ಕನ್ನಡವನ್ನು ಬಳಸಿ ಬೆಳೆಸಿದರೆ ಶಾಶ್ವತವಾಗಿ ಉಳಿಯಲಿದೆ ಕೆ ಸುಚೇಂದ್ರಪ್ರಸಾದ್
ಚನ್ನಪಟ್ಟಣ: ಕನ್ನಡ ಭಾಷೆಯನ್ನು ಬಳಸಿದಷ್ಟಾದರೂ ಬೆಳೆಸಬೇಕಾಗಿದೆ. ಕನ್ನಡ ನಾಡಿಗೆ ಚನ್ನಪಟ್ಟಣ ತಾಲ್ಲೂಕಿನ ಹಲವಾರು ಹಿರಿಯರು ಕೊಟ್ಟ ಕೊಡುಗೆ ಅಪಾರವಾದುದು. ನಾಡಿಗೆ ನನ್ನ ಮತ್ತು ನನ್ನ ತವರಿನ ಕೊಡುಗೆ ಏನು ಎಂಬುದನ್ನು ಅರಿತುಕೊಳ್ಳುವುದು ನಮ್ಮೆಲ್ಲರ ಅತ್ಯವಶ್ಯ. ನಿಮ್ಮ ತಾಲ್ಲೂಕಿನ ಹಿರಿಮೆಗಳನ್ನು ನೀವು ತಿಳಿಯಬೇಕಾದರೆ ವಿಜಯ್ ರಾಂಪುರ ಸಂಪಾದಿಸಿರುವ ತಾಲ್ಲೂಕಿನ ಪುರಾಣ ಮತ್ತು ಇತಿಹಾಸ ಪುರುಷ ಮತ್ತು ಗ್ರಾಮಗಳ ಇತಿಹಾಸವನ್ನು ಓದಿ ತಿಳಿದುಕೊಳ್ಳಬೇಕು ಎಂದು ಖ್ಯಾತ ರಂಗಭೂಮಿ ಹಾಗೂ ಚಿತ್ರ ನಟ ಕೆ ಸುಚೇಂದ್ರಪ್ರಸಾದ್ ತಿಳಿಸಿದರು.
ಅವರು ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಕನ್ನಡ ಹಬ್ಬ ೨೦೧೯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕನ್ನಡ ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ಹುಟ್ಟಿನಿಂದ ಸಾವಿನವರೆಗೂ ಕನ್ನಡವೇ ಉಸಿರಾಗಿರಬೇಕು, ಕನ್ನಡ ಪರಮವಾದ್ಯ, ಕನ್ನಡದ ಇತಿಹಾಸ ಕೇವಲ ಎರಡು ಸಾವಿರ ವರ್ಷಗಳಷ್ಟೇ ಅಲ್ಲ, ಕ್ರಿಸ್ತಪೂರ್ವ ದಿಂದಲೂ ಕನ್ನಡ ಭಾಷೆ ಇದೆ, ಇದಕ್ಕೆ ದಾಖಲೆಗಳು ಇವೆ. ಕ್ರಿಸ್ತಪೂರ್ವ ದಲ್ಲಿ ಕುಮುದೇಂದ್ರ ಮುನಿ ಎಂಬುವರು ಸಿರಿ ಭೂ ವಲಯ ಎಂಬ ಮುನ್ನೂರಕ್ಕೂ ಹೆಚ್ಚು ಅಧ್ಯಾಯಗಳಿರುವ ಕೃತಿ ರಚಿಸಿದ್ದಾರೆ. ಕನ್ನಡ ಬೌದ್ಧಿಕವಾಗಿ ಸಂಪದ್ಭರಿತವಾಗಿದ್ದು ನಾವುಗಳೇ ಬಳಸಿ ಬೆಳೆಸಬೇಕಾಗಿದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಸುಚೇಂದ್ರಪ್ರಸಾದ್ ರವರು ತಮ್ಮ ಭಾಷಣದಲ್ಲಿ ಆಂಗ್ಲ ಹಾಗೂ ಯಾವುದೇ ಅನ್ಯ ಭಾಷೆ ಬಳಸದೇ ಸಂಪೂರ್ಣ ಕನ್ನಡದಲ್ಲಿಯೇ ಮಾತನಾಡಿದ್ದಲ್ಲದೆ ಬೋಧಕರು ಮತ್ತು ವಿದ್ಯಾರ್ಥಿಗಳ ಮನವಿ ಮೇರೆಗೆ ಗೀತೆಯೊಂದನ್ನು ಹಾಡಿ ರಂಜಿಸಿದರು.
ಸಾಂಸ್ಕೃತಿಕ ಘಟಕದ ಸಂಚಾಲಕರಾದ ಡಾ ಅಣ್ಣಯ್ಯ ತೈಲೂರು ರವರು ಪ್ರಾಸ್ತಾವಿಕ ನುಡಿಗಳನ್ನಾಡಿ ಕನ್ನಡ ಎಂಬುದು ಕೇವಲ ಭಾಷೆ ಯಷ್ಟೇ ಅಲ್ಲ ಅದು ಬಂಗಾರದ ಭಾಷೆ, ಕೇವಲ ನವೆಂಬರ್ ತಿಂಗಳಿಗಷ್ಟೇ ಸೀಮಿತವಾಗದೇ ಜೀವನದ ಕೊನೆಯವರೆಗೆ ಭಾಷಾ ಪ್ರೀತಿ ಇರಬೇಕೆಂದು ತಿಳಿಸಿದರು.
ಪ್ರಾಂಶುಪಾಲ ವೆಂಕಟೇಶ ರವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಜಯರಾಮಯ್ಯ ನವರು ಅತಿಥಿ ಗಳನ್ನು ಸ್ವಾಗತಿಸಿದರು. ಪತ್ರಿಕೋದ್ಯಮ ಪ್ರಾಧ್ಯಾಪಕಿ ಅಶ್ವಿನಿ ರವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕ ಪದ್ಮನಾಭ ರವರು ವಂದನಾರ್ಪಣೆ ಮಾಡಿದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕಾಲೇಜಿನ ಬೋಧಕರು ಮತ್ತು ವಿದ್ಯಾರ್ಥಿಗಳು ಕಾಲೇಜಿನ ಆವರಣದಿಂದ ಹೆದ್ದಾರಿ ಮಾರ್ಗವಾಗಿ ಮೆರವಣಿಗೆ ಹೊರಟು ಹೊಸ ನ್ಯಾಯಾಲಯ, ಮಹಾತ್ಮ ಗಾಂಧಿ ರಸ್ತೆ, ಅಂಚೆ ಕಛೇರಿ ರಸ್ತೆ, ಹಾಗೂ ಬಸ್ ನಿಲ್ದಾಣದ ಮೂಲಕ ಕಾಲೇಜನ್ನು ತಲುಪಿದರು. ಈ ಸಂದರ್ಭದಲ್ಲಿ ಶೃಂಗರಿಸಿದ ಎತ್ತಿನ ಗಾಡಿಗಳಲ್ಲಿ ತಾಯಿ ಭುವನೇಶ್ವರಿ ಹಾಗೂ ನಾಡಿನ ಖ್ಯಾತ ನಾಮರಾದ ಒನಕೆ ಓಬವ್ವ, ಸಂಗೊಳ್ಳಿ ರಾಯಣ್ಣ, ಎಚ್ಚಮನಾಯಕ, ಹಾಗೂ ಎಂಟು ಜನ ಜ್ಞಾನ ಪೀಠ ವಿಜೇತರ ವೇಷಭೂಷಣ ಧರಿಸಿದ ವಿದ್ಯಾರ್ಥಿಗಳು ಹಾಗೂ ಕಲಾ ತಂಡಗಳೊಂದಿಗೆ ಮೆರವಣಿಗೆ ನಡೆಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪೂಜಾಕುಣಿತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಡಾ ಮಧುಸೂದನ್ ಜೋಷಿ ಸೇರಿದಂತೆ ಪ್ರಾಧ್ಯಾಪಕರು ಭಾಗವಹಿಸಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು