Tel: 7676775624 | Mail: info@yellowandred.in

Language: EN KAN

    Follow us :


ಸೃಜನಾತ್ಮಕ ಮಹಾ ಕಾವ್ಯಗಳ ಮೂಲಕವೇ ಕನಕದಾಸರು ಇಂದಿಗೂ ಜೀವಂತ. ಭೂಹಳ್ಳಿ ಪುಟ್ಟಸ್ವಾಮಿ

Posted date: 15 Nov, 2019

Powered by:     Yellow and Red

ಸೃಜನಾತ್ಮಕ ಮಹಾ ಕಾವ್ಯಗಳ ಮೂಲಕವೇ ಕನಕದಾಸರು ಇಂದಿಗೂ ಜೀವಂತ. ಭೂಹಳ್ಳಿ ಪುಟ್ಟಸ್ವಾಮಿ

ಚನ್ನಪಟ್ಟಣ: ಪುರಾತನ ಕಾಲದಿಂದ ಇಂದಿನವರೆಗೂ ಕುವೆಂಪು ರವರ ಆದಿಯಾಗಿ ಎಲ್ಲಾ ಕವಿಗಳು ಒಂದು ಅಥವಾ ಎರಡು ಮಹಾ ಕಾವ್ಯಗಳನ್ನಷ್ಟೇ ರಚಿಸಿದ್ದಾರೆ. ಕನಕದಾಸರು ಅವರ ಜೀವಿತಾವಧಿಯಲ್ಲಿ ಹಲವು ಕಾವ್ಯಗಳನ್ನು ಇಂದಿಗೂ ಪ್ರಸ್ತುತವೆನಿಸುವ ಕೀರ್ತನೆಗಳನ್ನು ರಚಿಸಿದ್ದರಿಂದಲೇ ಐದು ನೂರು ವರ್ಷಗಳು ಕಳೆದರೂ ಜನಮಾನಸದಲ್ಲಿ ಅಜರಾಮರವಾಗಿ ಉಳಿಯಲು ಕಾರಣ ಎಂದು ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ ಹೇಳಿದರು.

ಅವರು ಇಂದು ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನಗರಸಭೆಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ದಾಸ ಶ್ರೇಷ್ಠ ಕನಕದಾಸರ ೫೩೨ ನೇ ಜಯಂತಿಯಲ್ಲಿ ಮುಖ್ಯ ಭಾಷಣಕಾರರಾಗಿ ಆಗಮಿಸಿ ಮಾತನಾಡಿದರು.


ಎಲ್ಲಾ ಮಹನೀಯರ ಜಯಂತಿಗಳ ಆಶಯವೂ ಮನಸ್ಸು ಮನಸ್ಸುಗಳ ನಡುವೆ, ಹೃದಯ ಹೃದಯದ ನಡುವೆ, ಕುಲ, ಕೇರಿ, ನಾಡು ನುಡಿ, ದೇಶದೇಶಗಳನ್ನು ಒಗ್ಗೂಡಿಸುವ ಉದ್ದೇಶದಿಂದ ಆಚರಣೆ ಮಾಡುತ್ತಿದ್ದರೂ ಸಹ ಇಪ್ಪತ್ತೊಂದನೇ ಶತಮಾನದಲ್ಲಿಯೂ ಜಾತಿ ವ್ಯವಸ್ಥೆ ತಾಂಡವಾಡುತ್ತಿರುವುದು ವಿಷಾದನೀಯ ಎಂದರು.


ಪ್ರತಿಯೊಂದು ಜಾತಿಯೂ ಉಪಜಾತಿಗಳಿಂದಲೇ ಹೊಡೆದುಹೋಗಿವೆ. ಸಮಾಜದ ಹಿತ ದೃಷ್ಟಿಯಿಂದ ಬದಲಾವಣೆ ಮಾಡಿಕೊಳ್ಳದೆ ಸ್ವಹಿತಕ್ಕೋಷ್ಕರ ಬದಲಾವಣೆ ಮಾಡಿಕೊಳ್ಳುತ್ತಿರುವುದು ನಮಗೆ ಮಾರಕವಾಗಿದೆ. ನಾವುಗಳು ಸಮಾಜವನ್ನು ಒಟ್ಟುಗೂಡಿಸಲು ಶ್ರಮಿಸಬೇಕೆ ವಿನಹ ಜಾತಿಗಳಿಂದ ಹೊಡೆದಾಡಿಕೊಳ್ಳಲು ಅಲ್ಲ.


ಚಂದ್ರವರ್ಮಮೌರ್ಯ, ರೇವಣಸಿದ್ದ, ಸಾಹುಮಹರಾಜ್ ಸೇರಿದಂತೆ ಅನೇಕರು ಕುರುಬ ಸಮುದಾಯದವರು ರಾಜಮಹಾರಾಜರಾಗಿ, ಸಾಧುಸಂತರಾಗಿ ಹೋಗಿದ್ದರೂ ಸಹ ಸಮುದಾಯ ಹಿಂದುಳಿಯಲು ಸಮುದಾಯ ದ ನಾಯಕರೇ ಕಾರಣ ಎಂದು ಅಭಿಪ್ರಾಯ ಪಟ್ಟರು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತಹಶಿಲ್ದಾರ್ ಸುದರ್ಶನ್ ರವರು ಹದಿನೈದನೇ ಶತಮಾನದ ಕನಕದಾಸರ ಕೀರ್ತನೆಗಳು ಇಂದಿಗೂ ಪ್ರಸ್ತುತ, ಅವರ ಜೀವನದ ಆದರ್ಶಗಳನ್ನು ನಾವು ರೂಢಿಸಿಕೊಳ್ಳಬೇಕು ಎಂದರು. ಅವರ ಕೀರ್ತನೆಗಳನ್ನು ಭಜಿಸುವ ಮೂಲಕ ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆನೀಡಿದರು.


ರಾಮನಗರ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿಂಲಿಂ ನಾಗರಾಜು ರವರು ಮಾತನಾಡಿ ಜಗತ್ತಿನಲ್ಲಿ ಜಾತಿ ವ್ಯವಸ್ಥೆ ತೊಲಗಬೇಕು, ಬಸವಣ್ಣನವರು ಸಹ ಆಗಲೇ ಇದನ್ನು ಸಾಧಿಸಿ ತೋರಿಸಿದ್ದಾರೆ. ಅಂಬೇಡ್ಕರ್ ಆದಿಯಾಗಿ ಅನೇಕ ಮಹನೀಯರು ಸಹ ಜಾತಿ ಪದ್ದತಿ ವಿರುದ್ಧ ದನಿ ಎತ್ತಿದ್ದಾರೆ. ೨೧ ನೇ ಶತಮಾನದಲ್ಲಿ ಇರುವ ನಾವು ಎಚ್ಚೆತ್ತುಕೊಂಡಿಲ್ಲದಿರುವುದು ವಿಷಾದ. ಮಹನೀಯರ ಜಯಂತಿ ಗೆ ಅದೇ ಜನಾಂಗದವರು ಪಾಲ್ಗೊಳ್ಳೊತ್ತಿರುವುದು ಇದಕ್ಕೆ ಸಾಕ್ಷಿ ಎಂದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಹರೂರು ರಾಜಣ್ಣನವರು ದಾಸರ ಶ್ರೇಷ್ಠ ಕನಕದಾಸ ರೊಬ್ಬರೇ ಶೂದ್ರ ವ್ಯಕ್ತಿ, ಮಿಕ್ಕ ದಾಸರು ಮೇಲ್ಮಟ್ಟದ ಜಾತಿಯವರು.

ಕನಕದಾಸ ರು ಕೀರ್ತನೆಗಳಿಂದಲೇ ಜನಮಾನಸದಲ್ಲಿ ಉಳಿದುಕೊಂಡಿದ್ದಾರೆ. ಉಡುಪಿಯಲ್ಲಿ ಪ್ರವೇಶ ನಿರಾಕರಿಸಿದ ನಂತರ ಹಾಡಿದ ಕೀರ್ತನೆಯಿಂದಲೇ ಕೃಷ್ಣ ಹಿಂದಿರುಗಿ ದರ್ಶನ ನೀಡಿದ್ದು. ಕಾಗಿನೆಲೆಯಲ್ಲಿ ಕನಕ ಅಧ್ಯಯನ ಪೀಠ ಮಾಡಿರುವುದು ಒಳ್ಳೆಯ ಬೆಳವಣಿಗೆ.

ಅವರ ಕೀರ್ತನೆಗಳನ್ನು ನಿಜ ಜೀವನದಲ್ಲಿ ನಾವು ಅಳವಡಿಸಿಕೊಳ್ಳಬೇಕು ಎಂದರು.


ಮೊದಲಿಗೆ ತಾಲ್ಲೂಕು ಕಛೇರಿಯಿಂದ ಅಲಂಕೃತ ವಾಹನದಲ್ಲಿ ಕನಕದಾಸರ ಭಾವಚಿತ್ರವನ್ನು ಕಲಾಮೇಳಗಳ ಮೂಲಕ ಮೆರವಣಿಗೆ ಮಾಡಲಾಯಿತು. ವೇದಿಕೆ ಕಾರ್ಯಕ್ರಮವನ್ನು ಚೌಪು ಸ್ವಾಮಿ ನಡೆಸಿಕೊಟ್ಟರು. ನಿವೇದಿತಾ ಶಾಲೆಯ ಮಕ್ಕಳು ನಾಡಗೀತೆ ಹಾಡಿದರೆ ಶಿವಬೀರಯ್ಯ ಸ್ವಾಗತಿಸಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಸಿದ್ದರಾಜು ವಂದಿಸಿದರು.


 ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಚಂದ್ರು, ಪೌರಾಯುಕ್ತ ಶಿವಾಂಕರಿಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗರಾಜು ಶಿರಸ್ತರೆದಾರ ಮಹದೇವಯ್ಯ, ವೃತ್ತ ನಿರೀಕ್ಷಕ ಗೋವಿಂದರಾಜು, ರೈತಮುಖಂಡ ಸಿ ಪುಟ್ಟಸ್ವಾಮಿ, ಸಮುದಾಯದ ಮುಖಂಡ ನಾಗಣ್ಣ, ಮಂಜುನಾಥ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑