ಮಕ್ಕಳ ವಿದ್ಯಾಭ್ಯಾಸಕ್ಕೆ ಧನ ಸಹಾಯ ನೀಡಿದ ಮಹನೀಯರು
ಚನ್ನಪಟ್ಟಣ: ತಾಲ್ಲೂಕಿನ ಭೈರಾಪಟ್ಟಣ ಗ್ರಾಮದಲ್ಲಿ ವಾಸವಿದ್ದ ಕೂಡ್ಲೂರು ಗ್ರಾಮದ ಟ್ಯಾಕ್ಸಿ ಚಾಲಕ ನಾಗರಾಜು ಮೂರು ವರ್ಷಗಳ ಹಿಂದೆ ಕಾರನ್ನು ಬಾಡಿಗೆ ಪಡೆದುಕೊಂಡು ಹೋಗಿರುವವರಿಂದಲೇ ಕೊಲೆಯಾದ ನಂತರ ಸಂಸಾರದ ನೊಗ ಹೊತ್ತವರೇ ಇಲ್ಲದ ಕಾರಣ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯುಂಟಾಗಿದ್ದನ್ನು ಮನಗಂಡ ಕೆಲ ಮಹನೀಯರು ಬುಧವಾರ ಧನ ಸಹಾಯ ನೀಡಿದರು.
ಬಿಡದಿ ಯ ಸ್ಪಂದನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ೧೫,೦೦೦ ರೂಪಾಯಿಗಳು ಮತ್ತು ನಗರದ *ಒಳಿತು ಮಾಡು ಮನುಸಾ* ಗೆಳೆಯರ ಬಳಗದ ಸದಸ್ಯರಿಂದ ೧೧,೦೦೦ ರೂಪಾಯಿಗಳ ಚೆಕ್ ಅನ್ನು ಮಕ್ಕಳ ತಾಯಿಯಾದ ಶಿಲ್ಪ ರವರಿಗೆ ನೀಡಲಾಯಿತು.
ಮತ್ತೋರ್ವ ಸಮಾಜಮುಖಿ ಚಿಂತಕಿ ರೂಪಾ ಮತ್ತು ಪತಿ ಡಾ ರೇವಣ್ಣ ರವರು ತಮ್ಮ ಹಣದ ಜೊತೆಗೆ ಹಲವು ಮಾನವೀಯ ದೃಷ್ಟಿ ಉಳ್ಳವರಿಂದ ಸ್ವಲ್ಪ ಹಣ ಕ್ರೋಢಿಕರಿಸಿದ್ದು ಶೀಘ್ರವಾಗಿ ಒಂದು ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದರು.
ಧನ ಸಹಾಯ ಮಾಡಿದ ದಾನಿಗಳಿಗೆ ವಂದಿಸಿದ ಶಿಲ್ಪ ರವರು ಮಾತನಾಡಿ ನಮಗೆ ಪತಿಯೇ ಸಂಪೂರ್ಣ ಜವಾಬ್ದಾರಿ ಹೊತ್ತಿದ್ದರು. ಈಗ ಅವರಿಲ್ಲದ ಕಾರಣ ಮಕ್ಕಳ ವಿದ್ಯಾಭ್ಯಾಸ ಮಾಡಿಸಲು ಹಣ ಹೊಂದಿಸಲಾಗುತ್ತಿಲ್ಲ. ಧನಸಹಾಯ ಮಾಡುವ ಮನಸುಳ್ಳವರು ಚನ್ನಪಟ್ಟಣ ಬ್ರಾಂಚ್ ನ ಸಿಂಡಿಕೇಟ್ ಬ್ಯಾಂಕ್ ಅಕೌಂಟ್ ನಂಬರ್ Acc no.15662200009510
Ifsc code: SYNB0001566 ಕಳುಹಿಸಲು ಮನವಿ ಮಾಡಿದರು.
ಸ್ಪಂದನ ಟ್ರಸ್ಟ್ ನ ಅಧ್ಯಕ್ಷ ಮುತ್ತಣ್ಣ, ಕಾರ್ಯದರ್ಶಿ ಶಿವಸ್ವಾಮಿ, ಸಾಹಿತಿ ಎಂ ಭೈರೇಗೌಡ, ಬಿಳಗುಂಬ ದಿನೇಶ್, ಒಳಿತು ಮಾಡು ಮನುಸಾ ಗೆಳೆಯರ ಬಳಗದ ವಿಜಯಕುಮಾರ್ ಗುಲೇಚಾ (ರಾಜು) ದೊಡ್ಡಮಳೂರು ಶಶಿಕುಮಾರ್, ಅನಿಲ್ ಕುಮಾರ್, ನಿರ್ಮಲ್ ಕುಮಾರ್ ಮತ್ತು ಸ್ನೇಹಿತರು
ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು