೆಯ ಒಂದು ಚಪ್ಪಡಿ ಮುರಿದಿದೆ ಎಂಬ ಸುದ್ದಿ ಬಂದಿದ್ದು ಪ್ರಯಾಣಿಕರ ಎಚ್ಚರಿಕೆಗಾಗಿ ಎಚ್ಚರಿಕೆಯ ಸಂಕೇತಗಳನ್ನು ನಿನ್ನೆ ರಾತ್ರಿಯೇ ಅಳವಡಿಸಲಾಗಿದೆ. ಇಂದು ದುರಸ್ತಿ ಮಾಡಲಾಗುವುದು.*

*ನಾರಾಯಣಗೌಡ ಇಂಜಿನಿಯರ್ ಲೋಕೋಪಯೋಗಿ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑