Tel: 7676775624 | Mail: info@yellowandred.in

Language: EN KAN

    Follow us :


ನಾಡು ನುಡಿ ಯ ಕೀಳರಿಮೆ ಪರದೇಶಿಗಳಿಂದಲ್ಲ, ನಮ್ಮಿಂದಲೇ ಆಗಿದೆ. ಉಪನ್ಯಾಸಕ ದೇವರಾಜು

Posted date: 01 Nov, 2019

Powered by:     Yellow and Red

ನಾಡು ನುಡಿ ಯ ಕೀಳರಿಮೆ ಪರದೇಶಿಗಳಿಂದಲ್ಲ, ನಮ್ಮಿಂದಲೇ ಆಗಿದೆ. ಉಪನ್ಯಾಸಕ ದೇವರಾಜು

ಚನ್ನಪಟ್ಟಣ: ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ, ನಾಡು ನುಡಿ ಜಲ ನಮ್ಮ ಹಕ್ಕು, ನಾವು ಕೊಡುಗೈ ದಾನಿಗಳೇ ವಿನಹ ಬೇಡಿ ಪಡೆಯುವರಲ್ಲ, ಕನ್ನಡ ನಾಡಿಗಾಗಿ ಹೋರಾಟ ಮಾಡಿದ ಮಹನೀಯರ ಋಣವನ್ನು ಇಂದಿಗೂ ತೀರಿಸಲಾಗಿಲ್ಲ. ಯಾರೋ ಪರದೇಶಿಗಳಿಂದ ನಮ್ಮ ಭಾಷೆ ಸೊರಗಿಲ್ಲ. ನಮ್ಮಿಂದ, ಕುರುಡು ಕಾಂಚಾಣಕ್ಕೆ ಕೈ ಒಡ್ಡುವ ಕೆಲ ಕನ್ನಡಿಗರಿಂದಲೇ ನಾಡು ನುಡಿಗೆ ಮಾರಕವಾಗಿದೆ ಎಂದು ಅರಳಾಳುಸಂದ್ರ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಆರ್ ದೇವರಾಜು ಅಭಿಪ್ರಾಯಪಟ್ಟರು.

ಅವರು ಇಂದು ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ತಾಲ್ಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ೬೪ ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.


ಕರ್ನಾಟಕದ ಏಕೀಕರಣಕ್ಕೆ ರಾಜ್ಯದ ಎರಡನೇ ಮುಖ್ಯಮಂತ್ರಿಗಳಾಗಿದ್ದ ಕೆಂಗಲ್ ಹನುಮಂತಯ್ಯ ನವರ ಕೊಡುಗೆ ಅಪಾರವಿದೆ, ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕುಮಾರವ್ಯಾಸ ನ ಕರ್ಣಾಟ ಭಾರತ ಕಥಾಮಂಜರಿ ಗ್ರಂಥವನ್ನು ಸರ್ಕಾರವೇ ಮುದ್ರಿಸುವ ಮೂಲಕ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಮುನ್ನುಡಿ ಬರೆದರು.


೧೯೨೪ ರ ಬೆಳಗಾವಿ ಅಧಿವೇಶನದಲ್ಲಿ ಗಾಂಧೀಜಿಯವರ ಮುಂದೆ ಹುಯಿಲಗೋಳ ನಾರಾಯಣರಾಯರು ಬರೆದ ಉದಯವಾಗಲಿ ನಮ್ಮ ಚಲುವ ಕನ್ನಡ ನಾಡು ಎಂಬ ಗೀತೆಯನ್ನು ಮೊಳಗಿಸಲಾಯಿತು, ಇದರಿಂದ ೧೯೫೬ ರಲ್ಲಿ ಅಖಂಡ ಕರ್ನಾಟಕ ಉದಯವಾದರು ಭಾಷೆ ಮಾತ್ರ ಬೆಳವಣಿಗೆ ಕಾಣಲೇ ಇಲ್ಲ. ಜಾಗತೀಕರಣ, ಮುಕ್ತ ಆರ್ಥಿಕ ನೀತಿ ಯಂತಹ ಕಾನೂನುಗಳು ಬಡವರ, ರೈತರ ಅವನತಿಗೆ ಕಾರಣವಾದವು ಎಂದು ವಿಷಾದಿಸಿದರು.


ಕಳೆದ ೬೪ ವರ್ಷಗಳೂ ಸಹ ನಮ್ಮನ್ನು ನಮ್ಮವರೇ ಅರಸರಾಗಿ ಆಳಿದ್ದಾರೆ, ನೆಲ, ಜಲ ಮತ್ತು ಭಾಷೆಯ ಬೆಳವಣಿಗೆ ಆಗಲೇ ಇಲ್ಲ, ಸಮಸ್ಯೆಗಳು, ಬಿಕ್ಕಟ್ಟುಗಳ ಪರಿಹಾರವಾಗಲೇ ಇಲ್ಲ. ಆಳುವವರ ಜೊತೆಗೆ ನಾವು ಪೈಪೋಟಿಗೆ ಬಿದ್ದು ಮಕ್ಕಳನ್ನು ಇಂಗ್ಲಿಷ್ ಎಂಬ ಕನಿಷ್ಠ ಕೂಪಕ್ಕೆ ತಳ್ಳುತ್ತಿದ್ದೇವೆ, ಕನ್ನಡವನ್ನು ಉಳಿಸಲು ಎಲ್ಲಾ ವರ್ಗದವರು ಒಂದಾದರೆ ಮಾತ್ರ ಸಾಧ್ಯ ಎಂದರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಹರೂರು ರಾಜಣ್ಣ  ಅಖಂಡ ಕರ್ನಾಟಕವನ್ನು ನಿರ್ಮಾಣ ಮಾಡಲು ಸಾಹಿತಿಗಳು, ಕೆಲ ಮುತ್ಸದ್ದಿ ರಾಜಕಾರಣಿಗಳು, ಕನ್ನಡದ ಕಟ್ಟಾಳುಗಳ ಪರಿಶ್ರಮದಿಂದಾಗಿ ನಾವು ಸಮೃದ್ಧ ಕರ್ನಾಟಕದಲ್ಲಿ ಇದ್ದೇವೆ. ಅಂದಿನ ಹೋರಾಟಕ್ಕೂ ಇಂದಿನ ಹೋರಾಟಕ್ಕೂ ಸಾಮ್ಯವೇ ಇಲ್ಲದಾಗಿದೆ, ನಾಡು ನುಡಿಯ ವಿಷಯ ಬಂದಾಗ ನಾಡಿನವರೆಲ್ಲರೂ ಒಂದಾಗಬೇಕು. ಇಂಗ್ಲಿಷ್ ಭಾಷೆಯನ್ನು ವ್ಯವಹಾರಿಕವಾಗಿ ಬಳಸಿಕೊಂಡು ಮಾತೃಭಾಷೆಯನ್ನು ಹೃದಯಲ್ಲಿಟ್ಟು ಪೂಜಿಸಬೇಕು. ಪ್ರತಿಯೊಬ್ಬ ಕನ್ನಡಿಗನೂ ಇದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ದಂಡಾಧಿಕಾರಿ ಸುದರ್ಶನ್ ರವರು ಕನ್ನಡ ನಮ್ಮ ಜನ್ಮದಾತೆ ಇದ್ದಂತೆ, ಆಕೆಗೆ ಸಣ್ಣ ಪೆಟ್ಟಾದರೂ ಮಕ್ಕಳು ಹೇಗೆ  ನೊಂದುಕೊಳ್ಳುತ್ತಾರೋ ಹಾಗೆ ನಮ್ಮ ಭಾಷೆ ಗೆ ಕೊಂಚ ನೋವಾದರೂ ಸಹಿಸದೇ ನಾಡು ನುಡಿಯ ರಕ್ಷಣೆಗೆ ಬದ್ದರಾಗಿರಬೇಕೆಂದರು.


ಇದೇ ವೇಳೆ ತಾಲ್ಲೂಕಿನ ಹಲವು ಸ್ತರಗಳಲ್ಲಿ ದುಡಿದ ಸಮಾಜ ಸೇವಕರಾದ ದೊಡ್ಡಯ್ಯ, ಕೆಂಚಮ್ಮ, ತ್ರಿಪುರಸುಂದರ ಮತ್ತು ಪೂರ್ಣಿಮಾ ರವರನ್ನು ಸನ್ಮಾನಿಸಲಾಯಿತು. ಸಾಧನೆಗೈದ ಶಾಲಾ ಮಕ್ಕಳನ್ನು ಅಭಿನಂದಿಸಲಾಯಿತು. ಹಲವಾರು ಶಾಲಾ ಮಕ್ಕಳು ವಿವಿಧ ವೇಷ ಭೂಷಣಗಳೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು.


ಕಾರ್ಯಕ್ರಮದಲ್ಲಿ ಕುಕ್ಕುಟ ಮಹಾಮಂಡಳಿಯ ಅಧ್ಯಕ್ಷ ಡಿ ಕೆ ಕಾಂತರಾಜು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿಂ ಲಿಂ ನಾಗರಾಜು, ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷ ಗೋವಿಂದಳ್ಳಿ‌ ನಾಗರಾಜು, ಎಪಿಎಂಸಿ ಅಧ್ಯಕ್ಷ ಯಾಲಕ್ಕೀಗೌಡ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್ ಎಸ್ ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು, ಪೌರಾಯುಕ್ತ ಶಿವಾಂಕರಿಗೌಡ, ರಂಗನಾಥ ಸೇರಿದಂತೆ ಅನೇಕ ಗಣ್ಯರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑