ನಗರ ವ್ಯಾಪ್ತಿಯ ಸಾತನೂರು ರಸ್ತೆ ಗುಂಡಿಗಳ ಆಗರ ಹೆಸರಿಗಷ್ಟೇ ದ್ವಿಪಥ ರಸ್ತೆ !
ಚನ್ನಪಟ್ಟಣ: ರಾಜ್ಯ ಹೆದ್ದಾರಿ ಸಾತನೂರು ರಸ್ತೆಯಲ್ಲಿ ಕಿರಿದಾದ ರಸ್ತೆಗಳು, ಕಿರಿದಾದ ಸೇತುವೆಗಳು ಹಾಗೂ ಕುಸಿದ ಸೇತುವೆಗಳದ್ದೇ ದರ್ಬಾರು ಎಂಬುದು ಸರ್ವೇಸಾಮಾನ್ಯವಾಗಿದೆ, ಇನ್ನೂ ನಗರ ವ್ಯಾಪ್ತಿ ಅಂದರೆ ಸಾತನೂರು ವೃತ್ತ ದಿಂದ ಮಹದೇಶ್ವರ ದೇವಾಲಯದ ತನಕ ಜೋಡಿ ರಸ್ತೆ ಮಾಡಿದರೂ ಸಹ ಏಕ ವಾಹನ ಸಂಚರಿಸುವಷ್ಟೇ ರಸ್ತೆ ಇದೆ. ರಸ್ತೆ ಅಗಲೀಕರಣ ಎಂದರೆ ಪಾದಚಾರಿ ರಸ್ತೆ (ಫುಟ್ ಪಾತ್) ತೆರವುಗೊಳಿಸಿ ಅಗಲೀಕರಣ ಮಾಡಿದ್ದು ಈಗ ಪಾದಚಾರಿ ರಸ್ತೆಯಾಗಲಿ, ವಾಹನಗಳ ನಿಲುಗಡೆಗೆ ಜಾಗವಿಲ್ಲದೆ ಅಗಲೀಕರಣ ಮಾಡಿದ ರಸ್ತೆಯೇ ಒತ್ತುವರಿಯಾಗಿದೆ.
ಟಿಎಪಿಸಿಎಂಎಸ್ ವಾಣಿಜ್ಯ ಸಂಕೀರ್ಣದ ಮುಂದೆ ಇರುವ ಮುಸ್ಲಿಂ ಸಮುದಾಯದ ಸ್ಮಶಾನ ಇರುವ ಜಾಗದಲ್ಲಿ ಒಂದಿಂಚು ಅಗಲೀಕರಣಗೊಳಿಸದ ಕಾರಣ ರಸ್ತೆ ಇಕ್ಕಟ್ಟಾಗಿದ್ದು ಅಪಘಾತಗಳ ತಾಣವಾಗಿ ಪರಿವರ್ತನೆಗೊಂಡಿದೆ. ರಸ್ತೆ ಕಾಮಗಾರಿಯ ನಂತರ ಅನೇಕ ಇಲಾಖೆಗಳು ರಸ್ತೆ ಅಗೆದು ಕೆಲಸ ನಿರ್ವಹಿಸುತ್ತಿರುವುದರ ಜೊತೆಗೆ ಅಲ್ಲಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ದ್ವಿಚಕ್ರ ವಾಹನಗಳ ಸವಾರರು ಜೀವ ಕೈಲಿಡಿದು ಓಡಾಡುವ ಪರಿಸ್ಥಿತಿ ಎದುರಾಗಿದೆ.
ರಸ್ತೆಯ ಮಧ್ಯಭಾಗದಲ್ಲಿ ಅಡಿಗಳಷ್ಟು ಆಳವಾದ ಗುಂಡಿಗಳು ಬಿದ್ದಿರುವುದು ಒಂದೆಡೆಯಾದರೆ ರಸ್ತೆಯ ತಳಭಾಗದಲ್ಲಿ ಇರುವ ಚರಂಡಿಗಳ ಮೇಲ್ಬಾಗ ಕುಸಿದು ಕಬ್ಬಿಣದ ಸಲಾಖೆಗಳು ಇಣುಕಿದರೂ ಸಹ ಯಾವ ಅಧಿಕಾರಿಯು ಎಚ್ಚೆತ್ತುಕೊಳ್ಳದೆ ಜನರ ಜೀವದ ಜೊತೆ ಚಲ್ಲಾಟವಾಡುತ್ತಿದ್ದಾರೆ.
*ಈಗ ಆರು ತಿಂಗಳ ಹಿಂದೆ ನಮ್ಮ ಇಲಾಖೆಗೆ ಹಸ್ತಾಂತರಗೊಂಡಿದೆ. ವಿವರಗಳನ್ನು ಪರಿಶೀಲಿಸಿ ಗುಂಡಿಗಳನ್ನು ಮುಚ್ಚಲು ಶೀಘ್ರವಾಗಿ ಕ್ರಮಕೈಗೊಳ್ಳುತ್ತೇವೆ.*
*ರಾಜು ಎಇಇ ಜಿಪಂ ವಿಶೇಷ ಉಪವಿಭಾಗ.*
*ರಸ್ತೆ ಕಾಮಗಾರಿ ಮುಗಿದು ಎರಡು ವರ್ಷಗಳಾಗಿವೆ. ಈ ನಡುವೆ ಬಿ ಎಸ್ ಎನ್ ಎಲ್, ನೀರಾವರಿ ಹಾಗೂ ಕೆಪಿಟಿಸಿಎಲ್ ನವರು ರಸ್ತೆ ಬಗೆದಿದ್ದು ಗುಂಡಿಗಳಾಗಿವೆ. ಗುಂಡಿಗಳನ್ನು ಶೀಘ್ರವಾಗಿ ಮುಚ್ಚಿಸುತ್ತೇವೆ.*
*ಪ್ರಕಾಶ್ ಇಂಜಿನಿಯರ್.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು