Tel: 7676775624 | Mail: info@yellowandred.in

Language: EN KAN

    Follow us :


ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ

Posted date: 28 Nov, 2019

Powered by:     Yellow and Red

ಕಟ್ಟಿದ ಮೋರಿ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆ ಕೊಳಚೆ ನೀರು ಮನೆ ಮತ್ತು ಹೆದ್ದಾರಿಗೆ

ಚನ್ನಪಟ್ಟಣ:ನ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಬೆಂಗಳೂರು ಮೈಸೂರು ಹೆದ್ದಾರಿಯ ರಸ್ತೆಯ ವಿಳಂಬದಿಂದ ಹಾಗೂ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಏನೂ ಮಾಡಲಾಗದು ಎಂದು ಕೈಚೆಲ್ಲಿದ ನಗರಸಭೆಯ ಅಧಿಕಾರಿಗಳಿಂದ ಮಾರುತಿ ಮತ್ತು ಅನ್ನಪೂರ್ಣೇಶ್ವರಿ ಬಡಾವಣೆಯೊಳಗೆ ಮತ್ತು ಇಪ್ಪತ್ತು ಮೀಟರ್ ನಷ್ಟು ಉದ್ದದ ಹೆದ್ದಾರಿಯಲ್ಲಿ ಹರಿಯುತ್ತಿದ್ದರೆ, ಮಾರುತಿ ಬಡಾವಣೆ ಯಲ್ಲಿ ಮನೆಗಳಿಗೆ ನೀರು ಹರಿಯುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದರು. ಪಾದಚಾರಿ ಪ್ರಯಾಣಿಕರು ಸಂಚರಿಸಲು ಸಾಧ್ಯವಾಗದೇ ರೋಗರುಜಿನ ಬರುವುದೆಂದು ಹೆದರಿ ಕೂರುವ ಸ್ಥಿತಿ ನಿರ್ಮಾಣವಾಗಿದೆ.


ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಸ್ಪನ್ ಸಿಲ್ಕ್ ಮಿಲ್ ಪಕ್ಕದಲ್ಲಿರುವ ಕೊಳ ದ ಬಲಭಾಗದಿಂದ ಇಪ್ಪತ್ತು ಮೀಟರ್ ನಷ್ಟು ಉದ್ದದ ವರೆಗೂ ನಗರದಿಂದ ಮೋರಿಯಲ್ಲಿ ಹರಿದು ಬರುವ ನೀರಿನ ಜೊತೆಗೆ ಮಾರುತಿ ಬಡಾವಣೆ ಯ ನೀರು ಸಹ ಸೇರಿಕೊಂಡು ರಸ್ತೆಯ ಮೇಲ್ಭಾಗದಲ್ಲಿ ಹರಿಯುತ್ತಿದೆ. ನ್ಯಾಯಾಲಯದ ಆವರಣದ ಮುಂದಿನ ರಸ್ತೆಯ ಮೋರಿಯಲ್ಲಿ ನೀರು ನಿಂತು ಗಬ್ಬುನಾರುತ್ತಿದೆ. ಬಸ್ಸಿಗಾಗಿ ಕಾಯುವ ಪ್ರಯಾಣಿಕರು, ವಾಣಿಜ್ಯ ಮಳಿಗೆಗಳ ಮಾಲೀಕರು ಹಾಗೂ ನಿವಾಸಿಗಳು ನಗರಸಭೆ ಮತ್ತು ಪ್ರಾಧಿಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.


ಹಿಂದುಳಿದ ವರ್ಗಗಳ ಪದವಿ ಪೂರ್ವ ಪುರುಷರ ವಿದ್ಯಾರ್ಥಿ ನಿಲಯ ಮತ್ತು ಇಂಡಿಯನ್ ಆಕ್ಸ್‌ಫರ್ಡ್ ಖಾಸಗಿ ಶಾಲೆಯು ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿದ್ದು ವಿದ್ಯಾನಿಕೇತನ ಶಾಲೆ ಮಾರುತಿ ಬಡಾವಣೆಯಲ್ಲಿದ್ದು ಮಕ್ಕಳಿಗೆ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಮೋರಿ ನೀರು ಮೇಲ್ಭಾಗದಲ್ಲೇ ಹರಿಯುತ್ತಿರುವುದರಿಂದ ಮನೆಗಳಲ್ಲಿ ವಾಸ ಮಾಡಲಾಗುತ್ತಿಲ್ಲ. ದಯಮಾಡಿ ಸಂಬಂಧಿಸಿದ ಅಧಿಕಾರಿಗಳು ಶೀಘ್ರವಾಗಿ ಒಳಚರಂಡಿಯಲ್ಲಿ ನೀರು ಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಆಗ್ರಹಿಸಿದ್ದಾರೆ.


ದೂರುಗಳ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಪೌರಾಯುಕ್ತ ಶಿವನಂಕಾರಿಗೌಡ, ಆರೋಗ್ಯ ಅಧಿಕಾರಿ ವರಲಕ್ಷ್ಮಿ, ಶಿವಕುಮಾರ್, ಎಇಇ ಭಗವಾನ್ ಮತ್ತು ಸ್ಥಳೀಯರಾದ ನಾಗರಾಜು ಎಂ.ಪಿ. ಸುಚೀಂದ್ರಕುಮಾರ್, ಜಯಲಿಂಗಣ್ಣ ಮತ್ತಿತರಿದ್ದರು.


*ಚನ್ನಪಟ್ಟಣ ದಲ್ಲಿ ಸಂಪೂರ್ಣ ರಾಜಕಾಲುವೆ ಮುಚ್ಚಿಹೋಗಿದ್ದು ಕಳೆದ ಬಾರಿ ಮೂವತ್ತೊಂದೂವರೆ ಕೋಟಿ ರೂಪಾಯಿಗಳಿಗೆ ಅನುಮೋದನೆ ದೊರೆತಿರುವುದಾಗಿ ಮಾಹಿತಿ ಇದೆ. ನಾಳೆ ಜಾಗ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳುತ್ತೇವೆ.*

*ಜಯಕುಮಾರ್ ಹೈವೇ ಎಇಇ*


*ಈಗತಾನೇ ಜಾಗವನ್ನು ಪರಿಶೀಲಿಸಿದ್ದೇನೆ, ಹೆದ್ದಾರಿ ಪ್ರಾಧಿಕಾರಕ್ಕೂ ಪತ್ರ ಬರೆದಿದ್ದೇನೆ, ನಮ್ಮ ಇಲಾಖೆ ಅಧಿಕಾರಿಗಳು ಮತ್ತು ಮತ್ತು ಸಂಬಂಧಿಸಿದ ಇತರೆ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ.*

*ಶಿವನಂಕಾರಿಗೌಡ. ಪೌರಾಯುಕ್ತರು. ಚನ್ನಪಟ್ಟಣ.*


*ನಾನು ಅಧಿಕಾರ ವಹಿಸಿಕೊಂಡು ಎರಡುವಾರ ಆಗಿದೆ, ಸಂಪೂರ್ಣ ಮಾಹಿತಿ ಇಲ್ಲ. ನಾಳೆ ಬೆಳಿಗ್ಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಒಗ್ಗೂಡಿ ತೀರ್ಮಾನ ಕೈಗೊಳ್ಳುತ್ತೇವೆ.*

*ಸದಾಶಿವೇಗೌಡ. ಕಣ್ವ ಎಇಇ.*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Recent news in ramanagara »

ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ

ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)

ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ

ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.

ಚನ್ನಪಟ್ಟಣ :  ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ

ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು

ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ

ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್

ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ

ರಾಮನಗರ, ಫೆ. 16  ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ

ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ

ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ

ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ

ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು,  ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ

ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು

ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ

ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್

ರಾಮನಗರ, ಫೆ. 12:   ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ

ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್


ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ

Top Stories »  


Top ↑