ಸಂತ್ರಸ್ತೆ ಪ್ರಿಯಾಂಕರೆಡ್ಡಿ ವಿರುದ್ಧ ಜಾತಿ ನಿಂದನೆ ಲೇಖನ ಹಾಕಿದ ಭೂಹಳ್ಳಿ ಪುಟ್ಟಸ್ವಾಮಿ ವಿರುದ್ಧ ಎಫ್ ಐ ಆರ್
ರಾಮನಗರ: ಮುಖಪುಸ್ತಕ (Facebook) ದಲ್ಲಿ ಸಂತ್ರಸ್ತೆ ಪಶುವೈದ್ಯೆ ಡಾ ಪ್ರಿಯಾಂಕರೆಡ್ಡಿ ವಿರುದ್ದ ಜನಾಂಗೀಯ ದ್ವೇಷ ಹಾಗೂ ಕೆಟ್ಟ ಭಾಷೆ ಬಳಸಿ ಹಾಕಿದ ಪೋಸ್ಟ್ ವಿರುದ್ದ ರೆಡ್ಡಿ ಸಮುದಾಯದ ಮುಖಂಡರು ರಾಮನಗರ ಜಿಲ್ಲಾ ಎಸ್ಪಿ ಅನೂಪ್ ಶೆಟ್ಟಿ, ಸೈಬರ್ ಕ್ರೈಂ ಹಾಗೂ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರಿಂದ ಪೋಲಿಸರು ಪ್ರಥಮ ವರದಿ (FIR) ದಾಖಲಿಸಿಕೊಂಡಿದ್ದಾರೆ.
ಹೈದರಾಬಾದ್ ನ ಪಶುವೈದ್ಯೆ ಡಾ ಪ್ರಿಯಾಂಕರೆಡ್ಡಿ ಯವರನ್ನು ದುಷ್ಕರ್ಮಿಗಳು ಅತ್ಯಾಚಾರ ಮಾಡಿ ಸುಟ್ಟು ಹಾಕಿದ ನಂತರ ನರ ರಾಕ್ಷಸರನ್ನು ಬಂಧಿಸಿ ಗಲ್ಲು ಶಿಕ್ಷೆ ನೀಡಬೇಕೆಂದು ಧರ್ಮತೀತವಾಗಿ, ಜಾತ್ಯಾತೀತವಾಗಿ ನಿರಂತರ ಪ್ರತಿಭಟನೆಗಳು ದೇಶದೆಲ್ಲೆಡೆ ಜರುಗಿದ ನಂತರ ಆರೋಪಿಗಳನ್ನು ಬಂಧಿಸಿ ಸ್ಥಳ ಪರಿಶೀಲನೆಗೆ ಕರೆದೊಯ್ದ ಸಂದರ್ಭದಲ್ಲಿ ತಪ್ಪಿಸಿಕೊಳ್ಳಲೆತ್ನಿಸಿದ ಆರೋಪಿಗಳನ್ನು ಗುಂಡು ಹೊಡೆದು ಸಾಯಿಸಿದ ನಂತರ ಟೀಕೆ ಟಿಪ್ಪಣಿಗಳು ಸಹಜವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.
ಕೆಲವರು ಪ್ರಬುದ್ಧ ಹಾಗೂ ಮಾರ್ಮಿಕವಾಗಿ ಬರೆದರೆ ಭೂಹಳ್ಳಿ ಪುಟ್ಟಸ್ವಾಮಿ ಎಂಬ ಸಾಹಿತಿ ಸಂಪೂರ್ಣ ಕೆಟ್ಟ ಪದಗಳನ್ನು, ಹೆಂಗಸರಷ್ಟೇ ಅಲ್ಲದೆ ಸಮಾಜದ ಸುಸಂಸ್ಕೃತರು, ಓದಲು ಅಸಹ್ಯ ಪಡುವಂತಹ ಪದಗಳನ್ನು ಬಳಸಿ ಪೋಸ್ಟ್ ಹಾಕಿರುವುದಾಗಿ ಅನೇಕ ಓದುಗರು ಅವರ ವಿರುದ್ದ ಹರಿಹಾಯ್ದಿದ್ದಾರೆ.
ಈ ನಿಟ್ಟಿನಲ್ಲಿ ರೆಡ್ಡಿ ಜನಾಂಗದ ಮುಖಂಡರು ಈ ಮೇಲಿನ ಎಲ್ಲರಿಗೂ ಸಂಪೂರ್ಣ ವಿವರದೊಂದಿಗೆ ಲಿಖಿತ ದೂರು ಸಲ್ಲಿಸಿ ಶೀಘ್ರವಾಗಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ದೂರು ದಾಖಲೆ ವೇಳೆ ಶಂಕರ್ ರೆಡ್ಡಿ, ಸಂದೀಪ್ ರೆಡ್ಡಿ, ಚಂದ್ರಶೇಖರ ಸೇರಿದಂತೆ ಹಿರಿಯ ಮುಖಂಡರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮಿ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು