Tel: 7676775624 | Mail: info@yellowandred.in

Language: EN KAN

    Follow us :


ಗ್ರಾಮ ಪಂಚಾಯತಿ ವಸತಿ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಭಾಗ್ಯವಿಲ್ಲ ಆರೋಪ

Posted date: 12 Nov, 2019

Powered by:     Yellow and Red

ಗ್ರಾಮ ಪಂಚಾಯತಿ ವಸತಿ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ಬಿಡುಗಡೆ ಭಾಗ್ಯವಿಲ್ಲ ಆರೋಪ

ಚನ್ನಪಟ್ಟಣ: ಇಂದಿರಾಗಾಂಧಿ ಆವಾಸ ಯೋಜನೆ, ಅಂಬೇಡ್ಕರ್ ವಸತಿ ಯೋಜನೆ, ಬಸವ ವಸತಿ, ವಾಜಪೇಯಿ ವಸತಿ ಯೋಜನೆ ಸೇರಿದಂತೆ ಗ್ರಾಮ ಪಂಚಾಯತಿ ವತಿಯಿಂದ ಫಲಾನುಭವಿಗಳಿಗೆ ನೀಡುವ ವಿವಿಧ ವಸತಿ ಯೋಜನೆಗಳಿಗೆ ಕಳೆದ ಎರಡು ವರ್ಷಗಳಿಂದ ಸರ್ಕಾರ ಹಣ ಮಂಜೂರು ಮಾಡದಿರುವುದರಿಂದ ತಲೆಯ ಮೇಲೆ ಸೂರು ನಿರ್ಮಿಸಿಕೊಳ್ಳುವ ಬಡವರ ಕನಸು ಕನಸಾಗಿಯೇ ಉಳಿದಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರ ಸಂಘದ ತಾಲ್ಲೂಕು ಅಧ್ಯಕ್ಷ ಹಾಗೂ ಮಳೂರು ಗ್ರಾಮ ಪಂಚಾಯತಿ ಅಧ್ಯಕ್ಷರೂ‌ ಆದ ರಮೇಶ್ ರವರು ಸರ್ಕಾರದ ವಿರುದ್ಧ ಅಸಮಧಾನ ವ್ಯಕ್ತಪಡಿಸಿದರು.

ಅವರು ಇಂದು ನಗರದ ಪ್ರವಾಸಿ ಮಂದಿರದಲ್ಲಿ ಹಲವಾರು ಗ್ರಾಮ ಪಂಚಾಯತಿ ಅಧ್ಯಕ್ಷರ ಜೊತೆ ಸೇರಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.


ರಾಮನಗರ ಜಿಲ್ಲಾ ಜೆಡಿಎಸ್ ನ ಯುವ ಮುಖಂಡ ಜಯಕಾಂತಚಾಲುಕ್ಯ ಮಾತನಾಡಿ ಒಬ್ಬ ಫಲಾನುಭವಿಗೆ ನಾಲ್ಕು ಹಂತದಲ್ಲಿ ಹಣ ಬಿಡುಗಡೆಯಾಗಬೇಕು. ಈ ಹಣವನ್ನು ನಂಬಿಕೊಂಡು ಎಲ್ಲರೂ‌ ತಾವು ವಾಸಿಸುತ್ತಿದ್ದ ಗುಡಿಸಲುಗಳನ್ನು ತೆರವುಗೊಳಿಸಿ ಅಡಿಪಾಯ ಹಾಕಿಕೊಂಡಿದ್ದಾರೆ. ಕೆಲವರಿಗೆ ಒಂದು, ಎರಡು ಕಂತುಗಳ ಹಣ ಮಾತ್ರ ದೊರೆತಿದ್ದು ಅತ್ತ ಗುಡಿಸಲು ಇಲ್ಲದೆ, ಇತ್ತ ಆಶ್ರಯ ಮನೆಯೂ ಇಲ್ಲದೆ ಪರದಾಡುವಂತೆ ಮಾಡಿದ್ದಾರೆ.

ಇದರಿಂದ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರು ತಲೆ ಎತ್ತಿ ಓಡಾಡದಂತಾಗಿದ್ದು ಇನ್ನು ಹದಿನೈದು ದಿನಗೊಳಗಾಗಿ ಹಣ ಬಿಡುಗಡೆ ಮಾಡದಿದ್ದರೆ ತಾಲ್ಲೂಕು ಕಛೇರಿ ಮುಂಭಾಗದಲ್ಲಿ ಫಲಾನುಭವಿಗಳ ಜೊತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.


ಫಲಾನುಭವಿಗಳು ವಾಸ್ತವ ಅರಿಯದೆ ಪಂಚಾಯತಿ ಅಧ್ಯಕ್ಷ ಮತ್ತು ಸದಸ್ಯರೇ ತಡೆ ಹಿಡಿದಿದ್ದಾರೆ, ಮುಂದಿನ ಚುನಾವಣೆ ಗಾಗಿ ಈ ಗಿಮಿಕ್ ಮಾಡುತ್ತಿದ್ದಾರೆ ಎಂದು ನೇರವಾಗಿ ದೂರುತ್ತಿದ್ದು ಮುಜುಗರ ಎದುರಿಸಲಾಗುತ್ತಿಲ್ಲ.

ಬಡವರ ಕಲ್ಯಾಣಕ್ಕಾಗಿ ಸಾವಿರಾರು ಕೋಟಿ ಹಣ ಬಿಡುಗಡೆ ಎಂಬುದು ಸರ್ಕಾರದ ದೊಡ್ಡ ಸುಳ್ಳು ಹೇಳಿಕೆಯಾಗಿದೆ, ಮೊದಲು ಗ್ರಾಮ ಪಂಚಾಯತಿ ವಸತಿ ಯೋಜನೆಗಳಿಗೆ ಹಣ ಬಿಡಗಡೆ ಮಾಡಲಿ. ಇಲ್ಲವಾದರೆ ರಾಜ್ಯಾದ್ಯಂತ ಎಲ್ಲಾ ತಾಲ್ಲೂಕು ಕಛೇರಿಗಳ ಮುಂದೆ ಪ್ರತಿಭಟನೆ ನಡೆಸಲು‌ ಕರೆ ನೀಡಲಾಗುವುದು ಎಂದರು.


ತಗಚಗೆರೆ ಗ್ರಾಮ ಪಂಚಾಯತಿ ಅಧ್ಯಕ್ಷ ಜಿ ಶಿವ ಮಾತನಾಡಿ ತಾಲ್ಲೂಕಿಗೆ ಒಟ್ಟು ನಾಲ್ಕು ಕೋಟಿ ರೂಪಾಯಿಗಳ ಅನುದಾನ ಬಿಡುಗಡೆಯಾಗಬೇಕಿದ್ದು ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತಿ ಅಧಿಕಾರಿ, ಸಮ್ಮಿಶ್ರ ಸರ್ಕಾರದ  ಮುಖ್ಯ ಮಂತ್ರಿ ಕುಮಾರಸ್ವಾಮಿ ಹಾಗೂ ಇಂದಿನ ಜಿಲ್ಲಾ ಉಸ್ತುವಾರಿ ಸಚಿವರಾದಿಯಾಗಿ ಎಲ್ಲಾ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಲಿಖಿತ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶೀಘ್ರವಾಗಿ ಹಣ ಬಿಡುಗಡೆ ಮಾಡುವ ಮೂಲಕ ಸರ್ಕಾರ ಜವಾಬ್ದಾರಿ ಮೆರೆಯಬೇಕು ಎಂದರು.


ಬೇವೂರು ಗ್ರಾಮ ಪಂಚಾಯತಿ ಯ ಪ್ರಭಾರ ಅಧ್ಯಕ್ಷ ಗುರುಲಿಂಗಯ್ಯ ಮಾತನಾಡಿ ವಸತಿ ಯೋಜನೆಯಲ್ಲಿ ಹಣ ನೀಡಲು ಸಹ ನಗರ ಮತ್ತು ಗ್ರಾಮೀಣ ಪ್ರದೇಶ ಜನರಿಗೆ ತಾರತಮ್ಯ ಮಾಡುತ್ತಿದ್ದು ನಗರಕ್ಕೆ ಮೂರು ಲಕ್ಷ, ಗ್ರಾಮೀಣ ಪ್ರದೇಶಕ್ಕೆ ಒಂದು ಲಕ್ಷ ಇಪ್ಪತ್ತು ಸಾವಿರ ರೂಪಾಯಿ ನೀಡುತ್ತಿದೆ. ಕಬ್ಬಿಣ, ಸಿಮೆಂಟ್, ಮರ, ಇಟ್ಟಿಗೆ ಎಲ್ಲರಿಗೂ ಒಂದೇ ದರ ಇರುವುದರಿಂದ ಗ್ರಾಮೀಣ ಪ್ರದೇಶಕ್ಕೂ ಮೂರು ಲಕ್ಷ ರೂಪಾಯಿ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರುಗಳಾದ ಮೈಲನಾಯಕನಹಳ್ಳಿ ಜಯಲಕ್ಷ್ಮಿ, ಬಾಣಗಳ್ಳಿ ಲಕ್ಷ್ಮಿ, ಎಂ ಬಿ ಹಳ್ಳಿ ಚಂದ್ರಶೇಖರ, ತಿಟ್ಟಮಾರನಹಳ್ಳಿ ಅಜಿತ್, ಕೋಡಂಬಳ್ಳಿ ಯ ಶ್ವೇತ ಬಾಬು, ವೈ ಟಿ ಹಳ್ಳಿಯ ಬಸವರಾಜು, ನೀಲಸಂದ್ರದ ನಿರ್ಮಲಾ ಬಸವರಾಜು, ನಾಗವಾರದ ಆರತಿ ಹಾಗೂ ಮುಖಂಡರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑