ಸುದ್ದಿ ಎಫೆಕ್ಟ್ ನಕಲಿ ಬಾಬಾ ಆರೆಸ್ಟ್
ಶಿಕ್ಷಕಿ ಯಶೋಧಮ್ಮ ನವರ ಮನೆಯಲ್ಲಿ ಭಜನೆ ಮಾಡುತ್ತಿರುವ ಜಾದೂ ಸಾಯಿಬಾಬಾ
ಚನ್ನಪಟ್ಟಣ: ಸಾಯಿಬಾಬಾ ನ ಪುನರವತಾರ ಪ್ರೇಮಸಾಯಿ ಎಂದು ನಗರದೆಲ್ಲೆಡೆ ಓಡಾಡಿಕೊಂಡು ಅಂಧ ಭಕ್ತರಿಗೆ ಜಾದೂ ಮೂಲಕ ಭಸ್ಮ ನೀಡಿ ದೇವಾತೀಥ್ಯ ಸ್ವೀಕರಿಸಿತ್ತಿದ್ದ ಸಂತೋಷ್ ಅಲಿಯಾಸ್ ಆಲಿ (ಫಕೀರ) ನನ್ನು ಗ್ರಾಮಾಂತರ ಠಾಣೆಯ ಪೋಲೀಸರು ಬಂಧಿಸಿದ್ದು ವಿಚಾರಣೆ ನಡೆಸಿ ಭಕ್ತರ ಕೋರಿಕೆಯ ಮೇರೆಗೆ ಕಳುಹಿಸಿಕೊಟ್ಟಿದ್ದಾರೆ.
ನವೆಂಬರ್ ೨೬ ರ ಮಂಗಳವಾರ ಸುದ್ದಿ ತಿಳಿದ ತಕ್ಷಣ ಜಾದೂ ಬಾಬಾ ನ ಬೆನ್ನತ್ತಿ ಮಾಹಿತಿ ಕಲೆಹಾಕಿ *ನಗರಕ್ಕೆ ಜಾದೂ ಸಾಯಿಬಾಬಾ. ಜನಮರಳೋ ಜಾತ್ರೆ ಮರಳೋ !?* ಎಂದು ಸುದ್ದಿ ಪ್ರಕಟಿಸಲಾಗಿತ್ತು. ನಂತರ ಬಹುತೇಕ ಪತ್ರಿಕೆಗಳು ಮತ್ತು ದೃಶ್ಯ ಮಾಧ್ಯಮದಲ್ಲಿ ಸುದ್ದಿ ಭಿತ್ತರಗೊಳ್ಳುತ್ತಿದ್ದಂತೆ ಎಚ್ಚೆತ್ತ ಗ್ರಾಮಾಂತರ ಪೋಲೀಸರು ಎಸ್ಪಿ ಅನೂಪ್ ಶೆಟ್ಟಿ ಹಾಗೂ ಎಎಸ್ಪಿ ರಾಮರಾಜನ್ ನೇತೃತ್ವದಲ್ಲಿ ವೃತ್ತ ನಿರೀಕ್ಷಕ ವಸಂತ್, ಪಿಎಸ್ಐ ಪ್ರಕಾಶ್ ಮತ್ತು ಸಿಬ್ಬಂದಿಗಳು ನಕಲಿ ಬಾಬಾ ನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಯಾವುದೇ ದಾಖಲೆಗಳಿಲ್ಲದ ಕಾರಣ ಹಾಗೂ ಆತ ಯಾರಿಗೂ ಹಣದ ವಿಷಯವಾಗಿ ವಂಚಿಸಿಲ್ಲದ್ದರಿಂದ ಕೆಲವು ಭಕ್ತರ ಕೋರಿಕೆಯ ಮೇರೆಗೆ ಬಿಡುಗಡೆ ಮಾಡಿದ್ದಾರೆ.
ಈ ವಿಷಯವಾಗಿ ಮಾತನಾಡಿದ ಪ್ರೇಮಸಾಯಿ ದೇವಾಲಯದ ನಿರ್ಮಾತೃ ಡಾ ಶ್ರೀನಿವಾಸ ರವರು ಅವರ ಬಳಿ ಯಾವುದೇ ವೈಯುಕ್ತಿಕ ದಾಖಲೆಗಳಿರಲಿಲ್ಲ, ಅವರು ಮುಂದಿನ ಮೇ ೦೪ ನೇ ತಾರೀಖಿನಂದು ಮತ್ತೆ ನಗರಕ್ಕೆ ಬಂದು ತಾವು ಸತ್ಯಸಾಯಿಬಾಬಾ ನ ಪುನರವತಾರ ಎಂಬುದನ್ನು ಸಾಬೀತು ಪಡಿಸುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.
ನಕಲಿ ಬಾಬಾ ನನ್ನು ಮನೆಗೆ ಬರಮಾಡಿಕೊಂಡು ಪಾದಪೂಜೆ ಮಾಡಿ ಹಲವಾರು ಭಕ್ತರಿಗೆ ಪರಿಚಯಿಸಿಕೊಟ್ಟಿದ್ದ ಶಿಕ್ಷಕಿ ಯಶೋಧ ರವರು ನಾವು ದೇವರನ್ನು ಬಹಳವಾಗಿ ನಂಬುವವರಿದ್ದು ದೇವರ ಹೆಸರಿನಲ್ಲಿ ಬಂದ ಅವರನ್ನು ನಂಬಿದ್ದೇವೆ. ಪೋಲಿಸರ ವಿಚಾರಣೆಯಿಂದ ಅವರು ಭಿಕ್ಷುಕ ಎಂದಿದ್ದಾರೆ. ಈ ಕಾರಣದಿಂದ ಭಕ್ತಾದಿಗಳು ಅವರನ್ನು ಬಿಡಿಸಿ ಕಳುಹಿಸಿಕೊಟ್ಟಿದ್ದಾರೆ ಎಂದು ಸಮರ್ಥಿಸಿಕೊಂಡರು.
ಎಎಸ್ಪಿ ರಾಮರಾಜನ್ ರವರು ಅವರು ದೇವರ ಹೆಸರೇಳಿ ಭಕ್ತರನ್ನು ವಂಚಿಸಿದ್ದಾರೆ. ಬೇರೆ ಯಾವುದೇ ರೀತಿಯಲ್ಲಿ ಅವರು ಯಾರನ್ನೂ ವಂಚಿಸಿಲ್ಲ, ಭಕ್ತರ ಕೋರಿಕೆಯ ಮೇರೆಗೆ ಮುಚ್ಚಳಿಕೆ ಬರೆಸಿಕೊಂಡಿದ್ದು ಕಳುಹಿಸಿಕೊಟ್ಟಿದ್ದೇವೆ ಎಂದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು