ದೂರು ಮತ್ತು ವರದಿಗೆ ಸ್ಪಂದಿಸಿದ ಅಧಿಕಾರಿಗಳು, ಕೊಳಚೆ ನೀರಿಗೆ ತಾತ್ಕಾಲಿಕ ರಿಲೀಫ್
ಚನ್ನಪಟ್ಟಣ: ಮಾರುತಿ ಬಡಾವಣೆಯಲ್ಲಿ ಕೊಳಚೆ ನೀರು ಹರಿಯುತಿದ್ದು ಮನೆಗಳಿಗೆ ನುಗ್ಗುತಿದ್ದರ ಬಗ್ಗೆ ಅಲ್ಲಿಯ ನಿವಾಸಿಗಳು ನಗರಸಭೆಗೆ ದೂರು ನೀಡಿದ್ದಲ್ಲದೇ ನಮ್ಮ ಪತ್ರಿಕೆಯಲ್ಲಿ ವಿವರವಾಗಿ ಸಮಸ್ಯೆಯನ್ನು ತೆರೆದಿಡಲಾಗಿತ್ತು.
ವರದಿಗೆ ಸ್ಪಂದಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕಣ್ವ ಏತ ನೀರಾವರಿ ಮತ್ತು ನಗರಸಭೆಯ ಅಧಿಕಾರಿಗಳು ಇಂದು ಒಗ್ಗೂಡಿ ಸ್ಥಳ ಪರಿಶೀಲನೆ ನಡೆಸಿ ಸದ್ಯಕ್ಕೆ ತಾತ್ಕಾಲಿಕವಾಗಿ ಕೊಳಚೆ ನೀರನ್ನು ಹೊರಬಿಡಲು ಕ್ರಮಕೈಗೊಂಡರು.
ರಾಮಮ್ಮನ ಕೆರೆ ಅಚ್ಚುಕಟ್ಟು ಪ್ರದೇಶದ ನೀರು ಮತ್ತು ಕೋಟೆ ಪ್ರದೇಶದ ಕಡೆಯಿಂದ ಬರುವ ಕೊಳಚೆ ನೀರು ಒಟ್ಟಾಗಿ ಮಾರುತಿ ಬಡಾವಣೆಯ ಕಾಲುವೆಯ ಮೂಲಕ ಹೆದ್ದಾರಿಯ ಚರಂಡಿಯನ್ನು ಸೇರುತ್ತದೆ. ಆದರೆ ಹೆದ್ದಾರಿಯ ಚರಂಡಿ ಕಾಮಗಾರಿ ಪೂರ್ಣಗೊಳ್ಳದೆ ಹಾಗೂ ಹನ್ನೊಂದನೇ ಅಡ್ಡ ರಸ್ತೆಯಲ್ಲಿ ಆಳದ ಚರಂಡಿ ಹೂತು ಹೋಗಿರುವುದರಿಂದ ನೀರು ಶೇಖರಣೆಗೊಂಡು ಮನೆಗಳಿಗೆ ನುಗ್ಗುತ್ತಿರುವುದಾಗಿ ಸ್ಥಳೀಯರ ದೂರಿನ ಮೇರೆಗೆ ಇಂದು ಮೂರು ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದರು.
ಮೂರು ಇಲಾಖೆಯ ಅಧಿಕಾರಿಗಳು ಸಮಾಲೋಚಿಸಿದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಜಯಕುಮಾರ್ ರವರು ಹನ್ನೊಂದನೇ ತಿರುವಿನ ರಸ್ತೆಯನ್ನು ಬಗೆದು ನಿಂತ ನೀರು ಸರಾಗವಾಗಿ ಹರಿದು ಹೋಗುವಂತೆ ಜೆಸಿಬಿ ಮೂಲಕ ಕಾಲುವೆಯನ್ನು ದುರಸ್ತಿ ಮಾಡಿಸಿದರು.
ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಜಯಕುಮಾರ್ ಮತ್ತು ಸಿಬ್ಬಂದಿ, ಕಣ್ವ ಏತ ನೀರಾವರಿ ಇಂಜಿನಿಯರ್ ಗಳು ಮತ್ತು ಸಿಬ್ಬಂದಿ, ನಗರಸಭೆಯ ಆರೋಗ್ಯ ಇಲಾಖೆಯ ಅಧಿಕಾರಿ ವರಲಕ್ಷ್ಮಿ, ಮತ್ತು ಸಿಬ್ಬಂದಿ, ಮುಖಂಡರಾದ ಉಮಾಶಂಕರ್, ಗೋವಿಂದಳ್ಳಿ ನಾಗರಾಜು, ಚೇತನ್ ಕೀಕರ್, ಕೆಂಚೇಗೌಡ ಹಾಗೂ ಸ್ಥಳೀಯರು ಹಾಜರಿದ್ದರು.
*ಹೆದ್ದಾರಿಗೆ ಸಂಬಂಧಿಸಿದ ಕೆಲಸವನ್ನು ನಾವು ಸಂಪೂರ್ಣವಾಗಿ ಮಾಡಿಮುಗಿಸುತ್ತೇವೆ. ೧೯೫೬ ರಲ್ಲಿ ಆದ ಹಳೆಯ ಚರಂಡಿಯಾಗಿದ್ದು ಒಂದು ಬಾರಿಯೂ ರಿಪೇರಿಯಾಗದ ಕಾರಣ ಮುಚ್ಚಿಹೋಗಿದ್ದು ತಾತ್ಕಾಲಿಕವಾಗಿ ಪರಿಹಾರ ಒದಗಿಸುತ್ತೇವೆ.*
*ಮೋಹನಲಾಲ್. ರಾಷ್ಟ್ರೀಯ ಹೆದ್ದಾರಿ ಇಇ*
*ಕಣ್ವ ನೀರಾವರಿ ಇಲಾಖೆಗೆ ಹಣ ಬಿಡುಗಡೆ ತಾಂತ್ರಿಕವಾಗಿ ನಿಧಾನವಾಗಿದ್ದು ಹಣ ಬಿಡುಗಡೆಯಾದ ತಕ್ಷಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತೇವೆ.*
*ಸದಾಶಿವೇಗೌಡ.ಎಇಇ. ಕಣ್ವ ಏತ ನೀರಾವರಿ.*
*ಸಂಬಂಧಿಸಿದ ಎಲ್ಲಾ ಇಲಾಖೆಯ ಅಧಿಕಾರಿಗಳನ್ನು ಒಗ್ಗೂಡಿಸಿ ಚರ್ಚಿಸಿ ಸ್ಥಳ ಪರಿಶೀಲನೆ ಮಾಡಿದ್ದಲ್ಲದೆ ಹೆದ್ದಾರಿ ಇಲಾಖೆಯ ಅಧಿಕಾರಿಗಳು ತಕ್ಷಣ ತಾತ್ಕಾಲಿಕ ಕ್ರಮ ಕೈಗೊಂಡಿದ್ದಾರೆ. ಶಾಶ್ವತ ಪರಿಹಾರ ಕೈಗೊಳ್ಳಲು ಎಲ್ಲರೂ ಪ್ರಯತ್ನಿಸುತ್ತೇವೆ.*
*ಶಿವನಂಕಾರಿಗೌಡ. ಪೌರಾಯುಕ್ತರು ನಗರಸಭೆ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು