Tel: 7676775624 | Mail: info@yellowandred.in

Language: EN KAN

    Follow us :


ನೋಂದಣಿ ತಿರುಚಿದ ವಾಹನ ವಶ, ಕ್ರಮ ಕೈಗೊಳ್ಳದ ಪೋಲಿಸರು, ಬಾರದ ಮಾಲೀಕರು

Posted date: 15 Nov, 2019

Powered by:     Yellow and Red

ನೋಂದಣಿ ತಿರುಚಿದ ವಾಹನ ವಶ, ಕ್ರಮ ಕೈಗೊಳ್ಳದ ಪೋಲಿಸರು, ಬಾರದ ಮಾಲೀಕರು

ಚನ್ನಪಟ್ಟಣ: ನಗರದ ಪೋಲಿಸ್ ಠಾಣೆ ವ್ಯಾಪ್ತಿಯ ಪಾರ್ವತಿ ಟಾಕೀಸ್ ರಸ್ತೆಯಲ್ಲಿ ವಾರಸುದಾರರಿಲ್ಲದೆ ನಿಂತಿದ್ದ ಮಾರುತಿ ಓಮ್ನಿ ಕಾರನ್ನು ಗಸ್ತು ಪೋಲಿಸರು ವಶಪಡಿಸಿಕೊಂಡು ಠಾಣೆಯ ಮುಂದೆ ನಿಲ್ಲಿಸಿ ವಾಹನ ಮಾಲೀಕರನ್ನು (ನಿಜವಾದ ಮಾಲೀಕರಲ್ಲ) ಕರೆಸಿ ದಾಖಲೆ ಸರಿ ಇಲ್ಲದ ಕಾರಣ ಅವರನ್ನು ವಾಪಸು ಕಳುಹಿಸಿ, ಕಾರನ್ನು ಪರಿಶೀಲಿಸದೇ, ಬಂದಿದ್ದವರನ್ನು ವಿಚಾರಿಸದೇ ಬೇಜಾವಾಬ್ದಾರಿಯಿಂದ ಅವರು ಕೊಟ್ಟ ಹೇಳಿಕೆಯನ್ನು ಬರೆದುಕೊಂಡು ನ್ಯಾಯಾಲಯಕ್ಕೆ ವರದಿ ಒಪ್ಪಿಸಿ ಕಳೆದ ಮೂರು ತಿಂಗಳಿನಿಂದಲೂ  (೨೦/೦೭/೧೯) ನಿಲ್ಲಿಸಿಕೊಂಡಿರುವುದು ಅನುಮಾನಕ್ಕೆಡೆ ಮಾಡಿದೆ.


*ಕಾರಿನ ನೋಂದಣಿಯೇ ಸರಿ ಇಲ್ಲ*


ಕಾರಿನ ನೋಂದಣಿ ಸಂಖ್ಯೆ *KA 03 CKP 739* ಎಂಬ ಸಂಖ್ಯೆ ಹೊಂದಿದ್ದು ಕರ್ನಾಟಕದ ಯಾವ ಜಿಲ್ಲೆಯಲ್ಲೂ ಸಹ ಈ ನೋಂದಣಿ ಯ ಕಾರು ಇಲ್ಲ.

*CKP 739* ಅಥವಾ *KA 03 739* ಈ ಎರಡೂ ಸಂಖ್ಯೆ ಯಲ್ಲಿಯೂ ಸಹ ಮಾರುತಿ ಓಮ್ನಿ ಕಾರು ನೋಂದಣಿಯಾಗಿಲ್ಲ. *KA 03 CKP 739* ಈ ನೋಂದಣಿ ಇದೆಯಾ ಇಲ್ವಾ ಎಂಬ ಕನಿಷ್ಠ ಜ್ಞಾನವೂ ಇಲ್ಲದೆ ಬಂದಿದ್ದ ಅನಾಮಧೇಯರನ್ನು ಬಿಟ್ಟು ಕಳುಹಿಸಿರುವುದು ಎಷ್ಟು ಸರಿ ?


*ಕಾರು ಮತ್ತು ಸಂಖ್ಯೆ ಪರಿಶೀಲಿಸದೇ ತಪ್ಪು ವರದಿ ಕೋಟ್೯ಗೆ*


ಕಾರಿನ ಹಿಂಬದಿ ಮತ್ತು ಮುಂಬದಿ ಎರಡೂ ಭಾಗದಲ್ಲಿ *KA 03 CK P739 (ಈ ನಂಬರನ್ನು ಸೂಕ್ಷ್ಮವಾಗಿ ಗಮನಿಸಿ)* ಈ ನೋಂದಣಿ ಇದ್ದು *MARUTI-SUZUKI OMNI* ಎಂದೇ ಇದ್ದರೂ ಸಹ ಪೋಲಿಸರು ಗಮನಿಸದೆ ಮಾಲೀಕರು ಎನಿಸಿಕೊಂಡವರು ನೀಡಿದ ವರದಿಯಾದ *MARUTI 800, Chassis no 71600. Engine no 120177, ಸಂತನು ಮುಖ್ಯೋಪಾಧ್ಯಾಯ, ಸಿ-೧೦/೧೪೨೫. ಬಿಡಿಎ ಫ್ಲಾಟ್ಸ್, ಆಸ್ಟಿನ್ ಟೌನ್, ಬೆಂಗಳೂರು ೪೩ ಎಂದು ನಮೂದಿಸಿ PF No 19/2019. L pet no 248/19* ಎಂದು ನ್ಯಾಯಾಲಯಕ್ಕೆ  ವರದಿ ಒಪ್ಪಿಸಿ ಕೈ ತೊಳೆದುಕೊಂಡಿರುವುದು ಸಾರ್ವಜನಿಕರ ಟೀಕೆಗೆ ಗುರಿಯಾಗಿದ್ದಾರೆ.


ಈಗಾಗಲೇ ರಾಮನಗರ ದಲ್ಲಿ ಉಗ್ರರನ್ನು ಎರಡು ಬಾರಿ ಬಂಧಿಸಿದ್ದು ರಾಮನಗರ ಮತ್ತು ಚನ್ನಪಟ್ಟಣ ದಲ್ಲಿ ಬಾಂಗ್ಲಾ ವಲಸಿಗರು ಇರುವ ಸಾಧ್ಯತೆ ಇದ್ದು ಪೋಲಿಸರು ಇಂತಹ ಅನಾಮಧೇಯ ಹಾಗೂ ತಿರುಚಿದ ನೋಂದಣಿ ಯ ವಾಹನಗಳ ಮೇಲೆ ಕಣ್ಣಿಟ್ಟು ಅನುಮಾನ ಬಂದ ತಕ್ಷಣ ವಿಚಾರಣೆಗೆ ಒಳಪಡಿಸುವುದು ಸೂಕ್ತ ಎಂಬುದು ಸಾರ್ವಜನಿಕರ ಕೋರಿಕೆಯಾಗಿದೆ.


*ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದು ಪರಶೀಲಿಸಿ ತಪ್ಪಿತಸ್ಥರ ವಿರುದ್ಧ ಶೀಘ್ರವಾಗಿ ಕಾನೂನು ಕ್ರಮ ಕೈಗೊಳ್ಳುತ್ತೇನೆ.*

*ರಾಮರಾಜನ್ ಐಪಿಎಸ್. ಎಸಿಪಿ ಚನ್ನಪಟ್ಟಣ*


*ಗೋಪಣ್ಣ ಎಂಬ ವ್ಯಕ್ತಿ ಕಳೆದ ಮೂರು ವರ್ಷಗಳಿಂದ ನಮ್ಮ ಶಾಲೆಗೆ ಸ್ವೆಟರ್ ತಂದುಕೊಡುತ್ತಿದ್ದು ಆಗಾಗ್ಗೆ ತನ್ನ ಕಾರನ್ನು ಹದಿನೈದು ಇಪ್ಪತ್ತು ದಿನ ಇಲ್ಲೇ ಬಿಟ್ಟು ಹೋಗುತ್ತಿದ್ದರು. ಪೋಲಿಸರು ವಶಪಡಿಸಿಕೊಂಡ ನಂತರವೇ ನನಗೆ ಈ ನೋಂದಣಿ ಸರಿಯಲ್ಲ ಎಂದು ಗೊತ್ತಾಗಿದೆ. ಅವರ ವೈಯುಕ್ತಿಕ ಮಾಹಿತಿ ಇಲ್ಲ.*

*ಸುಬ್ಬಯ್ಯಚೆಟ್ಟಿ ಬಾಲು ಪಬ್ಲಿಕ್ ಶಾಲೆ ಮುಖ್ಯಸ್ಥ.*


*ನಾನು ಆ ವ್ಯಕ್ತಿಗಳನ್ನು ನೋಡಿದ್ದೇನೆ, ಸಭ್ಯರಂತೆ ಕಾಣಿಸುವುದಿಲ್ಲ. ನಂಬರ್ ಸರಿ ಇಲ್ಲದಿದ್ದರೂ ಪೋಲಿಸರು ಮಾಹಿತಿ ಸಂಗ್ರಹಿಸದಿರುವುದು ಒಳ್ಳೆಯ ಬೆಳವಣಿಗೆ ಅಲ್ಲ.*

*ಲ್ಯಾಬ್ ಚಂದ್ರು, ಚನ್ನಪಟ್ಟಣ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑