ನಗರಸಭೆ ವ್ಯಾಪ್ತಿಯಲ್ಲಿ ಕೆ ಆರ್ ಐ ಡಿ ಎಲ್ ನಿಂದ ಅರ್ಧಂಬರ್ಧ ಕೆಲಸ, ಸೊಂಟ ಮುರಿದುಕೊಂಡ ಅಂಧ ವೃದ್ಧ.
ಚನ್ನಪಟ್ಟಣ: ನಗರದ ಮಹಾತ್ಮ ಗಾಂಧಿ ರಸ್ತೆಯ ಐದು ದೀಪಗಳ (ಡೂಂಲೈಟ್ ಸರ್ಕಲ್) ವೃತ್ತ ದ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಪ್ರಾರಂಭಿಸಿದ ಕೆ ಆರ್ ಐ ಡಿ ಎಲ್ ಸಂಸ್ಥೆಯು ಎರಡು ತಿಂಗಳು ಕಳೆದರೂ ಸಹ ಕೆಲವೇ ಮೀಟರ್ ಚರಂಡಿ ಮತ್ತು ರಸ್ತೆಯ ಕಾಮಗಾರಿಯನ್ನು ಮುಗಿಸದಿರುವುದರಿಂದ ಪ್ರಯಾಣಿಕರು ಮತ್ತು ಶಾಲಾ ಮಕ್ಕಳಿಗೆ ಅನಾನುಕೂಲ ಉಂಟಾಗಿರುವುದಲ್ಲದೆ ಅಂಧ ವೃದ್ಧರೊಬ್ಬರು ಚರಂಡಿಗೆ ಬಿದ್ದು ಸೊಂಟ ಮತ್ತು ತೊಡೆಯ ಮಧ್ಯ ಭಾಗದ ಮೂಳೆ ಮುರಿದುಕೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕಾಮಗಾರಿಯ ಗುತ್ತಿಗೆಯನ್ನು ಬೆಂಗಳೂರಿನ ಜೆಡಿಎಸ್ ಪಕ್ಷದ ಪ್ರಭಾವಿ ನಾಯಕರ ಮಗ ಪಡೆದುಕೊಂಡಿದ್ದು ಚುನಾವಣೆಯ ಒತ್ತಡದಿಂದ ಕೆಲಸ ತಡವಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆಯಾದರೂ ಸಂಬಂಧಿಸಿದ ಅಧಿಕಾರಿ ಲಕ್ಷ್ಮಿಶ್ರೀ ಯವರ ಮೊಬೈಲ್ ನಂಬರ್ ೯೯******೬೩ ಗೆ ಆರು ಬಾರಿ ಕರೆ ಮಾಡಿ ಸಂದೇಶ ಕಳುಹಿಸಿದರೂ ಕರೆ ಸ್ವೀಕರಿಸದೇ, ಸಂದೇಶಗಳಿಗೂ ಉತ್ತರಿಸದಿರುವುದರಿಂದ ಈ ಕಾಮಗಾರಿಯಲ್ಲಿ ಇವರ ಪಾಲೇ ಹೆಚ್ಚಿರಬಹುದೇನೋ ಎಂದು ಮನದಟ್ಟಾಗುತ್ತದೆ ?
*ಶಾಲಾ ಸಿಬ್ಬಂದಿ ಮತ್ತು ನಾಗರೀಕರಿಂದ ದೂರು.*
ಪೆಟ್ಟಾ ಶಾಲೆಯ ಮಕ್ಕಳು ಓಡಾಡಲಾದರು ಚರಂಡಿಗೆ ಸ್ಲ್ಯಾಬ್ ಅಳವಡಿಸದೆ ಸಣ್ಣ ಸಣ್ಣ ಮಕ್ಕಳು ಅಷ್ಟು ದೊಡ್ಡ ಚರಂಡಿ ದಾಟಲಾಗದೆ ಮುಗ್ಗರಿಸಿ ಬಿದ್ದಿರುವುದಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಹಾಗೂ ಸಿಬ್ಬಂದಿಗಳು ಹಾಗೂ ಸ್ಥಳೀಯ ನಾಗರೀಕರಾದ ನವೀನ್ ಮತ್ತು ಸಂಗಡಿಗರು ಇಂದು ನಗರಸಭೆಯ ಪೌರಾಯುಕ್ತರಿಗೆ ದೂರು ನೀಡಿದ್ದಾರೆ.
*ಮಾಹಿತಿಯನ್ನೇ ನೀಡಿಲ್ಲ ಪೌರಾಯುಕ್ತ.*
ಕೆ ಆರ್ ಐ ಡಿ ಎಲ್ ನವರು ನಗರಸಭಾ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕಾದರೆ ನಮ್ಮ ಗಮನಕ್ಕೆ ತಂದು ಅನುಮತಿ ಪಡೆಯಬೇಕು, ಇದುವರೆಗೂ ಅವರು ನಮ್ಮ ಗಮನಕ್ಕೆ ತಂದಿಲ್ಲ. ಕರೆಗೂ ಸ್ಪಂದಿಸುತ್ತಿಲ್ಲ, ಈ ದೂರುಗಳನ್ನಾಧರಿಸಿ ಇಲಾಖೆಯ ಮುಖ್ಯಸ್ಥರಿಗೆ ಇಂದೆ ಪತ್ರ ಬರೆಯುತ್ತೇನೆ ಎಂದು ಪೌರಾಯುಕ್ತ ಶಿವನಂಕಾರಿಗೌಡ ತಿಳಿಸಿದರು.
ನಾನು ಮೊದಲೇ ಕುರುಡನಾಗಿದ್ದು ಈಗ ಸೊಂಟ ಮತ್ತು ತೊಡೆಯ ಮಧ್ಯ ಭಾಗದ ಗೋಲಾಕಾರದ (Hip Joint) ಮೂಳೆ ಮುರಿದಿದ್ದು ಮುಂದಿನ ಜೀವನ ದುಸ್ತರವಾಗಿದೆ. ಇದಕ್ಕೆ ಗುತ್ತಿಗೆದಾರ ಮತ್ತು ಅಧಿಕಾರಿಗಳೇ ನೇರ ಹೊಣೆಯಾಗಿದ್ದು ನನಗೆ ಪರಿಹಾರ ನೀಡಬೇಕೆಂದು ಒಳರೋಗಿ ವಿ ಕೃಷ್ಣ ರವರು ಪತ್ರಿಕೆಯ ಮೂಲಕ ಮನವಿ ಮಾಡಿಕೊಂಡಿದ್ದಾರೆ.
ನಮ್ಮ ತಾಲ್ಲೂಕು ಪಂಚಾಯತಿಗೆ ಸಂಬಂಧಿಸಿದಂತೆ ಕೆ ಆರ್ ಐ ಡಿ ಎಲ್ ಸಂಸ್ಥೆಯ ಮೂರು ಕಾಮಗಾರಿಗಳು ಬಾಕಿ ಇದ್ದು ಇಂಜಿನಿಯರ್ ಲಕ್ಷ್ಮಿಶ್ರೀ ಯವರಿಗೆ ಎಷ್ಟು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸುತ್ತಿಲ್ಲ, ಇದನ್ನು ಅವರ ಮೇಲಾಧಿಕಾರಿಗಳ ಗಮನಕ್ಕೂ ತಂದಿದ್ದೇನೆ.
*ಚಂದ್ರು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ.*
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು