ಇಪ್ಪತ್ತಾರು ಮಂದಿಯಿಂದ ಶೆಟ್ಟಿಹಳ್ಳಿ ಕೆರೆ ಒತ್ತುವರಿ ನೋಟೀಸ್ ಜಾರಿ
ಚನ್ನಪಟ್ಟಣ: ನಗರದ ಶೆಟ್ಟಿಹಳ್ಳಿ ಕೆರೆಯ ಒತ್ತುವರಿ ಸರ್ವೇ ಕಾರ್ಯವು ಜಿಲ್ಲಾ ಪಂಚಾಯತಿ ಮತ್ತು ನಗರಸಭೆ ಅಧಿಕಾರಿಗಳ ಸಹಭಾಗಿತ್ವದಲ್ಲಿ ಜಂಟಿಯಾಗಿ ನಡೆಯಿತು. ಈಗಾಗಲೇ ಸರ್ವೇ ನಡೆದು ಗುರುತು ಮಾಡಿದ್ದರೂ ಸಹ ತಾಲ್ಲೂಕು ಆಡಳಿತ, ನಗರಸಭೆ, ಜಿಲ್ಲಾ ಪಂಚಾಯತಿ ಹಾಗೂ ದೂರುದಾರರ ಸಮಕ್ಷಮದಲ್ಲಿ ಸರ್ವೇ ಮಾಡಿಸಿ ಒತ್ತುವರಿ ಮಾಡಿಕೊಂಡಿರುವ ಒಟ್ಟು ಇಪ್ಪತ್ತಾರು ಮಂದಿಗೆ ನೋಟೀಸ್ ನೀಡಲು ತೀರ್ಮಾನಿಸಲಾಗಿದೆ.
ಸತತ ಎರಡು ಗಂಟೆಗಳಿಗೂ ಹೆಚ್ಚು ಕಾಲ ಎಲ್ಲಾ ಅಧಿಕಾರಿಗಳು ಸೇರಿ ಸರ್ವೇ ಕೆಲಸದಲ್ಲಿ ಭಾಗವಹಿಸಿ ಕೆರೆ ಒತ್ತುವರಿ ಮಾಡಿ ಮನೆ ಕಟ್ಟಿಕೊಂಡಿರುವವರಿಗೆ ಶೀಘ್ರವಾಗಿ ತಮ್ಮ ಮನೆಯ ದಾಖಲೆಗಳನ್ನು ಒದಗಿಸುವಂತೆ ಹಾಗೂ ನೋಟೀಸ್ ಗೆ ಉತ್ತರಿಸುವಂತೆ ಸೂಚಿಸಿದರು.
ಸರ್ವೇ ನಂಬರ್ ೧೩ ರಲ್ಲಿರುವ ಶೆಟ್ಟಿಹಳ್ಳಿ ಕೆರೆಯು ಒಟ್ಟು ಒಟ್ಟು ೨೦ ಎಕರೆ ೧೪ ಗುಂಟೆ ಇದ್ದು ೦೧ ಎಕರೆ ೨೮ ಗುಂಟೆ ಒತ್ತುವರಿಯಾಗಿದೆ. ರಸ್ತೆಯ ವಿಸ್ತೀರ್ಣ ೨೬ ಗುಂಟೆಯಿದ್ದು ಹಾಲಿ ೧೮ ಎಕರೆ ಮಾತ್ರ ಉಳಿದಿದ್ದು ಸಾಮಾಜಿಕ ಕಾರ್ಯಕರ್ತರಾದ ವಕೀಲ ಸುರೇಶ್ ಮತ್ತು ಗಜೇಂದ್ರ ಸಿಂಗ್ ರವರು ದಾಖಲೆಗಳ ಸಮೇತ ಬಹುತೇಕ ಇಲಾಖೆಗಳಿಗೆ ದೂರು ಸಲ್ಲಿಸಿದರು. ಲೋಕಾಯುಕ್ತ ಅಧಿಕಾರಿಗಳು ಆಸ್ಥೆ ವಹಿಸಿದ ಕಾರಣ ತಾಲ್ಲೂಕು ಅಧಿಕಾರಿಗಳು ಇಂದು ಸಂಪೂರ್ಣ ಸರ್ವೇ ಮಾಡಿ ಗುರುತಿಸಿ ನೋಟೀಸ್ ನೀಡಲು ತಯಾರಿ ನಡೆಸಿದ್ದಾರೆ.
*ಇದು ಶೆಟ್ಟಿಹಳ್ಳಿ ಕೆರೆಯಲ್ಲ ? ಮಂಗಳವಾರಪೇಟೆ ಕೆರೆ ?*
*ನಮ್ಮ ಇಲಾಖೆಗೆ ಬರುವುದೇ ಇಲ್ಲ ಎಂದು ವಾದ ಮಾಡುತ್ತಿದ್ದ ಜಿಲ್ಲಾ ಪಂಚಾಯತಿ ಎಇಇ ಚನ್ನಪ್ಪ ರವರು ನಮ್ಮ ಇಲಾಖೆಗೆ ಬರುತ್ತದೆ ಎಂದು ಒಪ್ಪಿಕೊಂಡರಲ್ಲದೆ ಇದು ಆಡು ಮಾತಿನಲ್ಲಿ ಶೆಟ್ಟಿಹಳ್ಳಿ ಕೆರೆ ಎಂದು ದಾಖಲೆಗಳಲ್ಲಿ ಮಂಗಳವಾರಪೇಟೆ ಕೆರೆ ಎಂದು ಇದೆ. ಹಾಗಾಗಿ ನಮಗೆ ಗೊಂದಲವಿತ್ತು ಎಂದರು.*
*ಸರ್ವೇ ಕಾರ್ಯ ಮುಗಿದಿದ್ದು ಒತ್ತುವರಿದಾರರಿಗೆ ನೋಟೀಸ್ ನೀಡಲಾಗುವುದು. ನೋಟೀಸ್ ಗೆ ಉತ್ತರಿಸಿದ ನಂತರ ಚರ್ಚಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು.*
*ಸುದರ್ಶನ್ ತಹಶಿಲ್ದಾರ್.*
*ಒತ್ತುವರಿದಾರರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಶೀಘ್ರವಾಗಿ ನೋಟೀಸ್ ಜಾರಿ ಮಾಡಲಾಗುವುದು. ಒದಗಿಸಿದ ದಾಖಲೆಗಳನ್ನು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.*
*ಶಿವನಾಂಕರಿಗೌಡ. ಪೌರಾಯುಕ್ತ.*
*ನಮ್ಮ ಹೋರಾಟಕ್ಕೆ ಜಯ ದೊರಕುವ ಸಾಧ್ಯತೆ ಅಗಾಧವಾಗಿದ್ದು ಅಧಿಕಾರಿಗಳು ಸಾಮಾಜಿಕ ನ್ಯಾಯ ಒದಗಿಸಿಕೊಡುವ ವಿಶ್ವಾಸವಿದೆ. ಶೆಟ್ಟಿಹಳ್ಳಿ ಕೆರೆ ಅಷ್ಟೇ ಅಲ್ಲದೇ ಜಿಲ್ಲಾದ್ಯಂತ ಒತ್ತುವರಿ ಆಗಿರುವ ಸರ್ಕಾರದ ಎಲ್ಲಾ ಜಾಗದ ವಿರುದ್ಧ ಹೋರಾಡಲು ನಾವು ಬದ್ದರಾಗಿದ್ದೇವೆ.*
*ಸುರೇಶ್ ಮತ್ತು ಗಜೇಂದ್ರ ಸಿಂಗ್.*
*ಗೋ ರಾ ಶ್ರೀನಿವಾಸ...*
*ಮೊ:9845856139.*
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು