ಹತ್ತನೇ ರಾಜ್ಯಮಟ್ಟದ ಬ್ರಾಹ್ಮಣ ಸಮಾಜ ಮಹಾ ಸಮ್ಮೇಳನ ಜಿಲ್ಲೆಯಿಂದ ಅಧಿಕ ಮಂದಿ ಭಾಗವಹಿಸಲು ಕರೆ
ಚನ್ನಪಟ್ಟಣ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಡಿ.೨೮ ಮತ್ತು ೨೯ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ 10ನೇ ರಾಜ್ಯಮಟ್ಟದ ಸಮ್ಮೇಳನ ನಡೆಯಲಿದ್ದು ರಾಮನಗರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ವಿಪ್ರಬಂಧುಗಳು ಸಮ್ಮೇಳನಕ್ಕೆ ಆಗಮಿಸಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಮಿತಿ ಸದಸ್ಯ ವಿ.ರಾಘವೇಂದ್ರ ಮಯ್ಯ ಮನವಿ ಮಾಡಿದರು.
ತಾಲ್ಲೂಕು ಸಂಘದ ವತಿಯಿಂದ ಇಂದು ನಗರದ ಕೋಟೆ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾಬ್ರಾಹ್ಮಣ ಮಹಾಸಭಾದ ಸಹಯೋಗದಲ್ಲಿ ಎರಡು ದಿನ ಕಾಲ ನಡೆಯಲಿರುವ ಈ ಸಮ್ಮೇಳನದಲ್ಲಿ ವಿವಿಧ ವಿಚಾರ ಕುರಿತು ಗೋಷ್ಠಿಗಳು, ಸಾಧಕರಿಗೆ ಸನ್ಮಾನ, ವಿಪ್ರಶ್ರೀ ಪ್ರಶಸ್ತಿ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿವೆ. ರಾಜ್ಯದ ವಿವಿಧ ಭಾಗಗಳಿಂದ ಸುಮಾರು ಒಂದು ಲಕ್ಷ ವಿಪ್ರಬಂಧುಗಳು ಸೇರುವ ನಿರೀಕ್ಷೆ ಇದೆ ರಾಮನಗರ ಜಿಲ್ಲೆಯಿಂದ ೨,೦೦೦ ಕ್ಕೂ ಹೆಚ್ಚು ಮಂದಿಯನ್ನು ಸಂಘಟಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.
ಡಿ.೨೮ ರಂದು ಬೆಳಗ್ಗೆ ೦೬:೦೦ ಗಂಟೆಗೆ ವರೇಣ್ಯ ಗಾಯತ್ರಿ ಯಾಗ ಶಾಲೆಯಲ್ಲಿ ಶ್ರೀ ಗಾಯತ್ರಿ ಮಾತೆಯ ಮಹಾಯಜ್ಞ ಆರಂಭವಾಗಿ ೦೯:೦೦ ಕ್ಕೆ ಪೂರ್ಣಾಹುತಿಗೊಳ್ಳಲಿದೆ. ೯.೩0ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರು ಸಮ್ಮೇಳನ ಉದ್ಘಾಟಿಸುವರು. ಸಮ್ಮೇಳನಾಧ್ಯಕ್ಷ ರಾಘವೇಂದ್ರರಾವ್ ನೆರಂಬಳ್ಳೆ ಅಧ್ಯಕ್ಷತೆ ವಹಿಸುವರು. ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಎಸ್.ಸುರೇಶ್ಕುಮಾರ್, ಮಾಜಿ ಸಚಿವ ಆರ್.ವಿ.ದೇಶಪಾಂಡೆ, ಶಾಸಕರಾದ ದಿನೇಶ್ ಗುಂಡೂರಾವ್, ಎ.ಎಸ್.ರಾಮ್ದಾಸ್, ಎಲ್.ಎ.ರವಿ ಸುಬ್ರಹ್ಮಣ್ಯಂ, ಬಿ.ಸಿ.ನಾಗೇಶ್, ಉದಯ ಗರುಡಾಚಾರ್, ಯು.ಬಿ.ವೆಂಕಟೇಶ್, ಶಿವರಾಂ ಹೆಬ್ಬಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಅನಂತ್ಕುಮಾರ್ ಹೆಗಡೆ ಹಾಗೂ ಉಡುಪಿ, ಮಂಗಳೂರು, ಕರಾವಳಿ ಭಾಗದ ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಎನ್.ವೆಂಕಟನಾರಾಯಣ್, ಪ್ರಧಾನ ಕಾರ್ಯದರ್ಶಿ ಕೆ.ರಾಮಪ್ರಸಾದ್, ಹಿರಿಯ ಉಪಾಧ್ಯಕ್ಷ ಆರ್.ಲಕ್ಷಿಕಾಂತ್, ಪ್ರಧಾನ ವಕ್ತಾರ ಮ.ಸ. ನಂಜುಂಡಸ್ವಾಮಿ ಹಾಗೂ ಇತರರ ಮುಂದಾಳತ್ವದಲ್ಲಿವಿವಿಧ ಸಮಿತಿಗಳು ಸಮ್ಮೇಳನ ಯಶಸ್ವಿಗೆ ಕಾರ್ಯ ನಿರ್ವಹಿಸುತ್ತಿವೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಟಿಯಲ್ಲಿ ತಾಲೂಕು ಬ್ರಾಹ್ಮಣಮಹಾ ಸಭಾ ದ ಅಧ್ಯಕ್ಷ ಎಂ.ಎನ್.ರಾಮಪ್ರಸಾದ್, ಪೇಟೆ ಈಶ್ವರ ದೇವಾಲಯದ ಪ್ರಧಾನ ಅರ್ಚಕ ರವೀಂದ್ರ ದೀಕ್ಷಿತ್, ಕೋಟೆ ಶ್ರೀರಾಘವೇಂದ್ರ ಗುರುಗಳ ಬೃಂದಾವನ ಸಮಿತಿ ಅಧ್ಯಕ್ಷೆ ಪಿ.ಎಸ್. ಜಯಲಕ್ಷ್ಮಮ್ಮ, ಜಂಟಿಕಾರ್ಯದರ್ಶಿ ಡಿ.ವೆಂಕಟೇಶ್ ಮೂರ್ತಿ , ತಾಲೂಕು ಬ್ರಾಹ್ಮಣ ಸಭಾ ನಿರ್ದೇಶಕರಾದ ಕೆ.ಎಂ. ಮಧು ಸೂಧನ್, ಎಂ.ಎಸ್.ನರಸಿಂಹ ಮತ್ತು ಸು.ನಾ.ನಂದಕುಮಾರ್ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
Recent news in ramanagara »
ಅಣ್ಣನ ನೆನಪು ನಾಟಕ ಅದ್ಭುತ, ವಿಚಾರ ಹಂಚುವಲ್ಲಿ ವಿಫಲ
ರಾಮನಗರ/ಚನ್ನಪಟ್ಟಣ: (ವಿಮರ್ಶಾತ್ಮಕ ಲೇಖನ)
ನಗರದ ಶತಮಾನೋತ್ಸವ ಭವನದಲ್ಲಿ ಬೆಂಗಳೂರಿನ ಪ್ರವರ ಹವ್ಯಾಸಿ ನಾಟಕ ತಂಡವು ನಡೆಸಿಕೊಟ್ಟ ಪೂರ್ಣ ಚ
ಪೌರಾಣಿಕ ನಾಟಕದಲ್ಲಿ ಜನಮನ ಸೂರೆಗೊಂಡು ಇತಿಹಾಸ ನಿರ್ಮಿಸಿದ ಮಹಿಳಾ ಕಲಾವಿದರು.
ಚನ್ನಪಟ್ಟಣ : ಚನ್ನಪಟ್ಟಣದಲ್ಲಿ ಮಹಿಳೆಯರೇ ಪೌರಾಣಿಕ ನಾಟಕವನ್ನು ಅಭ್ಯಾಸ ಮಾಡಿ ಬಯಲು ಮಂದಿರದಲ್ಲಿ ಪ್ರಸ್ತುತ ಪಡಿಸುತ್ತಿರುವುದು ವಿಶೇಷವಾಗಿದೆ. ಪೌರಾಣಿಕ
ಮಹಿಳೆಯರಿಂದಲೇ ಪೌರಾಣಿಕ ನಾಟಕ ಪ್ರದರ್ಶನ, ಇತಿಹಾಸ ಸೃಷ್ಟಿಸುವ ಸಾಧ್ಯತೆ ದಟ್ಟವಾಗಿದೆ. ಭಾವಿಪ ಪದಾಧಿಕಾರಿಗಳು
ಚನ್ನಪಟ್ಟಣ: ನಗರದ ಶ್ರೀ ಕೊಲ್ಲಾಪುರದಮ್ಮನ ದೇವಸ್ಥಾನದ ಆವರಣದಲ್ಲಿ ಇದೇ ಮಾರ್ಚ್ ತಿಂಗಳ ಹತ್ತನೇ ತಾರಿಖಿನ ಭಾನುವಾರ ಮಧ್ಯಾಹ್ನ ತಾಲೂಕಿನಲ್ಲಿ ಇದೇ ಪ್ರಪ್ರಥ
ವರ್ಣ ನೀತಿ ಮತ್ತು ಜಾತಿಯತೆಯನ್ನು ಮೀರಿದವರು ಮಾತ್ರ ಮನುಷ್ಯ ಜಾತಿಯಾಗಲು ಸಾಧ್ಯ –ಪ್ರೊ. ಕೆ.ಎಸ್.ಭಗವಾನ್
ರಾಮನಗರ: ಶೂದ್ರರನ್ನು ವರ್ಣ ನೀತಿಯಿಂದಲೆ ವೈದಿಕರು ಆಳಿದರು. ಇಂದಿಗೂ ಸಹ ವೈದಿಕರು ರಾಮನನ್ನು ನಮ್ಮ ಮೇಲೆ ಹೇರುವ ಮೂಲಕ ಮತ್ತೆ ಪೂರ್ವಕಾಲಕ್ಕೆ ಕರೆದು
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆ: ಜಿಲ್ಲೆಯಲ್ಲಿ ಶೇ.95.77 ಮತದಾನ
ರಾಮನಗರ, ಫೆ. 16 ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದಫೆ.16ರ ಶುಕ್ರವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯ ವರೆಗೆನಡೆದ ಉಪ ಚುನ
ವೈಜ್ಞಾನಿಕ ಮನೋವೃತ್ತಿ:ಸಾಂವಿಧಾನಿಕ ಕರ್ತವ್ಯ ಪ್ರೊ. ಎಂ.ಅಬ್ದುಲ್ ರೆಹಮಾನ್ ಪಾಷ
ರಾಮನಗರ; ಮಾನವ ಹಕ್ಕುಗಳನ್ನು ಯಾರೂ ಕೊಡುವುದಿಲ್ಲ, ವ್ಯಕ್ತಿಗಳಿಗೆ ಅವುಗಳಿಗೆ ಜನ್ಮತಃ ದಕ್ಕಿರುತ್ತವೆ. ಅವುಗಳನ್ನು ಯಾರೂ ಕೊಡುವುದಿಲ್ಲವಾದ್ದರಿ
ನಾಳೆ ನಡೆಯುವ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
ರಾಮನಗರ: ರಾಜ್ಯ ವಿಧಾನ ಸಭೆ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವೇರಿದ್ದು, ಬಹಿರಂಗ ಪ್ರಚಾರ ಕೊನೆಗೊಂಡ ನಂತರ ಇಂದು ಮಸ್ಟರಿಂಗ್ ಕಾರ್ಯ ಮುಗಿದು, ಮತಗಟ್ಟೆ ಸ
ವೈದ್ಯ ಸಿಬ್ಬಂದಿ ನಿರ್ಲಕ್ಷ್ಯ ಹಸುಗೂಸು ಸಾವು
ರಾಮನಗರ: ಚನ್ನಪಟ್ಟಣ: ವೈದ್ಯ ಸಿಬ್ಬಂದಿಯಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯ ನಿರ್ಲಕ್ಷ್ಯದಿಂದ ಒಂದು ತಿಂಗಳು 20 ದಿನಗಳ ಗಂಡು ಶಿಶುವೊಂದು ಪ್ರಾಣ ಕಳೆದುಕೊ
ಗ್ರೇಟ್ ಬೆಂಗಳೂರು ಜಿಲ್ಲೆ, ಮತ್ತೇ ಮುನ್ನಲೆಗೆ ತಂದ : ಡಿ,ಸಿ.ಎಂ. ಡಿ.ಕೆ.ಶಿವಕುಮಾರ್
ರಾಮನಗರ, ಫೆ. 12: ನಾವು ರಾಮನಗರ ಜಿಲ್ಲೆಯವರಲ್ಲಾ ನಾವೆಲ್ಲರೂ ಬೆಂಗಳೂರು ಜಿಲ್ಲೆಯವರು. ಗ್ರೇಟ್ ಬೆಂಗಳೂರು ಜಿಲ್ಲೆ ಮಾಡುವ ಬಗ್ಗೆ ಲೋಕಸಭಾ ಚ
ನಮ್ಮದು ಬಹುತ್ವ ಭಾರತ, ಹಿಂದುತ್ವ ಹೇರಿಕೆ ಸರಿಯಲ್ಲ – ಡಾ. ಚಕ್ಕೆರೆ ಶಿವಶಂಕರ್
ರಾಮನಗರ : ಫೆ 10 ನಮ್ಮದು ಬಹುತ್ವ ಭಾರತ, ಇಲ್ಲಿ ಎಲ್ಲಾ ಧರ್ಮೀಯರು ಇದ್ದಾರೆ. ಕೇವಲ ಹಿಂದುತ್ವವನ್ನು ಬಲವಂತವಾಗಿ ಹೇರುವುದು ಸರಿಯಲ್ಲ. ಭಾರತದ
ಪ್ರತಿಕ್ರಿಯೆಗಳು